Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 21:6 - ಪರಿಶುದ್ದ ಬೈಬಲ್‌

6 ಜೆರುಸಲೇಮಿನಲ್ಲಿ ವಾಸಮಾಡುತ್ತಿರುವ ಜನರನ್ನು ನಾನು ಕೊಂದುಬಿಡುತ್ತೇನೆ. ನಾನು ಜನರನ್ನು ಮತ್ತು ಪ್ರಾಣಿಗಳನ್ನು ಕೊಲ್ಲುತ್ತೇನೆ. ಅವರುಗಳು ನಗರದಲ್ಲೆಲ್ಲಾ ಹರಡಿದ ಭಯಂಕರವಾದ ರೋಗದಿಂದ ಮಡಿಯುವರು.’” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಈ ಪಟ್ಟಣದಲ್ಲಿ ವಾಸಿಸುವ ಮನುಷ್ಯರನ್ನೂ ಮತ್ತು ಪಶುಗಳನ್ನೂ ಬಾಧಿಸುವೆನು, ಘೋರವ್ಯಾಧಿಯು ಅವರನ್ನು ಸಾಯಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಈ ನಗರದಲ್ಲಿ ವಾಸಮಾಡುವ ಜನರನ್ನೂ ಜಾನುವಾರುಗಳನ್ನೂ ಹಿಂಸೆಗೆ ಗುರಿಪಡಿಸುವೆನು; ಘೋರ ಜಾಡ್ಯಕ್ಕೆ ತುತ್ತಾಗಿಸಿ ಸಾಯುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಈ ಪಟ್ಟಣದಲ್ಲಿ ವಾಸಿಸುವ ಮನುಷ್ಯರನ್ನೂ ಪಶುಗಳನ್ನೂ ಬಾಧಿಸುವೆನು; ಘೋರವ್ಯಾಧಿಯು ಸಾಯಿಸುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಈ ಪಟ್ಟಣದ ನಿವಾಸಿಗಳನ್ನೂ, ಮನುಷ್ಯರನ್ನೂ, ಮೃಗಗಳನ್ನೂ ಸಹಿತವಾಗಿ ಹೊಡೆಯುವೆನು. ಅವರು ದೊಡ್ಡ ವ್ಯಾಧಿಯಿಂದ ಸಾಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 21:6
26 ತಿಳಿವುಗಳ ಹೋಲಿಕೆ  

ಲೋಕದೊಳಗಿರುವ ಎಲ್ಲಾ ಮನುಷ್ಯರನ್ನೂ ಪ್ರಾಣಿಗಳನ್ನೂ ಆಕಾಶದಲ್ಲಿರುವ ಎಲ್ಲಾ ಪಕ್ಷಿಗಳನ್ನೂ ನೀರಿನಲ್ಲಿರುವ ಎಲ್ಲಾ ಮೀನುಗಳನ್ನೂ ನಾನು ನಾಶಮಾಡುವೆನು. ಎಲ್ಲಾ ದುಷ್ಟ ಜನರನ್ನೂ ಮತ್ತು ಅವರನ್ನು ಪಾಪಕ್ಕೆ ನಡಿಸುವ ಎಲ್ಲಾ ವಸ್ತುಗಳನ್ನೂ ನಾನು ನಾಶಮಾಡುವೆನು. ಭೂಮಿಯ ಮೇಲಿರುವ ಎಲ್ಲಾ ಜನರನ್ನು ನಿರ್ಮೂಲ ಮಾಡುವೆನು.” ಈ ವಿಷಯಗಳನ್ನು ಯೆಹೋವನು ತಿಳಿಸಿದನು.


ಹೀಗೆ ದೇಶವು ಸತ್ತವರಿಗಾಗಿ ಗೋಳಾಡುವ ಮನುಷ್ಯನಂತಿರುವದು. ಆದ್ದರಿಂದ ಅದರ ಜನರೆಲ್ಲಾ ಬಲಹೀನರಾಗತ್ತಾರೆ. ಅಡವಿಯಲ್ಲಿರುವ ಪ್ರಾಣಿಗಳೂ ಆಕಾಶದ ಪಕ್ಷಿಗಳೂ ಸಮುದ್ರದಲ್ಲಿರುವ ಮೀನುಗಳೂ ಸಾಯುತ್ತಿವೆ.


ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಭಯಂಕರವಾದ ನಾಲ್ಕು ದಂಡನೆಗಳನ್ನು ನಾನು ಜೆರುಸಲೇಮ್ ಪಟ್ಟಣದ ಮೇಲೆ ಕಳುಹಿಸುವೆನು. ಆದ್ದರಿಂದ ಜೆರುಸಲೇಮಿಗೆ ಇನ್ನೂ ಎಷ್ಟು ಹೆಚ್ಚಾಗಿ ಕಷ್ಟಕರವಾಗಬಹುದೆಂದು ಯೋಚಿಸಿರಿ. ನಾನು ಆ ನಗರದ ವಿರುದ್ಧವಾಗಿ ಶತ್ರು ಸೈನಿಕರನ್ನು, ಹಸಿವೆ, ರೋಗ ಮತ್ತು ಕ್ರೂರಜಂತುಗಳನ್ನು ಕಳುಹಿಸುತ್ತೇನೆ. ದೇಶದಲ್ಲಿರುವ ಎಲ್ಲಾ ಜನರನ್ನೂ ಪಶುಗಳನ್ನೂ ನಿರ್ಮೂಲ ಮಾಡುವೆನು.


ದೇವರು ಹೇಳಿದ್ದೇನೆಂದರೆ, “ಒಂದುವೇಳೆ, ನಾನು ದೇಶದ ಮೇಲೆ ರೋಗಗಳನ್ನು ಬರಮಾಡಿದರೆ, ಅಥವಾ ನನ್ನ ಕೋಪವನ್ನು ಸುರಿದು ಜನರನ್ನು ಕೊಂದುಹಾಕಿದರೆ ಮತ್ತು ಪ್ರಾಣಿಗಳನ್ನು ನಾಶಮಾಡಿದರೆ,


ದೇವರು ಹೇಳಿದ್ದೇನೆಂದರೆ, “ಒಂದುವೇಳೆ, ಅವರ ವಿರುದ್ಧ ಹೋರಾಡಲು ನಾನು ಶತ್ರುಸೈನ್ಯವೊಂದನ್ನು ಕಳುಹಿಸಿದರೆ, ಎಲ್ಲಾ ಜನರು ಮತ್ತು ಎಲ್ಲಾ ಪ್ರಾಣಿಗಳು ನಾಶವಾಗುತ್ತಿದ್ದವು.


“ನರಪುತ್ರನೇ, ನನಗೆ ಅಪನಂಬಿಗಸ್ತರಾಗಿದ್ದು ನನ್ನ ವಿರುದ್ಧ ಪಾಪಮಾಡುವ ಯಾವ ದೇಶವನ್ನಾದರೂ ನಾನು ದಂಡಿಸುತ್ತೇನೆ. ನಾನು ಅವರ ಆಹಾರ ಸರಬರಾಜನ್ನು ನಿಲ್ಲಿಸುತ್ತೇನೆ. ನಾನು ಕ್ಷಾಮವನ್ನು ಕಳುಹಿಸಿ ಅವರ ಜನರನ್ನೂ ಪ್ರಾಣಿಗಳನ್ನೂ ನಾಶಮಾಡುವೆ.


ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: “ಈ ಸ್ಥಳವು ಈಗ ಬರಿದಾಗಿದೆ. ಈಗ ಇಲ್ಲಿ ಜನರಾಗಲಿ ಪಶುಗಳಾಗಲಿ ವಾಸಿಸುವದಿಲ್ಲ. ಆದರೆ ಯೆಹೂದದ ಎಲ್ಲಾ ಊರುಗಳಲ್ಲಿ ಜನರು ವಾಸಿಸುವರು; ಕುರುಬರು ವಾಸಿಸುವರು. ಕುರಿಮಂದೆಗಳಿಗಾಗಿ ಹುಲ್ಲುಗಾವಲುಗಳಿರುವವು.


“ಈಗ ವೈರಿಗಳು ನಗರವನ್ನು ಮುತ್ತಿದ್ದಾರೆ. ಜೆರುಸಲೇಮಿನ ಗೋಡೆಯನ್ನು ಹತ್ತಿ ಅದನ್ನು ಸ್ವಾಧೀನಪಡಿಸಿಕೊಳ್ಳುವದಕ್ಕಾಗಿ ಅವರು ಇಳಿಜಾರುಗೋಡೆಗಳನ್ನು ಕಟ್ಟುತ್ತಿದ್ದಾರೆ. ಬಾಬಿಲೋನಿನ ಸೈನಿಕರು ತಮ್ಮ ಖಡ್ಗ, ಕ್ಷಾಮ ಮತ್ತು ಭಯಂಕರವ್ಯಾಧಿ ಇವುಗಳ ಸಹಾಯದಿಂದ ಜೆರುಸಲೇಮ್ ನಗರವನ್ನು ಸ್ವಾಧೀನಪಡಿಸಿಕೊಳ್ಳುವರು. ಬಾಬಿಲೋನಿನ ಸೈನಿಕರು ಈಗ ನಗರದ ಮೇಲೆ ಧಾಳಿ ಮಾಡುತ್ತಿದ್ದಾರೆ. ಯೆಹೋವನೇ, ಹೀಗಾಗುವದೆಂದು ನೀನು ಹೇಳಿದ್ದೆ, ಈಗ ನೀನು ಹೇಳಿದಂತೆಯೇ ಆಗುತ್ತಿದೆ.


ಆಗ ನಾನು, “ಒಡೆಯನೇ, ಎಷ್ಟರ ತನಕ ನಾನು ಹೀಗೆ ಮಾಡಬೇಕು?” ಎಂದು ವಿಚಾರಿಸಿದೆನು. ಅದಕ್ಕೆ ಯೆಹೋವನು, “ನಗರಗಳು ನಾಶವಾಗುವ ತನಕ ಹೀಗೆಯೇ ಮಾಡು. ಮನೆಗಳಲ್ಲಿ ಜನರು ಇಲ್ಲದೆ ಹೋಗುವವರೆಗೆ ಹೀಗೆಯೇ ಮಾಡು. ಇಡೀ ದೇಶವು ಹಾಳಾಗಿ ಬೆಂಗಾಡಾಗುವ ತನಕ ಹೀಗೆಯೇ ಮಾಡುತ್ತಿರು” ಎಂದು ಹೇಳಿದನು.


ಇವರಲ್ಲಿ ಕೆಲವರು ಸೈನಿಕರಿಂದ ಕೊಲ್ಲಲ್ಪಡುವರು. ಇನ್ನು ಕೆಲವರು ಬಂಧಿತರಾಗಿ ಪರದೇಶಕ್ಕೆ ಒಯ್ಯಲ್ಪಡುವರು. ಅನ್ಯದೇಶೀಯರು ತಮ್ಮ ಕಾಲ ಮುಗಿಯುವ ತನಕ ಪರಿಶುದ್ಧ ಪಟ್ಟಣವಾದ ಜೆರುಸಲೇಮಿನಲ್ಲಿ ನಡೆದಾಡುವರು.


ನಾಯಕರೇ, ನಿಮ್ಮಿಂದಾಗಿ ಚೀಯೋನ್ ನಾಶವಾಗುವದು. ನೇಗಿಲಿನಿಂದ ಉತ್ತಲ್ಪಟ್ಟ ಹೊಲದಂತೆ ಅದು ಇರುವದು. ಜೆರುಸಲೇಮ್ ಕಲ್ಲಿನ ರಾಶಿಯಾಗುವದು. ಆಲಯದ ಗುಡ್ಡವು ಬರಿದಾದ ಬೆಟ್ಟವಾಗುವುದು. ಅದರ ಮೇಲೆ ಪೊದೆಗಳು ಹುಲುಸಾಗಿ ಬೆಳೆದುಕೊಳ್ಳುವವು.


ಅವರು ಅನೇಕ ಭಯಂಕರ ಕೃತ್ಯಗಳನ್ನು ಮಾಡಿದ್ದಾರೆ. ಆದ್ದರಿಂದ ಅವರ ರಾಜ್ಯವನ್ನು ಬಂಜರು ಭೂಮಿಯನ್ನಾಗಿ ಮಾಡುವೆನು. ಆಗ ಈ ಜನರು ನಾನು ಯೆಹೋವನೆಂದು ತಿಳಿದುಕೊಳ್ಳುವರು.”


“‘ನೀನು ಅವರಿಗೆ ನಿಮ್ಮ ಒಡೆಯನಾದ ಯೆಹೋವನು ಹೀಗೆ ಹೇಳಿದನೆಂದು ತಿಳಿಸಬೇಕು, “ನನ್ನ ಜೀವದಾಣೆ, ಕೆಡವಲ್ಪಟ್ಟ ಪಟ್ಟಣಗಳಲ್ಲಿ ವಾಸಿಸುವ ಜನರು ಕೊಲ್ಲಲ್ಪಡುವರು. ಯಾರಾದರೂ ಪಟ್ಟಣದ ಹೊರಗೆ ಹೋಗಿದ್ದಲ್ಲಿ ಅವರನ್ನು ಕಾಡುಪ್ರಾಣಿಗಳು ತಿನ್ನುವಂತೆ ಮಾಡುವೆನು. ಯಾರಾದರೂ ಕೋಟೆಯೊಳಗಾಗಲಿ ಗುಹೆಯೊಳಗಾಗಲಿ ಸೇರಿಕೊಂಡರೆ ಅವರು ರೋಗದಿಂದ ಸಾಯುವರು.


“ಆದರೆ ನಾನು ಅವರಲ್ಲಿ ಕೆಲವರನ್ನು ಯುದ್ಧಗಳಿಂದ, ಬರಗಾಲಗಳಿಂದ ಮತ್ತು ರೋಗಗಳಿಂದ ಉಳಿಸುವೆನು. ಅವರು ತಾವು ಹೋಗುವ ದೇಶಗಳಲ್ಲಿನ ಜನರಿಗೆ ತಮ್ಮ ಅಸಹ್ಯವಾದ ಆಚರಣೆಗಳ ಕುರಿತು ಹೇಳಲಾಗುವಂತೆ ನಾನು ಇದನ್ನು ಮಾಡುತ್ತೇನೆ. ನಾನೇ ಯೆಹೋವನೆಂದು ಆಗ ಅವರು ತಿಳಿದುಕೊಳ್ಳುವರು.”


ಖಡ್ಗಧಾರಿಯಾದ ವೈರಿಯು ಪಟ್ಟಣದ ಹೊರಗಿದ್ದಾನೆ. ರೋಗ ಮತ್ತು ಹಸಿವೆ ಪಟ್ಟಣದೊಳಗಿವೆ. ಒಬ್ಬನು ಹೊರಗೆ ಹೊಲದ ಬಳಿ ಹೋದರೆ ವೈರಿಸೈನಿಕನು ಅವನನ್ನು ಕೊಲ್ಲುವನು. ಪಟ್ಟಣದೊಳಗೇ ಉಳಿದರೆ ರೋಗ ಮತ್ತು ಹಸಿವೆಯು ಅವನನ್ನು ಕೊಲ್ಲುವವು.


ಈಗ ನೀವು ಇದನ್ನು ನಿಶ್ಚಿತವಾಗಿ ತಿಳಿದುಕೊಳ್ಳಿ. ನೀವು ಈಜಿಪ್ಟಿನಲ್ಲಿ ವಾಸಮಾಡಲು ಹೋಗಬೇಕೆನ್ನುವಿರಿ. ಆದರೆ ಈಜಿಪ್ಟಿನಲ್ಲಿ ನೀವು ಖಡ್ಗದಿಂದಾದರೂ ಸಾಯುವಿರಿ, ಹಸಿವಿನಿಂದಾದರೂ ಸಾಯುವಿರಿ, ಅಥವಾ ಭಯಂಕರವಾದ ವ್ಯಾಧಿಯಿಂದಾದರೂ ಸಾಯುವಿರಿ.”


ಯೆರೆಮೀಯನೇ, ಯೆಹೂದದ ರಾಜನಾದ ಯೆಹೋಯಾಕೀಮನಿಗೆ ಹೀಗೆ ಹೇಳು, ‘ಯೆಹೋವನು ಹೀಗೆನ್ನುತ್ತಾನೆ: ಯೆಹೋಯಾಕೀಮನೇ, ನೀನು ಆ ಸುರುಳಿಯನ್ನು ಸುಟ್ಟುಬಿಟ್ಟೆ. ನೀನು, “ಬಾಬಿಲೋನ್ ರಾಜನು ಖಂಡಿತವಾಗಿ ಬಂದು ಈ ದೇಶವನ್ನು ನಾಶಮಾಡುವನು ಎಂದು ಯೆರೆಮೀಯನು ಏಕೆ ಬರೆದನು? ಬಾಬಿಲೋನ್ ರಾಜನು ಈ ದೇಶದ ಮನುಷ್ಯರನ್ನು ಮತ್ತು ಪ್ರಾಣಿಗಳನ್ನು ನಾಶಮಾಡುವನು ಎಂದು ಏಕೆ ಹೇಳಿದನು?” ಎಂದು ಕೇಳಿದೆ.


“ಅದಕ್ಕಾಗಿ ಯೆಹೋವನು ಹೀಗೆನ್ನುತ್ತಾನೆ: ‘ನೀವು ನನ್ನ ಆಜ್ಞಾಪಾಲನೆಯನ್ನು ಮಾಡಿಲ್ಲ. ನೀವು ನಿಮ್ಮ ಸಹೋದರರಾದ ಇಬ್ರಿಯರಿಗೆ ಸ್ವಾತಂತ್ರ್ಯವನ್ನು ಕೊಟ್ಟಿಲ್ಲ. ನೀವು ಒಡಂಬಡಿಕೆಗನುಸಾರವಾಗಿ ನಡೆದುಕೊಂಡಿಲ್ಲ. ಅದಕ್ಕಾಗಿ ನಾನು “ಸ್ವಾತಂತ್ರ್ಯವನ್ನು ಕೊಡುತ್ತೇನೆ.” ಇದು ಯೆಹೋವನ ನುಡಿ. ಖಡ್ಗ, ಭಯಂಕರವಾದ ವ್ಯಾಧಿ ಮತ್ತು ಹಸಿವು ಇವುಗಳಿಗೆ ನಿಮ್ಮನ್ನು ಕೊಲ್ಲುವ “ಸ್ವಾತಂತ್ರ್ಯವನ್ನು” ನಾನು ಕೊಡುತ್ತೇನೆ. ಈ ವಿಷಯ ಕೇಳಿ ಭೂಲೋಕದ ಸಮಸ್ತ ರಾಜ್ಯಗಳು ಭಯಪಡುವಂತೆ ಮಾಡುತ್ತೇನೆ.


ಯೆಹೂದದ ಜನರು ಉಪವಾಸ ವ್ರತವನ್ನು ಕೈಕೊಳ್ಳಬಹುದು ಮತ್ತು ನನಗೆ ಪ್ರಾರ್ಥನೆ ಮಾಡಬಹುದು. ಆದರೆ ನಾನು ಅವರ ಪ್ರಾರ್ಥನೆಗಳನ್ನು ಕೇಳುವದಿಲ್ಲ. ಅವರು ನನಗೆ ಸರ್ವಾಂಗಹೋಮಗಳನ್ನು ಮತ್ತು ಧಾನ್ಯನೈವೇದ್ಯಗಳನ್ನು ಅರ್ಪಿಸಿದರೂ ಸಹ ನಾನು ಅವರನ್ನು ಸ್ವಿಕರಿಸುವದಿಲ್ಲ. ನಾನು ಯುದ್ಧದಿಂದ ಯೆಹೂದದ ಜನರನ್ನು ನಾಶಮಾಡುತ್ತೇನೆ. ನಾನು ಅವರ ಆಹಾರವನ್ನು ಕಿತ್ತುಕೊಳ್ಳುತ್ತೇನೆ; ಯೆಹೂದದ ಜನರು ಉಪವಾಸದಿಂದ ಸಾಯುವಂತೆ ಮಾಡುತ್ತೇನೆ. ನಾನು ಅವರನ್ನು ಭಯಂಕರವಾದ ವ್ಯಾಧಿಗಳಿಂದ ನಾಶಮಾಡುತ್ತೇನೆ” ಎಂದು ಹೇಳಿದನು.


ಯೆಹೋವನು ಹೀಗೆಂದನು: “ನಾನು ಈ ಸ್ಥಳಕ್ಕೆ ವಿರೋಧವಾಗಿ ನನ್ನ ಕೋಪವನ್ನು ತೋರಿಸುವೆನು. ನಾನು ಜನರನ್ನೂ ಪ್ರಾಣಿಗಳನ್ನೂ ದಂಡಿಸುವೆನು. ಕಾಡಿನ ಮರಗಳನ್ನೂ ಹೊಲದ ಬೆಳೆಗಳನ್ನೂ ದಂಡಿಸುವೆನು. ನನ್ನ ಕೋಪವು ಉರಿಯುವ ಬೆಂಕಿಯಂತಿರುವದು; ಅದನ್ನು ತಡೆಯಲು ಯಾರಿಗೂ ಸಾಧ್ಯವಿಲ್ಲ.”


ಆದ್ದರಿಂದ ಯೆಹೋವನು, “ನಾನು ಸೃಷ್ಟಿಸಿದ ಜನರನ್ನೆಲ್ಲ ಭೂಮುಖದಿಂದ ನಾಶಮಾಡುವೆನು. ಪ್ರತಿಯೊಬ್ಬ ಮನುಷ್ಯನನ್ನೂ ಪ್ರತಿಯೊಂದು ಪ್ರಾಣಿಯನ್ನೂ ನೆಲದ ಮೇಲೆ ಹರಿದಾಡುವ ಪ್ರತಿಯೊಂದು ಜಂತುವನ್ನೂ ಆಕಾಶದಲ್ಲಿ ಹಾರಾಡುವ ಪಕ್ಷಿಗಳನ್ನೂ ನಾಶಮಾಡುವೆನು. ಇವುಗಳನ್ನೆಲ್ಲಾ ಸೃಷ್ಟಿಸಿದ್ದರಿಂದ ನನಗೆ ದುಃಖವಾಯಿತು” ಅಂದುಕೊಂಡನು.


“ಅವರು ಒಂದು ಭಯಾನಕವಾದ ರೀತಿಯಲ್ಲಿ ಮರಣಹೊಂದುತ್ತಾರೆ. ಅವರನ್ನು ಯಾರೂ ಹೂಳುವುದಿಲ್ಲ. ಅವರ ದೇಹಗಳು ಭೂಮಿಯ ಮೇಲೆ ಗೊಬ್ಬರದಂತೆ ಬಿದ್ದಿರುತ್ತವೆ. ಅವರು ವೈರಿಗಳ ಖಡ್ಗಗಳಿಂದ ಮಡಿಯುವರು. ಅವರು ಅನ್ನವಿಲ್ಲದೆ ಸಾಯುವರು. ಅವರ ಶವಗಳು ಆಕಾಶದ ಪಕ್ಷಿಗಳಿಗೂ ಭೂಮಿಯ ಮೇಲಿನ ಕಾಡುಪ್ರಾಣಿಗಳಿಗೂ ಆಹಾರವಾಗುವವು.”


ಅದು ನಿನ್ನ ಹೆಸರು. ಏಕೆಂದರೆ ಯೆಹೋವನು ಹೇಳುತ್ತಾನೆ: ‘ನಾನು ತಕ್ಷಣ ನಿನ್ನನ್ನು ನಿನಗೆ ಭಯಂಕಾರಿಯನ್ನಾಗಿ ಮಾಡುವೆನು. ನಾನು ನಿನ್ನನ್ನು ನಿನ್ನ ಎಲ್ಲಾ ಸ್ನೇಹಿತರಿಗೆ ಭಯಂಕಾರಿಯನ್ನಾಗಿ ಮಾಡುವೆನು. ವೈರಿಗಳು ಖಡ್ಗಗಳಿಂದ ನಿನ್ನ ಸ್ನೇಹಿತರನ್ನು ಕೊಲ್ಲುವುದನ್ನು ನೀನು ನೋಡುವೆ. ಯೆಹೂದದ ಎಲ್ಲಾ ಜನರನ್ನು ನಾನು ಬಾಬಿಲೋನಿನ ರಾಜನಿಗೆ ಒಪ್ಪಿಸುವೆನು. ಅವನು ಯೆಹೂದ್ಯರನ್ನು ಬಾಬಿಲೋನಿಗೆ ತೆಗೆದುಕೊಂಡು ಹೋಗುವನು; ಅವನ ಸೈನಿಕರು ಯೆಹೂದ್ಯರನ್ನು ತಮ್ಮ ಕತ್ತಿಗಳಿಂದ ಕೊಂದುಹಾಕುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು