Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 2:1 - ಪರಿಶುದ್ದ ಬೈಬಲ್‌

1 ಯೆಹೋವನ ಈ ಸಂದೇಶವು ಯೆರೆಮೀಯನಿಗೆ ಬಂದಿತು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸರ್ವೇಶ್ವರ ಸ್ವಾಮಿ ನನಗೆ ನೀಡಿದ ಆದೇಶ ಇದು :

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರು ನನಗೆ ದಯಪಾಲಿಸಿದ ಸಂದೇಶ ಇದು:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 2:1
9 ತಿಳಿವುಗಳ ಹೋಲಿಕೆ  

ಹೊಟ್ಟು, ಗೋಧಿಯ ಕಾಳಲ್ಲ. ಅದೇ ರೀತಿ, ಆ ಪ್ರವಾದಿಗಳ ಕನಸುಗಳು ನನ್ನ ಸಂದೇಶಗಳಲ್ಲ. ಒಬ್ಬ ವ್ಯಕ್ತಿಗೆ ತನ್ನ ಕನಸಿನ ಬಗ್ಗೆ ಹೇಳಬೇಕೆನಿಸಿದರೆ, ಅವನು ಹೇಳಲಿ. ಆದರೆ ನನ್ನ ಸಂದೇಶವನ್ನು ಕೇಳಿದ ಮನುಷ್ಯನು ಆ ಸಂದೇಶವನ್ನು ಯಥಾರ್ಥವಾಗಿ ಹೇಳಲಿ.


ಯಾವ ಪ್ರವಾದನೆಯೇ ಆಗಲಿ ಮನುಷ್ಯನ ಚಿತ್ತದಿಂದ ಬಂದಿಲ್ಲ. ಆದರೆ ಜನರು ಪವಿತ್ರಾತ್ಮನಿಂದ ನಡೆಸಲ್ಪಟ್ಟು ದೇವರಿಂದ ಹೊಂದಿದ್ದನ್ನೇ ಮಾತನಾಡಿದರು.


ಪೂರ್ವಕಾಲದಲ್ಲಿ ದೇವರು ಪ್ರವಾದಿಗಳ ಮೂಲಕ ನಮ್ಮ ಜನರೊಂದಿಗೆ ಹಲವಾರು ವಿಧದಲ್ಲಿ ಅನೇಕ ಸಲ ಮಾತನಾಡಿದನು.


ಯೆಹೋವನ ಸಂದೇಶವು ನನಗೆ ಬಂದಿತು.


ಯೆರೆಮೀಯನಿಗೆ ಯೆಹೋವನ ಸಂದೇಶ ಹೀಗಿತ್ತು:


ಯೆಹೋವನಿಂದ ನನಗೆ ಈ ಸಂದೇಶ ಬಂದಿತು: “ಯೆರೆಮೀಯನೇ, ನಿನಗೆ ಏನು ಕಾಣುತ್ತಿದೆ?” ಎಂದು ಯೆಹೋವನು ಕೇಳಿದನು. ನಾನು ಆತನಿಗೆ, “ಬಾದಾಮಿಯ ಮರದಿಂದ ಮಾಡಿದ ಒಂದು ದಂಡ ಕಾಣಿಸುತ್ತಿದೆ” ಎಂದು ಉತ್ತರಕೊಟ್ಟೆನು.


ಆ ಜನರೆಲ್ಲಾ ನಿನ್ನ ವಿರುದ್ಧ ಹೋರಾಡುವರು, ಆದರೆ ಅವರು ನಿನ್ನನ್ನು ಸೋಲಿಸಲಾಗುವುದಿಲ್ಲ. ಏಕೆಂದರೆ ನಾನೇ ನಿನ್ನೊಂದಿಗೆ ಇರುವೆನು. ನಾನೇ ನಿನ್ನನ್ನು ರಕ್ಷಿಸುವೆನು.” ಇದು ಯೆಹೋವನಾದ ನನ್ನ ಮಾತು.


“ಯೆರೆಮೀಯನೇ, ಹೋಗಿ ಜೆರುಸಲೇಮಿನ ಜನರೊಂದಿಗೆ ಮಾತನಾಡು, ಅವರಿಗೆ ಹೀಗೆ ಹೇಳು: “ಯೆಹೋವನು ಹೀಗೆನ್ನುತ್ತಾನೆ: ‘ನೀವು ಯುವ ರಾಷ್ಟ್ರವಾಗಿದ್ದಾಗ ನನಗೆ ನಂಬಿಗಸ್ತರಾಗಿದ್ದಿರಿ; ಯುವತಿಯಾದ ಮದುಮಗಳಂತೆ ನನ್ನನ್ನು ಹಿಂಬಾಲಿಸಿದಿರಿ. ಎಂದೂ ಬೇಸಾಯಕ್ಕೆ ಬಳಸದ ಭೂಮಿಯಲ್ಲಿಯೂ ಮರಳುಗಾಡಿನಲ್ಲಿಯೂ ನನ್ನನ್ನು ಹಿಂಬಾಲಿಸಿದಿರಿ.


ಅಲ್ಲಿ ಆಕೆಗೆ ನಾನು ದ್ರಾಕ್ಷಿತೋಟಗಳನ್ನು ಕೊಡುವೆನು. ಆಕೆಗೆ ಆಕೋರ್ ತಗ್ಗುಪ್ರದೇಶವನ್ನು ನಿರೀಕ್ಷೆಯ ಬಾಗಿಲಾಗಿ ಕೊಡುವೆನು. ಆಗ ಅವಳು ತಾನು ಈಜಿಪ್ಟಿನಿಂದ ಹೊರಬಂದ ತನ್ನ ಯೌವನದ ದಿನಗಳಲ್ಲಿ ಹೇಗೆ ನನ್ನ ಸಂಗಡ ಮಾತನಾಡಿದಳೋ ಹಾಗೆಯೇ ನನ್ನೊಂದಿಗೆ ಮಾತನಾಡುವಳು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು