Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 2:17 - ಪರಿಶುದ್ದ ಬೈಬಲ್‌

17 ತೊಂದರೆಯು ನಿನ್ನ ತಪ್ಪಿನ ಫಲ. ನಿನ್ನನ್ನು ಸರಿಯಾದ ಮಾರ್ಗದಲ್ಲಿ ನಡೆಸುತ್ತಿದ್ದ ನಿನ್ನ ದೇವರಾದ ಯೆಹೋವನಿಗೆ ನೀನು ವಿಮುಖನಾದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನಿನ್ನನ್ನು ಮಾರ್ಗದರ್ಶಿಯಾಗಿ ನಡೆಸುತ್ತಿದ್ದ ನಿನ್ನ ದೇವರಾದ ಯೆಹೋವನನ್ನು ತೊರೆದುಬಿಟ್ಟು ಇದನ್ನೆಲ್ಲಾ ನೀನೇ ನಿನ್ನ ಮೇಲೆ ಬರಮಾಡಿಕೊಂಡೆಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ನಿನಗೆ ಮಾರ್ಗದರ್ಶಿಯಾಗಿದ್ದ, ನಿನಗೆ ದೇವರಾಗಿದ್ದ ಸರ್ವೇಶ್ವರನಾದ ನನ್ನನ್ನೇ ತೊರೆದುಬಿಟ್ಟು ಇದನ್ನೆಲ್ಲ ನೀನೇ ನಿನ್ನ ಮೇಲೆ ಬರಮಾಡಿಕೊಂಡಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನಿನ್ನನ್ನು ದಾರಿಯಲ್ಲಿ ನಡಿಸುತ್ತಿದ್ದ ನಿನ್ನ ದೇವರಾದ ಯೆಹೋವನನ್ನು ತೊರೆದುಬಿಟ್ಟು ಇದನ್ನೆಲ್ಲಾ ನೀನೇ ನಿನ್ನ ಮೇಲೆ ಬರಮಾಡಿಕೊಂಡಿಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆತನು ನಿನ್ನನ್ನು ದಾರಿಯಲ್ಲಿ ನಡೆಸುತ್ತಿರುವಾಗ ನೀನು ನಿನ್ನ ದೇವರಾದ ಯೆಹೋವ ದೇವರನ್ನು ಬಿಟ್ಟಿದ್ದರಿಂದಲೇ ಇದನ್ನು ನಿನಗೆ ನೀನೇ ಮಾಡಿಕೊಂಡೆಯಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 2:17
28 ತಿಳಿವುಗಳ ಹೋಲಿಕೆ  

“ನಿನ್ನ ನಡತೆಯೂ ನಿನ್ನ ಕೃತ್ಯಗಳೂ ನಿನಗೆ ಈ ಕಷ್ಟವನ್ನು ತಂದವು. ನಿನ್ನ ದುಷ್ಟತನವೇ ನಿನ್ನ ಜೀವನವನ್ನು ಇಷ್ಟು ಕಷ್ಟಕರವನ್ನಾಗಿ ಮಾಡಿದೆ. ನಿನ್ನ ದುಷ್ಟತನವೇ ನಿನ್ನ ಮನಸ್ಸಿಗೆ ಆಳವಾದ ನೋವನ್ನು ಉಂಟುಮಾಡಿದೆ.”


ನೀವು ಕೆಟ್ಟದ್ದನ್ನು ಮಾಡಿದರೆ ಆ ಕೆಟ್ಟತನ ನಿಮಗೆ ಶಿಕ್ಷೆಯಾಗುವಂತೆ ಮಾತ್ರ ಮಾಡುತ್ತದೆ. ನಿಮಗೆ ವಿಪತ್ತು ಬರುತ್ತದೆ. ಆ ವಿಪತ್ತು ನಿಮಗೊಂದು ಪಾಠವನ್ನು ಕಲಿಸುತ್ತದೆ. ಅದರ ಬಗ್ಗೆ ಯೋಚಿಸಿರಿ. ಆಗ ನಿಮ್ಮ ದೇವರಿಗೆ ವಿಮುಖರಾಗುವುದು ಎಷ್ಟು ಕೆಟ್ಟದ್ದೆಂದು ನಿಮಗೆ ಗೊತ್ತಾಗುತ್ತದೆ. ನನಗೆ ಭಯಭಕ್ತಿ ತೋರದೆ ಇರುವದು ತಪ್ಪು.” ಈ ಸಂದೇಶವು ನನ್ನ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನಿಂದ ಬಂದಿತು.


“ನನ್ನ ಜನರು ಎರಡು ಅಪರಾಧಗಳನ್ನು ಮಾಡಿದ್ದಾರೆ. ಅವರು ನನ್ನಿಂದ ಮುಖ ತಿರುವಿದ್ದಾರೆ. ನಾನು ಜೀವಜಲದ ಬುಗ್ಗೆಯಾಗಿದ್ದೇನೆ. ಅವರು ತಮ್ಮದೇ ಆದ ನೀರಿನ ತೊಟ್ಟಿಗಳನ್ನು ನಿರ್ಮಿಸಿಕೊಂಡಿದ್ದಾರೆ. ಅವರು ಇತರ ದೇವರುಗಳ ಕಡೆಗೆ ತಿರುಗಿಕೊಂಡಿದ್ದಾರೆ. ಅವರ ತೊಟ್ಟಿಗಳು ಒಡೆದಿವೆ. ಅವುಗಳಲ್ಲಿ ನೀರು ತುಂಬಿಡಲು ಸಾಧ್ಯವಿಲ್ಲ.


“ಇಸ್ರೇಲೇ, ನಾನು ನಿನಗೆ ಸಹಾಯ ಮಾಡಿದರೂ ನೀನು ನನಗೆ ವಿರೋಧವಾಗಿ ಎದ್ದಿರುವೆ. ಆದ್ದರಿಂದ ನಾನು ನಿನ್ನನ್ನು ನಾಶಮಾಡುವೆನು.


ಅವರು ನೆಲಸತಕ್ಕ ಪಟ್ಟಣಕ್ಕೆ ದೇವರು ಅವರನ್ನು ನೇರವಾಗಿ ನಡೆಸಿದನು.


ಕುರುಬನು ಕುರಿಹಿಂಡನ್ನು ಕರೆದೊಯ್ಯುವಂತೆ ನಿನ್ನ ಜನರನ್ನು ಕರೆದೊಯ್ಯಲು ಮೋಶೆಯನ್ನೂ ಆರೋನನನ್ನೂ ಉಪಯೋಗಿಸಿದೆ.


ಇಸ್ರೇಲ್ ದೇಶವು ಪಾಪದಿಂದ ತುಂಬಿಹೋಗಿದೆ; ಅವರ ಪಾಪವೇ ಅವರಿಗೆ ಭಾರವಾದ ಹೊರೆಯಾಗಿದೆ; ಅವರು ದುಷ್ಟಕುಟುಂಬಗಳ ಕೆಟ್ಟಮಕ್ಕಳಂತಿದ್ದಾರೆ. ಅವರು ಯೆಹೋವನನ್ನು ತ್ಯಜಿಸಿದ್ದಾರೆ; ಇಸ್ರೇಲಿನ ಪರಿಶುದ್ಧ ದೇವರನ್ನು ಅವಮಾನಪಡಿಸಿದ್ದಾರೆ; ಅವರು ಆತನನ್ನು ತೊರೆದು ಅಪರಿಚಿತನೋ ಎಂಬಂತೆ ಪರಿಗಣಿಸಿದ್ದಾರೆ.


ಆತನು ತನ್ನ ಜನರನ್ನು ಅರಣ್ಯದೊಳಗೆ ನಡೆಸಿದನು. ಆತನ ಪ್ರೀತಿ ಶಾಶ್ವತವಾದದ್ದು.


ನಾನು ನೋಡಿರುವಂತೆ, ಅಧರ್ಮವನ್ನು ಮತ್ತು ಕೇಡನ್ನು ಬಿತ್ತುವವರು ಅದನ್ನೇ ಕೊಯ್ಯುವರು.


“ನನ್ನ ಮಗನಾದ ಸೊಲೊಮೋನನೇ, ನಿನ್ನ ತಂದೆಯ ದೇವರನ್ನು ನೀನು ಚೆನ್ನಾಗಿ ಅರಿತುಕೋ. ನೀನು ಪೂರ್ಣಹೃದಯದಿಂದಲೂ ಪೂರ್ಣಮನಸ್ಸಿನಿಂದಲೂ ನಿನ್ನ ದೇವರನ್ನು ಸೇವಿಸು. ದೇವರು ಪ್ರತಿಯೊಬ್ಬನ ಹೃದಯ ಮನಸ್ಸುಗಳನ್ನು ನೋಡುತ್ತಾನೆ. ನೀನು ದೇವರ ಸಹಾಯವನ್ನು ಕೇಳಿದರೆ ಆತನು ನಿನ್ನ ಪ್ರಾರ್ಥನೆಯನ್ನು ಲಾಲಿಸುವನು. ಆದರೆ ನೀನು ದೇವರನ್ನು ಬಿಟ್ಟರೆ ಆತನು ನಿನ್ನನ್ನು ಬಿಟ್ಟುಹೋಗುವನು.


“ಯೆಹೋವನು ಇದನ್ನು ನೋಡಿ ಕೋಪಗೊಂಡನು. ಆತನ ಮಕ್ಕಳೇ ಆತನನ್ನು ಸಿಟ್ಟಿಗೆಬ್ಬಿಸಿದರು.


“ಮರುಭೂಮಿಯಲ್ಲಿ ಯೆಹೋವನು ಇಸ್ರೇಲನನ್ನು ಕಂಡನು. ಅದು ಬರಿದಾದ ಗಾಳಿ ಬೀಸುತ್ತಿದ್ದ ಸ್ಥಳವಾಗಿತ್ತು. ಯೆಹೋವನು ಅದನ್ನು ಸುತ್ತುವರಿದು ಇಸ್ರೇಲನ್ನು ಸಂರಕ್ಷಿಸಿದನು; ತನ್ನ ಕಣ್ಣುಗುಡ್ಡೆಯಂತೆ ಅವರನ್ನು ಕಾಪಾಡಿದನು.


ಆದರೆ ನೀವು ಈ ಸಂಗತಿಗಳನ್ನು ಮಾಡದಿದ್ದರೆ, ಯೆಹೋವನಿಗೆ ವಿರೋಧವಾಗಿ ಪಾಪ ಮಾಡಿದವರಾಗಿರುವಿರಿ. ಮತ್ತು ನಿಮ್ಮ ಪಾಪವು ನಿಮ್ಮನ್ನು ಹಿಡಿಯುವ ತನಕ ಹುಡುಕಿಕೊಂಡೇ ಬರುವುದು ಎಂದು ಖಚಿತವಾಗಿ ತಿಳಿದುಕೊಳ್ಳಿರಿ.


ಯೆಹೂದದ ಜನರೇ, ನೀವು ತಪ್ಪುಗಳನ್ನು ಮಾಡಿರುವಿರಿ. ಆದ್ದರಿಂದಲೇ ಮಳೆಬೆಳೆಗಳು ಆಗಿಲ್ಲ. ನಿಮ್ಮ ಪಾಪಗಳಿಂದಾಗಿ ಯೆಹೋವನ ಆ ಉತ್ತಮ ಕಾಣಿಕೆಗಳನ್ನು ನೀವು ಸವಿಯಲಾಗಲಿಲ್ಲ.


“ಇಂಥ ಕೇಡು ನನಗೆ ಏಕೆ ಉಂಟಾಯಿತು?” ಎಂದು ನಿನ್ನನ್ನು ನೀನೇ ಕೇಳಿಕೊಳ್ಳಬಹುದು. ನೀನು ಮಾಡಿದ ಅನೇಕ ಪಾಪಗಳ ಫಲದಿಂದಲೇ ಆಯಿತು. ನಿನ್ನ ಪಾಪಗಳ ಫಲವಾಗಿ ನಿನ್ನ ಲಂಗವನ್ನು ಹರಿಯಲಾಯಿತು. ನಿನ್ನ ಪಾದರಕ್ಷೆಯನ್ನು ಕಿತ್ತುಕೊಳ್ಳಲಾಯಿತು. ನಿನ್ನನ್ನು ಕಂಗೆಡಿಸುವದಕ್ಕಾಗಿ ಅವರು ಹೀಗೆ ಮಾಡಿದರು.


ಯೆಹೂದದ ಜನರು ನನ್ನ ಅನುಸರಣೆಯನ್ನು ಬಿಟ್ಟಿದ್ದರಿಂದ ನಾನು ಹೀಗೆ ಮಾಡುವೆನು. ಇದನ್ನು ಅವರು ಅನ್ಯದೇವರುಗಳ ಸ್ಥಳವನ್ನಾಗಿ ಮಾಡಿದ್ದಾರೆ. ಯೆಹೂದದ ಜನರು ಈ ಸ್ಥಳದಲ್ಲಿ ಅನ್ಯದೇವರುಗಳಿಗಾಗಿ ಧೂಪವನ್ನು ಹಾಕಿದ್ದಾರೆ. ಬಹಳ ಹಿಂದೆ ಈ ಜನರು ಆ ದೇವರುಗಳನ್ನು ಪೂಜಿಸುತ್ತಿರಲಿಲ್ಲ. ಅವರ ಹಿರಿಯರೂ ಆ ದೇವರುಗಳನ್ನು ಪೂಜಿಸುತ್ತಿರಲಿಲ್ಲ. ಇವುಗಳು ಅನ್ಯದೇಶದ ಹೊಸ ದೇವರುಗಳು. ಯೆಹೂದದ ರಾಜರು ಈ ಸ್ಥಳವನ್ನು ಮುಗ್ಧಮಕ್ಕಳ ರಕ್ತದಿಂದ ತುಂಬಿದರು.


ಅಲ್ಲಿ ವಾಸಿಸುವ ಜನರು ದುಷ್ಕೃತ್ಯಗಳನ್ನು ಮಾಡಿದ್ದರಿಂದ ಸ್ಥಳಗಳನ್ನು ನಾಶಮಾಡಲಾಯಿತು. ಆ ಜನರು ಬೇರೆ ದೇವರುಗಳಿಗೆ ಬಲಿಯನ್ನು ಅರ್ಪಿಸಿದ್ದಾರೆ. ಆದ್ದರಿಂದ ನನಗೆ ಕೋಪ ಬಂದಿದೆ. ಹಿಂದೆ ನಿಮ್ಮ ಜನರು ಮತ್ತು ನಿಮ್ಮ ಪೂರ್ವಿಕರು ಆ ದೇವರುಗಳನ್ನು ಪೂಜಿಸಿರಲಿಲ್ಲ.


ಅವರು ಪಾಪ ಮಾಡಿ ತಮ್ಮನ್ನು ಅಶುದ್ಧರನ್ನಾಗಿ ಮಾಡಿಕೊಂಡರು. ಅದಕ್ಕಾಗಿ ನಾನು ಅವರನ್ನು ಶಿಕ್ಷಿಸಿದೆನು. ಅವರಿಂದ ನಾನು ದೂರವಾಗಿ ಅವರಿಗೆ ಸಹಾಯ ಮಾಡಲು ನಿರಾಕರಿಸಿದೆನು.”


ಯಾಕೆಂದರೆ ದುಷ್ಟರು ದೇವರಿಗೆ ವಿಧೇಯರಾಗಲಿಲ್ಲ; ಆತನ ಮಾರ್ಗಗಳನ್ನು ಲಕ್ಷಿಸಲಿಲ್ಲ.


ನೀತಿಮಾರ್ಗವನ್ನು ತೊರೆದವನಿಗೆ ಮಹಾದಂಡನೆಯಾಗುವುದು; ಶಿಕ್ಷಣ, ಗದರಿಕೆಯನ್ನು ದ್ವೇಷಿಸುವವನು ನಾಶವಾಗುವನು.


ನಾವು ಪಾಪಮಾಡಿ ಯೆಹೋವನಿಂದ ದೂರ ಹೋಗಿದ್ದೇವೆ. ಆತನಿಂದ ದೂರವಾಗಿ ಆತನನ್ನು ತೊರೆದುಬಿಟ್ಟಿದ್ದೇವೆ. ನಾವು ದುಷ್ಟತನವನ್ನೂ ದೇವರಿಗೆ ವಿರುದ್ಧವಾದ ಕಾರ್ಯಗಳನ್ನೂ ಆಲೋಚಿಸಿದ್ದೇವೆ. ನಮ್ಮ ಹೃದಯಗಳಲ್ಲಿ ದುಷ್ಟಯೋಜನೆಗಳನ್ನು ಹಾಕಿರುತ್ತೇವೆ.


ಇದಕ್ಕೆಲ್ಲಾ ಕಾರಣ ಯಾಕೋಬನ ಪಾಪಗಳೇ, ಇಸ್ರೇಲರ ದ್ರೋಹಗಳೇ! ಯಾಕೋಬು ಪಾಪಮಾಡಿದ್ದಕ್ಕೆ ಕಾರಣವೇನು? ಸಮಾರ್ಯವೇ ಕಾರಣ. ಯೆಹೂದದ ಎತ್ತರವಾದ ಸ್ಥಳ ಯಾವುದು? ಅದೇ ಜೆರುಸಲೇಮ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು