ಯೆರೆಮೀಯ 18:16 - ಪರಿಶುದ್ದ ಬೈಬಲ್16 ಆದ್ದರಿಂದ ಯೆಹೂದ್ಯರ ದೇಶವು ಬರಿದಾದ ಮರುಭೂಮಿಯಾಗುವುದು. ಜನರು ಇಲ್ಲಿಂದ ಹಾದುಹೋಗುವಾಗಲೆಲ್ಲಾ ಸಿಳ್ಳುಹಾಕಿ ತಲೆಯಾಡಿಸುವರು. ದೇಶವು ಹಾಳಾದುದನ್ನು ನೋಡಿ ಬೆರಗಾಗುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಆದಕಾರಣ ಬೆರಗಿನ ಸಿಳ್ಳಿಗೆ ಅವರ ದೇಶವು ನಿತ್ಯ ಗುರಿಯಾಗುವುದು; ಹಾದುಹೋಗುವವರೆಲ್ಲರೂ ಬೆರಗಾಗಿ ತಲೆದೂಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಆದ್ದರಿಂದ ನಾಡನ್ನು ಭಯಾನಕವಾಗಿಸುವರು ಹಾದು ಹೋಗುವವರೆಲ್ಲ ಬೆಬ್ಬೆರಗಾಗಿ ತಲೆದೂಗುವರು, ಸಿಳ್ಳು ಹಾಕಿ ಅದನ್ನು ಪರಿಹಾಸ್ಯ ಮಾಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಆದಕಾರಣ ಬೆರಗಿನ ಸಿಳ್ಳಿಗೆ ಅವರ ದೇಶವು ನಿತ್ಯವಾಗಿ ಗುರಿಯಾಗುವದು; ಹಾದುಹೋಗುವವರೆಲ್ಲರೂ ಬೆರಗಾಗಿ ತಲೆದೂಗುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಹೀಗೆ ತಮ್ಮ ದೇಶವನ್ನು ಹಾಳಾಗಿಯೂ, ನಿತ್ಯವಾದ ಹಾಸ್ಯಾಸ್ಪದವಾಗಿಯೂ ಮಾಡಿದ್ದಾರೆ. ಅದನ್ನು ಹಾದುಹೋಗುವವರೆಲ್ಲರೂ ವಿಸ್ಮಿತರಾಗಿ ತಲೆ ಅಲ್ಲಾಡಿಸುವರು. ಅಧ್ಯಾಯವನ್ನು ನೋಡಿ |
ಆದ್ದರಿಂದ ನಾನು ಉತ್ತರದ ಎಲ್ಲಾ ಜನಾಂಗಗಳನ್ನು ಕರೆಸುತ್ತೇನೆ.” ಇದು ಯೆಹೋವನ ಸಂದೇಶ. “ನಾನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನನ್ನು ಕೂಡಲೇ ಕರೆಸುವೆನು. ಅವನು ನನ್ನ ಸೇವಕ. ನಾನು ಆ ಜನರನ್ನು ಯೆಹೂದ ದೇಶದ ವಿರುದ್ಧವಾಗಿಯೂ ಯೆಹೂದ್ಯರ ವಿರುದ್ಧವಾಗಿಯೂ ತರುತ್ತೇನೆ. ನಾನು ನಿಮ್ಮ ಸುತ್ತಮುತ್ತಲಿನಲ್ಲಿದ್ದ ಜನಾಂಗಗಳ ವಿರುದ್ಧವಾಗಿಯೂ ಅವರನ್ನು ಕರೆತರುವೆನು. ನಾನು ಆ ದೇಶಗಳನ್ನೆಲ್ಲ ನಾಶಮಾಡುವೆನು. ನಾನು ಆ ಭೂಮಿಗಳನ್ನು ಶಾಶ್ವತವಾಗಿ ಬರಿದಾದ ಮರುಭೂಮಿಗಳನ್ನಾಗಿ ಮಾಡುವೆನು. ಜನರು ಆ ದೇಶಗಳನ್ನು ನೋಡಿ ಅವು ಹಾಳಾಗಿರುವುದನ್ನು ಕಂಡು ಬೆರಗಾಗಿ ಸಿಳ್ಳುಹಾಕುವರು.
ಯಾಕೆಂದರೆ ನೀವು ಒಮ್ರಿಯ ಆಜ್ಞೆಯನ್ನು ಪರಿಪಾಲಿಸಿದಿರಿ. ಅಹಾಬನ ಮನೆಯವರು ಮಾಡುತ್ತಿದ್ದ ದುಷ್ಕೃತ್ಯಗಳನ್ನು ನೀವು ಮಾಡುತ್ತೀರಿ. ನೀವು ಅವರ ಬೋಧನೆಯನ್ನು ಅನುಸರಿಸುತ್ತೀರಿ. ಆದ್ದರಿಂದ ನೀವು ನಾಶವಾಗುವಂತೆ ಮಾಡುವೆನು. ಕೆಡವಲ್ಪಟ್ಟ ನಿಮ್ಮ ನಗರವನ್ನು ನೋಡಿದ ಜನರು ಆಶ್ಚರ್ಯದಿಂದ ಸಿಳ್ಳುಹಾಕುವರು. ಆಗ ಬೇರೆ ಜನಾಂಗದವರು ನಿಮ್ಮ ಮೇಲೆ ಹೊರಿಸಿದ ಅವಮಾನವನ್ನು ನೀವು ಸಹಿಸಿಕೊಳ್ಳುವಿರಿ.”
ಯೆಹೋವನು ಹೀಗೆನ್ನುತ್ತಾನೆ, “ನನ್ನ ಸ್ವಸಾಮರ್ಥ್ಯದಿಂದ ನಾನು ಈ ಪ್ರಮಾಣ ಮಾಡುವೆನು. ನಾನು ಆಣೆಯಿಟ್ಟು ಹೇಳುವೆನು. ಬೊಚ್ರ ನಗರವನ್ನು ನಾಶಮಾಡಲಾಗುವುದು. ಆ ನಗರ ಒಂದು ಹಾಳು ದಿಬ್ಬವಾಗುವುದು. ಬೇರೆ ನಗರಗಳಿಗೆ ದುರ್ಗತಿ ಬರಲಿ ಎಂದು ಶಪಿಸುವಾಗ ಜನರು ‘ಬೊಚ್ರದಂತೆ ಹಾಳಾಗಲಿ’ ಎಂದು ಈ ನಗರದ ಉದಾಹರಣೆಯನ್ನು ಕೊಡುವರು. ಜನರು ಈ ನಗರವನ್ನು ಅವಮಾನ ಮಾಡುವರು. ಬೊಚ್ರ ನಗರದ ಸುತ್ತಮುತ್ತಲಿನ ಪಟ್ಟಣಗಳು ಶಾಶ್ವತವಾಗಿ ಹಾಳುಬೀಳುವವು.”
ಇದನ್ನು ನೀನು ಸಾಮಾನ್ಯ ಜನರಿಗೆ ತಿಳಿಸಬೇಕು. ನೀನು ಹೀಗೆ ಹೇಳಬೇಕು, ‘ಇನ್ನೂ ಇಸ್ರೇಲ್ ದೇಶದಲ್ಲಿರುವ ಜೆರುಸಲೇಮಿನ ನಿವಾಸಿಗಳ ಬಗ್ಗೆ ನಮ್ಮ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ಅವರು ಊಟಮಾಡುವಾಗ ಉದ್ವೇಗದಿಂದಿರುವರು; ಅವರು ಕುಡಿಯುವಾಗ ಭಯದಿಂದಿರುವರು. ಯಾಕೆಂದರೆ ಅವರ ದೇಶದಲ್ಲಿರುವ ಸಮಸ್ತವು ನಾಶವಾಗುತ್ತದೆ, ಯಾಕೆಂದರೆ ಅಲ್ಲಿ ವಾಸಿಸುವವರೆಲ್ಲರೂ ಹಿಂಸಕರಾಗಿದ್ದಾರೆ.
“ಸರ್ವಶಕ್ತನೂ ಇಸ್ರೇಲರ ದೇವರೂ ಆಗಿರುವ ಯೆಹೋವನು ಹೀಗೆಂದನು: ‘ನಾನು ಜೆರುಸಲೇಮಿನ ಮೇಲೆ ನನ್ನ ಕೋಪವನ್ನು ತೋರಿಸಿದೆ. ಜೆರುಸಲೇಮಿನಲ್ಲಿ ವಾಸಿಸುವ ಜನರನ್ನು ನಾನು ದಂಡಿಸಿದೆ. ಅದೇ ರೀತಿ, ಈಜಿಪ್ಟಿಗೆ ಹೋಗುವವರೆಲ್ಲರ ಮೇಲೂ ನಾನು ನನ್ನ ಕೋಪವನ್ನು ತೋರಿಸುವೆನು. ಬೇರೆಯವರಿಗೆ ಕೆಟ್ಟದಾಗಲಿ ಎಂದು ಹೇಳಬೇಕಾದಾಗ ಜನರು ನಿಮ್ಮಂತೆ ಆಗಲಿ ಎಂದು ನಿಮ್ಮ ಉದಾಹರಣೆಯನ್ನು ಕೊಡುವರು. ನೀವು ಒಂದು ಶಾಪದ ಶಬ್ದವಾಗುವಿರಿ. ಜನರು ನಿಮ್ಮಿಂದ ನಾಚಿಕೆಪಟ್ಟುಕೊಳ್ಳುವರು. ಜನರು ನಿಮ್ಮನ್ನು ಅಪಮಾನ ಮಾಡುವರು. ಯೆಹೂದವನ್ನು ಪುನಃ ನೀವು ಎಂದೂ ನೋಡುವದಿಲ್ಲ.’
ಯೆಹೂದದಲ್ಲಿ ಅಳಿದುಳಿದ ಕೆಲವು ಜನರಿದ್ದರು. ಆ ಜನರು ಈಜಿಪ್ಟಿನಲ್ಲಿ ನೆಲೆಸಲು ಬಂದರು. ಆದರೆ ನಾನು ಯೆಹೂದಕುಲದ ಆ ಕೆಲವು ಅಳಿದುಳಿದವರನ್ನು ನಾಶಮಾಡುವೆನು. ಅವರು ಕತ್ತಿಗಳಿಂದ ಕೊಲ್ಲಲ್ಪಡುವರು; ಹಸಿವಿನಿಂದ ಸತ್ತುಹೋಗುವರು. ಬೇರೆ ಜನಾಂಗಗಳ ಜನರು ಅವರ ಬಗ್ಗೆ ನಿಂದಿಸುವಂತೆ ಅವರ ಸ್ಥಿತಿ ಆಗುವುದು. ಅವರಿಗೆ ಉಂಟಾದ ದುರ್ಗತಿಯನ್ನು ನೋಡಿ ಬೇರೆ ಜನಾಂಗದ ಜನರು ಭಯಪಡುವರು. ಆ ಜನರು ಶಾಪದ ಶಬ್ಧವಾಗುವರು. ಬೇರೆ ಜನಾಂಗದವರು ಯೆಹೂದದ ಆ ಜನರಿಗೆ ಅಪಮಾನ ಮಾಡುವರು.
ಇನ್ನೂ ಜೆರುಸಲೇಮಿನಲ್ಲಿರುವ ಜನರಿಗೆ ಖಡ್ಗ, ಹಸಿವು ಮತ್ತು ಭಯಂಕರವಾದ ವ್ಯಾಧಿಗಳಿಂದೊಡಗೂಡಿ ಬೆನ್ನಟ್ಟುವೆನು. ಆ ಜನರ ದುರ್ಗತಿಯನ್ನು ನೋಡಿ ಭೂಲೋಕದ ಸಮಸ್ತ ರಾಜ್ಯಗಳಿಗೆ ಭಯ ಉಂಟಾಗುವಂತೆ ಮಾಡುವೆನು. ಆ ಜನರನ್ನು ನಾಶಮಾಡುವೆನು. ನಡೆದ ವಿಷಯಗಳ ಬಗ್ಗೆ ಕೇಳಿ ಜನರು ಬೆರಗಾಗಿ ಸಿಳ್ಳುಹಾಕುವರು. ಯಾರಿಗಾದರೂ, ಕೇಡಾಗಲಿ ಎಂದು ಹೇಳಬೇಕಾದರೆ ಜನರು ಅವರ ಉದಾಹರಣೆಯನ್ನು ಕೊಡುವರು. ನಾನು ಅವರನ್ನು ಅಟ್ಟಿದ ಎಲ್ಲೆಡೆಯಲ್ಲಿಯೂ ಜನರು ಅವರನ್ನು ಅವಮಾನಗೊಳಿಸುವರು.