ಯೆರೆಮೀಯ 2:6 - ಪರಿಶುದ್ದ ಬೈಬಲ್6 ‘ಈಜಿಪ್ಟಿನಿಂದ ನಮ್ಮನ್ನು ಕರೆದುಕೊಂಡು ಬಂದ ಯೆಹೋವನು ಎಲ್ಲಿದ್ದಾನೆ? ಮರಳುಗಾಡಿನಿಂದ ನಮ್ಮನ್ನು ಕರೆದುಕೊಂಡು ಬಂದ ಯೆಹೋವನು ಎಲ್ಲಿದ್ದಾನೆ? ನಿರ್ಜನವಾದ ಬೆಟ್ಟಪ್ರದೇಶದಿಂದ ನಮ್ಮನ್ನು ತಂದ ಯೆಹೋವನು ಎಲ್ಲಿದ್ದಾನೆ? ಎಂದು ನಿಮ್ಮ ಪೂರ್ವಿಕರು ಸ್ಮರಿಸಲಿಲ್ಲ. ಯೆಹೋವನು ನಮ್ಮನ್ನು ಅಂಧಕಾರಮಯವಾದ ಮತ್ತು ಅಪಾಯಕಾರಿಯಾದ ಭೂಮಿಯಿಂದ ಕರೆದುತಂದನು. ಆ ಭೂಮಿಯ ಮಾರ್ಗವಾಗಿ ಯಾರೂ ಪ್ರಯಾಣ ಮಾಡುವುದಿಲ್ಲ. ಯಾರೂ ಆ ಭೂಮಿಯ ಮೇಲೆ ವಾಸ ಮಾಡುವದಿಲ್ಲ. ಈಗ ಆ ಯೆಹೋವನು ಎಲ್ಲಿದ್ದಾನೆ?’” ನಿಮ್ಮ ಪೂರ್ವಿಕರು ಆ ಪ್ರಶ್ನೆಗಳನ್ನು ಕೇಳಲೇ ಇಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ‘ನಮ್ಮನ್ನು ಐಗುಪ್ತ ದೇಶದೊಳಗಿಂದ ಬರಮಾಡಿ ಕಾಡಾಗಿಯೂ, ಹಳ್ಳಕೊಳ್ಳವಾಗಿಯೂ, ನಿರ್ಜಲವಾಗಿಯೂ, ಘೋರಾಂಧಕಾರವಾಗಿಯೂ, ಯಾರೂ ಹಾದುಹೋಗದೆಯೂ, ಯಾರೂ ವಾಸಿಸದೆಯೂ ಇರುವ ಅರಣ್ಯದಲ್ಲಿ ನಡೆಸಿದ ಯೆಹೋವನು ಎಲ್ಲಿ?’ ಎಂದು ಅವರು ಅಂದುಕೊಳ್ಳಲಿಲ್ಲವಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಅವರು - ‘ನಮ್ಮನ್ನು ಈಜಿಪ್ಟ್ ದೇಶದಿಂದ ಬರಮಾಡಿ, ಕಾಡುಮೇಡು, ಹಳ್ಳಕೊಳ್ಳ, ಕಗ್ಗತ್ತಲು, ನಿರ್ಜಲ, ನಿರ್ಜನ ಹಾಗೂ ಯಾರೂ ಹಾದುಹೋಗದ ಬೆಂಗಾಡಿನ ಮಾರ್ಗವಾಗಿ ನಡೆಸಿಬಂದ ಆ ಸರ್ವೇಶ್ವರ ಎಲ್ಲಿ?’ ಎಂದುಕೊಳ್ಳಲಿಲ್ಲವೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ನಮ್ಮನ್ನು ಐಗುಪ್ತದೇಶದೊಳಗಿಂದ ಬರಮಾಡಿ ಕಾಡಾಗಿಯೂ ಹಳ್ಳಕೊಳ್ಳವಾಗಿಯೂ ನಿರ್ಜಲವಾಗಿಯೂ ಘೋರಾಂಧಕಾರವಾಗಿಯೂ ಯಾರೂ ಹಾದುಹೋಗದೆಯೂ ಯಾರೂ ವಾಸಿಸದೆಯೂ ಇರುವ ಅರಣ್ಯದಲ್ಲಿ ನಡಿಸಿದ ಯೆಹೋವನು ಎಲ್ಲಿ ಎಂದು ಅವರು ಅಂದುಕೊಳ್ಳಲಿಲ್ಲವಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಅವರು, ‘ನಮ್ಮನ್ನು ಈಜಿಪ್ಟ್ ದೇಶದೊಳಗಿಂದ ಹೊರಗೆ ಬರಮಾಡಿ ನಮ್ಮನ್ನು ಮರುಭೂಮಿಯಲ್ಲಿ ಕಾಡು ಕುಳಿಗಳು ಉಳ್ಳ ದೇಶದಲ್ಲಿ, ಕ್ಷಾಮದ ಮತ್ತು ಮರಣದ ನೆರಳಾದಂಥ ದೇಶದಲ್ಲಿ, ಒಬ್ಬರೂ ಹಾದುಹೋಗದೆ ಯಾರೂ ವಾಸಮಾಡದೆ ಇರುವಲ್ಲಿ ನಡೆಸಿದ ಯೆಹೋವ ದೇವರು ಎಲ್ಲಿ?’ ಎಂದು ಪ್ರಶ್ನೆ ಮಾಡಲಿಲ್ಲ. ಅಧ್ಯಾಯವನ್ನು ನೋಡಿ |
ಆಗ ಗಿದ್ಯೋನನು, “ಸ್ವಾಮೀ, ಯೆಹೋವನು ನಮ್ಮ ಸಂಗಡವಿದ್ದರೆ ನಮಗೆ ಇಷ್ಟೊಂದು ಕಷ್ಟಗಳೇಕೆ ಬರುತ್ತವೆ? ನಮ್ಮ ಪೂರ್ವಿಕರಿಗಾಗಿ ಆತನು ಬಹಳಷ್ಟು ಅದ್ಭುತಕಾರ್ಯಗಳನ್ನು ಮಾಡಿದ್ದನೆಂದು ನಾವು ಕೇಳಿದ್ದೇವೆ. ಆತನು ಅವರನ್ನು ಈಜಿಪ್ಟಿನಿಂದ ಹೊರಗೆ ಕರೆತಂದನೆಂದು ನಮ್ಮ ಪೂರ್ವಿಕರು ನಮಗೆ ಹೇಳಿದರು. ಆದರೆ ಈಗ ಯೆಹೋವನು ನಮ್ಮನ್ನು ಕೈಬಿಟ್ಟಿದ್ದಾನೆ; ಮಿದ್ಯಾನ್ಯರು ನಮ್ಮನ್ನು ಸೋಲಿಸುವಂತೆ ಮಾಡಿದ್ದಾನೆ” ಎಂದು ಹೇಳಿದನು.
ನಿಮ್ಮ ದೇವರಾದ ಯೆಹೋವನು ಈ ನಲವತ್ತು ವರ್ಷಗಳ ಕಾಲ ನಿಮ್ಮನ್ನು ಅರಣ್ಯ ಪ್ರಯಾಣದಲ್ಲಿ ಮೊದಲು ನಡೆಸಿದ್ದನ್ನು ನೀವು ಯಾವಾಗಲೂ ಸ್ಮರಿಸಬೇಕು. ಯೆಹೋವನು ನಿಮ್ಮನ್ನು ಪರೀಕ್ಷಿಸುತ್ತಿದ್ದನು ಮತ್ತು ನಿಮ್ಮನ್ನು ದೀನರನ್ನಾಗಿ ಮಾಡಬೇಕೆಂದಿದ್ದನು. ನಿಮ್ಮ ಹೃದಯದ ಆಲೋಚನೆಗಳನ್ನು ಆತನು ತಿಳಿದುಕೊಳ್ಳಬೇಕೆಂದಿದ್ದನು; ನೀವು ಆತನ ಆಜ್ಞೆಗಳಿಗೆ ವಿಧೇಯರಾಗುವಿರೋ ಇಲ್ಲವೋ ಎಂಬುದನ್ನು ತಿಳಿದುಕೊಳ್ಳಬೇಕೆಂದಿದ್ದನು.