Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 18:23 - ಪರಿಶುದ್ದ ಬೈಬಲ್‌

23 ಯೆಹೋವನೇ, ನನ್ನನ್ನು ಕೊಲ್ಲಲು ಅವರು ಹಾಕಿದ ಯೋಜನೆಗಳನ್ನೆಲ್ಲ ನೀನು ಬಲ್ಲೆ. ಅವರ ಅಪರಾಧಗಳನ್ನು ಮನ್ನಿಸಬೇಡ. ಅವರ ಪಾಪಗಳನ್ನು ಅಳಿಸಬೇಡ. ನನ್ನ ವೈರಿಗಳನ್ನು ನಾಶಪಡಿಸು, ನೀನು ಕೋಪದಲ್ಲಿದ್ದಾಗ ಆ ಜನರನ್ನು ಶಿಕ್ಷಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಯೆಹೋವನೇ, ನನ್ನನ್ನು ಕೊಲ್ಲಬೇಕೆಂದು ಅವರು ಮಾಡಿಕೊಂಡಿರುವ ಆಲೋಚನೆಯನ್ನೆಲ್ಲಾ ನೀನೇ ಬಲ್ಲೆ. ಅವರ ಅಪರಾಧವನ್ನು ಕ್ಷಮಿಸಬೇಡ, ಅವರ ಪಾಪವನ್ನು ಅಳಿಸದಿರು, ಅದು ನಿನ್ನ ಕಣ್ಣೆದುರಿಗಿರಲಿ. ಅವರು ನಿನ್ನ ಮುಂದೆ ಕೆಡವಲ್ಪಡಲಿ; ನಿನ್ನ ಕೋಪವನ್ನು ವ್ಯಕ್ತಪಡಿಸುವಾಗ ಅವರಿಗೆ ತಕ್ಕದ್ದನ್ನು ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಸರ್ವೇಶ್ವರಾ, ನನ್ನನ್ನು ಕೊಲ್ಲಲು ಅವರು ಮಾಡಿಕೊಂಡಿರುವ ಸಂಚು ನಿಮಗೆ ತಿಳಿದಿದೆ. ಅವರ ಅಪರಾಧವನ್ನು ಕ್ಷಮಿಸಬೇಡಿ, ಅವರ ಪಾಪವನ್ನು ಅಳಿಸಬೇಡಿ, ಅದು ನಿಮ್ಮ ಕಣ್ಣೆದುರಿಗೇ ಇರಲಿ. ಅವರು ನಿಮ್ಮ ಮುಂದೆ ಎಡವಿಬೀಳಲಿ. ನಿಮ್ಮ ಕೋಪ ವ್ಯಕ್ತವಾಗುವಾಗ ಅವರಿಗೆ ತಕ್ಕುದನ್ನು ಮಾಡಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಯೆಹೋವನೇ, ನನ್ನನ್ನು ಕೊಲ್ಲಬೇಕೆಂದು ಅವರು ಮಾಡಿಕೊಂಡಿರುವ ಆಲೋಚನೆಯನ್ನೆಲ್ಲಾ ನೀನೇ ಬಲ್ಲೆ; ಅವರ ಅಪರಾಧವನ್ನು ಕ್ಷವಿುಸಬೇಡ, ಅವರ ಪಾಪವನ್ನು ಅಳಿಸದಿರು, ಅದು ನಿನ್ನ ಕಣ್ಣೆದುರಿಗಿರಲಿ; ಅವರು ನಿನ್ನ ಮುಂದೆ ಕೆಡವಲ್ಪಡಲಿ; ನಿನ್ನ ಕೋಪವನ್ನು ವ್ಯಕ್ತಪಡಿಸುವಾಗ ಅವರಿಗೆ ತಕ್ಕದ್ದನ್ನು ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆದರೂ ಯೆಹೋವ ದೇವರೇ, ಅವರು ನನ್ನನ್ನು ಸಾಯಿಸುವುದಕ್ಕೆ ನನಗೆ ವಿರೋಧವಾಗಿ ಮಾಡಿದ ಆಲೋಚನೆಯನ್ನೆಲ್ಲಾ ನೀವು ಬಲ್ಲಿರಿ. ಅವರ ಅಕ್ರಮವನ್ನು ಮನ್ನಿಸಬೇಡಿ. ಅವರ ಪಾಪಗಳನ್ನು ನಿನ್ನ ಸನ್ನಿಧಿಯೊಳಗಿಂದ ಅಳಿಸಿಬಿಡಬೇಡಿರಿ. ಅವರು ನಿಮ್ಮ ಮುಂದೆ ಎಡವಿಬೀಳಲಿ. ನಿಮ್ಮ ಕೋಪದ ಕಾಲದಲ್ಲಿ ಅವರಿಗೆ ತಕ್ಕದ್ದನ್ನು ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 18:23
28 ತಿಳಿವುಗಳ ಹೋಲಿಕೆ  

