Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 17:14 - ಪರಿಶುದ್ದ ಬೈಬಲ್‌

14 ಯೆಹೋವನೇ, ನೀನು ನನ್ನನ್ನು ವಾಸಿಮಾಡಿದರೆ ನಿಜವಾಗಿಯೂ ನಾನು ಗುಣಹೊಂದುತ್ತೇನೆ. ನನ್ನನ್ನು ರಕ್ಷಿಸು, ಆಗ ನಿಜವಾಗಿಯೂ ರಕ್ಷಣೆ ಹೊಂದಿದವನಾಗುವೆನು. ಯೆಹೋವನೇ, ನಾನು ನಿನ್ನನ್ನು ಸ್ತುತಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಯೆಹೋವನೇ, ನನ್ನನ್ನು ಸ್ವಸ್ಥಪಡಿಸು, ಆಗ ಸ್ವಸ್ಥನಾಗುವೆನು. ನನ್ನನ್ನು ರಕ್ಷಿಸು, ಆಗ ರಕ್ಷಿಸಲ್ಪಡುವೆನು; ನೀನೇ ನನಗೆ ಸ್ತುತ್ಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಹೇ ಸರ್ವೇಶ್ವರಾ, ನನ್ನನ್ನು ಸ್ವಸ್ಥಪಡಿಸಿರಿ, ನಾನು ಸ್ವಸ್ಥನಾಗುವೆನು. ನನ್ನನ್ನು ರಕ್ಷಿಸಿರಿ, ನಾನು ರಕ್ಷಿತನಾಗಿಯೆ ತೀರುವೆನು. ನೀವೇ ನನಗೆ ಸ್ತುತ್ಯಾರ್ಹರು !

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಯೆಹೋವನೇ, ನನ್ನನ್ನು ಸ್ವಸ್ಥಪಡಿಸು, ಆಗ ಸ್ವಸ್ಥನೇ ಆಗುವೆನು; ನನ್ನನ್ನು ರಕ್ಷಿಸು, ಆಗ ರಕ್ಷಿತನೇ ಆಗುವೆನು; ನೀನೇ ನನಗೆ ಸ್ತುತ್ಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಯೆಹೋವ ದೇವರೇ, ನನ್ನನ್ನು ಸ್ವಸ್ಥಮಾಡಿ, ಆಗ ಸ್ವಸ್ಥವಾಗುವೆನು. ನನ್ನನ್ನು ರಕ್ಷಿಸು, ಆಗ ರಕ್ಷಿತನಾಗುವೆನು. ಏಕೆಂದರೆ, ನೀವೇ ನನಗೆ ಸ್ತುತ್ಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 17:14
23 ತಿಳಿವುಗಳ ಹೋಲಿಕೆ  

ಯೆಹೋವನೇ, ನನ್ನನ್ನು ಕನಿಕರಿಸು! ನಾನು ರೋಗಿಯಾಗಿದ್ದೇನೆ, ಬಲಹೀನನಾಗಿದ್ದೇನೆ, ನನ್ನನ್ನು ಗುಣಪಡಿಸು! ನನ್ನ ಎಲುಬುಗಳು ನಡುಗುತ್ತಿವೆ.


“‘ನಾನೇ ದೇವರು, ನನ್ನ ಹೊರತು ಬೇರೆ ದೇವರಿಲ್ಲ. ಜನರಿಗೆ ಮರಣವನ್ನೂ ಜೀವವನ್ನೂ ಕೊಡುವವನು ನಾನೇ. ಅವರಿಗೆ ಗಾಯ ಮಾಡುವವನೂ ನಾನೇ, ಅದನ್ನು ಗುಣಮಾಡುವವನೂ ನಾನೇ. ನನ್ನ ಶಕ್ತಿಯ ಹಿಡಿತದಿಂದ ಇನ್ನೊಬ್ಬನನ್ನು ರಕ್ಷಿಸಲು ಯಾರಿಗೂ ಸಾಧ್ಯವಿಲ್ಲ.


ನಮ್ಮ ದೇವರಾದ ಯೆಹೋವನು ನಮ್ಮನ್ನು ರಕ್ಷಿಸಿದನು! ಅನ್ಯಜನಾಂಗಗಳಿಂದ ನಮ್ಮನ್ನು ಬಿಡಿಸಿಕೊಂಡು ಬಂದನು. ಆಗ ನಾವು ಆತನ ಪವಿತ್ರ ಹೆಸರನ್ನು ಕೊಂಡಾಡುವುದಕ್ಕೂ ಆತನನ್ನು ಸಂಕೀರ್ತಿಸುವುದಕ್ಕೂ ಸಾಧ್ಯವಾಯಿತು.


“ಪ್ರಭುವಿನ (ದೇವರ) ಆತ್ಮವು ನನ್ನಲ್ಲಿ ಇದೆ. ಬಡಜನರಿಗೆ ಶುಭಸಂದೇಶವನ್ನು ತಿಳಿಸಲು ದೇವರು ನನ್ನನ್ನು ಅಭಿಷೇಕಿಸಿದ್ದಾನೆ. ಪಾಪಕ್ಕೆ ಸೆರೆಯಾಳುಗಳಾಗಿರುವ ಜನರಿಗೆ ‘ನೀವು ಬಿಡುಗಡೆಯಾಗಿದ್ದೀರಿ’ ಎಂತಲೂ ಕುರುಡರಿಗೆ, ‘ನಿಮಗೆ ಮತ್ತೆ ಕಣ್ಣು ಕಾಣಿಸುವುದು’ ಎಂತಲೂ ತಿಳಿಸುವುದಕ್ಕೆ ದೇವರು ನನ್ನನ್ನು ಕಳುಹಿಸಿದ್ದಾನೆ. ದಬ್ಬಾಳಿಕೆಗೆ ಗುರಿಯಾದವರನ್ನು ಬಿಡಿಸುವುದಕ್ಕೂ


ಯೆಹೋವನನ್ನು ಮಾತ್ರ ನೀವು ಸ್ತುತಿಸಬೇಕು. ಆತನೇ ನಿಮ್ಮ ದೇವರು. ಆತನು ನಿಮಗಾಗಿ ಭಯಂಕರವಾದ ಮಹತ್ಕಾರ್ಯಗಳನ್ನು ಮಾಡಿದ್ದಾನೆ. ಅವುಗಳನ್ನು ನೀವು ಕಣ್ಣಾರೆ ಕಂಡಿದ್ದೀರಿ.


ನಾನು ಸ್ತುತಿಸುವ ದೇವರೇ, ನನ್ನ ಪ್ರಾರ್ಥನೆಗೆ ಕಿವಿಗೊಡದಿರಬೇಡ.


ಯೆಹೋವನೇ, ನನ್ನನ್ನು ಮತ್ತೆ ಬಲಪಡಿಸು! ನಿನ್ನ ಮಹಾಕೃಪೆಯಿಂದ ನನ್ನನ್ನು ರಕ್ಷಿಸು.


ನಾನು ನಿನ್ನನ್ನು ಬಲಶಾಲಿಯನ್ನಾಗಿ ಮಾಡುತ್ತೇನೆ. ನೀನು ತಾಮ್ರದ ಗೋಡೆಯಂತೆ ಗಟ್ಟಿಯಾಗಿರುವೆ ಎಂದು ಆ ಜನರು ತಿಳಿದುಕೊಳ್ಳುವರು. ಯೆಹೂದದ ಜನರು ನಿನ್ನ ವಿರುದ್ಧ ಹೋರಾಡುವರು. ಆದರೆ ಅವರು ನಿನ್ನನ್ನು ಸೋಲಿಸಲಾರರು. ಏಕೆಂದರೆ ನಾನೇ ನಿನ್ನ ಜೊತೆಯಲ್ಲಿ ಇದ್ದೇನೆ. ನಾನು ನಿನಗೆ ಸಹಾಯಮಾಡುತ್ತೇನೆ ಮತ್ತು ನಾನು ನಿನ್ನನ್ನು ರಕ್ಷಿಸುತ್ತೇನೆ.” ಇದು ಯೆಹೋವನಿಂದ ಬಂದ ನುಡಿ.


ಆದರೆ ಅವನು ಗಾಳಿಯನ್ನು ಮತ್ತು ಅಲೆಗಳನ್ನು ನೋಡಿ ಭಯಪಟ್ಟದ್ದರಿಂದ ನೀರಿನಲ್ಲಿ ಮುಳುಗತೊಡಗಿ, “ಪ್ರಭುವೇ, ನನ್ನನ್ನು ರಕ್ಷಿಸು” ಎಂದು ಕೂಗಿಕೊಂಡನು.


“ಎಫ್ರಾಯೀಮ್ ಅಳುವುದನ್ನು ನಾನು ಕೇಳಿದ್ದೇನೆ. ಎಫ್ರಾಯೀಮು ಹೀಗೆ ಹೇಳುವದನ್ನು ನಾನು ಕೇಳಿದ್ದೇನೆ. ‘ಯೆಹೋವನೇ, ನೀನು ನಿಜವಾಗಿ ನನ್ನನ್ನು ದಂಡಿಸಿದೆ. ನಾನು ಪಾಠವನ್ನು ಕಲಿತೆನು. ನಾನು ತರಬೇತಿ ಹೊಂದದ ಒಂದು ಹೋರಿಯುಂತಿದ್ದೆನು. ನನ್ನನ್ನು ದಂಡಿಸುವದನ್ನು ದಯವಿಟ್ಟು ನಿಲ್ಲಿಸು. ನಾನು ನಿನ್ನಲ್ಲಿಗೆ ಹಿಂದಿರುಗಿ ಬರುತ್ತೇನೆ. ನಿಜವಾಗಿಯೂ ನೀನೇ ನನ್ನ ದೇವರಾದ ಯೆಹೋವನು.


ಜನರಲ್ಲಿ ಗಲಿಬಿಲಿಯನ್ನು ಉಂಟುಮಾಡು. ಜನರು ತಾವು ನೋಡಿದ್ದನ್ನು, ಕೇಳಿದ್ದನ್ನು ಅರ್ಥಮಾಡಿಕೊಳ್ಳದ ಹಾಗೆ ಮಾಡು. ನೀನು ಹೀಗೆ ಮಾಡದಿದ್ದಲ್ಲಿ ಜನರು ತಾವು ಕೇಳಿದ್ದನ್ನು ಅರ್ಥಮಾಡಿಕೊಳ್ಳುವರು; ಜನರು ತಮ್ಮ ಮನಸ್ಸಿನಲ್ಲಿ ಅರ್ಥಮಾಡಿಕೊಳ್ಳುವರು. ಅವರು ಹಾಗೆ ಮಾಡಿದ್ದಲ್ಲಿ, ಅವರು ನನ್ನ ಬಳಿಗೆ ಹಿಂದಿರುಗಿ ಬಂದು ಗುಣಹೊಂದುವರು” ಎಂದು ಹೇಳಿದನು.


ಯೇಸುವಿನ ಶಿಷ್ಯರು ಆತನ ಬಳಿಗೆ ಹೋಗಿ ಆತನನ್ನು ಎಬ್ಬಿಸಿ, “ಪ್ರಭುವೇ, ನಮ್ಮನ್ನು ರಕ್ಷಿಸು! ನಾವು ಮುಳುಗುತ್ತಿದ್ದೇವೆ!” ಎಂದು ಹೇಳಿದರು.


ಆತನು ತನ್ನ ಜನರನ್ನು ಬಲಿಷ್ಠರನ್ನಾಗಿ ಮಾಡುತ್ತಾನೆ. ಆತನ ಭಕ್ತರನ್ನು ಜನರು ಹೊಗಳುವರು. ಜನರು ಇಸ್ರೇಲರನ್ನು ಹೊಗಳುವರು. ಆತನು ಹೋರಾಡುತ್ತಿರುವುದು ಅವರಿಗಾಗಿಯೇ. ಯೆಹೋವನಿಗೆ ಸ್ತೋತ್ರವಾಗಲಿ!


ನಿನ್ನ ಮಹಾಶಕ್ತಿಯಿಂದ ನಮ್ಮನ್ನು ರಕ್ಷಿಸು! ನಮ್ಮ ಪ್ರಾರ್ಥನೆಗೆ ಉತ್ತರನೀಡಿ ನಿನ್ನ ಪ್ರಿಯರನ್ನು ರಕ್ಷಿಸು!


“ನಾವು ಪ್ರಮುಖರಾಗಲು ನಮ್ಮ ಸುಳ್ಳುಗಳೇ ನಮಗೆ ಆಧಾರ. ನಮ್ಮ ನಾಲಿಗೆಗಳು ಇರುವಾಗ ನಮಗೆ ಒಡೆಯರಾಗಲು ಯಾರಿಗೆ ಸಾಧ್ಯ?” ಎಂದು ಅವರು ಹೇಳುತ್ತಾರೆ.


ಆದ್ದರಿಂದ ಮೋಶೆ ಯೆಹೋವನಿಗೆ ಪ್ರಾರ್ಥಿಸಿ, “ದೇವರೇ, ದಯಮಾಡಿ ಈಕೆಯನ್ನು ವಾಸಿಮಾಡು” ಎಂದು ಮೊರೆಯಿಟ್ಟನು.


ದೇವರೇ, ನಿನ್ನ ಹೆಸರಿನಿಂದ ನನ್ನನ್ನು ರಕ್ಷಿಸು! ನಿನ್ನ ಮಹಾಶಕ್ತಿಯಿಂದ ನನ್ನ ನ್ಯಾಯವನ್ನು ಸ್ಥಾಪಿಸು.


ಬೆಟ್ಟದ ಮೇಲೆ ವಿಗ್ರಹಗಳ ಪೂಜೆ ಮಾಡಿದ್ದು ನಮ್ಮ ಮೂರ್ಖತನವಾಯಿತು. ಬೆಟ್ಟಗಳ ಮೇಲಿನ ಎಲ್ಲಾ ಉತ್ಸವಗಳು ಕೇವಲ ಸುಳ್ಳು. ಇಸ್ರೇಲಿನ ರಕ್ಷಣೆ ಖಚಿತವಾಗಿಯೂ ನಮ್ಮ ದೇವರಾದ ಯೆಹೋವನಿಂದ ಮಾತ್ರ ಸಾಧ್ಯ.


ಇದು ಯೆಹೋವನ ನುಡಿ: “ನಾನು ಪುನಃ ನಿಮಗೆ ಆರೋಗ್ಯವನ್ನು ಕೊಡುವೆನು; ನಿಮ್ಮ ಗಾಯಗಳನ್ನು ವಾಸಿಮಾಡುವೆನು. ಏಕೆಂದರೆ ಚೀಯೋನ್ ಭ್ರಷ್ಟಳಾದಳೆಂದೂ ‘ಯಾರಿಗೂ ಬೇಡವಾದ ನಗರ’ವೆಂದೂ ಬೇರೆಯವರು ಹೇಳಿದರು.”


“‘ಅನಂತರ ನಾನು ಆ ನಗರದ ಜನರನ್ನು ಕ್ಷಮಿಸುವೆನು. ಆ ಜನರು ಶಾಂತಿಯನ್ನೂ ಸುರಕ್ಷಣೆಯನ್ನೂ ಪಡೆಯುವಂತೆ ಮಾಡುವೆನು.


ನನ್ನ ಇಡೀ ದೇಹ ನಡುಗುತ್ತಿದೆ. ಯೆಹೋವನೇ, ನನ್ನನ್ನು ಗುಣಪಡಿಸಲು ಇನ್ನೆಷ್ಟುಕಾಲ ಬೇಕು?


ನಾನು ನಿನ್ನವನು, ನನ್ನನ್ನು ರಕ್ಷಿಸು! ನಿನ್ನ ಆಜ್ಞೆಗಳಿಗೆ ಆಸಕ್ತಿಯಿಂದ ವಿಧೇಯನಾಗಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು