ಯೆರೆಮೀಯ 19:1 - ಪರಿಶುದ್ದ ಬೈಬಲ್1 ಯೆಹೋವನು ನನಗೆ ಹೀಗೆ ಹೇಳಿದನು: “ಯೆರೆಮೀಯನೇ, ಒಬ್ಬ ಕುಂಬಾರನ ಹತ್ತಿರ ಹೋಗಿ ಅವನಿಂದ ಒಂದು ಮಣ್ಣಿನ ಕೊಡವನ್ನು ಕೊಂಡುಕೊಂಡು ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೆಹೋವನು ನನಗೆ ಹೀಗೆ ಹೇಳಿದನು, “ಹೊರಡು, ಕುಂಬಾರನು ಮಾಡಿದ ಮಣ್ಣಿನ ಮಡಕೆಯನ್ನು ಕೊಂಡುಕೊಂಡು, ಜನರ ಹಿರಿಯರಲ್ಲಿಯೂ ಮತ್ತು ಯಾಜಕರ ಹಿರಿಯರಲ್ಲಿಯೂ ಕೆಲವರನ್ನು ಆರಿಸಿಕೋ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಸರ್ವೇಶ್ವರ ಸ್ವಾಮಿ ನನಗೆ ಹೀಗೆ ಹೇಳಿದರು : “ಹೋಗು, ಕುಂಬಾರ ಮಾಡಿದ ಮಣ್ಣಿನ ಮಡಕೆಯೊಂದನ್ನು ಕೊಂಡುಕೊ. ಜನರ ಹಿರಿಯರಲ್ಲೂ ಯಾಜಕರ ಹಿರಿಯರಲ್ಲೂ ಕೆಲವರನ್ನು ಕರೆದುಕೊಂಡು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಯೆಹೋವನು ನನಗೆ ಹೀಗೆ ಹೇಳಿದನು - ಹೊರಡು, ಕುಂಬಾರನು ಮಾಡಿದ ಮಣ್ಣಿನ ಕೂಜವನ್ನು ಕೊಂಡುಕೊಂಡು ಜನರ ಹಿರಿಯರಲ್ಲಿಯೂ ಯಾಜಕರ ಹಿರಿಯರಲ್ಲಿಯೂ ಕೆಲವರನ್ನು ಕರೆದುಕೊಂಡು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಯೆಹೋವ ದೇವರು ನನಗೆ ಹೀಗೆಂದನು: “ಹೋಗಿ, ಕುಂಬಾರನ ಮಣ್ಣಿನ ಮಡಕೆಯನ್ನು ತೆಗೆದುಕೊಂಡು, ಜನರ ಹಿರಿಯರಿಂದಲೂ, ಯಾಜಕರ ಹಿರಿಯರಿಂದಲೂ ಕೆಲವರನ್ನು ಕರೆದುಕೊಂಡು, ಅಧ್ಯಾಯವನ್ನು ನೋಡಿ |
“ನರಪುತ್ರನೇ, ಈ ಕಾರ್ಯಗಳನ್ನು ಮುತ್ತಿಗೆಯ ಕಾಲ ಮುಗಿಯಿತೆಂದು ಸೂಚಿಸುವ ಅವಧಿಯ ನಂತರ ಮಾಡಬೇಕು. ನೀನು ಕ್ಷೌರಕನ ಹರಿತವಾದ ಕ್ಷೌರಕತ್ತಿಯನ್ನು ತೆಗೆದುಕೊಳ್ಳಬೇಕು. ನಿನ್ನ ತಲೆಯ ಕೂದಲನ್ನೂ ಗಡ್ಡವನ್ನೂ ಬೋಳಿಸು. ಕೂದಲನ್ನು ತ್ರಾಸಿನಲ್ಲಿ ಹಾಕಿ ಅದನ್ನು ತೂಕ ಮಾಡು. ಆ ಕೂದಲುಗಳನ್ನು ಮೂರು ಪಾಲಾಗಿ ಮಾಡು. ಅದರ ಒಂದು ಪಾಲನ್ನು ನೀನು ಚಿತ್ರಿಸಿದ್ದ ಇಟ್ಟಿಗೆಯ ಮೇಲೆ ಹಾಕು. ಆ ನಗರದ ಮೇಲೆ ಕೂದಲನ್ನು ಸುಟ್ಟುಬಿಡು. ಇದು, ಜನರಲ್ಲಿ ಕೆಲವು ಮಂದಿ ನಗರದಲ್ಲಿ ಸಾಯುವರು ಎಂಬುದಕ್ಕೆ ಗುರುತಾಗಿದೆ. ನೀನು ಕೂದಲಲ್ಲಿ ಮೂರನೆ ಒಂದು ಭಾಗವನ್ನು ತೆಗೆದುಕೊಂಡು ಅದನ್ನು ಪಟ್ಟಣದ ಹೊರಗೆ ಸುತ್ತಲೆಲ್ಲಾ ನಿನ್ನ ಕ್ಷೌರಕತ್ತಿಯಿಂದ ಕತ್ತರಿಸು. ಕೆಲವು ಜನರು ಪಟ್ಟಣದ ಹೊರಗೆ ಸಾಯುತ್ತಾರೆ ಎಂಬುದನ್ನು ಇದು ಸೂಚಿಸುತ್ತದೆ. ಬಳಿಕ ನಿನ್ನ ಕೂದಲಿನ ಉಳಿದ ಮೂರನೆಯ ಒಂದು ಭಾಗವನ್ನು ಗಾಳಿಯಲ್ಲಿ ತೂರಿಬಿಡು. ಗಾಳಿಯು ಅದನ್ನು ಬಹುದೂರದವರೆಗೆ ಬಡಿದುಕೊಂಡು ಹೋಗಲಿ. ಇದೇ ರೀತಿಯಲ್ಲಿ ನಾನು ಖಡ್ಗವನ್ನು ಇರಿದು ಅವರನ್ನು ಬಹುದೂರದ ದೇಶಗಳಿಗೆ ಅಟ್ಟಿಸಿ ಬಿಡುವೆನು.