ನನ್ನನ್ನು ಕೊಲ್ಲಬೇಕೆಂದಿರುವವರು ನಿರಾಶೆಗೊಂಡು ನಾಚಿಕೆಗೀಡಾಗಲಿ. ನನಗೆ ಕೇಡುಮಾಡಬೇಕೆಂದಿರುವವರು ಅವಮಾನಗೊಂಡು ಓಡಿಹೋಗಲಿ.


ಜನರು ಕೆಟ್ಟದಾರಿಯಲ್ಲಿ ಹೋಗುತ್ತಿದ್ದಾರೆ; ಹೀನಸ್ಥಿತಿಯಲ್ಲಿ ಮುಂದುವರಿಯುತ್ತಿದ್ದಾರೆ. ದೇವರೇ, ನೀನು ಅವರನ್ನು ಖಂಡಿತವಾಗಿಯೂ ಕ್ಷಮಿಸಬೇಡ.


ನೀವು ಕಠಿಣರಾಗಿದ್ದೀರಿ ಮತ್ತು ಮೊಂಡರಾಗಿದ್ದೀರಿ. ಮಾರ್ಪಾಟಾಗಲು ನಿಮಗೆ ಇಷ್ಟವಿಲ್ಲ. ಆದ್ದರಿಂದ ನಿಮಗೆ ಬರಲಿರುವ ದಂಡನೆಯನ್ನು ನೀವು ಹೆಚ್ಚುಹೆಚ್ಚು ಮಾಡಿಕೊಳ್ಳುತ್ತಿದ್ದೀರಿ. ದೇವರು ತನ್ನ ಕೋಪವನ್ನು ತೋರಿಸುವ ದಿನದಲ್ಲಿ ನಿಮಗೆ ಆ ದಂಡನೆಯಾಗುವುದು. ಆ ದಿನದಲ್ಲಿ ದೇವರ ನ್ಯಾಯವಾದ ತೀರ್ಪುಗಳನ್ನು ಜನರು ನೋಡುವರು.


ದೇವರು ತನ್ನ ಜನರನ್ನು ಶಿಕ್ಷಿಸುವ ಕಾಲದ ಬಗ್ಗೆ ಪ್ರವಾದಿಗಳು ಬರೆದಿರುವ ಸಂಗತಿಗಳೆಲ್ಲಾ ಆಗ ನೆರವೇರುತ್ತದೆ.


ಆಗ ಯೆರೆಮೀಯನ ವೈರಿಗಳು ಹೀಗೆಂದರು: “ಬನ್ನಿ, ನಾವು ಯೆರೆಮೀಯನ ವಿರುದ್ಧ ಒಳಸಂಚು ಮಾಡೋಣ. ಯಾಜಕನಿಂದ ಧರ್ಮೋಪದೇಶವು ತಪ್ಪುವದಿಲ್ಲ, ಇದು ಖಂಡಿತ. ಜ್ಞಾನಿಗಳಿಂದ ಮಂತ್ರಾಲೋಚನೆಯು ಇದ್ದೇ ಇರುತ್ತದೆ. ದೈವೋಕ್ತಿಯು ಪ್ರವಾದಿಯಿಂದ ಎಂದಿಗೂ ತಪ್ಪದು. ಆದ್ದರಿಂದ ಅವನ ಬಗ್ಗೆ ಸುಳ್ಳು ಹೇಳಿ ನಾಶಮಾಡೋಣ. ಅವನು ಹೇಳುವ ಯಾವುದಕ್ಕೂ ನಾವು ಗಮನಕೊಡಬೇಕಾಗಿಲ್ಲ.”


ಯೆಹೋವನೇ, ನನ್ನ ವಿಷಯ ನಿನಗೆ ಗೊತ್ತು. ನನ್ನನ್ನು ಜ್ಞಾಪಕದಲ್ಲಿಟ್ಟುಕೊಂಡು ರಕ್ಷಿಸು. ಜನರು ನನ್ನನ್ನು ತೊಂದರೆಗೀಡು ಮಾಡುತ್ತಿದ್ದಾರೆ. ಅವರಿಗೆ ತಕ್ಕ ಶಿಕ್ಷೆಯನ್ನು ಕೊಡು. ನೀನು ಅವರೊಂದಿಗೆ ಬಹಳ ತಾಳ್ಮೆಯಿಂದ ವರ್ತಿಸುತ್ತಿರುವೆ. ಅವರೊಂದಿಗೆ ತಾಳ್ಮೆಯಿಂದ ಇದ್ದು ನನ್ನನ್ನು ಹಾಳುಮಾಡಬೇಡ. ನನ್ನ ಬಗ್ಗೆ ವಿಚಾರ ಮಾಡು. ಯೆಹೋವನೇ, ನಿನಗಾಗಿ ನಾನು ಎಷ್ಟು ಕಷ್ಟಪಡುತ್ತಿದ್ದೇನೆ ಎಂಬುದನ್ನು ಯೋಚಿಸು.


ಅನಾತೋತ್ ನಗರದಲ್ಲಿ ಒಬ್ಬನೂ ಉಳಿಯುವುದಿಲ್ಲ; ಯಾರೂ ಬದುಕುವದಿಲ್ಲ. ನಾನು ಅವರನ್ನು ದಂಡಿಸುತ್ತೇನೆ. ಅವರಿಗೆ ಏನಾದರೂ ಕೇಡಾಗುವಂತೆ ಮಾಡುತ್ತೇನೆ” ಎಂದು ಹೇಳಿದನು.


ಅವರು ತಮ್ಮ ದುಷ್ಕೃತ್ಯಗಳಿಗಾಗಿ ನಾಚಿಕೆಪಡಬೇಕು. ಆದರೆ ಅವರು ಸ್ವಲ್ಪವೂ ನಾಚಿಕೆಪಡುವುದಿಲ್ಲ. ಅವರಿಗೆ ನಾಚಿಕೆ ಎಂಬುದೇ ತಿಳಿದಿಲ್ಲ. ಆದ್ದರಿಂದ ಉಳಿದೆಲ್ಲರಂತೆ ಅವರಿಗೂ ಶಿಕ್ಷೆ ವಿಧಿಸಲಾಗುವುದು. ನಾನು ಅವರನ್ನು ಶಿಕ್ಷಿಸುವಾಗ ಅವರು ಮುಗ್ಗರಿಸಿ ಬೀಳುವರು.’” ಯೆಹೋವನ ನುಡಿಗಳಿವು.


ನ್ಯಾಯಶಾಸ್ತ್ರಿಗಳೇ, ನಿಮ್ಮ ಕಾರ್ಯಗಳಿಗೆ ನೀವೇ ಉತ್ತರ ಕೊಡಬೇಕು. ಆಗ ನೀವು ಏನು ಮಾಡುವಿರಿ? ದೂರದೇಶದಿಂದ ನಿಮ್ಮ ನಾಶನವು ಬರುತ್ತಲಿದೆ. ಸಹಾಯಕ್ಕಾಗಿ ಎಲ್ಲಿಗೆ ಓಡುವಿರಿ? ನಿಮ್ಮ ಐಶ್ವರ್ಯವೂ ನಿಮ್ಮ ಧನರಾಶಿಯೂ ನಿಮ್ಮನ್ನು ರಕ್ಷಿಸಲಾರವು.


ಸೇನಾಧೀಶ್ವರನಾದ ಯೆಹೋವನೇ, ಇಸ್ರೇಲರ ದೇವರೇ, ಎದ್ದೇಳು! ಅವರನ್ನು ದಂಡಿಸು! ಆ ದುಷ್ಟ ದ್ರೋಹಿಗಳಿಗೆ ಕರುಣೆಯನ್ನೇ ತೋರಬೇಡ.


ಯೆಹೋವನೇ, ನಿನ್ನ ಕಾರ್ಯಾಚರಣೆಗೆ ಇದು ತಕ್ಕ ಸಮಯವಾಗಿದೆ. ಜನರು ನಿನ್ನ ಧರ್ಮಶಾಸ್ತ್ರವನ್ನು ಮೀರಿದ್ದಾರೆ.


ಪ್ರವಾದಿಗಳು ಮತ್ತು ಯಾಜಕರು ತಾವು ಮಾಡುವ ದುಷ್ಕೃತ್ಯಗಳಿಗಾಗಿ ನಾಚಿಕೆಪಡಬೇಕು. ಆದರೆ ಅವರು ನಾಚಿಕೆಪಡುವದೇ ಇಲ್ಲ. ತಮ್ಮ ಪಾಪಕಾರ್ಯಗಳಿಗಾಗಿ ಸಂಕೋಚಪಡುವುದು ಸಹ ಅವರಿಗೆ ಗೊತ್ತಿಲ್ಲ. ಆದ್ದರಿಂದ ಬೇರೆಯವರಂತೆ ಅವರನ್ನೂ ಶಿಕ್ಷಿಸಲಾಗುವುದು. ನಾನು ಅವರನ್ನು ಶಿಕ್ಷಿಸಿದಾಗ ಅವರನ್ನು ನೆಲಕ್ಕೆ ಎಸೆಯಲಾಗುವದು” ಎಂದು ಯೆಹೋವನು ಅನ್ನುತ್ತಾನೆ.


“ನಾನು ಯೆಹೂದದ ಜನರೆದುರಿಗೆ ಸಮಸ್ಯೆಗಳನ್ನು ಒಡ್ಡುವೆನು. ಅವುಗಳು ಜನರು ಎಡವಿಬೀಳುವ ಕಲ್ಲುಗಳಂತಾಗುವವು. ತಂದೆಗಳೂ ಮಕ್ಕಳೂ ಅವುಗಳಿಂದ ಎಡವಿಬೀಳುವರು. ಸ್ನೇಹಿತರು ಮತ್ತು ನೆರೆಹೊರೆಯವರು ಅವುಗಳಿಂದ ನಾಶವಾಗುವರು” ಅಂದನು.


ಯೆಹೋವನು ಹೀಗೆಂದನು: “ನಾನು ಈ ಸ್ಥಳಕ್ಕೆ ವಿರೋಧವಾಗಿ ನನ್ನ ಕೋಪವನ್ನು ತೋರಿಸುವೆನು. ನಾನು ಜನರನ್ನೂ ಪ್ರಾಣಿಗಳನ್ನೂ ದಂಡಿಸುವೆನು. ಕಾಡಿನ ಮರಗಳನ್ನೂ ಹೊಲದ ಬೆಳೆಗಳನ್ನೂ ದಂಡಿಸುವೆನು. ನನ್ನ ಕೋಪವು ಉರಿಯುವ ಬೆಂಕಿಯಂತಿರುವದು; ಅದನ್ನು ತಡೆಯಲು ಯಾರಿಗೂ ಸಾಧ್ಯವಿಲ್ಲ.”


ನಾನು ನಿಮಗೆ ಕೊಟ್ಟ ಭೂಮಿಯನ್ನು ನೀವು ಕಳೆದುಕೊಳ್ಳುವಿರಿ. ನಿಮ್ಮನ್ನು ನಿಮಗೆ ತಿಳಿಯದ ನಾಡಿನಲ್ಲಿ ನಿಮ್ಮ ಶತ್ರುಗಳ ದಾಸರನ್ನಾಗಿ ಮಾಡುವೆನು. ಏಕೆಂದರೆ ನನಗೆ ತುಂಬಾ ಕೋಪ ಬಂದಿದೆ. ನನ್ನ ಕೋಪವು ಉರಿಯುವ ಜ್ವಾಲೆಯಂತಿದೆ; ನೀವು ಅದರಲ್ಲಿ ಭಸ್ಮವಾಗಿ ಹೋಗುವಿರಿ.”


ಯೆಹೋವನು ಜನರಿಗೆ ತಿಳಿಸಬೇಕೆಂದು ಹೇಳಿದ ಎಲ್ಲವನ್ನು ಯೆರೆಮೀಯನು ಹೇಳಿ ಮುಗಿಸಿದನು. ಆಗ ಯಾಜಕರು, ಪ್ರವಾದಿಗಳು ಮತ್ತು ಎಲ್ಲಾ ಜನರು ಯೆರೆಮೀಯನನ್ನು ಹಿಡಿದುಕೊಂಡರು. ಅವರು “ನೀನು ಇಂಥಾ ಭಯಂಕರವಾದ ವಿಷಯವನ್ನು ಹೇಳಿದ್ದಕ್ಕಾಗಿ ನಿನಗೆ ಮರಣವೇ ಗತಿ!


ಆಗ ಯಾಜಕರು ಮತ್ತು ಪ್ರವಾದಿಗಳು ಅಧಿಪತಿಗಳಿಗೂ ಇನ್ನುಳಿದ ಜನರಿಗೂ ಹೀಗೆ ಹೇಳಿದರು: “ಯೆರೆಮೀಯನನ್ನು ಕೊಲ್ಲಬೇಕು. ಅವನು ಜೆರುಸಲೇಮಿನ ಬಗ್ಗೆ ಕೆಟ್ಟ ಮಾತುಗಳನ್ನಾಡಿದ್ದಾನೆ. ಅವನು ಆಡಿದ ಆ ಮಾತುಗಳನ್ನು ನೀವೇ ಕೇಳಿದ್ದೀರಿ.”


ಆ ಅಧಿಕಾರಿಗಳು ಯೆರೆಮೀಯನ ಮೇಲೆ ತುಂಬಾ ಕೋಪಗೊಂಡರು. ಯೆರೆಮೀಯನನ್ನು ಹೊಡೆಯಬೇಕೆಂದು ಅವರು ಆಜ್ಞೆಯಿತ್ತರು. ಆಮೇಲೆ ಅವರು ಯೆರೆಮೀಯನನ್ನು ಸೆರೆಮನೆಯಲ್ಲಿಟ್ಟರು. ಆ ಸೆರೆಮನೆಯು ಯೆಹೋನಾಥಾನನೆಂಬುವನ ಮನೆಯಲ್ಲಿತ್ತು. ಯೆಹೋನಾಥಾನನು ಯೆಹೂದದ ರಾಜನ ಲಿಫಿಗಾರನಾಗಿದ್ದನು. ಯೆಹೋನಾಥಾನನ ಮನೆಯನ್ನು ಸೆರೆಮನೆಯನ್ನಾಗಿ ಮಾಡಲಾಗಿತ್ತು.


ಯೆರೆಮೀಯನು ಜನರಿಗೆ ಹೇಳುತ್ತಿರುವ ವಿಷಯಗಳನ್ನು ಕೇಳಿದ ರಾಜಾಧಿಕಾರಿಗಳು ರಾಜನಾದ ಚಿದ್ಕೀಯನ ಬಳಿಗೆ ಹೋಗಿ, “ಯೆರೆಮೀಯನಿಗೆ ಮರಣದಂಡನೆಯಾಗಬೇಕು. ಇನ್ನೂ ನಗರದಲ್ಲಿರುವ ಸೈನಿಕರನ್ನೂ ಎಲ್ಲರನ್ನೂ ತನ್ನ ಮಾತುಗಳಿಂದ ಧೈರ್ಯಗೆಡಿಸುತ್ತಿದ್ದಾನೆ. ನಮಗೆ ಒಳ್ಳೆಯದಾಗಬೇಕೆಂದು ಅವನು ಬಯಸದೆ ಜೆರುಸಲೇಮಿನ ಜನರ ನಾಶನವನ್ನು ಬಯಸುತ್ತಾನೆ” ಎಂದು ಹೇಳಿದರು.


ನನಗಾಗಿರುವ ದುಃಖವು ನಿನಗೆ ಗೊತ್ತಿದೆ. ನಾನು ಎಷ್ಚು ಅತ್ತಿರುವೆನೆಂದು ನಿನಗೆ ಗೊತ್ತಿದೆ. ನನ್ನ ಕಣ್ಣೀರಿಗೆ ನೀನು ಖಂಡಿತವಾಗಿ ಲೆಕ್ಕವಿಟ್ಟಿರುವೆ.


ಜನರು ನನ್ನನ್ನು ಹಿಂಸಿಸುತ್ತಿದ್ದಾರೆ. ಆ ಜನರು ಲಜ್ಜೆಪಡುವಂತೆ ಮಾಡು. ನನ್ನನ್ನು ನಿರಾಶೆಗೊಳಿಸಬೇಡ. ಆ ಜನರಿಗೆ ಭೀತಿಯುಂಟಾಗಲಿ, ಆದರೆ ನನಗೆ ಭಯವಾಗುವಂತೆ ಮಾಡಬೇಡ. ನನ್ನ ವೈರಿಗಳಿಗೆ ಭಯಂಕರವಾದ ವಿನಾಶದ ದಿನವು ಬರುವಂತೆ ಮಾಡು. ಅವರನ್ನು ಮುರಿದುಬಿಡು, ಮತ್ತೆಮತ್ತೆ ಮುರಿದುಬಿಡು.


ನನ್ನ ಶತ್ರುಗಳು ನನ್ನ ಮೇಲೆ ಹೇಗೆ ಸೇಡನ್ನು ತೀರಿಸಿಕೊಂಡಿದ್ದಾರೆ ನೋಡು. ನನಗೆ ವಿರೋಧವಾಗಿ ಅವರು ಮಾಡಿದ ಎಲ್ಲಾ ಯೋಜನೆಗಳನ್ನು ನೋಡು.


ಯೆಹೋವನೇ, ಅವರು ನನಗಾಡುವ ಗೇಲಿ ಮಾತನ್ನು ಕೇಳು. ಅವರು ನನ್ನ ವಿರುದ್ಧ ಮಾಡಿದ ಎಲ್ಲಾ ಯೋಜನೆಗಳನ್ನು ಕೇಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು