Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 2:29 - ಪರಿಶುದ್ದ ಬೈಬಲ್‌

29 “ನೀವು ನನ್ನೊಂದಿಗೆ ಏಕೆ ಚರ್ಚೆಮಾಡುವಿರಿ, ನೀವೆಲ್ಲರೂ ನನ್ನ ವಿರುದ್ಧ ದಂಗೆ ಎದ್ದಿದ್ದೀರಿ” ಎನ್ನುತ್ತಾನೆ ಯೆಹೋವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಯೆಹೋವನು ಹೀಗೆನ್ನುತ್ತಾನೆ, “ನನ್ನೊಡನೆ ಏಕೆ ವ್ಯಾಜ್ಯವಾಡುತ್ತೀರಿ? ನೀವೆಲ್ಲರೂ ನನಗೆ ದ್ರೋಹಿಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ನಿಮ್ಮ ದೂರೇನು? ನೀವೆಲ್ಲರು ನನಗೆ ದ್ರೋಹಿಗಳಾದಿರಿ, ಏಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಯೆಹೋವನು ಹೀಗನ್ನುತ್ತಾನೆ - ಏಕೆ ನನ್ನೊಡನೆ ವ್ಯಾಜ್ಯವಾಡುತ್ತೀರಿ? ನೀವೆಲ್ಲರೂ ನನಗೆ ದ್ರೋಹಿಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 “ಏಕೆ ನನ್ನ ಸಂಗಡ ವಾದಿಸುತ್ತೀರಿ? ನೀವೆಲ್ಲರೂ ನನಗೆ ವಿರೋಧವಾಗಿ ದ್ರೋಹ ಮಾಡಿದ್ದೀರಿ,” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 2:29
8 ತಿಳಿವುಗಳ ಹೋಲಿಕೆ  

ಇಸ್ರೇಲಿನ ಜನರಲ್ಲಿ ಒಬ್ಬರೂ ಸಹ ನಿನ್ನ ಉಪದೇಶವನ್ನು ಪಾಲಿಸಲಿಲ್ಲ. ಅವರೆಲ್ಲರೂ ಅದರಿಂದ ದೂರಾದರು. ಅವರು ನಿನ್ನ ಆಜ್ಞೆಯನ್ನು ಪಾಲಿಸಲಿಲ್ಲ. ಮೋಶೆಯ ಧರ್ಮಶಾಸ್ತ್ರದಲ್ಲಿ ಶಾಪಗಳ ಮತ್ತು ವಾಗ್ದಾನಗಳ ಬಗ್ಗೆ ಹೇಳಲಾಗಿದೆ. (ಮೋಶೆಯು ದೇವರ ಸೇವಕನಾಗಿದ್ದನು) ಆ ಶಾಪಗಳು ಧರ್ಮಶಾಸ್ತ್ರವನ್ನು ಪಾಲಿಸದಿದ್ದವರಿಗೆ ಆಗುವ ಶಿಕ್ಷೆಯಾಗಿದೆ. ಆ ಎಲ್ಲಾ ಶಿಕ್ಷೆಗಳು ನಮಗೆ ಆಗಿವೆ. ನಾವು ಯೆಹೋವನಾದ ನಿನ್ನ ವಿರುದ್ಧ ಪಾಪ ಮಾಡಿದ್ದರಿಂದ ನಮಗೆ ಹೀಗಾಯಿತು.


“ಇಸ್ರೇಲಿನ ಎಲ್ಲಾ ಜನರಿಗೆ ಹೆಚ್ಚಾಗಿ ಹಣಬೇಕು. ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ಲಾಭಕ್ಕಾಗಿ ಆಸೆಪಡುತ್ತಾರೆ. ಪ್ರವಾದಿಗಳು ಮತ್ತು ಯಾಜಕರು ಸಹ ಮೋಸಗಾರರಾಗಿದ್ದಾರೆ.


ಯೆಹೋವನು ಹೀಗೆನ್ನುತ್ತಾನೆ: “ಜೆರುಸಲೇಮಿನ ಬೀದಿಗಳಲ್ಲಿ ಅತ್ತಿತ್ತ ತಿರುಗಾಡಿ ನೋಡಿರಿ; ಈ ವಿಷಯಗಳ ಬಗ್ಗೆ ವಿಚಾರ ಮಾಡಿರಿ. ನಗರದ ಸಾರ್ವಜನಿಕ ಸ್ಥಳಗಳಲ್ಲಿ ಹುಡುಕಿ ನೋಡಿರಿ. ಸತ್ಯಶೋಧಕನೂ ಪ್ರಾಮಾಣಿಕನೂ ಒಳ್ಳೆಯವನೂ ಆಗಿರುವ ಮನುಷ್ಯನು ಎಲ್ಲಿ ಸಿಕ್ಕುವನೋ ನೋಡಿ. ಕೇವಲ ಒಬ್ಬ ಒಳ್ಳೆಯವನಿದ್ದರೂ ನಾನು ಇಡೀ ಜೆರುಸಲೇಮನ್ನು ಕ್ಷಮಿಸುತ್ತೇನೆ.


ಧರ್ಮಶಾಸ್ತ್ರದ ಅಧೀನದಲ್ಲಿರುವ ಜನರ ವಿಷಯವಾಗಿಯೇ ಧರ್ಮಶಾಸ್ತ್ರವು ಈ ಸಂಗತಿಯನ್ನು ಹೇಳುತ್ತಿದೆ. ಆದ್ದರಿಂದ ಯೆಹೂದ್ಯರು ನೆವ ಹೇಳಲು ಸಾದ್ಯವಿಲ್ಲ. ಅಲ್ಲದೆ ಇಡೀ ಲೋಕವೇ ದೇವರ ನ್ಯಾಯತೀರ್ಪಿಗೆ ಒಳಗಾಗಿದೆ.


“ಯೆಹೂದವೇ, ತಲೆಯೆತ್ತಿ ಬೋಳುಗುಡ್ಡಗಳ ಕಡೆಗೆ ನೋಡು. ನೀನು ಕಾಮಕೇಳಿ ಆಡದ ಸ್ಥಳ ಯಾವುದಾದರೂ ಇದೆಯೇ? ಅರಬೀಯನಂತೆ ನೀನು ಮಾರ್ಗದ ಮಗ್ಗುಲಲ್ಲಿ ಪ್ರಿಯತಮರಿಗಾಗಿ ಎದುರುನೋಡುತ್ತಾ ಕುಳಿತಿರುವೆ. ನೀನು ಭೂಮಿಯನ್ನು ಅಪವಿತ್ರಗೊಳಿಸಿದೆ; ಹೇಗೆಂದರೆ, ನೀನು ಅನೇಕ ಕೆಟ್ಟಕೆಲಸಗಳನ್ನು ಮಾಡಿದೆ. ನನಗೆ ವಿಶ್ವಾಸದ್ರೋಹ ಮಾಡಿದೆ.


ಆದರೆ ನೀನು, ‘ನಾನು ತಪ್ಪು ಮಾಡಿಲ್ಲ. ದೇವರು ನನ್ನ ಮೇಲೆ ಕೋಪಗೊಂಡಿಲ್ಲ’ ಎಂದು ಹೇಳುತ್ತಿರುವೆ. ಆದ್ದರಿಂದ ನೀನು ಸುಳ್ಳು ಹೇಳಿದ ಅಪರಾಧಿಯೆಂದು ನಾನು ನಿನಗೆ ತೀರ್ಪುನೀಡುತ್ತೇನೆ. ಏಕೆಂದರೆ ‘ನಾನು ಯಾವ ತಪ್ಪೂ ಮಾಡಿಲ್ಲ’ ಎಂದು ನೀನು ಹೇಳಿಕೊಳ್ಳುತ್ತಿರುವೆ.


“ಯೆಹೂದವೇ, ‘ನಾನು ತಪ್ಪಿತಸ್ಥಳಲ್ಲವೆಂದೂ ನಾನು ಬಾಳನ ವಿಗ್ರಹಗಳನ್ನು ಪೂಜಿಸಲಿಲ್ಲವೆಂದೂ’ ನೀನು ನನಗೆ ಹೇಗೆ ಹೇಳುವೆ? ನೀನು ಕಣಿವೆಯಲ್ಲಿ ಮಾಡಿದ ಕಾರ್ಯಗಳ ಬಗ್ಗೆ ಯೋಚಿಸು. ನೀನು ಮಾಡಿದ ಕೆಲಸಗಳ ಬಗ್ಗೆ ಯೋಚಿಸು. ನೀನು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಓಡಿಹೋಗುವ ತೀವ್ರಗತಿಯ ಹೆಣ್ಣು ಒಂಟೆಯಂತೆ ಇರುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು