7 ಯೆಹೋವನೇ, ನೀನು ನನ್ನನ್ನು ಮರುಳುಗೊಳಿಸಿದೆ, ನಿಜವಾಗಿಯೂ ನಾನು ಮರುಳಾದೆನು, ನೀನು ನನಗಿಂತ ಬಲಿಷ್ಠನಾದುದರಿಂದ ಗೆದ್ದೆ. ನಾನೊಂದು ತಮಾಷೆಯಾಗಿದ್ದೇನೆ. ಹಗಲೆಲ್ಲ ಜನರು ನನ್ನನ್ನು ಕಂಡು ನಗುತ್ತಾರೆ. ನನ್ನನ್ನು ಗೇಲಿ ಮಾಡುತ್ತಾರೆ.
7 ಯೆಹೋವನೇ, ನೀನು ನನ್ನನ್ನು ಮರುಳುಗೊಳಿಸಿದಿ, ನಾನು ಮರುಳಾದೆನು; ನೀನು ನನಗಿಂತ ಬಲಿಷ್ಠನಾಗಿ ಗೆದ್ದುಕೊಂಡಿ; ನಾನು ಹಗಲೆಲ್ಲಾ ಗೇಲಿಗೆ ಗುರಿಯಾಗಿದ್ದೇನೆ, ಎಲ್ಲರೂ ನನ್ನನ್ನು ಅಣಕಿಸುತ್ತಾರೆ.
7 ಸರ್ವೇಶ್ವರಾ, ನೀವು ನನ್ನನ್ನು ಮರುಳಾಗಿಸಿದಿರಿ. ನಾನು ಮರುಳಾದೆ. ನೀವು ನನ್ನನ್ನು ಗೆದ್ದುಬಿಟ್ಟಿರಿ, ನೀವು ನನಗಿಂತ ಬಲಿಷ್ಠರಲ್ಲವೆ? ಎಲ್ಲರು ನನ್ನನ್ನು ಅಣಕಿಸುವವರೆ, ದಿನವೆಲ್ಲ ನಾನು ಅಪಹಾಸ್ಯಕ್ಕೆ ಬಲಿಯಾದೆ.
7 ಯೆಹೋವನೇ, ನೀನು ನನ್ನನ್ನು ಮರುಳುಗೊಳಿಸಿದಿ. ನಾನು ಮರುಳಾದೆನು; ನೀನು ನನಗಿಂತ ಬಲಿಷ್ಟನಾಗಿ ಗೆದ್ದುಕೊಂಡಿ; ನಾನು ಹಗಲೆಲ್ಲಾ ಗೇಲಿಗೆ ಗುರಿಯಾಗಿದ್ದೇನೆ, ಎಲ್ಲರೂ ನನ್ನನ್ನು ಅಣಕಿಸುತ್ತಾರೆ.
7 ಓ ಯೆಹೋವ ದೇವರೇ, ನೀವು ನನ್ನನ್ನು ಮರುಳಾಗಿಸಿದಿರಿ. ನಾನು ಮರುಳಾದೆನು. ನೀವು ನನಗಿಂತ ಬಲಿಷ್ಠನಾಗಿದ್ದು ಜಯಿಸಿದಿರಿ. ನಾನು ಪ್ರತಿದಿನ ಪರಿಹಾಸ್ಯಕ್ಕೆ ಗುರಿಯಾಗಿದ್ದೇನೆ. ಪ್ರತಿಯೊಬ್ಬನು ನನ್ನನ್ನು ಹಾಸ್ಯಮಾಡುತ್ತಾನೆ.
ಪ್ರವಾದಿಯು ಹೀಗೆ ಹೇಳುತ್ತಾನೆ, “ಇಸ್ರೇಲೇ, ಇದನ್ನು ಕಲಿತುಕೋ. ಶಿಕ್ಷೆಯ ಸಮಯವು ಬಂದದೆ. ನೀನು ಮಾಡಿದ ದುಷ್ಟತನಕ್ಕೆ ಪ್ರತಿಯಾಗಿ ದೊರಕಬೇಕಾದ ಸಂಬಳ (ಫಲ)ದ ಸಮಯವು ಬಂತು.” ಆದರೆ ಇಸ್ರೇಲ್ ಜನರು ಹೀಗೆ ಹೇಳುತ್ತಾರೆ: “ಪ್ರವಾದಿಯು ಮೂರ್ಖನಾಗಿದ್ದಾನೆ. ದೇವರಾತ್ಮನುಳ್ಳ ಈ ಮನುಷ್ಯನು ಹುಚ್ಚನಾಗಿದ್ದಾನೆ.” ಪ್ರವಾದಿಯು ಹೀಗೆ ಹೇಳಿದನು, “ನಿನ್ನ ಕೆಟ್ಟ ಪಾಪಗಳಿಗಾಗಿ ನೀನು ಶಿಕ್ಷಿಸಲ್ಪಡುವೆ. ನೀನು ಹಗೆ ಮಾಡಿದುದಕ್ಕೆ ನೀನು ಶಿಕ್ಷೆ ಅನುಭವಿಸುವೆ.”
ಆತ್ಮವು ನನ್ನನ್ನು ಅಲ್ಲಿಂದ ಎತ್ತಿಕೊಂಡು ಹೋಯಿತು. ನಾನು ಆಗ ದುಃಖಗೊಂಡು ನನ್ನ ಆತ್ಮದಲ್ಲಿ ತತ್ತರಗೊಂಡೆನು. ಆದರೆ ಯೆಹೋವನ ಶಕ್ತಿಯು ನನ್ನನ್ನು ಸಂಪೂರ್ಣವಾಗಿ ತನ್ನ ಅಧೀನಕ್ಕೆ ತೆಗೆದುಕೊಂಡಿತು.
ಒಮ್ಮೊಮ್ಮೆ ನನ್ನಷ್ಟಕ್ಕೆ ನಾನೇ ಹೇಳಿಕೊಳ್ಳುತ್ತೇನೆ, “ನಾನು ಯೆಹೋವನನ್ನೇ ಮರೆತುಬಿಡುತ್ತೇನೆ. ಆತನ ಹೆಸರಿನಲ್ಲಿ ಇನ್ನೇನೂ ಮಾತನಾಡುವುದಿಲ್ಲ” ಎಂದುಕೊಂಡರೆ ಆತನ ಸಂದೇಶವು ನನ್ನ ಅಂತರಾಳದಲ್ಲಿ ಉರಿಯುವ ಜ್ವಾಲೆಯಂತಾಗುತ್ತದೆ. ಅದು ಆಳಕ್ಕೆ ಇಳಿದು ನನ್ನ ಎಲುಬುಗಳನ್ನು ಸುಡುವಂತಾಗುತ್ತದೆ. ಯೆಹೋವನ ಸಂದೇಶವನ್ನು ನನ್ನ ಅಂತರಾಳದಲ್ಲಿ ಹಿಡಿದಿಟ್ಟುಕೊಳ್ಳಲು ಪ್ರಯತ್ನ ಮಾಡಿ ನಾನು ದಣಿಯುತ್ತೇನೆ. ಕೊನೆಗೆ ಅದನ್ನು ನನ್ನೊಳಗೆ ಇಟ್ಟುಕೊಳ್ಳಲು ಅಸಾಧ್ಯವಾಗುತ್ತದೆ.
ಯೇಸು ಸತ್ತವರೊಳಗಿಂದ ಜೀವಂತವಾಗಿ ಎದ್ದುಬಂದಿದ್ದಾನೆ ಎಂಬ ಸಂಗತಿಯನ್ನು ಕೇಳಿದ ಆ ಜನರಲ್ಲಿ ಕೆಲವರು ಅಪಹಾಸ್ಯಮಾಡಿದರು. ಇತರರು, “ಈ ವಿಷಯದ ಬಗ್ಗೆ ನೀನು ಇನ್ನೊಮ್ಮೆ ಹೇಳಬಹುದು, ಆಗ ಕೇಳುತ್ತೇವೆ” ಎಂದು ಹೇಳಿದರು.
ಎಪಿಕೊರಿಯಾ ಮತ್ತು ಸ್ತೋಯಿಕ ತತ್ವಶಾಸ್ತ್ರಜ್ಞರಲ್ಲಿ ಕೆಲವರು ಅವನೊಂದಿಗೆ ವಾದಿಸಿದರು. ಅವರಲ್ಲಿ ಕೆಲವರು, “ಈ ಮನುಷ್ಯನಿಗೆ ತಾನು ಯಾವುದರ ಬಗ್ಗೆ ಮಾತಾಡುತ್ತಿದ್ದೇನೆ ಎಂಬುದೇ ನಿಜವಾಗಿಯೂ ತಿಳಿದಿಲ್ಲ. ಅವನು ಏನು ಹೇಳಲು ಪ್ರಯತ್ನಿಸುತ್ತಿದ್ದಾನೆ?” ಎಂದರು. ಯೇಸುವು ಸತ್ತವರೊಳಗಿಂದ ಜೀವಂತನಾಗಿ ಎದ್ದುಬಂದಿದ್ದಾನೆ ಎಂಬ ಸುವಾರ್ತೆಯನ್ನು ಪೌಲನು ಅವರಿಗೆ ಹೇಳುತ್ತಿದ್ದನು. ಆದ್ದರಿಂದ ಅವರು, “ಕೆಲವು ಬೇರೆ ದೇವರುಗಳ ಬಗ್ಗೆ ಅವನು ನಮಗೆ ಹೇಳುತ್ತಿರುವಂತೆ ತೋರುತ್ತಿದೆ” ಎಂದರು.
ಆಗ ಹೆರೋದನು ಮತ್ತು ಅವನ ಸೈನಿಕರು ಯೇಸುವನ್ನು ನೋಡಿ ಗೇಲಿಮಾಡಿದರು. ಅವರು ಯೇಸುವಿಗೆ ರಾಜನ ಬಟ್ಟೆ ಉಡಿಸಿ ಹಾಸ್ಯ ಮಾಡಿದರು. ಬಳಿಕ ಹೆರೋದನು ಯೇಸುವನ್ನು ಪಿಲಾತನ ಬಳಿಗೆ ತಿರುಗಿ ಕಳುಹಿಸಿಕೊಟ್ಟನು.
ಶೆಮಾಯನೇ, ನೀನು ಚೆಫನ್ಯನಿಗೆ ಬರೆದ ಪತ್ರದಲ್ಲಿ ಹೀಗೆ ಹೇಳಿರುವೆ: ‘ಚೆಫನ್ಯನೇ, ಯೆಹೋವನು ನಿನ್ನನ್ನು ಯೆಹೋಯಾದನ ಸ್ಥಾನದಲ್ಲಿ ಯಾಜಕನನ್ನಾಗಿ ನೇಮಿಸಿದ್ದಾನೆ. ನೀನು ಯೆಹೋವನ ಆಲಯದ ಮೇಲ್ವಿಚಾರಕನಾಗಿರುವೆ. ಹುಚ್ಚನಂತೆ ವರ್ತಿಸುವ ಮತ್ತು ಪ್ರವಾದಿಯಂತೆ ನಟಿಸುವ ವ್ಯಕ್ತಿಯನ್ನು ನೀನು ಬಂಧಿಸಬೇಕು, ಅವನಿಗೆ ಕೋಳಹಾಕಿ ಕೊರಳಿಗೆ ಕಬ್ಬಿಣದ ಕಂಠಪಟ್ಟಿಯನ್ನು ಹಾಕಬೇಕು.
ಯೆಹೋವನೇ, ನಾನು ನಿನ್ನನ್ನು ಬಿಟ್ಟು ಓಡಿಹೋಗಲಿಲ್ಲ, ನಾನು ನಿನ್ನನ್ನು ಅನುಸರಿಸಿದೆನು. ನೀನು ಹೇಳಿದಂತೆ ನಾನು ಕುರುಬನಾದೆ. ಆ ಭಯಂಕರ ದಿನವು ಬರಲೆಂದು ನಾನು ಬಯಸಲಿಲ್ಲ. ಯೆಹೋವನೇ, ನಾನು ಹೇಳಿದ್ದೆಲ್ಲ ನಿನಗೆ ಗೊತ್ತಿದೆ. ಈಗ ನಡೆಯುತ್ತಿರುವುದನ್ನೆಲ್ಲಾ ನೀನು ನೋಡುತ್ತಿರುವೆ.
ಹೀಗಿದ್ದರೂ ನನಗೇಕೆ ವ್ಯಥೆ ಉಂಟಾಗುತ್ತಿದೆ ಎಂಬುದು ನನಗೆ ಅರ್ಥವಾಗುತ್ತಿಲ್ಲ. ನನ್ನ ಗಾಯ ಏಕೆ ಗುಣವಾಗುತ್ತಿಲ್ಲ? ಏಕೆ ವಾಸಿಯಾಗುತ್ತಿಲ್ಲ ಎಂಬುದು ನನಗೆ ತಿಳಿಯದು. ಯೆಹೋವನೇ, ನಿನ್ನಲ್ಲಿ ಬದಲಾವಣೆಯಾಗಿದೆ ಎಂದು ನನಗೆ ಅನಿಸುತ್ತಿದೆ. ನೀನು ಪ್ರವಾಹ ನಿಂತುಹೋದ ನೀರಿನ ಬುಗ್ಗೆಯಂತಿರುವೆ.
ನನ್ನ ತಾಯೀ, ನೀನು ಜನ್ಮಕೊಟ್ಟಿದ್ದಕ್ಕಾಗಿ ನನಗೆ ದುಃಖವಾಗುತ್ತದೆ. ಯೆರೆಮೀಯನಾದ ನಾನು ಇಡೀ ದೇಶದ ಜನರ ವಿರುದ್ಧವಾಗಿ ವಾದಿಸುತ್ತಾ ನಿಂದಿಸುತ್ತಾ ಇರುವೆ. ನಾನು ಯಾರಿಗೂ ಸಾಲವನ್ನು ಕೊಟ್ಟಿಲ್ಲ; ಸಾಲವನ್ನು ತೆಗೆದುಕೊಂಡಿಲ್ಲ. ಆದರೆ ಪ್ರತಿಯೊಬ್ಬರು ನನ್ನನ್ನು ಶಪಿಸುತ್ತಾರೆ.
ಎಲೀಷನು ಆ ನಗರದಿಂದ ಬೇತೇಲಿಗೆ ಹೋದನು. ಎಲೀಷನು ನಗರದಿಂದ ಬೆಟ್ಟದ ಮೇಲಕ್ಕೆ ಹೋಗುತ್ತಿದ್ದಾಗ, ಕೆಲವು ಬಾಲಕರು ನಗರದ ಕಡೆಯಿಂದ ಇಳಿಯುತ್ತಿದ್ದರು. ಅವರು ಎಲೀಷನನ್ನು ಹಾಸ್ಯಮಾಡಿ, “ಮೇಲಕ್ಕೆ ಹೋಗು, ಬೋಳುತಲೆಯವನೇ, ಮೇಲಕ್ಕೆ ಹೋಗು, ಬೋಳುತಲೆಯವನೇ” ಎಂದರು.
“ಈಗ ನನ್ನ ಸ್ನೇಹಿತರು ನನ್ನನ್ನು ನೋಡಿ ನಗುವರು. ಹೌದು, ನಾನು ದೇವರಿಗೆ ಪ್ರಾರ್ಥಿಸುವೆನು; ಆತನು ನನಗೆ ಉತ್ತರಿಸುವನು. ನಾನು ನೀತಿವಂತನಾಗಿದ್ದರೂ ನಿರ್ದೋಷಿಯಾಗಿದ್ದರೂ ಪರಿಹಾಸ್ಯಕ್ಕೆ ಗುರಿಯಾಗಿದ್ದೇನೆ.
ಆಗ ಚಿದ್ಕೀಯನು, “ನಾನು ಈಗಾಗಲೇ ಬಾಬಿಲೋನಿನ ಸೈನ್ಯದ ಕಡೆಗೆ ಸೇರಿದ ಯೆಹೂದ್ಯರಿಗೆ ಹೆದರುತ್ತೇನೆ. ಆ ಸೈನಿಕರು ನನ್ನನ್ನು ಯೆಹೂದದ ಆ ಜನರಿಗೆ ಒಪ್ಪಿಸಿಕೊಡಬಹುದು ಮತ್ತು ಅವರು ನನಗೆ ಕೇಡುಮಾಡಬಹುದು; ನನ್ನನ್ನು ಹಿಂಸಿಸಬಹುದು ಎಂದು ಭಯವಾಗುತ್ತದೆ” ಎಂದು ಯೆರೆಮೀಯನಿಗೆ ಹೇಳಿದನು.
ಯೋನನು ಯೆಹೋವನಿಗೆ ದೂರು ಹೇಳುತ್ತಾ, “ಇದು ಹೀಗಾಗುತ್ತದೆಯೆಂದು ನನಗೆ ಗೊತ್ತಿತ್ತು. ನಾನು ನನ್ನ ದೇಶದಲ್ಲಿದ್ದೆ. ಇಲ್ಲಿಗೆ ಬರಲು ನನಗೆ ಹೇಳಿದವನು ನೀನೇ. ಈ ದುಷ್ಟಪಟ್ಟಣದ ಜನರನ್ನು ನೀನು ಕ್ಷಮಿಸುತ್ತೀ ಎಂದು ನನಗೆ ಆಗಲೇ ಗೊತ್ತಿತ್ತು. ಆದ್ದರಿಂದ ನಾನು ತಾರ್ಷೀಷಿಗೆ ಓಡಿಹೋಗಲು ನಿರ್ಧರಿಸಿದೆನು. ನೀನು ದಯಾಪರನಾದ, ಕೃಪಾಪೂರ್ಣನಾದ, ಕೋಪಗೊಳ್ಳುವುದರಲ್ಲಿ ನಿಧಾನವಾದ ಮತ್ತು ಮಹಾಕನಿಕರವುಳ್ಳ ದೇವರೆಂದು ನನಗೆ ಗೊತ್ತಿತ್ತು. ಆ ಜನರು ಪಾಪ ಮಾಡುವದನ್ನು ನಿಲ್ಲಿಸಿದರೆ, ನೀನು ನಿನ್ನ ಯೋಜನೆಯಂತೆ ಅವರನ್ನು ನಾಶಮಾಡುವುದಿಲ್ಲ ಎಂದು ನನಗೆ ಗೊತ್ತಿತ್ತು.