Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 2:16 - ಪರಿಶುದ್ದ ಬೈಬಲ್‌

16 ಮೆಂಫೀಸ್ ಮತ್ತು ತಹಪನೇಸ್ ನಗರಗಳ ಜನರು ನಿನ್ನ ತಲೆಬುರುಡೆಯನ್ನು ಒಡೆದುಬಿಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನೋಫ್ ಮತ್ತು ತಹಪನೇಸ್ ಪಟ್ಟಣಗಳವರು ನಿನ್ನ ನೆತ್ತಿಯನ್ನೂ ನುಣ್ಣಗೆ ಮೇದುಬಿಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಹೌದು, ಮೆಮ್‍ಫಿಸ್ ಮತ್ತು ತಹಪನೇಸ್ ನಿವಾಸಿಗಳು ನಿನ್ನ ನಾಡನೆತ್ತಿಯನ್ನು ನುಣ್ಣಗೆ ಮೇದುಬಿಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನೋಫ್ ಮತ್ತು ತಹಪನೇಸ್ ಪಟ್ಟಣಗಳವರು ನಿನ್ನ ನೆತ್ತಿಯನ್ನೂ ನುಣ್ಣಗೆ ಮೇದುಬಿಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ನೋಫ್ ಮತ್ತು ತಹಪನೇಸ್ ಪಟ್ಟಣಗಳವರು ನಿನ್ನ ನೆತ್ತಿಯನ್ನೂ ನುಣ್ಣಗೆ ಮೇದುಬಿಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 2:16
17 ತಿಳಿವುಗಳ ಹೋಲಿಕೆ  

“ಈಜಿಪ್ಟಿನಲ್ಲಿ ಈ ಸಂದೇಶವನ್ನು ಪ್ರಕಟಿಸು, ಮಿಗ್ದೋಲ್ ನಗರದಲ್ಲಿ ಇದನ್ನು ಪ್ರಚುರಪಡಿಸು. ನೋಫ್ ಮತ್ತು ತಹಪನೇಸ್‌ಗಳಲ್ಲಿ ಪ್ರಚುರಪಡಿಸಿರಿ, ‘ಯುದ್ಧಕ್ಕೆ ಸಿದ್ಧರಾಗಿರಿ, ಏಕೆಂದರೆ ನಿಮ್ಮ ಸುತ್ತಲೂ ಜನರು ಖಡ್ಗಕ್ಕೆ ಆಹುತಿಯಾಗಿದ್ದಾರೆ.’


ಯೆರೆಮೀಯನಿಗೆ ಯೆಹೋವನಿಂದ ಒಂದು ಸಂದೇಶ ಬಂದಿತು. ಈ ಸಂದೇಶವನ್ನು ಈಜಿಪ್ಟಿನಲ್ಲಿ ವಾಸಿಸಿದ ಎಲ್ಲಾ ಯೆಹೂದ್ಯರಿಗಾಗಿ ಕೊಡಲಾಗಿತ್ತು. ಈ ಸಂದೇಶವು ಮಿಗ್ದೋಲ್, ತಹಪನೇಸ್, ನೋಫ್ ಪಟ್ಟಣಗಳಲ್ಲಿ ಮತ್ತು ಈಜಿಪ್ಟಿನ ದಕ್ಷಿಣ ಭಾಗದಲ್ಲಿ ವಾಸಮಾಡುತ್ತಿದ್ದ ಯೆಹೂದ್ಯರಿಗಾಗಿ ಇತ್ತು. ಆ ಸಂದೇಶವೇನೆಂದರೆ:


ಚೋಯನಿನ ಅಧಿಪತಿಗಳು ಮೋಸಹೋದರು. ನೋಫಿನ ಪ್ರಮುಖರು ಸುಳ್ಳನ್ನು ನಂಬಿದರು. ಆದ್ದರಿಂದ ನಾಯಕರು ಈಜಿಪ್ಟನ್ನು ತಪ್ಪುದಾರಿಗೆ ನಡೆಸಿದರು.


ಗಾದನಿಗೆ ಮೋಶೆಯು ಹೇಳಿದ್ದೇನೆಂದರೆ: “ಗಾದನಿಗೆ ವಿಸ್ತಾರವಾದ ಪ್ರಾಂತ್ಯವನ್ನು ಕೊಟ್ಟ ದೇವರಿಗೆ ಸ್ತೋತ್ರ. ಗಾದನು ಸಿಂಹದಂತಿರುವನು; ಹೊಂಚುಹಾಕುತ್ತಾ ಕಾಯುತ್ತಾ ಇರುವನು. ಫಕ್ಕನೆ ಪ್ರಾಣಿಯ ಮೇಲೆ ಹಾರಿ ಅದನ್ನು ಸೀಳಿಬಿಡುವನು.


ಈಜಿಪ್ಟಿನಲ್ಲಿ ಬೆಂಕಿಯನ್ನು ಬರಮಾಡುವೆನು. ಸೀನ್ ನಗರವು ಭಯದಿಂದ ಕಂಗೆಡುವದು. ಸೈನಿಕರು ತೆಬೆಸವನ್ನು ಧಾಳಿ ಮಾಡುವರು. ತೆಬೆಸದಲ್ಲಿ ಪ್ರತಿದಿವಸವೂ ಸಂಕಟವಿರುವುದು.


ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಈಜಿಪ್ಟಿನಲ್ಲಿರುವ ವಿಗ್ರಹಗಳನ್ನು ನಾನು ನಾಶಮಾಡುವೆನು. ಮೆಂಫೀಸಿನ ವಿಗ್ರಹಗಳನ್ನು ತೆಗೆದುಬಿಡುವೆನು. ಈಜಿಪ್ಟಿನಲ್ಲಿ ಇನ್ನು ಮುಂದೆ ರಾಜನಿರನು. ಅವರಲ್ಲಿ ಭಯವನ್ನು ಹುಟ್ಟಿಸುವೆನು.


ಈಜಿಪ್ಟಿನ ಜನಗಳೇ, ನಿಮ್ಮ ವಸ್ತುಗಳನ್ನು ಕಟ್ಟಿಕೊಂಡು ಸೆರೆವಾಸಕ್ಕೆ ಸಿದ್ಧರಾಗಿರಿ. ಏಕೆಂದರೆ ನೋಫ್ ಪಟ್ಟಣವು ಹಾಳುಬಿದ್ದ ನಿರ್ಜನವಾದ ಪ್ರದೇಶವಾಗುವುದು. ನಗರಗಳನ್ನು ನಾಶಪಡಿಸಲಾಗುವುದು; ಅವುಗಳು ನಿರ್ಜನವಾಗುವವು.


ಆ ನೀರು ಹೊಳೆಯಿಂದಾಚೆ ಬಂದು ಯೆಹೂದದ ಮೇಲೆ ಹರಿಯುವುದು. ಆ ನೀರು ಏರುತ್ತಾಬಂದು ಯೆಹೂದವನ್ನು ಕುತ್ತಿಗೆಯ ತನಕ ಮುಳುಗಿಸುವದು ಮಾತ್ರವಲ್ಲ ಅದನ್ನು ಸಂಪೂರ್ಣವಾಗಿ ಮುಳುಗಿಸಿಬಿಡುವದು. “ಇಮ್ಮಾನುವೇಲನೇ, ಈ ಜಲಪ್ರವಾಹವು ಎಲ್ಲಾ ಕಡೆಗಳಿಗೆ ಹಬ್ಬುತ್ತಾ ನಿಮ್ಮ ದೇಶವನ್ನು ಪೂರ್ತಿಯಾಗಿ ಮುಚ್ಚಿಬಿಡುವದು.”


ಫರೋಹ ನೆಕೋವನು ಹಮಾತ್ ದೇಶದ ರಿಬ್ಲಾ ಎಂಬಲ್ಲಿ ಯೆಹೋವಾಹಾಜನನ್ನು ಸೆರೆಹಿಡಿದನು. ಆದ್ದರಿಂದ ಯೆಹೋವಾಹಾಜನು ಜೆರುಸಲೇಮಿನಲ್ಲಿ ಆಳಲಿಲ್ಲ. ಫರೋಹ ನೆಕೋವನು ಮೂರುಸಾವಿರದ ನಾನೂರು ಕಿಲೋಗ್ರಾಂ ಬೆಳ್ಳಿಯನ್ನು ಮತ್ತು ಮೂವತ್ನಾಲ್ಕು ಕಿಲೋಗ್ರಾಂ ಚಿನ್ನವನ್ನು ಕೊಡುವಂತೆ ಯೆಹೂದದವರನ್ನು ಬಲವಂತಪಡಿಸಿದನು.


ನೀನು ಮುರಿದುಬಿದ್ದಿರುವ ದಂಟನ್ನು ಊರುಗೋಲೆಂದು ನಂಬಿ ಭರವಸೆಯಿಟ್ಟಿರುವೆ! ಈಜಿಪ್ಟ್ ಊರುಗೋಲಾಗಿದೆ. ಒಬ್ಬ ಮನುಷ್ಯನು ಈ ಊರುಗೋಲಿನ ಮೇಲೆ ಭರವಸೆಯಿಟ್ಟರೆ ಅದು ಮುರಿದು ಬೀಳುತ್ತದೆ ಮತ್ತು ಅವನ ಕೈಯನ್ನೇ ಚುಚ್ಚಿ ಅವನಿಗೆ ನೋವನ್ನು ಉಂಟುಮಾಡುತ್ತದೆ! ಈಜಿಪ್ಟಿನ ರಾಜನು ತನ್ನನ್ನು ನಂಬಿದ ಜನರೆಲ್ಲರಿಗೂ ಇದೇ ರೀತಿಯಲ್ಲಿದ್ದಾನೆ.


“ಜನರು ಪ್ರಬಲನಾದ ವೈರಿಯಿಂದ ತಪ್ಪಿಸಿಕೊಂಡು ತಮ್ಮ ರಕ್ಷಣೆಗಾಗಿ ಹೆಷ್ಬೋನ್ ಪಟ್ಟಣಕ್ಕೆ ಓಡಿಹೋದರು. ಆದರೆ ಅಲ್ಲಿ ರಕ್ಷಣೆಯಿರಲಿಲ್ಲ. ಹೆಷ್ಬೋನಿನಲ್ಲಿ ಅಗ್ನಿಜ್ವಾಲೆ ಪ್ರಾರಂಭವಾಯಿತು. ಸೀಹೋನಿನಲ್ಲಿ ಅಗ್ನಿಜ್ವಾಲೆ ಪ್ರಾರಂಭವಾಯಿತು. ಅದು ಮೋವಾಬಿನ ನಾಯಕರುಗಳನ್ನು ಸುಡುತ್ತಿದೆ. ಅದು ಆ ಗರ್ವಿಷ್ಠರನ್ನು ಸುಡುತ್ತಿದೆ.


ಶತ್ರುಗಳು ಇಸ್ರೇಲರಿಂದ ಎಲ್ಲವನ್ನು ದೋಚಿಕೊಂಡು ಹೋದುದರಿಂದ ಇಸ್ರೇಲರು ಬಿಟ್ಟು ಹೊರಟರು. ಈಜಿಪ್ಟ್ ಅವರನ್ನು ಒಟ್ಟಿಗೆ ಸೇರಿಸಿಕೊಳ್ಳುವುದು. ಮೆಂಫಿಸ್ ಪಟ್ಟಣವು ಅವರನ್ನು ಹೂಳಿಡುವದು. ಅವರ ಬೆಳ್ಳಿಯ ನಿಕ್ಷೇಪದ ಮೇಲೆ ಕಳೆ ಬೆಳೆಯುವದು. ಇಸ್ರೇಲರು ವಾಸಿಸಿದ್ದಲ್ಲಿ ಮುಳ್ಳಿನ ಗಿಡಗಳು ಬೆಳೆಯುವವು.


ನಾವು ಪಾಪಮಾಡಿ ಯೆಹೋವನಿಂದ ದೂರ ಹೋಗಿದ್ದೇವೆ. ಆತನಿಂದ ದೂರವಾಗಿ ಆತನನ್ನು ತೊರೆದುಬಿಟ್ಟಿದ್ದೇವೆ. ನಾವು ದುಷ್ಟತನವನ್ನೂ ದೇವರಿಗೆ ವಿರುದ್ಧವಾದ ಕಾರ್ಯಗಳನ್ನೂ ಆಲೋಚಿಸಿದ್ದೇವೆ. ನಮ್ಮ ಹೃದಯಗಳಲ್ಲಿ ದುಷ್ಟಯೋಜನೆಗಳನ್ನು ಹಾಕಿರುತ್ತೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು