Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 21:4 - ಪರಿಶುದ್ದ ಬೈಬಲ್‌

4 ಇಸ್ರೇಲಿನ ದೇವರಾದ ಯೆಹೋವನು ಹೀಗೆ ಹೇಳುತ್ತಾನೆ, ‘ನಿಮ್ಮ ಕೈಯಲ್ಲಿ ಯುದ್ಧದ ಆಯುಧಗಳಿವೆ. ಆ ಆಯುಧಗಳನ್ನು ನೀವು ನಿಮ್ಮ ರಕ್ಷಣೆಗಾಗಿಯೂ ಬಾಬಿಲೋನಿನ ರಾಜನ ವಿರುದ್ಧವಾಗಿಯೂ ಮತ್ತು ಬಾಬಿಲೋನಿನ ಜನರ ವಿರುದ್ಧವಾಗಿಯೂ ಬಳಸುತ್ತಿದ್ದೀರಿ. ಆದರೆ ನಾನು ಆ ಆಯುಧಗಳನ್ನು ವಿಫಲಗೊಳಿಸುತ್ತೇನೆ. “‘ಬಾಬಿಲೋನಿನ ಸೈನ್ಯವು ನಗರದ ಸುತ್ತಲಿನ ಪೌಳಿಗೋಡೆಯ ಬಳಿಯಿದೆ. ತಕ್ಷಣವೇ ನಾನು ಆ ಸೈನ್ಯವನ್ನು ಜೆರುಸಲೇಮಿನ ಒಳಗಡೆ ತರುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಇಸ್ರಾಯೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ, “ಇಗೋ, ನಿಮ್ಮನ್ನು ಮುತ್ತುವ ಕಸ್ದೀಯರಿಗೂ ಬಾಬೆಲಿನ ಅರಸನಿಗೂ ವಿರುದ್ಧವಾಗಿ ಪೌಳಿಗೋಡೆಯ ಹೊರಗೆ ಯುದ್ಧಮಾಡುವುದಕ್ಕೆ ನೀವು ಹಿಡಿದಿರುವ ಆಯುಧಗಳನ್ನು ನಾನು ಹಿಂದಕ್ಕೆ ತಳ್ಳಿ, ಈ ಪಟ್ಟಣದೊಳಗೆ ಕೂಡಿಹಾಕುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಇಸ್ರಯೇಲರ ದೇವರಾದ ಸರ್ವೇಶ್ವರ ಇಂತೆನ್ನುತ್ತಾರೆ: ‘ಇಗೋ ನಿಮ್ಮ ಪೌಳಿಗೋಡೆಗೆ ಮುತ್ತಿಗೆ ಹಾಕಿರುವ ಬಾಬಿಲೋನಿನ ಅರಸನಿಗೂ ಅವನ ಸೈನಿಕರಿಗೂ ವಿರುದ್ಧವಾಗಿ ನೀವು ಹಿಡಿದಿರುವ ಆಯುಧಗಳನ್ನು ನಿಮ್ಮ ವಿರುದ್ಧವಾಗಿಯೇ ತಿರುಗಿಸಿಬಿಡುವೆನು. ಅವುಗಳನ್ನೆಲ್ಲ ಈ ನಗರದ ನಡುವೆ ಗುಡ್ಡೆಹಾಕಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಇಸ್ರಾಯೇಲ್ಯರ ದೇವರಾದ ಯೆಹೋವನು ಇಂತೆನ್ನುತ್ತಾನೆ - ಇಗೋ, ನಿಮ್ಮನ್ನು ಮುತ್ತುವ ಕಸ್ದೀಯರಿಗೂ ಬಾಬೆಲಿನ ಅರಸನಿಗೂ ವಿರುದ್ಧವಾಗಿ ಪೌಳಿಗೋಡೆಯ ಹೊರಗೆ ಯುದ್ಧಮಾಡುವದಕ್ಕೆ ನೀವು ಹಿಡಿದಿರುವ ಆಯುಧಗಳನ್ನು ನಾನು ಹಿಂದಕ್ಕೆ ತಳ್ಳಿ ಈ ಪಟ್ಟಣದೊಳಗೆ ಕೂಡಿಹಾಕುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ‘ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ, ಇಗೋ, ಗೋಡೆಯ ಹೊರಗೆ ನಿಮಗೆ ಮುತ್ತಿಗೆ ಹಾಕುವ ಬಾಬಿಲೋನಿನ ಅರಸನಿಗೂ, ಕಸ್ದೀಯರಿಗೂ ವಿರೋಧವಾಗಿ ನೀವು ಯುದ್ಧಮಾಡುವುದಕ್ಕೆ ನಿಮ್ಮ ಕೈಗಳಲ್ಲಿರುವ ಯುದ್ಧದ ಆಯುಧಗಳನ್ನೂ, ನಾನು ಹಿಂದಕ್ಕೆ ತಳ್ಳಿ, ಅವರನ್ನು ಈ ಪಟ್ಟಣದ ಮಧ್ಯದಲ್ಲಿ ಕೂಡಿಬರುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 21:4
23 ತಿಳಿವುಗಳ ಹೋಲಿಕೆ  

“‘ಜೆರುಸಲೇಮಿನ ಜನರು ಅನೇಕ ದುಷ್ಕೃತ್ಯಗಳನ್ನು ಮಾಡಿದ್ದಾರೆ. ನಾನು ಅವರ ಮೇಲೆ ಕೋಪಗೊಂಡಿದ್ದೇನೆ; ಅವರಿಗೆ ವಿರುದ್ಧವಾಗಿದ್ದೇನೆ. ನಾನು ಅಲ್ಲಿ ಬಹಳ ಜನರನ್ನು ಕೊಂದುಹಾಕುವೆನು. ಬಾಬಿಲೋನಿನ ಸೈನ್ಯವು ಜೆರುಸಲೇಮಿನ ವಿರುದ್ಧ ಹೋರಾಡಲು ಬರುವುದು. ಜೆರುಸಲೇಮಿನ ಮನೆಗಳಲ್ಲಿ ಅನೇಕಾನೇಕ ಮೃತದೇಹಗಳು ಕಣ್ಣಿಗೆ ಬೀಳುವವು.


ಬಾಬಿಲೋನಿನ ರಾಜನು ಚಿದ್ಕೀಯನನ್ನು ಬಾಬಿಲೋನಿಗೆ ತೆಗೆದುಕೊಂಡು ಹೋಗುವನು. ನಾನು ಅವನನ್ನು ದಂಡಿಸುವವರೆಗೆ ಚಿದ್ಕೀಯನು ಅಲ್ಲಿರುವನು. ನೀವು ಕಸ್ದೀಯರೊಡನೆ ಯುದ್ಧ ಮಾಡಿದರೂ ನಿಮಗೆ ಜಯವಾಗದು.’” ಇದು ಯೆಹೋವನ ನುಡಿ.


“ಪರ್ವತಗಳಲ್ಲಿ ಒಂದು ದೊಡ್ಡ ಶಬ್ದ ಕೇಳಿಸುತ್ತದೆ. ಆ ಶಬ್ದಕ್ಕೆ ಕಿವಿಗೊಡಿರಿ. ದೊಡ್ಡ ಜನಸಮೂಹದ ಶಬ್ದದಂತೆ ಕೇಳಿಸುತ್ತದೆ. ಅನೇಕ ರಾಜ್ಯಗಳ ಜನರು ಒಟ್ಟಾಗಿ ಸೇರುತ್ತಿದ್ದಾರೆ. ಸರ್ವಶಕ್ತನಾದ ಯೆಹೋವನು ತನ್ನ ಸೈನ್ಯವನ್ನು ಒಟ್ಟುಗೂಡಿಸುತ್ತಿದ್ದಾನೆ.


“ನಾನೀಗ ನನ್ನ ದ್ರಾಕ್ಷಿತೋಟಕ್ಕೆ ಏನು ಮಾಡುವೆನೆಂದು ತಿಳಿಸುವೆನು: ಅದರ ಸುತ್ತಲೂ ರಕ್ಷಣೆಗಾಗಿ ಹಾಕಿದ್ದ ಮುಳ್ಳಿನ ಬೇಲಿಯನ್ನು ಕಿತ್ತು ಸುಟ್ಟುಬಿಡುವೆನು. ಅದರ ಕಲ್ಲಿನ ಗೋಡೆಯನ್ನು ಕೆಡವಿ ತುಳಿದಾಟಕ್ಕೆ ಈಡುಮಾಡುವೆನು.


ಜೆರುಸಲೇಮಿಗೆ ವಿರುದ್ಧವಾಗಿ ಯುದ್ಧಮಾಡಲು ನಾನು ಎಲ್ಲಾ ಜನಾಂಗಗಳನ್ನು ಒಟ್ಟಿಗೆ ಸೇರಿಸುವೆನು. ಅವರು ಪಟ್ಟಣವನ್ನು ವಶಪಡಿಸಿಕೊಂಡು ಕಟ್ಟಡಗಳನ್ನೆಲ್ಲಾ ಧ್ವಂಸಮಾಡುವರು. ಹೆಂಗಸರನ್ನು ಬಲಾತ್ಕಾರದಿಂದ ಸಂಭೋಗಿಸುವರು. ಜನಸಂಖ್ಯೆಯ ಅರ್ಧದಷ್ಟು ಜನರು ಸೆರೆಹಿಡಿಯಲ್ಪಡುವರು. ಉಳಿದವರನ್ನು ಪಟ್ಟಣದಿಂದ ಕೊಂಡೊಯ್ಯುವುದಿಲ್ಲ.


ಯೆಹೋವನು ತನ್ನ ಯಜ್ಞವೇದಿಕೆಯನ್ನು ತಿರಸ್ಕರಿಸಿದ್ದಾನೆ. ಆತನು ತನ್ನ ಪವಿತ್ರಾಲಯವನ್ನು ತಿರಸ್ಕರಿಸಿದ್ದಾನೆ. ಆತನು ಜೆರುಸಲೇಮಿನ ಅರಮನೆಗಳ ಗೋಡೆಗಳನ್ನು ಶತ್ರುಗಳ ವಶಮಾಡಿದ್ದಾನೆ. ವೈರಿಗಳು ಯೆಹೋವನ ಪವಿತ್ರ ಆಲಯದಲ್ಲಿ ಗದ್ದಲವನ್ನು ಮಾಡಿದರು. ಅವರು ಉತ್ಸವದ ದಿನದಂತೆ ಗದ್ದಲವನ್ನು ಮಾಡಿದರು.


ಆತನು ಒಬ್ಬ ಶತ್ರುವಿನಂತಾಗಿದ್ದಾನೆ. ಆತನು ಇಸ್ರೇಲನ್ನು ನಾಶಮಾಡಿದನು. ಆತನು ಅವಳ ಎಲ್ಲ ಅರಮನೆಗಳನ್ನು ನುಂಗಿಬಿಟ್ಟನು. ಆತನು ಅವಳ ಎಲ್ಲ ಕೋಟೆಗಳನ್ನು ನುಂಗಿಬಿಟ್ಟನು. ಯೆಹೂದ ಜನಾಂಗದಲ್ಲಿ ಆತನು ಹೆಚ್ಚಿನ ದುಃಖವನ್ನು ಉಂಟುಮಾಡಿ ಶೋಕವನ್ನು ಹರಡಿದ್ದಾನೆ.


ಆಗ ಬಾಬಿಲೋನಿನ ಎಲ್ಲಾ ರಾಜ್ಯಾಧಿಕಾರಿಗಳು ಜೆರುಸಲೇಮ್ ನಗರವನ್ನು ಪ್ರವೇಶಿಸಿದರು. ಅವರು ಒಳಗೆ ಬಂದು ಮಧ್ಯ ದ್ವಾರದಲ್ಲಿ ಕುಳಿತುಕೊಂಡರು. ಅವರು ಯಾರೆಂದರೆ: ಸಮ್ಗರ್ ನೆಬೋದದ ಅಧಿಪತಿಯಾದ ನೇರ್ಗಲ್ ಸರೆಚರ್; ಇನ್ನೊಬ್ಬ ದೊಡ್ಡ ಅಧಿಕಾರಿಯಾದ ಸೆರ್ಸೆಕೀಮ್ ಮತ್ತು ಬೇರೆಬೇರೆ ದೊಡ್ಡ ಅಧಿಕಾರಿಗಳು ಕೂಡ ಅಲ್ಲಿದ್ದರು.


ಆಗ ರಾಜನು ಬಹು ಕೋಪಗೊಂಡು ತನ್ನ ಸೈನ್ಯವನ್ನು ಕಳುಹಿಸಿ ಆ ಕೊಲೆಗಾರರನ್ನು ಕೊಲ್ಲಿಸಿದನು ಮತ್ತು ಅವರ ಪಟ್ಟಣವನ್ನು ಸುಟ್ಟುಹಾಕಿಸಿದನು.


ಒಂದುವೇಳೆ ಇಸ್ರೇಲರಿಗೆ ಮಕ್ಕಳು ಹುಟ್ಟಿದರೂ ಪ್ರಯೋಜನವಿಲ್ಲ. ಯಾಕೆಂದರೆ ಆ ಮಕ್ಕಳನ್ನು ಅವರಿಂದ ತೆಗೆದುಬಿಡುವೆನು. ನಾನು ಅವರನ್ನು ತೊರೆದುಬಿಡುವೆನು. ಆಗ ಅವರಿಗೆ ಸಂಕಟದ ಮೇಲೆ ಸಂಕಟವು ಪ್ರಾಪ್ತಿಯಾಗುವದು.”


ಬಾಬಿಲೋನಿನ ಸೈನಿಕರು ಪವಿತ್ರಾಲಯದಿಂದ ಪಾತ್ರೆಗಳು, ಸಲಿಕೆಗಳು, ಕತ್ತರಿಗಳು, ದೊಡ್ಡ ಬೋಗುಣಿಗಳು, ತಟ್ಟೆಗಳು ಮತ್ತು ಪವಿತ್ರಾಲಯದ ಸೇವೆಗಾಗಿ ಉಪಯೋಗಿಸಲಾಗುವ ಕಂಚಿನ ಸಾಮಾನುಗಳನ್ನು ಬಾಬಿಲೋನಿಗೆ ತೆಗೆದುಕೊಂಡು ಹೋದರು.


ನೀವು ಕೈದಿಗಳಂತೆ ತಲೆತಗ್ಗಿಸುವಿರಿ, ಸತ್ತಹೆಣಗಳಂತೆ ನೆಲದ ಮೇಲೆ ಬೀಳುವಿರಿ. ಆದರೆ ಅದರಿಂದ ನಿಮಗೆ ಪ್ರಯೋಜನವಾಗದು. ದೇವರು ನಿಮ್ಮ ಮೇಲೆ ಬಹಳವಾಗಿ ಕೋಪಗೊಂಡಿದ್ದಾನೆ. ನಿಮ್ಮನ್ನು ಇನ್ನೂ ಶಿಕ್ಷಿಸಲು ಸಿದ್ಧನಾಗಿದ್ದಾನೆ.


ಅದು ನಿನ್ನ ಹೆಸರು. ಏಕೆಂದರೆ ಯೆಹೋವನು ಹೇಳುತ್ತಾನೆ: ‘ನಾನು ತಕ್ಷಣ ನಿನ್ನನ್ನು ನಿನಗೆ ಭಯಂಕಾರಿಯನ್ನಾಗಿ ಮಾಡುವೆನು. ನಾನು ನಿನ್ನನ್ನು ನಿನ್ನ ಎಲ್ಲಾ ಸ್ನೇಹಿತರಿಗೆ ಭಯಂಕಾರಿಯನ್ನಾಗಿ ಮಾಡುವೆನು. ವೈರಿಗಳು ಖಡ್ಗಗಳಿಂದ ನಿನ್ನ ಸ್ನೇಹಿತರನ್ನು ಕೊಲ್ಲುವುದನ್ನು ನೀನು ನೋಡುವೆ. ಯೆಹೂದದ ಎಲ್ಲಾ ಜನರನ್ನು ನಾನು ಬಾಬಿಲೋನಿನ ರಾಜನಿಗೆ ಒಪ್ಪಿಸುವೆನು. ಅವನು ಯೆಹೂದ್ಯರನ್ನು ಬಾಬಿಲೋನಿಗೆ ತೆಗೆದುಕೊಂಡು ಹೋಗುವನು; ಅವನ ಸೈನಿಕರು ಯೆಹೂದ್ಯರನ್ನು ತಮ್ಮ ಕತ್ತಿಗಳಿಂದ ಕೊಂದುಹಾಕುವರು.


ಆಗ ಯೆರೆಮೀಯನು ಪಷ್ಹೂರ ಮತ್ತು ಚೆಫನ್ಯರಿಗೆ ಹೀಗೆ ಉತ್ತರಕೊಟ್ಟನು: “ರಾಜನಾದ ಚಿದ್ಕೀಯನಿಗೆ ಹೇಳಿರಿ.


ಯೆಹೂದದ ರಾಜನಾದ ಚಿದ್ಕೀಯನು ಯೆರೆಮೀಯನನ್ನು ಆ ಕಾರಾಗೃಹದಲ್ಲಿಟ್ಟಿದ್ದನು. ಯೆರೆಮೀಯನು ಪ್ರವಾದಿಸಿದ ವಿಷಯಗಳನ್ನು ಚಿದ್ಕೀಯನು ಮೆಚ್ಚಿಕೊಂಡಿರಲಿಲ್ಲ. ಯೆರೆಮೀಯನು ಹೇಳಿದ್ದೇನೆಂದರೆ: “ಯೆಹೋವನು ಹೀಗೆನ್ನುತ್ತಾನೆ: ‘ನಾನು ತಕ್ಷಣವೇ ಜೆರುಸಲೇಮ್ ನಗರವನ್ನು ಬಾಬಿಲೋನಿನ ರಾಜನಿಗೆ ಒಪ್ಪಿಸುತ್ತೇನೆ. ನೆಬೂಕದ್ನೆಚ್ಚರನು ಈ ನಗರವನ್ನು ಸ್ವಾಧೀನಪಡಿಸಿಕೊಳ್ಳುವನು.


“ಈಗ ವೈರಿಗಳು ನಗರವನ್ನು ಮುತ್ತಿದ್ದಾರೆ. ಜೆರುಸಲೇಮಿನ ಗೋಡೆಯನ್ನು ಹತ್ತಿ ಅದನ್ನು ಸ್ವಾಧೀನಪಡಿಸಿಕೊಳ್ಳುವದಕ್ಕಾಗಿ ಅವರು ಇಳಿಜಾರುಗೋಡೆಗಳನ್ನು ಕಟ್ಟುತ್ತಿದ್ದಾರೆ. ಬಾಬಿಲೋನಿನ ಸೈನಿಕರು ತಮ್ಮ ಖಡ್ಗ, ಕ್ಷಾಮ ಮತ್ತು ಭಯಂಕರವ್ಯಾಧಿ ಇವುಗಳ ಸಹಾಯದಿಂದ ಜೆರುಸಲೇಮ್ ನಗರವನ್ನು ಸ್ವಾಧೀನಪಡಿಸಿಕೊಳ್ಳುವರು. ಬಾಬಿಲೋನಿನ ಸೈನಿಕರು ಈಗ ನಗರದ ಮೇಲೆ ಧಾಳಿ ಮಾಡುತ್ತಿದ್ದಾರೆ. ಯೆಹೋವನೇ, ಹೀಗಾಗುವದೆಂದು ನೀನು ಹೇಳಿದ್ದೆ, ಈಗ ನೀನು ಹೇಳಿದಂತೆಯೇ ಆಗುತ್ತಿದೆ.


“ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆಂದನು: ‘ಯೆಹೂದ ಮತ್ತು ಜೆರುಸಲೇಮಿಗೆ ಅನೇಕ ಕೇಡುಗಳು ಸಂಭವಿಸುವವೆಂದು ನಾನು ಹೇಳಿರುವೆನು. ಆ ಎಲ್ಲಾ ಕೇಡುಗಳು ಬೇಗನೆ ಸಂಭವಿಸುವಂತೆ ನಾನು ಮಾಡುವೆನು. ನಾನು ಆ ಜನರೊಂದಿಗೆ ಮಾತನಾಡಿದೆ, ಆದರೆ ಅವರು ಕಿವಿಗೆ ಹಾಕಿಕೊಳ್ಳಲಿಲ್ಲ. ನಾನು ಅವರನ್ನು ಕೂಗಿದೆ, ಆದರೆ ಅವರು ನನಗೆ ಓಗೊಡಲಿಲ್ಲ.’”


ನನ್ನ ಕೋಪದ ಭರದಲ್ಲಿ ಯೆಹೋವನು ಇಸ್ರೇಲಿನ ಶಕ್ತಿಯನ್ನೆಲ್ಲ ಕತ್ತರಿಸಿಹಾಕಿದನು. ಆತನು ಇಸ್ರೇಲಿನಿಂದ ತನ್ನ ಬಲಗೈಯನ್ನು ಹಿಂತೆಗೆದುಕೊಂಡನು. ಶತ್ರು ಬಂದಾಗ ಆತನು ಹೀಗೆ ಮಾಡಿದನು. ಅಗ್ನಿಜ್ವಾಲೆಗಳಂತೆ ಆತನು ಯಾಕೋಬಿನಲ್ಲಿ ಉರಿದನು. ಸುತ್ತಮುತ್ತಲೆಲ್ಲ (ಪ್ರತಿಯೊಂದನ್ನೂ) ದಹಿಸುವ ಬೆಂಕಿಯಂತೆ ಆತನಿದ್ದನು.


ಆದರೆ ನಾನು ನಿನ್ನ ಎಡಗೈಯಲ್ಲಿರುವ ಬಿಲ್ಲಿಗೆ ಹೊಡೆಯುವೆನು, ಆಗ ನಿನ್ನ ಬಲಗೈಯಲ್ಲಿರುವ ಬಾಣವು ಬಿದ್ದುಹೋಗುವುದು!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು