Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 17:6 - ಪರಿಶುದ್ದ ಬೈಬಲ್‌

6 ಆ ಜನರು ನಿರ್ಜನವಾದ ಪ್ರದೇಶದಲ್ಲಿದ್ದ, ಸುಡುವ ಬರಡು ಭೂಮಿಯಲ್ಲಿದ್ದ, ಬಂಜರು ಭೂಮಿಯಲ್ಲಿ ಬೆಳೆದ, ದೇವರು ನೀಡಬಹುದಾದ ಒಳ್ಳೆಯ ವಸ್ತುಗಳ ಬಗ್ಗೆ ಏನೂ ಅರಿಯದ ಒಂದು ಪೊದೆಯಂತಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಇವನು ಅಡವಿಯಲ್ಲಿನ ಜಾಲಿಗೆ ಸಮಾನನು; ಶುಭ ಸಂಭವಿಸಿದರೂ ಅವನು ಅದನ್ನು ಕಾಣನು. ಯಾರೂ ವಾಸಿಸದ ಚೌಳು ನೆಲವಾಗಿರುವ ಅರಣ್ಯದ ಬೆಗ್ಗಾಡಿನಲ್ಲಿ ವಾಸಿಸುವ ಸ್ಥಿತಿಯೇ ಅವನದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಇಂಥವನು ಅಡವಿಯಲ್ಲಿನ ಜಾಲಿಗಿಡಕ್ಕೆ ಸಮಾನನು. ಶುಭಸಂಭವಿಸಿದರೂ ಅದು ಅವನ ಕಣ್ಣಿಗೆ ಕಾಣದು. ಜನರಾರೂ ವಾಸಿಸದ ಚೌಳು ನೆಲದೊಳು ಬೆಳೆಯಿಲ್ಲದ ಬೆಂಗಾಡಿನೊಳು ವಾಸಿಸುವವನ ಪರಿಸ್ಥಿತಿ ಅವನದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಇವನು ಅಡವಿಯಲ್ಲಿನ ಜಾಲಿಗೆ ಸಮಾನನು; ಶುಭಸಂಭವಿಸಿದರೂ ಅದನ್ನು ಕಾಣನು; ಯಾರೂ ವಾಸಿಸದ ಚೌಳು ನೆಲವಾಗಿರುವ ಅರಣ್ಯದ ಬೆಗ್ಗಾಡಿನಲ್ಲಿ ವಾಸಿಸುವ ಸ್ಥಿತಿಯೇ ಅವನದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅವನು ಅಡವಿಯಲ್ಲಿರುವ ಜಾಲಿ ಗಿಡದ ಹಾಗಿರುವನು. ಒಳ್ಳೆಯದು ಬರುವಾಗ ನೋಡದೆ ಇರುವನು. ನಿವಾಸಿಗಳಿಲ್ಲದ ಚೌಳು ನೆಲವಾಗಿರುವ ಮರುಭೂಮಿಯ ನೀರಿಲ್ಲದ ಸ್ಥಳಗಳಲ್ಲಿ ವಾಸವಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 17:6
17 ತಿಳಿವುಗಳ ಹೋಲಿಕೆ  

ಆ ದುಷ್ಟನು ಹಾಲೂಜೇನೂ ಹರಿಯುವ ನದಿಗಳನ್ನು ನೋಡುವುದೇ ಇಲ್ಲ.


ದುಷ್ಟರಾದರೋ ಹಾಗಲ್ಲ! ಅವರು ಗಾಳಿ ಬಡಿದುಕೊಂಡು ಹೋಗುವ ಹೊಟ್ಟಿನಂತಿರುವರು.


ನಿಮ್ಮ ದೇಶವೆಲ್ಲಾ ನಿಷ್ಪ್ರಯೋಜಕವಾಗಿರುವುದು. ಅದರ ಮೇಲೆ ಉಪ್ಪೂ ಗಂಧಕವೂ ತುಂಬಿರುವುದು. ಅದರ ಮೇಲೆ ಯಾವ ಸಸಿಯೂ ಬೆಳೆಯಲಾರದು; ಕೂಳೆಯೂ ಬೆಳೆಯುವುದಿಲ್ಲ. ಸೊದೋಮ್, ಗೊಮೋರ, ಅದ್ಮಾ ಮತ್ತು ಚೆಬೋಯೀಮ್ ಎಂಬ ಪಟ್ಟಣಗಳು ಯೆಹೋವನ ಕೋಪದ ನಿಮಿತ್ತ ನಾಶವಾದಂತೆ ನಿಮ್ಮ ದೇಶವೂ ನಾಶವಾಗುವುದು.


ಓಡಿಹೋಗಿರಿ, ನಿಮ್ಮ ಪ್ರಾಣಗಳನ್ನು ಉಳಿಸಿಕೊಳ್ಳುವದಕ್ಕಾಗಿ ಓಡಿಹೋಗಿರಿ. ಮರುಭೂಮಿಯಲ್ಲಿರುವ ಕಾಡುಕತ್ತೆಯಂತೆ ಓಡಿರಿ.


ಕಾಡುಕತ್ತೆಗೆ ಅಡವಿಯನ್ನು ಮನೆಯನ್ನಾಗಿ ಕೊಟ್ಟವನೇ ನಾನು. ಅವುಗಳಿಗೆ ಉಪ್ಪುಭೂಮಿಯನ್ನು ವಾಸಿಸುವ ಸ್ಥಳವನ್ನಾಗಿ ಕೊಟ್ಟವನೇ ನಾನು.


ನನ್ನ ಜೀವದಾಣೆ, ಮೋವಾಬ್ಯರೂ ಅಮ್ಮೋನ್ಯರೂ ಸೊದೋಮ್ ಗೊಮೋರದವರಂತೆ ನಾಶವಾಗುವರು. ನಾನು ಸರ್ವಶಕ್ತನಾದ ಇಸ್ರೇಲರ ದೇವರಾಗಿರುವೆನು. ನಾನು ವಾಗ್ದಾನ ಮಾಡುವದೇನೆಂದರೆ, ಆ ರಾಜ್ಯಗಳು ಸಂಪೂರ್ಣವಾಗಿ ನಾಶವಾಗುವವು. ಅವರ ಭೂಮಿಯು ಕಳೆಗಳಿಂದ ತುಂಬಿಹೋಗುವದು. ಅದು ಮೃತ್ಯುಸಮುದ್ರದ ಉಪ್ಪಿನಿಂದ ತುಂಬಿಹೋದಂತಿರುವದು. ನನ್ನ ಜನರಲ್ಲಿ ಉಳಿದವರು ಅವರ ದೇಶವನ್ನೂ ಅಲ್ಲಿ ಉಳಿದಿರುವ ವಸ್ತುಗಳನ್ನೂ ತಮ್ಮ ವಶಮಾಡಿಕೊಳ್ಳುವರು.”


ಆ ಇಡೀ ದಿವಸ ಅಬೀಮೆಲೆಕ ಮತ್ತು ಅವನ ಜನರು ಶೆಕೆಮಿನ ಜನರೊಂದಿಗೆ ಯುದ್ಧ ಮಾಡಿದರು. ಅಬೀಮೆಲೆಕ ಮತ್ತು ಅವನ ಜನರು ಶೆಕೆಮ್ ನಗರವನ್ನು ಸ್ವಾಧೀನಪಡಿಸಿಕೊಂಡರು; ಆ ನಗರದ ಜನರನ್ನು ಕೊಂದುಹಾಕಿದರು. ಅಬೀಮೆಲೆಕನು ಊರನ್ನು ಕೆಡವಿ ಹಾಕಿ ಉಪ್ಪನ್ನು ಚೆಲ್ಲಿದನು.


ಆದರೆ ಜವುಗು ನೆಲಗಳೂ ಸವುಳು ನೆಲಗಳೂ ಸಿಹಿಯಾಗುವದಿಲ್ಲ. ಅವು ಉಪ್ಪು ತಯಾರಿಸುವದಕ್ಕಾಗಿ ಉಪಯೋಗಿಸಲ್ಪಡುವವು.


ಎಲೆ ಒಣಗಿಹೋದ ಏಲಾ ಮರಗಳಂತೆ ನೀವು ಇದ್ದೀರಿ. ನೀರಿಲ್ಲದೆ ಸಾಯುತ್ತಿರುವ ಉದ್ಯಾನವನದಂತೆ ನೀವು ಇದ್ದೀರಿ.


ದುಷ್ಟರು ಹುಲ್ಲಿನಂತೆಯೂ ಕೆಡುಕರು ಹೂವಿನಂತೆಯೂ ಬದುಕಿ ಸಾಯುವರು. ಅವರ ನಿರರ್ಥಕ ಕಾರ್ಯಗಳು ನಿತ್ಯ ನಾಶವಾಗುತ್ತವೆ.


ಆಗ ರಾಜನಿಗೆ ಆಪ್ತನಾಗಿದ್ದ ಅಧಿಕಾರಿಯು ದೇವಮನುಷ್ಯನಿಗೆ, “ಯೆಹೋವನು ಪರಲೋಕಕ್ಕೆ ಕಿಟಕಿಗಳನ್ನು ಮಾಡಿಸಿದರೂ ಇದು ಸಂಭವಿಸುವುದಿಲ್ಲ!” ಎಂದು ಉತ್ತರಿಸಿದನು. ಎಲೀಷನು, “ನೀನು ನಿನ್ನ ಸ್ವಂತ ಕಣ್ಣುಗಳಿಂದಲೇ ಇದನ್ನು ನೋಡುವೆ. ಆದರೆ ಆ ಆಹಾರದಲ್ಲಿ ಯಾವುದನ್ನೂ ನೀನು ತಿನ್ನುವುದಿಲ್ಲ” ಎಂದನು.


ಆತನು ಫಲವತ್ತಾದ ಭೂಮಿಯನ್ನು ಉಪಯೋಗವಿಲ್ಲದ ಉಪ್ಪುಭೂಮಿಯನ್ನಾಗಿ ಪರಿವರ್ತಿಸಿದನು, ಯಾಕೆಂದರೆ ಅಲ್ಲಿ ಕೆಟ್ಟಜನರು ನೆಲೆಸಿದ್ದರು.


ಆದ್ದರಿಂದ ಅವನನ್ನು ನಾನು ತಕ್ಷಣ ದಂಡಿಸುತ್ತೇನೆ. ನಾನು ಅವನ ಕುಟುಂಬವನ್ನು ಸಂಪೂರ್ಣವಾಗಿ ನಾಶಮಾಡುತ್ತೇನೆ. ನಾನು ನನ್ನ ಜನರಿಗಾಗಿ ಮಾಡುವ ಒಳ್ಳೆಯವುಗಳಲ್ಲಿ ಅವನು ಪಾಲು ಹೊಂದುವುದಿಲ್ಲ.’” ಇದು ಯೆಹೋವನ ನುಡಿ. “‘ಶೆಮಾಯನು, ಜನರನ್ನು ಯೆಹೋವನಾದ ನನ್ನ ವಿರುದ್ಧ ತಿರುಗುವಂತೆ ಮಾಡಿದ್ದರಿಂದ ನಾನು ಅವನನ್ನು ದಂಡಿಸುವೆನು.’”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು