Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 17:5 - ಪರಿಶುದ್ದ ಬೈಬಲ್‌

5 ಯೆಹೋವನು ಹೀಗೆ ಹೇಳಿದನು: “ಕೇವಲ ಜನರನ್ನು ನಂಬಿದವರಿಗೆ ಕೇಡಾಗುವುದು. ಮನುಷ್ಯರ ಬಲವನ್ನು ಆತುಕೊಂಡವರಿಗೆ ಕೇಡಾಗುವುದು. ಯಾಕೆಂದರೆ ಅಂಥವರು ಯೆಹೋವನಲ್ಲಿ ನಂಬಿಕೆ ಇಡುವದನ್ನು ಬಿಟ್ಟುಬಿಟ್ಟಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯೆಹೋವನು ಹೀಗೆನ್ನುತ್ತಾನೆ, “ಮಾನವ ಮಾತ್ರದವರಲ್ಲಿ ಭರವಸವಿಟ್ಟು, ನರಜನ್ಮದವರನ್ನು ತನ್ನ ಭುಜಬಲವೆಂದು ತಿಳಿದು, ಯೆಹೋವನನ್ನು ತೊರೆಯುವ ಮನಸ್ಸುಳ್ಳವನು ಶಾಪಗ್ರಸ್ಥನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಇವು ಸರ್ವೇಶ್ವರನ ಮಾತುಗಳು : “ಮಾನವ ಮಾತ್ರದವರಲ್ಲಿ ಭರವಸೆಯಿಟ್ಟು ನರಜನ್ಮದವರನ್ನೇ ತನ್ನ ಭುಜಬಲವೆಂದುಕೊಂಡು ಸರ್ವೇಶ್ವರನನ್ನೇ ತೊರೆಯುವಂಥ ಹೃದಯವುಳ್ಳವನು ಶಾಪಗ್ರಸ್ತನು !

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಯೆಹೋವನು ಹೀಗನ್ನುತ್ತಾನೆ - ಮಾನವಮಾತ್ರದವರಲ್ಲಿ ಭರವಸವಿಟ್ಟು ನರಜನ್ಮದವರನ್ನು ತನ್ನ ಭುಜಬಲವೆಂದು ತಿಳಿದು ಯೆಹೋವನನ್ನು ತೊರೆಯುವ ಮನಸ್ಸುಳ್ಳವನು ಶಾಪಗ್ರಸ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಯೆಹೋವ ದೇವರು ಹೀಗೆ ಹೇಳುತ್ತಾರೆ: “ಮಾನವನ ಸಾಮರ್ಥ್ಯಗಳನ್ನು ತನ್ನ ಆಧಾರವಾಗಿ ಮಾಡಿಕೊಂಡ ವ್ಯಕ್ತಿ ಶಾಪಗ್ರಸ್ತ, ಅವನು ಮನುಷ್ಯನ ಶಕ್ತಿಯ ಮೇಲೆ ಭರವಸೆ ಇಡುವನು. ಯೆಹೋವ ದೇವರ ಕಡೆಯಿಂದ ಯಾವನ ಹೃದಯವು ತೊಲಗುವುದೋ, ಅವನು ಶಾಪಗ್ರಸ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 17:5
16 ತಿಳಿವುಗಳ ಹೋಲಿಕೆ  

ನಿಮ್ಮ ರಕ್ಷಣೆಗಾಗಿ ನೀವು ಇತರರ ಮೇಲೆ ನಂಬಿಕೆ ಇಡಕೂಡದು. ಅವರು ಕೇವಲ ಸಾಯುವ ಮನುಷ್ಯರಷ್ಟೇ. ಆದ್ದರಿಂದ ಅವರನ್ನು ನೀವು ದೇವರಂತೆ ಬಲಿಷ್ಠರೆಂದು ನೆನಸಬಾರದು.


ಅಶ್ಶೂರದ ರಾಜನ ಬಳಿಯಲ್ಲಿ ಮನುಷ್ಯರು ಮಾತ್ರ ಇರುವರು. ಆದರೆ ನಮ್ಮೊಂದಿಗೆ ದೇವರಾದ ಯೆಹೋವನಿದ್ದಾನೆ. ನಮ್ಮ ದೇವರು ನಮಗೆ ಸಹಾಯ ಮಾಡುತ್ತಾನೆ. ನಮ್ಮ ಯುದ್ಧದಲ್ಲಿ ಆತನು ನಮಗೋಸ್ಕರ ಕಾದಾಡುವನು” ಎಂದು ಹೇಳಿ ಹಿಜ್ಕೀಯ ಅರಸನು ತನ್ನ ಜನರನ್ನು ಪ್ರೋತ್ಸಾಹಿಸಿ ಬಲಗೊಳಿಸಿದನು.


ಈಜಿಪ್ಟು ನಿನಗೆ ಸಹಾಯ ಮಾಡುವುದೆಂದು ನಂಬಿರುವಿಯಾ? ಈಜಿಪ್ಟು ಒಂದು ಮುರಿದ ದಂಟು. ಅದರ ಮೇಲೆ ನೀನು ಭಾರಹಾಕಿದರೆ ಅದು ನಿನ್ನ ಅಂಗೈಯಲ್ಲಿ ರಂಧ್ರಮಾಡುವುದು. ಈಜಿಪ್ಟಿನ ರಾಜನಾದ ಫರೋಹನ ಸಹಾಯಕ್ಕಾಗಿ ಆಶ್ರಯಿಸಿಕೊಂಡ ಯಾವ ಜನರೂ ಅವನಲ್ಲಿ ಭರವಸೆ ಇಡಲಾಗದು.


ಸಾಮಾನ್ಯ ಜನರು ಕೇವಲ ಉಸಿರಷ್ಟೇ. ಶ್ರೇಷ್ಠರು ಕೇವಲ ಕ್ಷಣಕಾಲವಷ್ಟೇ. ತೂಗಿನೋಡಿದರೆ ಅವರು ಕೇವಲ ಶೂನ್ಯ; ಉಸಿರಿಗಿಂತಲೂ ಹಗುರ.


ಯಾಕೆಂದರೆ ನಾನು ಯೆಹೋವನಿಗೆ ವಿಧೇಯನಾಗಿದ್ದೆನು; ನನ್ನ ದೇವರ ವಿರೋಧನಾಗಿ ನಾನು ಪಾಪಮಾಡಲಿಲ್ಲ.


ಆಗ ಉಳಿದವರು ಸೆರೆಹಿಡಿಯಲ್ಪಡುವರು. ಅವರು ಪರದೇಶಕ್ಕೆ ಒಯ್ಯಲ್ಪಟ್ಟು ಅಲ್ಲಿ ವಾಸಿಸುವರು. ಅಲ್ಲಿ ಅಳಿದುಳಿದ ಜನರು ನನ್ನನ್ನು ಜ್ಞಾಪಿಸಿಕೊಳ್ಳುವರು ಮತ್ತು ಅವರ ಅಪನಂಬಿಗಸ್ತಿಕೆಯ ಹೃದಯವನ್ನು ನಾನು ಜಜ್ಜಿದೆನು. ತಾವು ಮಾಡಿದ ಕೆಟ್ಟ ಕೆಲಸಗಳಿಗಾಗಿ ತಮ್ಮನ್ನು ತಾವೇ ದ್ವೇಷಿಸುವರು. ಹಿಂದಿನ ಕಾಲದಲ್ಲಿ ಅವರು ನನ್ನಿಂದ ದೂರವಾಗಿ ನನ್ನನ್ನು ತ್ಯಜಿಸಿದರು. ತಮ್ಮ ಹೊಲಸು ವಿಗ್ರಹಗಳ ಹಿಂದೆ ಹೋದರು. ಗಂಡನನ್ನು ಬಿಟ್ಟು ಬೇರೆ ಪುರುಷನ ಸಂಗಡ ಓಡುವ ಸ್ತ್ರೀಯಂತೆ ಅವರಿದ್ದರು. ಅವರು ಇನ್ನೂ ಅನೇಕ ಅಸಹ್ಯಕರವಾದ ಕಾರ್ಯಗಳನ್ನು ಮಾಡಿದರು.


ಹೋಶೇಯನಿಗೆ ಯೆಹೋವನಿಂದ ಬಂದ ಸಂದೇಶದಲ್ಲಿ ಇದು ಮೊದಲನೆಯದು. ಯೆಹೋವನು ಹೇಳಿದ್ದೇನೆಂದರೆ, “ನೀನು ಹೋಗಿ ಒಬ್ಬ ವೇಶ್ಯೆಯನ್ನು ಮದುವೆಯಾಗು. ಆ ವೇಶ್ಯೆಯಿಂದ ಮಕ್ಕಳನ್ನು ಪಡೆದುಕೊ. ಯಾಕೆಂದರೆ ಈ ದೇಶದ ಜನರು ಸೂಳೆಯಂತೆ ವರ್ತಿಸಿರುತ್ತಾರೆ. ಅವರು ಯೆಹೋವನಿಗೆ ಅಪನಂಬಿಗಸ್ತಿಕೆಯುಳ್ಳವರಾಗಿರುತ್ತಾರೆ.”


ಸತ್ಯವು ಹೊರಟುಹೋಯಿತು. ಒಳ್ಳೆಯದನ್ನು ಮಾಡುವವರು ಲೂಟಿಗೆ ಗುರಿಯಾಗಿದ್ದಾರೆ. ಒಳ್ಳೆಯವರು ಇಲ್ಲದೆ ಇರುವುದನ್ನು ಕಂಡು ಯೆಹೋವನು ಬೇಸರಗೊಂಡಿದ್ದಾನೆ.


ಆಸನ ಆಳ್ವಿಕೆಯ ಮೂವತ್ತೊಂಭತ್ತನೆಯ ವರ್ಷದಲ್ಲಿ ಅವನ ಕಾಲಿಗೆ ರೋಗ ಬಂದಿತು. ಅದು ಅಧಿಕವಾಗಿ ಹೆಚ್ಚಿದ್ದರಿಂದ ಅವನು ಯೆಹೋವನ ಸಹಾಯವನ್ನು ಕೇಳದೆ ವೈದ್ಯರ ನೆರವನ್ನೇ ಪಡೆದನು.


ಜನರು ಇಥಿಯೋಪ್ಯದ ಕಡೆಗೆ ಸಹಾಯಕ್ಕಾಗಿ ನೋಡುವರು. ಅವರು ಕಂಗೆಟ್ಟು ಹೋಗುವರು. ಈಜಿಪ್ಟಿನ ಮಹಿಮೆಯನ್ನು ಗಮನಿಸಿದವರು ಈಗ ನಾಚಿಕೆಯಲ್ಲಿ ಬೀಳುವರು” ಎನ್ನುವನು.


ಇಸ್ರೇಲಿನ ದೇವರಾದ ಯೆಹೋವನು ಹೀಗೆ ಹೇಳುತ್ತಾನೆ, ‘ಈ ಒಡಂಬಡಿಕೆಯನ್ನು ಪಾಲಿಸದೆ ಇದ್ದವರಿಗೆ ಕೇಡಾಗುತ್ತದೆ.’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು