Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 16:5 - ಪರಿಶುದ್ದ ಬೈಬಲ್‌

5 ಯೆಹೋವನು ಹೇಳಿದನು: “ಯೆರೆಮೀಯನೇ, ಜನರು ಶವಸಂಸ್ಕಾರದ ಊಟಮಾಡುತ್ತಿರುವ ಮನೆಯೊಳಗೆ ನೀನು ಹೋಗಬೇಡ. ಸತ್ತವರ ಸಂಗಡ ಅಳುವದಕ್ಕಾಗಲಿ ಅಥವಾ ನಿನ್ನ ದುಃಖವನ್ನು ಸೂಚಿಸುವದಕ್ಕಾಗಲಿ, ನೀನು ಅಲ್ಲಿಗೆ ಹೋಗಬೇಡ. ಏಕೆಂದರೆ ನಾನು ಅವರ ಮೇಲಿನ ನನ್ನ ಕೃಪೆಯನ್ನು ಹಿಂತೆಗೆದುಕೊಂಡಿದ್ದೇನೆ. ನಾನು ಯೆಹೂದದ ಈ ಜನರಿಗೆ ಕರುಣೆಯನ್ನು ತೋರಿಸುವದಿಲ್ಲ. ನಾನು ಅವರಿಗೋಸ್ಕರ ವ್ಯಥೆಪಡುವದಿಲ್ಲ.” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯೆಹೋವನು ನನಗೆ, “ಗೋಳಾಟದ ಮನೆಯಲ್ಲಿ ಸೇರಬೇಡ, ಪ್ರಲಾಪಿಸಲಿಕ್ಕೆ ಹೋಗಬೇಡ, ಅವರಿಗಾಗಿ ಎದೆ ಬಡಿದುಕೊಳ್ಳಲೂ ಬೇಡ. ನಾನು ದಯಪಾಲಿಸಿದ ಸಮಾಧಾನವನ್ನು, ಅಂದರೆ ನನ್ನ ಪ್ರೀತಿಯನ್ನೂ ಹಾಗು ಕೃಪೆಯನ್ನೂ ಈ ಜನರಿಂದ ತೆಗೆದುಬಿಟ್ಟಿದ್ದೇನಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಸರ್ವೇಶ್ವರ ಮತ್ತೆ ನನಗೆ ಹೀಗೆಂದರು : “ನೀನು ಸಾವು ಜರುಗಿದ ಮನೆಗಳಿಗೆ ಹೋಗಬೇಡ. ಅಲ್ಲಿ ನಡೆಯುವ ಗೋಳಾಟದಲ್ಲಿ ಸೇರಬೇಡ. ಎದೆಬಡಿದುಕೊಂಡು ಸಂತಾಪ ಸೂಚಿಸಬೇಕಾಗಿಲ್ಲ. ಏಕೆಂದರೆ, ನಾನು ದಯಪಾಲಿಸಿದ ಶಾಂತಿಯನ್ನೂ ಪ್ರೀತಿಯನ್ನೂ ಕೃಪೆಯನ್ನೂ ಆ ಜನರಿಂದ ತೆಗೆದುಬಿಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಯೆಹೋವನು [ನನಗೆ] ಹೀಗೆ ಹೇಳಿದ್ದಾನೆ - ಗೋಳಾಟದ ಮನೆಯಲ್ಲಿ ಸೇರಬೇಡ, ಪ್ರಲಾಪಿಸಲಿಕ್ಕೆ ಹೋಗಬೇಡ, ಅವರಿಗಾಗಿ ಎದೆ ಬಡುಕೊಳ್ಳಲೂಬೇಡ; ನಾನು ದಯಪಾಲಿಸಿದ ಸಮಾಧಾನವನ್ನು, ಅಂದರೆ ನನ್ನ ಪ್ರೀತಿಯನ್ನೂ ಕೃಪೆಯನ್ನೂ ಈ ಜನರಿಂದ ತೆಗೆದುಬಿಟ್ಟಿದ್ದೇನಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಯೆಹೋವ ದೇವರು ಹೀಗೆ ಹೇಳುತ್ತಾರೆ: “ದುಃಖದ ಮನೆಯಲ್ಲಿ ಪ್ರವೇಶಿಸಬೇಡ, ಅವರ ಸಂಗಡ ಗೋಳಾಡುವುದಕ್ಕೂ, ದುಃಖ ಪಡುವುದಕ್ಕೂ ಹೋಗಬೇಡ. ಏಕೆಂದರೆ ನಾನು ನನ್ನ ಸಮಾಧಾನವನ್ನೂ, ಪ್ರೀತಿಯನ್ನೂ, ಕನಿಕರವನ್ನೂ ಈ ಜನರಿಂದ ತೆಗೆದುಹಾಕಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 16:5
13 ತಿಳಿವುಗಳ ಹೋಲಿಕೆ  

ದ್ರಾಕ್ಷಿಬಳ್ಳಿ ಒಣಗಿಹೋಗುವದು. ಅದರ ಕೊಂಬೆಗಳು ಮುರಿದುಬೀಳುವವು. ಹೆಂಗಸರು ಆ ಕೊಂಬೆಗಳನ್ನು ಸೌದೆಯಾಗಿ ಉಪಯೋಗಿಸುವರು. ಜನರು ತಿಳಿದುಕೊಳ್ಳುವದಕ್ಕೆ ಮನಸ್ಸು ಕೊಡುವದಿಲ್ಲ. ಆದ್ದರಿಂದ ಅವರ ನಿರ್ಮಾಣಿಕನಾದ ದೇವರು ಅವರನ್ನು ಸಂತೈಸುವದಿಲ್ಲ. ಅವರ ನಿರ್ಮಾಣಿಕನು ಅವರಿಗೆ ದಯೆ ತೋರುವದಿಲ್ಲ.


ಆಗ ನಾನು ಅವರ ಮೇಲೆ ತುಂಬಾ ಕೋಪವುಳ್ಳವನಾಗಿರುವೆನು. ಅವರಿಗೆ ಸಹಾಯ ಮಾಡದೆ ಅವರನ್ನು ಬಿಟ್ಟುಬಿಡುವೆನು; ಅವರು ನಾಶವಾಗುವರು; ಅವರಿಗೆ ಭಯಂಕರ ಸಂಗತಿಗಳು ಸಂಭವಿಸುವವು; ಅನೇಕ ಕೇಡುಗಳಾಗುವುವು; ಆಗ, ‘ನಮ್ಮ ದೇವರು ನಮ್ಮ ಮಧ್ಯದಲ್ಲಿ ಇಲ್ಲದಿರುವ ಕಾರಣ ಇವೆಲ್ಲಾ ನಮಗೆ ಸಂಭವಿಸುತ್ತವೆ’ ಎಂದು ಅವರು ಹೇಳುವರು.


ಆಗ ಮತ್ತೊಂದು ಕುದುರೆಯು ಹೊರಗೆ ಬಂದಿತು. ಇದು ಕೆಂಪು ಕುದುರೆಯಾಗಿತ್ತು. ಈ ಕುದುರೆಯ ಮೇಲೆ ಕುಳಿತಿದ್ದ ಸವಾರನಿಗೆ ಲೋಕದಲ್ಲಿದ್ದ ಶಾಂತಿಯನ್ನು ತೆಗೆದುಹಾಕಲೂ ಜನರು ಒಬ್ಬರನ್ನೊಬ್ಬರು ಕೊಲ್ಲುವಂತೆ ಮಾಡಲೂ ಅವನಿಗೆ ಅಧಿಕಾರವನ್ನು ನೀಡಲಾಗಿತ್ತು. ಈ ಸವಾರನಿಗೆ ಒಂದು ಮಹಾಖಡ್ಗವನ್ನೂ ಕೊಡಲಾಗಿತ್ತು.


ಇದಕ್ಕಿಂತ ಮುಂಚೆ ಜನರ ಕೈಯಲ್ಲಿ ಕೆಲಸಗಾರರಿಗೆ ಕೂಲಿ ಕೊಡುವದಕ್ಕಾಗಲಿ ಪ್ರಾಣಿಗಳ ಬಾಡಿಗೆ ಕೊಡುವದಕ್ಕಾಗಲಿ ಹಣವಿರಲಿಲ್ಲ. ಅದೇ ಸಮಯದಲ್ಲಿ ಜನರು ಹೋಗುತ್ತಾ ಬರುತ್ತಾ ಇರುವದಕ್ಕೆ ಸುರಕ್ಷತೆ ಇರಲಿಲ್ಲ. ಎಲ್ಲಾ ತೊಂದರೆಗಳು ತೊರೆಯಲ್ಪಡಲಿಲ್ಲ. ಪ್ರತಿ ಮನುಷ್ಯನು ತನ್ನ ನೆರೆಯವನ ಮೇಲೆ ಎದುರುಬೀಳುವಂತೆ ನಾನು ಮಾಡಿದ್ದೆನು.


ಯೆಹೋವನೇ, ನನಗೆ ಕರುಣೆ ತೋರಬೇಕೆಂಬುದನ್ನು ಜ್ಞಾಪಿಸಿಕೊ. ನಿನ್ನ ಶಾಶ್ವತವಾದ ಪ್ರೀತಿಯನ್ನು ನನಗೆ ತೋರಿಸು.


ಅನೇಕ ಸೈನಿಕರು ಆ ಬೋಳುಬೆಟ್ಟಗಳನ್ನು ತುಳಿದುಕೊಂಡು ಹೋದರು. ಆ ಸೈನ್ಯಗಳಿಂದ ಯೆಹೋವನು ಆ ದೇಶವನ್ನು ದಂಡಿಸಿದನು. ಆ ದೇಶದ ಒಂದು ತುದಿಯಿಂದ ಇನ್ನೊಂದು ತುದಿಯವರೆಗೆ ವಾಸಿಸಿದ ಎಲ್ಲಾ ಜನರನ್ನು ದಂಡಿಸಲಾಯಿತು. ಯಾರೂ ಸುರಕ್ಷಿತವಾಗಿ ಉಳಿಯಲಿಲ್ಲ.


ಯೆಹೂದದ ಜನರು ಎಡವಿ, ಒಬ್ಬರಮೇಲೊಬ್ಬರು ಬೀಳುವಂತೆ ನಾನು ಮಾಡುವೆನು. ತಂದೆ ಮತ್ತು ಮಕ್ಕಳು ಒಬ್ಬರಮೇಲೊಬ್ಬರು ಬೀಳುವರು.’” ಇದು ಯೆಹೋವನ ನುಡಿ. “‘ನಾನು ಅವರಿಗಾಗಿ ಕನಿಕರಪಡುವದಿಲ್ಲ ಅಥವಾ ಕರುಣೆ ತೋರಿಸುವದಿಲ್ಲ. ಯೆಹೂದದ ಜನರ ವಿನಾಶವನ್ನು ಕರುಣೆಯು ತಡೆಯದಂತೆ ನೋಡಿಕೊಳ್ಳುತ್ತೇನೆ.’”


ಆದ್ದರಿಂದ ನಾನು ನಿಮ್ಮನ್ನು ಈ ದೇಶದ ಹೊರಗೆ ಎಸೆಯುತ್ತೇನೆ. ನೀವು ಪರದೇಶಕ್ಕೆ ಸೆರೆಹೋಗುವಂತೆ ಮಾಡುತ್ತೇನೆ. ನೀವು ಮತ್ತು ನಿಮ್ಮ ಪೂರ್ವಿಕರು ಎಂದೂ ನೋಡದ ಪ್ರದೇಶಕ್ಕೆ ನೀವು ಹೋಗುವಿರಿ. ಆ ಪ್ರದೇಶದಲ್ಲಿ ನೀವು ನಿಮ್ಮ ಮನಸ್ಸಿಗೆ ಬಂದಷ್ಟು ಸುಳ್ಳುದೇವತೆಗಳ ಸೇವೆಮಾಡಬಹುದು. ನಾನು ನಿಮಗೆ ಸಹಾಯವನ್ನೂ ಮಾಡುವದಿಲ್ಲ, ಯಾವ ರೀತಿಯ ಒಲವನ್ನೂ ತೋರುವದಿಲ್ಲ.’”


ಇನ್ನೆಂದಿಗೂ ಸಮಾಧಾನವೇ ಇರುವುದಿಲ್ಲವೆಂದುಕೊಂಡೆನು. ನಾನು ಸಂತೋಷವನ್ನು ಮರೆತುಬಿಟ್ಟೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು