Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 2:22 - ಪರಿಶುದ್ದ ಬೈಬಲ್‌

22 ನೀನು ಚೌಳನಿಂದ ತೊಳೆದುಕೊಂಡರೂ ಹೆಚ್ಚು ಸೋಪನ್ನು ಉಪಯೋಗಿಸಿದರೂ ನಾನು ನಿನ್ನ ದೋಷವನ್ನು ಕಂಡುಹಿಡಿಯಬಲ್ಲೆ” ಅನ್ನುತ್ತಾನೆ ಯೆಹೋವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ನೀನು ಬಹಳ ಸೌಳನ್ನು ಹಾಕಿಕೊಂಡು ಸಾಬೂನಿನಿಂದ ತೊಳೆದುಕೊಂಡರೂ ಶುದ್ಧವಾಗದೆ, ನಿನ್ನ ಅಧರ್ಮವು ನನ್ನ ಕಣ್ಣೆದುರಿಗೆ ಕೊಳಕಾಗಿ ನಿಂತಿದೆ” ಎಂದು ಕರ್ತನಾದ ಯೆಹೋವನು ನುಡಿಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ನೀನು ಎಷ್ಟೇ ಚೌಳಿನಿಂದ ತೊಳೆದುಕೊಂಡರೂ ಎಷ್ಟೇ ಸಬ್ಬುಸೀಗೆಯಿಂದ ಉಜ್ಜಿಕೊಂಡರೂ ನಿನ್ನ ಅಕ್ರಮ ನನ್ನೆದುರಿಗೆ ಕಣ್ಣುಕಿಚ್ಚಾಗಿ ನಿಂತಿದೆ. ಇದು ಸರ್ವೇಶ್ವರ ಸ್ವಾಮಿಯಾದ ನನ್ನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ನೀನು ಬಹಳ ಚೌಳನ್ನು ಹಾಕಿಕೊಂಡು ಸಬ್ಬಿನಿಂದ ತೊಳಕೊಂಡರೂ ನಿನ್ನ ಅಧರ್ಮವು ನನ್ನ ಕಣ್ಣೆದುರಿಗೆ ಕರೆಯಾಗಿ ನಿಂತಿದೆ ಎಂದು ಕರ್ತನಾದ ಯೆಹೋವನು ಅನ್ನುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ನೀನು ಸಾಬೂನಿನಿಂದ ತೊಳೆದುಕೊಂಡರೂ, ಬಹಳ ಸಾಬೂನು ಹಾಕಿಕೊಂಡರೂ ನಿನ್ನ ಅಕ್ರಮವು ನನ್ನ ಮುಂದೆ ಕಳಂಕವಾಗಿದೆ,” ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 2:22
12 ತಿಳಿವುಗಳ ಹೋಲಿಕೆ  

“ಯೆಹೂದದ ಜನರ ಅಪರಾಧ ಅಳಿಸಲಾಗದ ಸ್ಥಳದಲ್ಲಿ ಬರೆಯಲಾಗಿದೆ. ಆ ಅಪರಾಧಗಳು ಕಬ್ಬಿಣದ ಲೇಖನಿಯಿಂದ ಕಲ್ಲಿನ ಮೇಲೆ ಕೆತ್ತಲಾಗಿವೆ. ಅವರ ಪಾಪಗಳು ವಜ್ರದ ಮೊನೆಯುಳ್ಳ ಲೇಖನಿಯಿಂದ ಕಲ್ಲಿನ ಮೇಲೆ ಕೆತ್ತಲಾಗಿವೆ. ಅವರ ಹೃದಯವೇ ಆ ಕಲ್ಲು, ಆ ಪಾಪಗಳು ಅವರ ಯಜ್ಞವೇದಿಕೆಗಳ ಕೊಂಬುಗಳಲ್ಲಿ ಕೆತ್ತಿವೆ.


ನನ್ನ ಪಾಪಗಳನ್ನು ಚೀಲದಲ್ಲಿಟ್ಟು ಮುದ್ರಿಸಿ ದೂರಕ್ಕೆ ಎಸೆದುಬಿಡುವೆ.


“ಎಫ್ರಾಯೀಮ್ ತನ್ನ ಅಪರಾಧವನ್ನು ಮುಚ್ಚಿಟ್ಟುಕೊಳ್ಳಲು ಪ್ರಯತ್ನಿಸಿದನು. ತಾನು ಮಾಡಿದ ಪಾಪಗಳು ಯಾರಿಗೂ ತಿಳಿದಿಲ್ಲವೆಂದು ಅವನು ಭಾವಿಸಿದನು; ಆದರೆ ಅವನು ಶಿಕ್ಷಿಸಲ್ಪಡುವನು;


ಅವರು ಮಾಡುವ ಪಾಪಕೃತ್ಯಗಳು ನನಗೆ ಕಾಣಿಸುತ್ತಿವೆ. ಯೆಹೂದದ ಜನರು ತಾವು ಮಾಡುವದನ್ನು ನನ್ನಿಂದ ಮುಚ್ಚಿಡಲು ಸಾಧ್ಯವಿಲ್ಲ. ಅವರ ಪಾಪವು ನನಗೆ ಗೊತ್ತಾಗುವುದು.


ಯೆಹೋವನೇ, ನೀನು ಮನುಷ್ಯರನ್ನು ಅವರೆಲ್ಲರ ಪಾಪಗಳಿಗೆ ತಕ್ಕಂತೆ ದಂಡಿಸಿದರೆ ಒಬ್ಬನೂ ಜೀವಂತವಾಗಿ ಉಳಿಯಲಾರ.


ಯೆಹೋವನು “ಯಾಕೋಬನ ಮಹಿಮೆ” ಎಂಬ ತನ್ನ ಹೆಸರಿನ ಮೇಲೆ ಆಣೆಯಿಟ್ಟು ವಾಗ್ದಾನ ಮಾಡಿದ್ದಾನೆ. “ಆ ಜನರು ಮಾಡಿದ ಕೃತ್ಯಗಳನ್ನು ನಾನು ಎಂದಿಗೂ ಮರೆಯುವುದಿಲ್ಲ.


ನಮ್ಮ ಪಾಪಗಳೆಲ್ಲಾ ನಿನಗೆ ತಿಳಿದಿವೆ. ದೇವರೇ, ನಮ್ಮ ರಹಸ್ಯಪಾಪಗಳೆಲ್ಲಾ ನಿನ್ನ ಮುಂದೆ ಬಟ್ಟಬಯಲಾಗಿವೆ.


“ಯೆಹೋವನು ಹೀಗೆನ್ನುತ್ತಾನೆ: ‘ಆ ಶಿಕ್ಷೆಯನ್ನು ನಾನು ಜೋಪಾನವಾಗಿಟ್ಟಿದ್ದೇನೆ. ಅದನ್ನು ನಾನು ನನ್ನ ಉಗ್ರಾಣದಲ್ಲಿ ಸುರಕ್ಷಿತವಾಗಿರಿಸಿದ್ದೇನೆ.


ಜೆರುಸಲೇಮಿನ ಜನರೇ, ನಿಮ್ಮ ಹೃದಯದ ಕೆಟ್ಟತನವನ್ನು ತೊಳೆದುಕೊಳ್ಳಿರಿ. ರಕ್ಷಣೆಹೊಂದಲು ನಿಮ್ಮ ಹೃದಯಗಳನ್ನು ಪವಿತ್ರಗೊಳಿಸಿರಿ. ದುರಾಲೋಚನೆಗಳನ್ನು ಮುಂದುವರಿಸಬೇಡಿರಿ.


ದಾವೀದನು ಊರೀಯನಿಗೆ, “ಈ ದಿನ ಇಲ್ಲಿಯೇ ಇರು. ನಾಳೆ ನಿನ್ನನ್ನು ಯುದ್ಧಕ್ಕೆ ಕಳುಹಿಸುತ್ತೇನೆ” ಎಂದು ಹೇಳಿದನು. ಊರೀಯನು ಅಂದು ಜೆರುಸಲೇಮಿನಲ್ಲಿಯೇ ಉಳಿದುಕೊಂಡನು. ಅಂದರೆ ಮಾರನೆಯ ದಿನದ ಬೆಳಗಿನವರೆಗೆ ಅಲ್ಲೇ ಇದ್ದನು.


“‘ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ಕೊಲೆಗಾರರ ಪಟ್ಟಣವಾದ ಜೆರುಸಲೇಮಿಗೆ ಆಪತ್ತು ಬರುವುದು. ಕೊಲೆಗಾರರ ನಗರಕ್ಕೆ ಕೇಡಾಗುವದು. ಜೆರುಸಲೇಮು ಕಿಲುಬು ಹಿಡಿದ ಹಂಡೆಯಂತಿದೆ. ಆ ಕಿಲುಬಿನ ಕಲೆಯನ್ನು ತೆಗೆಯಲಾಗುವುದೇ ಇಲ್ಲ. ಆ ಹಂಡೆಯು ಅಶುದ್ಧವಾಗಿರುವುದರಿಂದ ಅದರೊಳಗಿರುವ ಮಾಂಸವನ್ನೆಲ್ಲಾ ಹೊರಗೆ ತೆಗೆದುಬಿಡು. ಆ ಮಾಂಸವನ್ನು ನೀನಾಗಲಿ ಯಾಜಕರಾಗಲಿ ತಿನ್ನಕೂಡದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು