Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 17:3 - ಪರಿಶುದ್ದ ಬೈಬಲ್‌

3 ಅವರು ಆ ವಸ್ತುಗಳನ್ನು ಬೆಟ್ಟಗಳ ಮೇಲೆಯೂ ಬಯಲು ಪ್ರದೇಶದಲ್ಲಿಯೂ ಜ್ಞಾಪಿಸಿಕೊಳ್ಳುವರು. ಯೆಹೂದದ ಜನರಲ್ಲಿ ಭಂಡಾರಗಳಿವೆ. ನಾನು ಅವುಗಳನ್ನು ಬೇರೆಯವರಿಗೆ ಒಪ್ಪಿಸುತ್ತೇನೆ. ನಿಮ್ಮ ದೇಶದಲ್ಲಿದ್ದ ಎಲ್ಲಾ ಉನ್ನತಸ್ಥಳಗಳನ್ನು ಜನರು ನಾಶಮಾಡುವರು. ಆ ಸ್ಥಳಗಳಲ್ಲಿ ಪೂಜೆಮಾಡಿ ನೀವು ಪಾಪಕ್ಕೆ ಗುರಿಯಾಗಿರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಬಯಲಿನ ನನ್ನ ಪರ್ವತದ ಜನರೇ, ನಿಮ್ಮ ಸಕಲ ಪ್ರಾಂತ್ಯಗಳಲ್ಲಿ ನೀವು ಮಾಡಿದ ಪಾಪದ ನಿಮಿತ್ತ, ನಾನು ನಿಮ್ಮ ಎಲ್ಲಾ ಸೊತ್ತು ಸಂಪತ್ತುಗಳನ್ನು ಹಾಗು ಪೂಜಾಸ್ಥಳಗಳನ್ನು ಸೂರೆಗೆ ಈಡು ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ನಿಮ್ಮ ಪ್ರಾಂತ್ಯಗಳಲ್ಲೆಲ್ಲ ನೀವು ಮಾಡಿದ ಪಾಪದ ನಿಮಿತ್ತ ನಾನು ನಿಮ್ಮ ಎಲ್ಲ ಸೊತ್ತುಸಂಪತ್ತುಗಳನ್ನು ಮತ್ತು ಪೂಜಾಸ್ಥಳಗಳನ್ನು ಸೂರೆಗೆ ಈಡುಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಬೈಲಿನ ನನ್ನ ಪರ್ವತದ ಜನರೇ, ನಿಮ್ಮ ಸಕಲ ಪ್ರಾಂತಗಳಲ್ಲಿ ನೀವು ಮಾಡಿದ ಪಾಪದ ನಿವಿುತ್ತ ನಾನು ನಿಮ್ಮ ಎಲ್ಲಾ ಸೊತ್ತು ಸಂಪತ್ತುಗಳನ್ನೂ ಪೂಜಾಸ್ಥಳಗಳನ್ನೂ ಸೂರೆಗೆ ಈಡುಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನಾಡಿನಲ್ಲಿರುವ ನನ್ನ ಪರ್ವತವೇ, ನಿನ್ನ ಎಲ್ಲಾ ಪ್ರಾಂತಗಳಲ್ಲಿ ಪಾಪಕ್ಕಾಗಿರುವ ನಿನ್ನ ಉನ್ನತ ಪೂಜಾಸ್ಥಳಗಳನ್ನೂ ನಾನು ಕೊಳ್ಳೆಗೆ ಒಪ್ಪಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 17:3
23 ತಿಳಿವುಗಳ ಹೋಲಿಕೆ  

ಯೆಹೂದದ ಜನರಲ್ಲಿ ಅನೇಕ ಭಂಡಾರಗಳಿವೆ. ಆ ಭಂಡಾರಗಳನ್ನು ನಾನು ಬೇರೆಯವರಿಗೆ ಒಪ್ಪಿಸುತ್ತೇನೆ. ಬೇರೆಯವರು ಆ ಭಂಡಾರಗಳನ್ನು ಹಣ ಕೊಟ್ಟು ತೆಗೆದುಕೊಳ್ಳಬೇಕಾಗಿಲ್ಲ. ನಾನು ಅವರಿಗೆ ಅವುಗಳನ್ನು ಉಚಿತವಾಗಿ ಕೊಟ್ಟುಬಿಡುತ್ತೇನೆ. ಏಕೆಂದರೆ ಯೆಹೂದವು ಅನೇಕ ಪಾಪಗಳನ್ನು ಮಾಡಿದೆ. ದೇಶದ ಪ್ರತಿಯೊಂದು ಭಾಗದಲ್ಲಿಯೂ ಯೆಹೂದ ಪಾಪಮಾಡಿದೆ.


ಹೀಗೆ ಹೇಳಿದರು, “ಪ್ರವಾದಿಯಾದ ಮೀಕಾಯನು ಮೋರೆಷೆತ್ ನಗರದವನಾಗಿದ್ದನು. ಹಿಜ್ಕೀಯನು ಯೆಹೂದದ ರಾಜನಾಗಿದ್ದ ಕಾಲದಲ್ಲಿ ಮೀಕಾಯನು ಪ್ರವಾದಿಯಾಗಿದ್ದನು. ಯೆಹೂದದ ಸಮಸ್ತ ಜನರಿಗೆ ಮೀಕಾಯನು ಹೀಗೆ ಹೇಳಿದನು: ‘ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: ‘ಚೀಯೋನ್ ನಗರವು ನೇಗಿಲುಹೊಡೆದ ಹೊಲವಾಗುವುದು. ಜೆರುಸಲೇಮ್ ನಗರವು ಕಲ್ಲಿನ ದಿಬ್ಬವಾಗುವುದು. ಪವಿತ್ರ ಆಲಯವಿದ್ದ ಪರ್ವತವು ಮರಗಿಡಗಳಿಂದ ಮುಚ್ಚಿಹೋಗುವುದು.’


ನೆಬೂಕದ್ನೆಚ್ಚರನು ಜೆರುಸಲೇಮಿನ ದೇವಾಲಯದಲ್ಲಿದ್ದ ಭಂಡಾರವನ್ನೆಲ್ಲಾ ಮತ್ತು ರಾಜನ ಅರಮನೆಯಲ್ಲಿದ್ದ ಭಂಡಾರವನ್ನೆಲ್ಲಾ ತೆಗೆದುಕೊಂಡು ಹೋದನು. ಇಸ್ರೇಲರ ರಾಜನಾದ ಸೊಲೊಮೋನನು ದೇವಾಲಯದಲ್ಲಿಟ್ಟಿದ್ದ ಬಂಗಾರವನ್ನೆಲ್ಲಾ ನೆಬೂಕದ್ನೆಚ್ಚರನು ತೆಗೆದುಕೊಂಡನು. ಯೆಹೋವನು ಹೇಳಿದ್ದಂತೆಯೇ ಇದು ಸಂಭವಿಸಿತು.


ನಾಯಕರೇ, ನಿಮ್ಮಿಂದಾಗಿ ಚೀಯೋನ್ ನಾಶವಾಗುವದು. ನೇಗಿಲಿನಿಂದ ಉತ್ತಲ್ಪಟ್ಟ ಹೊಲದಂತೆ ಅದು ಇರುವದು. ಜೆರುಸಲೇಮ್ ಕಲ್ಲಿನ ರಾಶಿಯಾಗುವದು. ಆಲಯದ ಗುಡ್ಡವು ಬರಿದಾದ ಬೆಟ್ಟವಾಗುವುದು. ಅದರ ಮೇಲೆ ಪೊದೆಗಳು ಹುಲುಸಾಗಿ ಬೆಳೆದುಕೊಳ್ಳುವವು.


ಆ ನಿನ್ನ ಪ್ರಿಯತಮರಿಗೆ ನಿನ್ನನ್ನು ಬಿಟ್ಟುಕೊಡುವೆನು. ಅವರು ನಿನ್ನ ದಿಬ್ಬಗಳನ್ನು ನಾಶಮಾಡುವರು ಮತ್ತು ಪೂಜಾಯಜ್ಞವೇದಿಕೆಗಳನ್ನು ಕೆಡವಿಹಾಕುವರು. ನಿನ್ನ ಬಟ್ಟೆಗಳನ್ನು ಕಿತ್ತುಕೊಳ್ಳುವರು ಮತ್ತು ಚಂದವಾದ ಆಭರಣಗಳನ್ನು ತೆಗೆದುಕೊಂಡು ಹೋಗುವರು. ಮತ್ತು ನಿನ್ನನ್ನು ಬೆತ್ತಲೆಯಾಗಿ ಮಾಡುವರು.


‘ಇಸ್ರೇಲಿನ ಪರ್ವತಗಳೇ, ನನ್ನ ಒಡೆಯನಾದ ಯೆಹೋವನ ಸಂದೇಶಕ್ಕೆ ಕಿವಿಗೊಡಿರಿ. ಬೆಟ್ಟಗಳಿಗೂ ಪರ್ವತಗಳಿಗೂ ಕೊರಕಲುಗಳಿಗೂ ಕಣಿವೆಗಳಿಗೂ ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ, ನಾನು ವೈರಿಯನ್ನು ನಿಮ್ಮ ವಿರುದ್ಧ ಯುದ್ಧ ಮಾಡಲು ಕಳುಹಿಸುವೆನು. ನಿಮ್ಮ ಎಲ್ಲಾ ಉನ್ನತ ಸ್ಥಳಗಳನ್ನು ನಾಶಮಾಡುವೆನು.


ಶತ್ರು ತನ್ನ ಕೈಗಳನ್ನು ಚಾಚಿದನು. ಅವಳ ಎಲ್ಲ ಅಮೂಲ್ಯ ವಸ್ತುಗಳನ್ನು ತೆಗೆದುಕೊಂಡನು. ಯೆಹೋವನೇ, ಆ ಜನರು ನಿನ್ನ ಸಭೆಯನ್ನು ಪ್ರವೇಶಿಸಬಾರದೆಂದು ನೀನು ಆಜ್ಞಾಪಿಸಿದ್ದರೂ ಪರಕೀಯರು ತನ್ನ ಪವಿತ್ರಾಲಯವನ್ನು ಪ್ರವೇಶಿಸುವದನ್ನು ಅವಳು ನೋಡಬೇಕಾಯಿತು.


ಅನೇಕ ಸೈನಿಕರು ಆ ಬೋಳುಬೆಟ್ಟಗಳನ್ನು ತುಳಿದುಕೊಂಡು ಹೋದರು. ಆ ಸೈನ್ಯಗಳಿಂದ ಯೆಹೋವನು ಆ ದೇಶವನ್ನು ದಂಡಿಸಿದನು. ಆ ದೇಶದ ಒಂದು ತುದಿಯಿಂದ ಇನ್ನೊಂದು ತುದಿಯವರೆಗೆ ವಾಸಿಸಿದ ಎಲ್ಲಾ ಜನರನ್ನು ದಂಡಿಸಲಾಯಿತು. ಯಾರೂ ಸುರಕ್ಷಿತವಾಗಿ ಉಳಿಯಲಿಲ್ಲ.


ಯಾಕೋಬನ ದೋಷವು ಹೇಗೆ ಕ್ಷಮಿಸಲ್ಪಡುವದು? ಅವನ ಪಾಪಗಳು ನಿವಾರಣೆಯಾಗುವದಕ್ಕೆ ಏನು ಮಾಡಬೇಕಾಗುವದು? ಇತರ ದೇವತೆಗಳ ಪೂಜಾಸ್ಥಳಗಳೂ ವೇದಿಕೆಯ ಕಲ್ಲುಗಳೂ ಪುಡಿಪುಡಿಯಾಗಿ ನಾಶವಾಗುವವು.


ನಾನು ನಿಮ್ಮ ಉನ್ನತವಾದ ಪೂಜಾಸ್ಥಳಗಳನ್ನು ನಾಶಮಾಡುವೆ. ನಾನು ನಿಮ್ಮ ಧೂಪವೇದಿಕೆಗಳನ್ನು ಕಡಿದುಹಾಕುವೆನು. ನಿಮ್ಮ ವಿಗ್ರಹಗಳ ಮೇಲೆ ನಿಮ್ಮ ಹೆಣಗಳನ್ನು ಹಾಕುವೆನು. ನೀವು ನನಗೆ ಬಹಳ ಅಸಹ್ಯರಾಗಿರುವಿರಿ.


ಇಸ್ರೇಲರು ಎತ್ತರವಾದ ಸ್ಥಳಗಳನ್ನು ನಿರ್ಮಿಸಿ, ಆತನನ್ನು ಕೋಪಗೊಳಿಸಿದರು. ಸುಳ್ಳುದೇವರುಗಳ ವಿಗ್ರಹಗಳನ್ನು ರೂಪಿಸಿ ಆತನನ್ನು ರೇಗಿಸಿದರು.


ಸಂಪತ್ತನ್ನು ಸಂಗ್ರಹಿಸಿ ಸಿರಿವಂತರಾಗಲು ಜೆರುಸಲೇಮಿನ ಜನರು ಬಹಳ ಕಷ್ಟಪಟ್ಟು ದುಡಿದರು. ಆದರೆ ನಾನು ಅದೆಲ್ಲವನ್ನು ಅವರ ವೈರಿಗಳಿಗೆ ಒಪ್ಪಿಸುವೆನು. ಜೆರುಸಲೇಮಿನ ರಾಜನ ಬಳಿ ಅನೇಕ ನಿಧಿನಿಕ್ಷೇಪಗಳಿವೆ. ಆದರೆ ನಾನು ಆ ನಿಧಿನಿಕ್ಷೇಪಗಳನ್ನೆಲ್ಲಾ ವೈರಿಗೆ ಒಪ್ಪಿಸುತ್ತೇನೆ. ವೈರಿಯು ಅವುಗಳನ್ನು ಬಾಬಿಲೋನ್ ದೇಶಕ್ಕೆ ತೆಗೆದುಕೊಂಡು ಹೋಗುವನು.


ಆಗ ಇತರ ಜನರು ಬಂದು ಅವರ ಐಶ್ವರ್ಯವನ್ನು ಸುಲುಕೊಂಡು ಅವರ ಮನೆಯನ್ನು ನಾಶಮಾಡುವರು. ಆ ಸಮಯಗಳಲ್ಲಿ ಮನೆಕಟ್ಟಿದ ಜನರು ಅದರಲ್ಲಿ ವಾಸಮಾಡುವುದಿಲ್ಲ. ದ್ರಾಕ್ಷಿತೋಟವನ್ನು ನೆಟ್ಟವರು, ಅದರ ಹಣ್ಣಿನ ರಸವನ್ನು ಕುಡಿಯುವುದಿಲ್ಲ. ಬೇರೆಯವರು ಅದನ್ನು ಪಡೆದುಕೊಳ್ಳುವರು.”


“ಜೆರುಸಲೇಮ್ ನಗರವೇ, ನಾನು ನಿನ್ನ ವಿರುದ್ಧವಾಗಿದ್ದೇನೆ. ನೀನು ಬೆಟ್ಟದ ಮೇಲೆ ಕುಳಿತಿರುವೆ, ನೀನು ರಾಣಿಯಂತೆ ಈ ಕಣಿವೆಯ ಮೇಲೆ ಕುಳಿತಿರುವೆ. ‘ನಮ್ಮ ಮೇಲೆ ಯಾರೂ ಧಾಳಿ ಮಾಡಲಾರರು, ನಮ್ಮ ಭದ್ರವಾದ ನಗರವನ್ನು ಯಾರೂ ಪ್ರವೇಶ ಮಾಡಲಾರರು’ ಎಂದು ಜೆರುಸಲೇಮಿನ ನಿವಾಸಿಗಳಾದ ನೀವು ಹೇಳುವಿರಿ.” ಆದರೆ ಯೆಹೋವನ ಸಂದೇಶವನ್ನು ಕೇಳಿರಿ.


ನನ್ನ ಒಡೆಯನಾದ ಯೆಹೋವನು ನನಗೆ ಹೀಗೆ ಹೇಳಿದನು, “ಜನರನ್ನು ಒಟ್ಟುಗೂಡಿಸು. ಅವರು ಒಟ್ಟಾಗಿ ಸೇರಿ ಒಹೊಲ ಮತ್ತು ಒಹೊಲೀಬರನ್ನು ಶಿಕ್ಷಿಸಲಿ. ಆ ಜನರು ಈ ಸ್ತ್ರೀಯರನ್ನು ಶಿಕ್ಷಿಸಿ ಗೇಲಿ ಮಾಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು