Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 17:20 - ಪರಿಶುದ್ದ ಬೈಬಲ್‌

20 “ಆ ಜನರಿಗೆ ಹೇಳು, ‘ಯೆಹೋವನ ಸಂದೇಶವನ್ನು ಕೇಳಿರಿ. ಯೆಹೂದದ ರಾಜರೇ, ಕೇಳಿರಿ. ಯೆಹೂದದ ಎಲ್ಲಾ ಜನರೇ ಕೇಳಿರಿ. ಈ ದ್ವಾರಗಳಿಂದ ಜೆರುಸಲೇಮಿಗೆ ಬರುವ ಜನರೇ, ನಾನು ಹೇಳುವದನ್ನು ಕೇಳಿರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ‘ಈ ಬಾಗಿಲುಗಳಲ್ಲಿ ಸೇರುವ ಯೆಹೂದದ ಅರಸರೇ, ಎಲ್ಲಾ ಯೆಹೂದ್ಯರೇ, ಯೆರೂಸಲೇಮಿನ ಸಕಲ ನಿವಾಸಿಗಳೇ, ಯೆಹೋವನ ಮಾತನ್ನು ಕೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ‘ಈ ಬಾಗಿಲುಗಳಲ್ಲಿ ಸೇರುವ ಜುದೇಯದ ಅರಸರೇ, ಎಲ್ಲ ಯೆಹೂದ್ಯರೇ, ಜೆರುಸಲೇಮಿನ ಸಕಲ ನಿವಾಸಿಗಳೇ, ಸರ್ವೇಶ್ವರ ಸ್ವಾಮಿಯ ಈ ಸಂದೇಶವನ್ನು ಕೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಈ ಬಾಗಿಲುಗಳಲ್ಲಿ ಸೇರುವ ಯೆಹೂದದ ಅರಸರೇ, ಎಲ್ಲಾ ಯೆಹೂದ್ಯರೇ, ಯೆರೂಸಲೇವಿುನ ಸಕಲ ನಿವಾಸಿಗಳೇ, ಯೆಹೋವನ ಈ ಮಾತನ್ನು ಕೇಳಿರಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಅವರಿಗೆ ಹೀಗೆ ಹೇಳು: ‘ಯೆಹೂದದ ಅರಸರೇ, ಸಮಸ್ತ ಯೆಹೂದವೇ, ಈ ಬಾಗಿಲುಗಳಲ್ಲಿ ಪ್ರವೇಶಿಸುವ ಯೆರೂಸಲೇಮಿನ ಎಲ್ಲಾ ನಿವಾಸಿಗಳೇ, ಯೆಹೋವ ದೇವರ ವಾಕ್ಯವನ್ನು ಕೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 17:20
13 ತಿಳಿವುಗಳ ಹೋಲಿಕೆ  

ನಿನ್ನ ಜೊತೆಯಲ್ಲಿದ್ದ ಜನರಿಗೆ ಹೇಳು, ‘ಯೆಹೂದದ ರಾಜನೇ, ಜೆರುಸಲೇಮಿನ ಜನರೇ, ಯೆಹೋವನ ಈ ಸಂದೇಶವನ್ನು ಕೇಳಿರಿ. ಇಸ್ರೇಲರ ದೇವರೂ ಸರ್ವಶಕ್ತನಾದ ಯೆಹೋವನೂ ಹೀಗೆ ಹೇಳುತ್ತಾನೆ: ನಾನು ಈ ಸ್ಥಳಕ್ಕೆ ಒಂದು ಭಯಂಕರವಾದ ಕೇಡನ್ನು ಉಂಟುಮಾಡುವೆನು. ಅದರ ಬಗ್ಗೆ ಕೇಳಿದ ಪ್ರತಿಯೊಬ್ಬ ವ್ಯಕ್ತಿಯು ವಿಸ್ಮಯಪಡುವನು ಮತ್ತು ಭಯಪಡುವನು.


ಅವರು ಕೇಳಲಿ, ಕೇಳದಿರಲಿ, ನಾನು ಹೇಳುವದನ್ನು ಅವರಿಗೆ ತಿಳಿಸು; ಯಾಕೆಂದರೆ ಅವರು ದಂಗೆಕೋರರು.


‘ಯೆಹೂದದ ರಾಜನೇ, ಯೆಹೋವನಿಂದ ಬಂದ ಸಂದೇಶವನ್ನು ಕೇಳು. ನೀನು ದಾವೀದನ ಸಿಂಹಾಸನಾರೂಢನಾಗಿ ರಾಜ್ಯಭಾರ ಮಾಡುವೆ, ಅದಕ್ಕಾಗಿ ಕೇಳು. ರಾಜನೇ, ನೀನು ಮತ್ತು ನಿನ್ನ ಅಧಿಕಾರಿಗಳು ಚೆನ್ನಾಗಿ ಕೇಳಬೇಕು. ಜೆರುಸಲೇಮಿನ ದ್ವಾರಗಳ ಮೂಲಕ ಬರುವ ನಿನ್ನ ಜನರೆಲ್ಲರೂ ಯೆಹೋವನ ಸಂದೇಶವನ್ನು ಕೇಳಬೇಕು.


ಪವಿತ್ರಾತ್ಮನು ಸಭೆಗಳಿಗೆ ಹೇಳುತ್ತಿರುವ ಈ ಸಂಗತಿಗಳನ್ನು ಕೇಳುತ್ತಿರುವವನೇ, ಗಮನವಿಟ್ಟು ಆಲಿಸು.


ಆಗ ನಾನು ಹೇಳಿದ್ದೇನೆಂದರೆ, “ಯಾಕೋಬಿನ ನಾಯಕರೇ, ಇಸ್ರೇಲಿನ ಅಧಿಪತಿಗಳೇ, ನನ್ನ ಮಾತನ್ನು ಕೇಳಿರಿ. ನ್ಯಾಯ ಏನು ಎಂದು ನಿಮಗೆ ತಿಳಿದಿರಬೇಕು.


ಸಮಾರ್ಯದ ಪರ್ವತಗಳಲ್ಲಿರುವ ಬಾಷಾನಿನ ದನಗಳೇ, ನನ್ನ ಮಾತಿಗೆ ಕಿವಿಗೊಡಿರಿ. ನೀವು ಬಡ ಜನರನ್ನು ಹಿಂಸಿಸಿ ಜಜ್ಜುತ್ತೀರಿ. ನಿಮ್ಮ ಗಂಡಂದಿರ ಹತ್ತಿರ, “ನಮಗೆ ಕುಡಿಯಲಿಕ್ಕೆ ತಂದುಕೊಡು” ಎಂದು ಹೇಳುತ್ತೀರಿ.


“ಯಾಜಕರೇ, ಇಸ್ರೇಲ್ ಜನಾಂಗವೇ, ಅರಸನ ಪರಿವಾರದವರೇ, ನನ್ನ ಮಾತುಗಳಿಗೆ ಕಿವಿಗೊಡಿರಿ. ಯಾಕೆಂದರೆ ನಿಮಗೆ ನ್ಯಾಯತೀರ್ಪು ಬಂದಿದೆ. “ಮಿಚ್ಪದಲ್ಲಿ ನೀವು ಉರುಲಿನಂತೆ ಇದ್ದಿರಿ. ತಾಬೋರಿನಲ್ಲಿ ನೆಲದ ಮೇಲೆ ಹರಡಿಸಿದ್ದ ಬಲೆಯಂತೆ ಇದ್ದಿರಿ.


“ನರಪುತ್ರನೇ, ನಾನು ನಿನ್ನನ್ನು ಇಸ್ರೇಲರಿಗೆ ಕಾವಲುಗಾರನನ್ನಾಗಿ ಮಾಡಿದ್ದೇನೆ. ನಾನು ಅವರಿಗೆ ಸಂಭವಿಸುವ ಕೆಟ್ಟ ವಿಷಯಗಳನ್ನು ನಿನಗೆ ಹೇಳುತ್ತಿದ್ದೇನೆ. ಮತ್ತು ನೀನು ನನ್ನ ಪರವಾಗಿ ಅವರನ್ನು ಎಚ್ಚರಿಸು.


ಈ ಸಂಗತಿಗಳನ್ನು ರಾಜನಿಗೂ ರಾಣಿಗೂ ಹೇಳಿರಿ: “ನಿಮ್ಮ ಸಿಂಹಾಸನಗಳಿಂದ ಕೆಳಗಿಳಿದು ಬನ್ನಿ. ನಿಮ್ಮ ಸುಂದರವಾದ ಕಿರೀಟಗಳು ನಿಮ್ಮ ತಲೆಯಿಂದ ಉರುಳಿ ಕೆಳಗೆ ಬಿದ್ದಿವೆ” ಎಂದು ಹೇಳಿರಿ.


ಯೆಹೋವನು ನನಗೆ ಹೀಗೆ ಹೇಳಿದನು: “ಯೆರೆಮೀಯನೇ, ನೀನು ಹೋಗಿ ಯೆಹೂದದ ರಾಜರು ಸಂಚರಿಸುವ ಜೆರುಸಲೇಮಿನ ಜನರ ದ್ವಾರದಲ್ಲಿ ನಿಲ್ಲು. ಜನರಿಗೆ ನನ್ನ ಸಂದೇಶವನ್ನು ಹೇಳು. ಆಮೇಲೆ ಜೆರುಸಲೇಮಿನ ಎಲ್ಲಾ ದ್ವಾರಗಳಿಗೆ ಹೋಗಿ ಹಾಗೆಯೇ ಮಾಡು.


ಯೆಹೂದದ ಜನರು ನನ್ನ ಅನುಸರಣೆಯನ್ನು ಬಿಟ್ಟಿದ್ದರಿಂದ ನಾನು ಹೀಗೆ ಮಾಡುವೆನು. ಇದನ್ನು ಅವರು ಅನ್ಯದೇವರುಗಳ ಸ್ಥಳವನ್ನಾಗಿ ಮಾಡಿದ್ದಾರೆ. ಯೆಹೂದದ ಜನರು ಈ ಸ್ಥಳದಲ್ಲಿ ಅನ್ಯದೇವರುಗಳಿಗಾಗಿ ಧೂಪವನ್ನು ಹಾಕಿದ್ದಾರೆ. ಬಹಳ ಹಿಂದೆ ಈ ಜನರು ಆ ದೇವರುಗಳನ್ನು ಪೂಜಿಸುತ್ತಿರಲಿಲ್ಲ. ಅವರ ಹಿರಿಯರೂ ಆ ದೇವರುಗಳನ್ನು ಪೂಜಿಸುತ್ತಿರಲಿಲ್ಲ. ಇವುಗಳು ಅನ್ಯದೇಶದ ಹೊಸ ದೇವರುಗಳು. ಯೆಹೂದದ ರಾಜರು ಈ ಸ್ಥಳವನ್ನು ಮುಗ್ಧಮಕ್ಕಳ ರಕ್ತದಿಂದ ತುಂಬಿದರು.


“ಯೆಹೂದದ ರಾಜಮನೆತನದವರಿಗೆ ಈ ವಿಷಯಗಳನ್ನು ತಿಳಿಸಿರಿ: ‘ಯೆಹೋವನ ಸಂದೇಶವನ್ನು ಕೇಳಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು