Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 20:18 - ಪರಿಶುದ್ದ ಬೈಬಲ್‌

18 ನಾನು ತಾಯಿಯ ಗರ್ಭದಿಂದ ಏಕೆ ಹೊರಬರಬೇಕಿತ್ತು? ನಾನು ಕಷ್ಟವನ್ನು ಮತ್ತು ದುಃಖವನ್ನು ಕಂಡಿರುವೆನಷ್ಟೇ. ನನ್ನ ಜೀವನವು ನಾಚಿಕೆಯಲ್ಲಿಯೇ ಕೊನೆಗೊಳ್ಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನಾನು ಶ್ರಮದುಃಖಗಳನ್ನು ನೋಡುವುದಕ್ಕೂ, ನನ್ನ ಆಯುಸ್ಸು ಅವಮಾನದಿಂದ ಕ್ಷಯಿಸುವುದಕ್ಕೂ ಗರ್ಭದಿಂದ ಏಕೆ ಹೊರಟು ಬಂದೆನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಗರ್ಭ ಬಿಟ್ಟು ನಾನೇಕೆ ಹೊರಬಂದೆ? ಕಷ್ಟದುಃಖಗಳನ್ನು ಅನುಭವಿಸುವುದಕ್ಕೊ? ಅವಮಾನದಲ್ಲೆ ಬಾಳಿನ ದಿನಗಳನ್ನೆಲ್ಲ ಕಳೆಯುವುದಕ್ಕೊ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನಾನು ಶ್ರಮದುಃಖಗಳನ್ನು ನೋಡುವದಕ್ಕೂ ನನ್ನ ಆಯುಸ್ಸು ಅವಮಾನದಿಂದ ಕ್ಷಯಿಸುವದಕ್ಕೂ ಗರ್ಭದಿಂದ ಏಕೆ ಹೊರಟುಬಂದೆನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ನಾನು ಕಷ್ಟವನ್ನೂ, ಚಿಂತೆಯನ್ನೂ ನೋಡುವುದಕ್ಕೂ, ನನ್ನ ದಿವಸಗಳು ನಾಚಿಕೆಯಲ್ಲಿ ಕಳೆದುಹೋಗುವುದಕ್ಕೂ ಗರ್ಭದಿಂದ ಹೊರಗೆ ಬಂದದ್ದು ಏಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 20:18
27 ತಿಳಿವುಗಳ ಹೋಲಿಕೆ  

“ಬಹು ವ್ಯಥೆಯಿಂದ ಸಂಕಟಪಡುತ್ತಿರುವವನು ಯಾಕೆ ಜೀವಿಸಬೇಕು? ಮನನೊಂದಿರುವವನಿಗೆ ಜೀವವನ್ನು ಕೊಡುವುದೇಕೆ?


ಯೆಹೋವನ ರೌದ್ರ ದಂಡದಿಂದ ಸಂಕಟವನ್ನು ಅನುಭವಿಸಿರುವವನು ನಾನೇ!


ಯೋಬನು ಹೇಳಿದನು: “ನಾವು ಮನುಷ್ಯರಷ್ಟೇ. ನಮ್ಮ ಅಲ್ಪಜೀವಿತವು ಕಷ್ಟಗಳಿಂದ ತುಂಬಿಕೊಂಡಿದೆ.


ನನ್ನ ನಾಚಿಕೆ ನಿನಗೆ ಗೊತ್ತಿದೆ. ಶತ್ರುಗಳು ನನಗೆ ಮಾಡಿದ ಅವಮಾನ ನಿನಗೆ ಗೊತ್ತಿದೆ. ಅವರು ಮಾಡಿದ್ದನ್ನೆಲ್ಲಾ ನೀನು ಕಣ್ಣಾರೆ ನೋಡಿರುವೆ.


ನಾವು ಪಾಳೆಯದ ಹೊರಗಡೆಯಲ್ಲಿರುವ ಆತನ ಬಳಿಗೆ ಹೋಗಬೇಕು. ಆತನಿಗಾದ ಅಪಮಾನವನ್ನು ನಾವೂ ಸ್ವೀಕರಿಸಿಕೊಳ್ಳಬೇಕು.


ನಾವು ಯಾವಗಲೂ ಯೇಸುವನ್ನು ಮಾದರಿಯಾಗಿ ಇಟ್ಟುಕೊಂಡಿರಬೇಕು. ನಮ್ಮ ನಂಬಿಕೆಯನ್ನು ಹುಟ್ಟಿಸುವವನೂ ಪೂರೈಸುವವನೂ ಆತನೇ. ಆತನು ತನ್ನ ಮುಂದೆ ಇಟ್ಟಿದ್ದ ಸಂತೋಷಕ್ಕೋಸ್ಕರ ಅವಮಾನವನ್ನು ಅಲಕ್ಷ್ಯಮಾಡಿ ಶಿಲುಬೆಯ ಮರಣವನ್ನು ಸಹಿಸಿಕೊಂಡನು. ಈಗ ಆತನು ದೇವರ ಸಿಂಹಾಸನದ ಬಲಭಾಗದಲ್ಲಿ ಕುಳಿತಿರುವನು.


ಕೆಲವರು ಇತರರಿಂದ ಅಪಹಾಸ್ಯಕ್ಕೆ ಗುರಿಯಾದರು, ಪೆಟ್ಟುಗಳನ್ನು ಅನುಭವಿಸಿದರು, ಸೆರೆವಾಸದಲ್ಲಿದ್ದರು.


ನೀವು ತಾಳ್ಮೆಯಿಂದಿರಬೇಕು, ನೀವು ದೇವರ ಚಿತ್ತಾನುಸಾರವಾಗಿ ಮಾಡಿದ ನಂತರ ಆತನ ವಾಗ್ದಾನದಂತೆ ನಿಮಗೆ ಪ್ರತಿಫಲವು ಸಿಕ್ಕೇ ಸಿಗುತ್ತದೆ.


ಸುವಾರ್ತೆಯನ್ನು ತಿಳಿಸಿದ್ದರಿಂದಲೇ ನಾನೀಗ ಸಂಕಟವನ್ನು ಅನುಭವಿಸುತ್ತಿದ್ದೇನೆ. ಆದರೆ ನಾನು ನಾಚಿಕೆಪಡುವುದಿಲ್ಲ. ನಾನು ನಂಬಿರುವಾತನನ್ನು ಬಲ್ಲೆನು. ಆತನು ನನ್ನ ವಶಕ್ಕೆ ಒಪ್ಪಿಸಿರುವುದನ್ನು ಆ ದಿನವು ಬರುವತನಕ ಸಂರಕ್ಷಿಸಲು ಆತನು ಸಮರ್ಥನೆಂಬುದನ್ನು ಖಚಿತವಾಗಿ ಬಲ್ಲೆನು.


ಅಪೊಸ್ತಲರು ಸಭೆಯಿಂದ ಹೊರಟುಹೋದರು. ಯೇಸುವಿನ ಹೆಸರಿಗಾಗಿ ಅಪಮಾನವನ್ನು ಅನುಭವಿಸುವ ಅರ್ಹತೆಯನ್ನು ಪಡೆದುಕೊಂಡೆವೆಂದು ಅವರು ಸಂತೋಷಪಟ್ಟರು.


ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ಅಳುವಿರಿ, ದುಃಖಪಡುವಿರಿ. ಆದರೆ ಲೋಕವು ಸಂತೋಷಪಡುವುದು. ನೀವು ದುಃಖಪಡುವಿರಿ, ಆದರೆ ನಿಮ್ಮ ದುಃಖವು ಆನಂದವಾಗುವುದು.


ರಸ್ತೆಯಲ್ಲಿ ಹಾದುಹೋಗುವ ಜನರೇ, ನೀವು ನನ್ನ ಬಗ್ಗೆ ಯೋಚಿಸುವುದಿಲ್ಲವೆಂದು ತೋರುತ್ತದೆ. ನನ್ನ ಕಡೆಗೆ ಗಮನ ಕೊಡಿ. ನನ್ನ ನೋವಿನಂಥ ನೋವು ಮತ್ತೊಂದು ಇದೆಯೇ? ನನಗೆ ಬಂದಂಥ ನೋವು ಇನ್ನಾವುದಾದರೂ ಇದೆಯೇ? ದಂಡನೆಯಾಗಿ ಯೆಹೋವನು ನನಗೆ ಕೊಟ್ಟ ನೋವಿನಂಥ ನೋವು ಮತ್ತೊಂದು ಇದೆಯೇ? ಆತನು ತನ್ನ ಮಹಾಕೋಪದ ದಿನದಂದು ನನ್ನನ್ನು ದಂಡಿಸಿರುವನು.


ದೇವರೇ, ನಾನು ದುಃಖಿತನಾಗಿದ್ದೇನೆ, ಭಯಭೀತನಾಗಿದ್ದೇನೆ.


ಒಳ್ಳೆಯತನವನ್ನು ಅರ್ಥಮಾಡಿಕೊಂಡ ನೀವು ನನ್ನ ಮಾತುಗಳನ್ನು ಕೇಳಿರಿ. ನನ್ನ ಬೋಧನೆಯನ್ನು ಅನುಸರಿಸುವ ನೀವು ನನ್ನ ಮಾತಿಗೆ ಕಿವಿಗೊಡಿರಿ. ದುಷ್ಟಜನರಿಗೆ ಭಯಪಡಬೇಡಿರಿ. ಅವರು ನಿಮಗೆ ಹೇಳುವ ಕೆಟ್ಟಮಾತುಗಳಿಗೆ ಭಯಪಡಬೇಡಿ.


ನಿಮ್ಮ ಅಂಗಾಲಿನಿಂದ ಹಿಡಿದು ನಡುನೆತ್ತಿಯವರೆಗೂ ನಿಮ್ಮ ದೇಹದಲ್ಲೆಲ್ಲಾ ಗಾಯಗಳೂ ಬಾಸುಂಡೆಗಳೂ ಹುಣ್ಣುಗಳೂ ತುಂಬಿಕೊಂಡಿವೆ. ಆದರೆ ಆ ಹುಣ್ಣುಗಳಿಗೆ ನೀವು ಸರಿಯಾಗಿ ಚಿಕಿತ್ಸೆ ಕೊಡಲಿಲ್ಲ; ಅವುಗಳನ್ನು ಒರೆಸಲಿಲ್ಲ, ಕಟ್ಟಲಿಲ್ಲ.


“ನಿನ್ನ ಕೋಪವು ಇಳಿಯುವ ತನಕ ನನ್ನನ್ನು ಪಾತಾಳದಲ್ಲಿ ಬಚ್ಚಿಟ್ಟಿದ್ದು, ನೀನು ಗೊತ್ತುಪಡಿಸಿದ ಸಮಯದಲ್ಲಿ ನನ್ನನ್ನು ಜ್ಞಾಪಿಸಿಕೊಂಡಿದ್ದರೆ ಎಷ್ಟೋ ಒಳ್ಳೆಯದಾಗುತ್ತಿತ್ತು.


ಆದರೆ ಮನುಷ್ಯರಿಂದ ಕೇಡುಗಳು ಉದ್ಭವಿಸುವುದೂ ಬೆಂಕಿಯಿಂದ ಕಿಡಿಗಳು ಮೇಲಕ್ಕೆ ಹಾರುವುದೂ ಸಹಜ.


ನನ್ನ ಜೀವಮಾನವು ಹೊಗೆಯಂತೆ ಕಣ್ಮರೆಯಾಗುತ್ತಿದೆ. ನನ್ನ ಎಲುಬುಗಳು ಬೆಂಕಿಯಂತೆ ಸುಟ್ಟುಹೋಗುತ್ತಿವೆ.


ನಾವು ತಂದುಕೊಂಡ ಅವಮಾನದಲ್ಲಿ ಬಿದ್ದಿರೋಣ. ನಮ್ಮ ನಾಚಿಕೆಯು ಕಂಬಳಿಯು ಹೊದಿಸಿದಂತೆ ನಮ್ಮನ್ನು ಮುಚ್ಚಿಬಿಡಲಿ. ನಾವು ನಮ್ಮ ದೇವರಾದ ಯೆಹೋವನ ವಿಷಯದಲ್ಲಿ ಪಾಪಮಾಡಿದ್ದೇವೆ. ನಾವು ಮತ್ತು ನಮ್ಮ ಪೂರ್ವಿಕರು ಪಾಪಮಾಡಿದ್ದೇವೆ. ನಮ್ಮ ಬಾಲ್ಯದಿಂದ ಇಂದಿನವರೆಗೆ ನಾವು ನಮ್ಮ ದೇವರಾದ ಯೆಹೋವನ ಆಜ್ಞೆಯನ್ನು ಪಾಲಿಸಲಿಲ್ಲ’” ಎಂದು ಮೊರೆಯಿಟ್ಟರು.


ನನ್ನ ತಾಯೀ, ನೀನು ಜನ್ಮಕೊಟ್ಟಿದ್ದಕ್ಕಾಗಿ ನನಗೆ ದುಃಖವಾಗುತ್ತದೆ. ಯೆರೆಮೀಯನಾದ ನಾನು ಇಡೀ ದೇಶದ ಜನರ ವಿರುದ್ಧವಾಗಿ ವಾದಿಸುತ್ತಾ ನಿಂದಿಸುತ್ತಾ ಇರುವೆ. ನಾನು ಯಾರಿಗೂ ಸಾಲವನ್ನು ಕೊಟ್ಟಿಲ್ಲ; ಸಾಲವನ್ನು ತೆಗೆದುಕೊಂಡಿಲ್ಲ. ಆದರೆ ಪ್ರತಿಯೊಬ್ಬರು ನನ್ನನ್ನು ಶಪಿಸುತ್ತಾರೆ.


ಜನರು ವಸ್ತುಗಳನ್ನು ಕದ್ದುಕೊಂಡು ಇತರರನ್ನು ಗಾಯಗೊಳಿಸುತ್ತಿದ್ದಾರೆ. ಜನರು ಜಗಳ ಮಾಡುತ್ತಾ ಕಾದಾಡುತ್ತಿದ್ದಾರೆ. ಇಂಥಾ ಭಯಂಕರ ಸಂಗತಿಗಳನ್ನು ನೋಡುವಂತೆ ಯಾಕೆ ಮಾಡುವೆ.


ನಂತರ ಎಲೀಯನು ಮರಳುಗಾಡಿನಲ್ಲಿ ದಿನವೆಲ್ಲ ನಡೆದನು. ಎಲೀಯನು ಒಂದು ಪೊದೆಯ ಕೆಳಗೆ ಕುಳಿತುಕೊಂಡನು. ಅವನು ಸಾಯಲು ಇಚ್ಛಿಸಿ, “ಯೆಹೋವನೇ, ನನಗೆ ಜೀವನ ಸಾಕಾಗಿದೆ! ಸಾಯಲು ನನಗೆ ಅವಕಾಶ ಮಾಡು. ನಾನು ನನ್ನ ಪೂರ್ವಿಕರಿಗಿಂತಲೂ ಉತ್ತಮನೇನಲ್ಲ” ಎಂದು ಹೇಳಿದನು.


ಹೀಗಿದ್ದರೂ ನನಗೇಕೆ ವ್ಯಥೆ ಉಂಟಾಗುತ್ತಿದೆ ಎಂಬುದು ನನಗೆ ಅರ್ಥವಾಗುತ್ತಿಲ್ಲ. ನನ್ನ ಗಾಯ ಏಕೆ ಗುಣವಾಗುತ್ತಿಲ್ಲ? ಏಕೆ ವಾಸಿಯಾಗುತ್ತಿಲ್ಲ ಎಂಬುದು ನನಗೆ ತಿಳಿಯದು. ಯೆಹೋವನೇ, ನಿನ್ನಲ್ಲಿ ಬದಲಾವಣೆಯಾಗಿದೆ ಎಂದು ನನಗೆ ಅನಿಸುತ್ತಿದೆ. ನೀನು ಪ್ರವಾಹ ನಿಂತುಹೋದ ನೀರಿನ ಬುಗ್ಗೆಯಂತಿರುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು