Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 17:23 - ಪರಿಶುದ್ದ ಬೈಬಲ್‌

23 ಆದರೆ ನಿಮ್ಮ ಪೂರ್ವಿಕರು ನನ್ನ ಆಜ್ಞೆಯನ್ನು ಪಾಲಿಸಲಿಲ್ಲ. ಅವರು ನನಗೆ ಗಮನಕೊಡಲಿಲ್ಲ. ನಿಮ್ಮ ಪೂರ್ವಿಕರು ತುಂಬಾ ಮೊಂಡರಾಗಿದ್ದರು. ನಾನು ಅವರನ್ನು ದಂಡಿಸಿದೆ. ಆದರೆ ಅದರಿಂದ ಏನೂ ಪ್ರಯೋಜನವಾಗಲಿಲ್ಲ. ಅವರು ನನ್ನ ಮಾತನ್ನು ಕೇಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅವರಾದರೋ ಕಿವಿಗೊಟ್ಟು ಕೇಳಲಿಲ್ಲ, ಕೇಳಲಿಕ್ಕಾಗಲಿ ಉಪದೇಶ ಹೊಂದಲಿಕ್ಕಾಗಲಿ ಒಪ್ಪಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಅವರಾದರೋ ನನಗೆ ಕಿವಿಗೊಡಲಿಲ್ಲ. ಕೇಳಲಿಕ್ಕೂ ಕಲಿತುಕೊಳ್ಳಲಿಕ್ಕೂ ಅವರು ಒಪ್ಪಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಅವರಾದರೋ ಕಿವಿಗೊಟ್ಟು ಕೇಳಲಿಲ್ಲ, ಕೇಳಲಿಕ್ಕೂ ಉಪದೇಶ ಹೊಂದಲಿಕ್ಕೂ ಒಪ್ಪಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆದರೆ ಅವರು ವಿಧೇಯರಾಗಲಿಲ್ಲ, ಕಿವಿಗೊಟ್ಟು ಕೇಳಲಿಲ್ಲ. ಆದರೆ ವಿಧೇಯರಾಗದ ಹಾಗೆಯೂ, ಉಪದೇಶ ಹೊಂದದ ಹಾಗೆಯೂ ಹಟಮಾರಿಯಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 17:23
24 ತಿಳಿವುಗಳ ಹೋಲಿಕೆ  

ಪದೇಪದೇ ಎಚ್ಚರಿಸಿದರೂ ಮೊಂಡನಾಗಿರುವವನು ಪಕ್ಕನೆ ಏಳದ ಹಾಗೆ ನಾಶವಾಗುವನು.


“ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳುವನು: ‘ನಾನು ಜೆರುಸಲೇಮಿಗೂ ಅದರ ಸುತ್ತಲಿನ ಹಳ್ಳಿಗಳಿಗೂ ಅನೇಕ ವಿಪತ್ತುಗಳನ್ನು ಬರಮಾಡುವುದಾಗಿ ಹೇಳಿದೆನು. ಅವುಗಳನ್ನು ಬೇಗನೆ ಬರಮಾಡುತ್ತೇನೆ. ಏಕೆಂದರೆ ಜನರು ಬಹಳ ಮೊಂಡರಾಗಿದ್ದಾರೆ. ನಾನು ಹೇಳಿದ್ದನ್ನು ಅವರು ಕೇಳುವುದೂ ಇಲ್ಲ, ಅನುಸರಿಸುವುದೂ ಇಲ್ಲ.’”


ಅವರು ತಮ್ಮ ಪೂರ್ವಿಕರು ಮಾಡಿದ ಪಾಪಗಳನ್ನೇ ಮಾಡುತ್ತಿದ್ದಾರೆ. ಅವರ ಪೂರ್ವಿಕರು ನನ್ನ ಸಂದೇಶವನ್ನು ಕೇಳಲು ಒಪ್ಪಲಿಲ್ಲ. ಅವರು ಬೇರೆ ದೇವರುಗಳನ್ನು ಅನುಸರಿಸಿ ಪೂಜಿಸಿದರು. ನಾನು ಅವರ ಪೂರ್ವಿಕರ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ಯೆಹೂದ ಮತ್ತು ಇಸ್ರೇಲ್ ವಂಶದವರು ಮೀರಿದ್ದಾರೆ.”


ಸ್ತೆಫನನು ಮಾತನ್ನು ಮುಂದುವರಿಸಿದನು: “ಮೊಂಡರಾದ ಯೆಹೂದ್ಯನಾಯಕರೇ! ನೀವು ನಿಮ್ಮ ಹೃದಯಗಳನ್ನು ದೇವರಿಗೆ ಕೊಟ್ಟಿಲ್ಲ. ನೀವು ಆತನಿಗೆ ಕಿವಿಗೊಡುವುದಿಲ್ಲ. ಪವಿತ್ರಾತ್ಮನು ನಿಮಗೆ ತಿಳಿಸಲು ಪ್ರಯತ್ನಿಸುತ್ತಿರುವ ವಿಷಯಕ್ಕೆ ನೀವು ಯಾವಾಗಲೂ ವಿರೋಧಿಗಳಾಗಿದ್ದೀರಿ. ನಿಮ್ಮ ಪಿತೃಗಳು ಹೀಗೆಯೇ ಮಾಡಿದರು ಮತ್ತು ನೀವೂ ಅವರಂತೆಯೇ ಇದ್ದೀರಿ!


ನೀವು ಇದರಿಂದ ಪಾಠ ಕಲಿಯಬೇಕೆಂದು ಇದನ್ನೆಲ್ಲಾ ಹೇಳುತ್ತಿದ್ದೇನೆ. ನೀವು ನನ್ನನ್ನು ಗೌರವಿಸಿ ನನಗೆ ಭಯಪಡಬೇಕೆಂದು ನಾನು ಈ ವಿಷಯಗಳನ್ನು ತಿಳಿಸುತ್ತಿದ್ದೇನೆ. ನೀವು ಹೀಗೆ ಮಾಡುವುದಾದರೆ ನಿನ್ನ ಮನೆಯು ನಾಶವಾಗದು. ನೀವು ನನ್ನ ನಿಯಮಗಳನ್ನು ಅನುಸರಿಸುವದಾದರೆ ನಾನು ಆಲೋಚಿಸಿರುವ ಪ್ರಕಾರ ನಿಮ್ಮನ್ನು ಶಿಕ್ಷಿಸುವದಿಲ್ಲ.” ಆದರೆ ಆ ದುಷ್ಟ ಜನರು ತಮ್ಮ ಮಾರ್ಗವನ್ನು ಬಿಡದೆ ದುಷ್ಟತನದಲ್ಲಿಯೇ ಮುಂದುವರಿಯುತ್ತಿದ್ದಾರೆ.


“‘ಆದರೆ ಅವರ ಮಕ್ಕಳು ನನಗೆ ವಿರುದ್ಧವಾಗಿ ದಂಗೆ ಎದ್ದರು. ಅವರು ನನ್ನ ಕಟ್ಟಳೆಗಳನ್ನು ಅನುಸರಿಸಲಿಲ್ಲ. ಅವರು ನನ್ನ ಆಜ್ಞೆಗಳಿಗೆ ವಿಧೇಯರಾಗಲಿಲ್ಲ. ನಾನು ಹೇಳಿದ್ದನ್ನು ಅವರು ಮಾಡಲಿಲ್ಲ. ಅವು ಒಳ್ಳೆಯ ಕಟ್ಟಳೆಗಳಾಗಿದ್ದವು. ಅವುಗಳಿಗೆ ವಿಧೇಯರಾಗುವವರು ಜೀವಿಸುವರು. ಅವರು ನನ್ನ ಸಬ್ಬತ್ ದಿವಸಗಳನ್ನು ಆಚರಿಸಲಿಲ್ಲ. ಆದ್ದರಿಂದ ಮರುಭೂಮಿಯಲ್ಲಿ ಅವರನ್ನು ಸಂಪೂರ್ಣವಾಗಿ ನಿರ್ಮೂಲ ಮಾಡಲು ನಿರ್ಧರಿಸಿದೆನು. ನನ್ನ ಕೋಪದ ತೀಕ್ಷ್ಣತೆಯನ್ನು ಅವರು ತಿಳಿದುಕೊಳ್ಳಬೇಕೆಂದು ತೀರ್ಮಾನಿಸಿದೆನು.


“ಆ ಜನರು ಸಹಾಯಕೋರಿ ನನ್ನಲ್ಲಿಗೆ ಬರಬೇಕಾಗಿತ್ತು. ಆದರೆ ಅವರು ನನಗೆ ವಿಮುಖರಾದರು. ನಾನು ಮತ್ತೆಮತ್ತೆ ಅವರಿಗೆ ಬುದ್ಧಿಕಲಿಸುವ ಪ್ರಯತ್ನ ಮಾಡಿದೆ. ಆದರೆ ಅವರು ನನ್ನ ಮಾತನ್ನು ಕೇಳಲಿಲ್ಲ. ನಾನು ಅವರನ್ನು ತಿದ್ದುವ ಪ್ರಯತ್ನ ಮಾಡಿದೆ, ಆದರೆ ಅವರು ನನ್ನ ಮಾತನ್ನು ಕೇಳಲಿಲ್ಲ.


ನೀವು ಹಠಮಾರಿಗಳಾಗಿದ್ದು ನಾನು ಹೇಳಿದ್ದನ್ನು ನಂಬದೆ ಹೋದದ್ದರಿಂದ ನಾನು ಹಾಗೆ ಮಾಡಿದೆನು. ನೀವು ಕಬ್ಬಿಣದಂತೆ ಬಗ್ಗದ ಹಠಮಾರಿಗಳಾಗಿದ್ದೀರಿ. ಹಿತ್ತಾಳೆಯಂತೆ ಗಟ್ಟಿಯಾಗಿದ್ದೀರಿ.


“‘ಇಸ್ರೇಲ್ ಜನರು ನನ್ನ ಆಜ್ಞೆಗಳಿಗೆ ವಿಧೇಯರಾಗಲು ನಿರಾಕರಿಸಿದರು. ನನ್ನ ಕಟ್ಟಳೆಗಳನ್ನು ಅವರು ಅನುಸರಿಸಲಿಲ್ಲ. ನಾನು ನೇಮಿಸಿದ ಸಬ್ಬತ್ ದಿವಸಗಳನ್ನು ಆಚರಿಸಲಿಲ್ಲ. ಅವರ ಮನಸ್ಸು ಆ ಹೊಲಸು ದೇವರುಗಳ ಮೇಲೆ ನೆಟ್ಟಿದ್ದರಿಂದ ಅವರು ಹಾಗೆಲ್ಲಾ ಮಾಡಿದರು.


“‘ಆದರೆ ಇಸ್ರೇಲ್ ಜನರು ಅಡವಿಯಲ್ಲಿರುವಾಗ ನನಗೆ ವಿರುದ್ಧವಾಗಿ ತಿರುಗಿಬಿದ್ದರು. ನನ್ನ ಆಜ್ಞೆಗಳನ್ನು ಅವರು ಅನುಸರಿಸಲಿಲ್ಲ. ನನ್ನ ನಿಯಮಗಳಿಗೆ ವಿಧೇಯರಾಗಲು ನಿರಾಕರಿಸಿದರು. ಆ ಆಜ್ಞೆಗಳೆಲ್ಲಾ ನ್ಯಾಯವಾದವುಗಳೇ. ಒಬ್ಬನು ಆ ಆಜ್ಞೆಗಳಿಗೆ ವಿಧೇಯನಾದರೆ ಅವನು ಬಾಳುವನು. ನಾನು ನೇಮಿಸಿದ ಸಬ್ಬತ್ ದಿವಸಗಳನ್ನು ವಿಶೇಷವಾಗಿ ಅಲಕ್ಷ್ಯ ಮಾಡಿದರು. ಆ ದಿವಸಗಳಲ್ಲಿ ಅವರು ಎಷ್ಟೋ ಸಾರಿ ಕೆಲಸ ಮಾಡಿದರು. ನನ್ನ ರೌದ್ರದ ತೀವ್ರತೆಯನ್ನು ಅವರು ಅರಿತುಕೊಳ್ಳಲೆಂದು ನಾನು ಅವರನ್ನು ಅಡವಿಯಲ್ಲಿ ದಂಡಿಸಿ ನಾಶಮಾಡಲು ಆಲೋಚಿಸಿಕೊಂಡೆನು.


ನಾನು ನನ್ನ ಸೇವಕರಾದ ಪ್ರವಾದಿಗಳನ್ನು ಇಸ್ರೇಲಿಗೆ ಮತ್ತು ಯೆಹೂದಕ್ಕೆ ಕಳುಹಿಸಿಕೊಟ್ಟೆ. ನಾನು ಅವರನ್ನು ನಿಮ್ಮಲ್ಲಿಗೆ ಪುನಃಪುನಃ ಕಳುಹಿಸಿಕೊಟ್ಟೆ. ಆ ಪ್ರವಾದಿಗಳು, “ಇಸ್ರೇಲಿನ ಮತ್ತು ಯೆಹೂದದ ಪ್ರತಿಯೊಬ್ಬರೂ ದುಷ್ಕೃತ್ಯಗಳನ್ನು ಮಾಡುವದನ್ನು ನಿಲ್ಲಿಸಬೇಕು. ನೀವು ಒಳ್ಳೆಯವರಾಗಿರಬೇಕು. ಬೇರೆ ದೇವರುಗಳನ್ನು ಅನುಸರಿಸಬಾರದು. ಅವುಗಳನ್ನು ಪೂಜಿಸಬಾರದು. ಅವುಗಳ ಸೇವೆಮಾಡಬಾರದು ಎಂದು ಹೇಳಿದರು. ನನ್ನ ಆಜ್ಞೆಯನ್ನು ಪಾಲಿಸಿದರೆ ನಾನು ನಿಮಗೂ ಮತ್ತು ನಿಮ್ಮ ಪೂರ್ವಿಕರಿಗೂ ಕೊಟ್ಟ ಪ್ರದೇಶದಲ್ಲಿ ನೀವು ವಾಸಿಸಬಹುದು” ಎಂದು ಹೇಳಿದ್ದೆ. ಆದರೆ ನೀವು ನನ್ನ ಸಂದೇಶದ ಕಡೆಗೆ ಗಮನ ಕೊಡಲಿಲ್ಲ.


ಆದ್ದರಿಂದ ನೀನು ಅವರಿಗೆ ಹೀಗೆ ಹೇಳಬೇಕು: ತಮ್ಮ ದೇವರಾದ ಯೆಹೋವನ ಆಜ್ಞೆಯನ್ನು ಪಾಲಿಸದ ಜನಾಂಗವಿದು. ಈ ಜನರು ದೇವರ ಧರ್ಮೋಪದೇಶವನ್ನು ಕೇಳಲಿಲ್ಲ. ಈ ಜನರಿಗೆ ನಿಜವಾದ ಧರ್ಮೋಪದೇಶ ಗೊತ್ತಿಲ್ಲ.


ಜೆರುಸಲೇಮ್ ನಗರವೇ, ಈ ಎಚ್ಚರಿಕೆಯ ನುಡಿಗಳನ್ನು ಕೇಳು. ನೀನು ಕೇಳದಿದ್ದರೆ ನಾನು ನಿನಗೆ ವಿಮುಖನಾಗುವೆ. ನಾನು ನಿನ್ನ ಪ್ರದೇಶವನ್ನು ಒಂದು ಮರಳುಗಾಡಾಗಿ ಮಾಡುತ್ತೇನೆ. ಅಲ್ಲಿ ಯಾರೂ ವಾಸಮಾಡಲು ಸಾಧ್ಯವಾಗದು.”


ನನ್ನ ಉಪದೇಶವನ್ನು ಬೆಳ್ಳಿಗಿಂತಲೂ ನನ್ನ ಜ್ಞಾನೋಪದೇಶವನ್ನು ಶುದ್ಧ ಬಂಗಾರಕ್ಕಿಂತಲೂ ಉತ್ತಮವೆಂದು ಸ್ವೀಕರಿಸಿಕೊಳ್ಳಿ.


ಆಗ ನೀನು, “ನಾನೇಕೆ ನನ್ನ ತಂದೆತಾಯಿಗಳ ಮಾತನ್ನು ಕೇಳಲಿಲ್ಲ? ನಾನೇಕೆ ನನ್ನ ಉಪದೇಶಕರ ಮಾತಿಗೆ ಕಿವಿಗೊಡಲಿಲ್ಲ? ನಾನು ಅವರ ಸದುಪದೇಶವನ್ನು ದ್ವೇಷಿಸಿದ್ದರಿಂದಲೂ ಅವರ ಬುದ್ಧಿಮಾತನ್ನು ತಳ್ಳಿಬಿಟ್ಟಿದ್ದರಿಂದಲೂ


ಈ ಜ್ಞಾನೋಕ್ತಿಗಳಿಗೆ ಕಿವಿಗೊಡುವುದರ ಮೂಲಕ ಜ್ಞಾನಿಗಳು ತಮ್ಮ ಪಾಂಡಿತ್ಯವನ್ನೂ ವಿವೇಕಿಗಳು ತಮ್ಮ ಉಚಿತಾಲೋಚನೆಗಳನ್ನೂ ಹೆಚ್ಚಿಸಿಕೊಳ್ಳಲಿ.


ಈ ಜ್ಞಾನೋಕ್ತಿಗಳು ಯೋಗ್ಯವಾರ್ಗದಲ್ಲಿ ಜೀವಿಸಲು ಅಂದರೆ ಯಥಾರ್ಥವಾಗಿಯೂ ನ್ಯಾಯವಾಗಿಯೂ ಮತ್ತು ಒಳ್ಳೆಯವರಾಗಿಯೂ ಇರಲು ಉಪದೇಶಿಸುತ್ತವೆ.


ಹೀಗಿರಲು ನೀವು ನನ್ನ ಸುಶಿಕ್ಷಣವನ್ನು ದ್ವೇಷಿಸುವುದೇಕೆ? ನಾನು ಹೇಳುವುದನ್ನು ನೀವು ತುಚ್ಛೀಕರಿಸುವುದೇಕೆ?


ಆಗ ನಾನು ನಿಮಗೆ, ‘ಯೆಹೋವನಾದ ನಾನೇ ನಿಮ್ಮ ದೇವರು! ಅಮೋರಿಯರ ಪ್ರದೇಶದಲ್ಲಿದ್ದರೂ ಅವರ ಸುಳ್ಳುದೇವರುಗಳನ್ನು ನೀವು ಪೂಜಿಸಕೂಡದು ಎಂದು ಹೇಳಿದ್ದೆ.’ ಆದರೆ ನೀವು ನನ್ನ ಮಾತನ್ನು ಕೇಳಲಿಲ್ಲ.”


ಯೆಹೋವನೇ, ನೀನು ನಂಬಿಗಸ್ತರಾದ ಜನರನ್ನು ಹುಡುಕುವೆ. ನೀನು ಯೆಹೂದದ ಜನರಿಗೆ ಹೊಡೆದೆ, ಆದರೆ ಅವರಿಗೆ ಅದರಿಂದ ನೋವಾಗಲಿಲ್ಲ. ನೀನು ಅವರನ್ನು ಹಾಳುಮಾಡಿದೆ, ಆದರೆ ಅದರಿಂದ ಅವರು ಪಾಠವನ್ನೂ ಕಲಿಯಲಿಲ್ಲ. ಅವರು ತಮ್ಮ ದುಷ್ಕೃತ್ಯಗಳಿಗಾಗಿ ಪಶ್ಚಾತ್ತಾಪಪಡಲಿಲ್ಲ. ಅವರು ಬಹಳ ಹಟಮಾರಿಗಳಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು