Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 21:7 - ಪರಿಶುದ್ದ ಬೈಬಲ್‌

7 “‘ಇದಾದ ಮೇಲೆ ನಾನು ಯೆಹೂದದ ರಾಜನಾದ ಚಿದ್ಕೀಯನನ್ನು ಮತ್ತು ಅಧಿಪತಿಗಳನ್ನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನಿಗೆ ಒಪ್ಪಿಸುತ್ತೇನೆ. ಜೆರುಸಲೇಮಿನ ಕೆಲವು ಜನರು ಭಯಂಕರವಾದ ರೋಗದಿಂದ ಸಾಯುವುದಿಲ್ಲ; ಕೆಲವು ಜನರು ಖಡ್ಗಗಳಿಗೆ ಆಹುತಿಯಾಗುವದಿಲ್ಲ; ಕೆಲವರು ಹಸಿವಿನಿಂದ ಸಾಯುವುದಿಲ್ಲ. ಅಂಥವರನ್ನು ನಾನು ನೆಬೂಕದ್ನೆಚ್ಚರನಿಗೆ ಕೊಡುತ್ತೇನೆ. ಯೆಹೂದದ ವೈರಿಯು ಗೆಲ್ಲುವಂತೆ ನಾನು ಮಾಡುತ್ತೇನೆ. ನೆಬೂಕದ್ನೆಚ್ಚರನ ಸೈನಿಕರು ಯೆಹೂದ್ಯರನ್ನು ಕೊಲ್ಲಬಯಸುತ್ತಾರೆ. ಆದ್ದರಿಂದ ಯೆಹೂದ ಮತ್ತು ಜೆರುಸಲೇಮಿನ ಜನರು ಖಡ್ಗಗಳಿಗೆ ಬಲಿಯಾಗುವರು. ನೆಬೂಕದ್ನೆಚ್ಚರನು ಸ್ವಲ್ಪವೂ ದಯೆ ತೋರುವದಿಲ್ಲ. ಆ ಜನರ ಸಲುವಾಗಿ ಅವನು ಮರುಗುವದಿಲ್ಲ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ತರುವಾಯ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ ಮತ್ತು ಅವರ ಸೇವಕರನ್ನೂ ವ್ಯಾಧಿ, ಖಡ್ಗ ಮತ್ತು ಕ್ಷಾಮಗಳಿಂದ ಹತರಾಗದೆ ಉಳಿದ ಪ್ರಜೆಗಳನ್ನೂ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೂ, ಅವರ ಪ್ರಾಣವನ್ನು ಹುಡುಕುತ್ತಿರುವ ಅವರ ಶತ್ರುಗಳ ಕೈಗೂ ಕೊಟ್ಟುಬಿಡುವೆನು. ಅವನು ಅವರನ್ನು ಕರುಣಿಸದೆ, ಕನಿಕರದಿಂದ ಉಳಿಸದೆ ಕತ್ತಿಯಿಂದ ಸಂಹರಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಬಳಿಕ ನಾನು ಜುದೇಯದ ಅರಸ ಚಿದ್ಕೀಯನನ್ನೂ ಅವನ ಸೇವಕರನ್ನೂ ಹಾಗೂ ವ್ಯಾಧಿ, ಖಡ್ಗ, ಕ್ಷಾಮಗಳಿಂದ ಅಳಿಯದೆ ಉಳಿದ ಪ್ರಜೆಗಳನ್ನೂ ಬಾಬಿಲೋನಿನ ಅರಸ ನೆಬೂಕದ್ನೆಚ್ಚರನ ಕೈಗೂ ಅವರ ಪ್ರಾಣವನ್ನು ಹುಡುಕುತ್ತಿರುವ ಅವರ ಶತ್ರುಗಳ ಕೈಗೂ ಬಿಟ್ಟುಬಿಡುವೆನು. ಅವನು ಅವರನ್ನು ಕತ್ತಿಯಿಂದ ಕೊಂದುಹಾಕುವನು. ಅವರನ್ನು ಕರುಣಿಸನು, ಕನಿಕರಿಸನು, ಉಳಿಯಗೊಳಿಸನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ತರುವಾಯ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ ಅವನ ಸೇವಕರನ್ನೂ ವ್ಯಾಧಿಖಡ್ಗಕ್ಷಾಮಗಳಿಂದ ಹತಶೇಷರಾದ ಪ್ರಜೆಗಳನ್ನೂ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೂ ಅವರ ಪ್ರಾಣವನ್ನು ಹುಡುಕುತ್ತಿರುವ ಅವರ ಶತ್ರುಗಳ ಕೈಗೂ ಕೊಟ್ಟುಬಿಡುವೆನು; ಅವನು ಅವರನ್ನು ಕರುಣಿಸದೆ ಕನಿಕರಪಡದೆ ಉಳಿಸದೆ ಕತ್ತಿಯಿಂದ ಸಂಹರಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಯೆಹೋವ ದೇವರು ಹೇಳುವುದೇನೆಂದರೆ, ತರುವಾಯ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ, ಅವನ ಸೇವಕರನ್ನೂ, ಜನರನ್ನೂ ಈ ಪಟ್ಟಣದಲ್ಲಿ ವ್ಯಾಧಿಯಿಂದಲೂ, ಖಡ್ಗದಿಂದಲೂ, ಕ್ಷಾಮದಿಂದಲೂ ಉಳಿದವರನ್ನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಕೈಗೂ, ಅವರ ಶತ್ರುಗಳ ಕೈಗೂ ಒಪ್ಪಿಸುವೆನು. ಅವನು ಅವರನ್ನು ಖಡ್ಗದ ಬಾಯಿಂದ ಹೊಡೆಯುವನು. ಅವರ ಮೇಲೆ ಕರುಣೆ ಇಡುವುದಿಲ್ಲ, ಕನಿಕರಿಸುವುದಿಲ್ಲ, ಅಂತಃಕರಣ ಪಡುವುದಿಲ್ಲ.’

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 21:7
37 ತಿಳಿವುಗಳ ಹೋಲಿಕೆ  

ಆಗ ರಾಜನಾದ ಚಿದ್ಕೀಯನು ಯೆರೆಮೀಯನನ್ನು ತನ್ನ ಅರಮನೆಗೆ ಕರೆತರಿಸಿದನು. ಚಿದ್ಕೀಯನು ಯೆರೆಮೀಯನೊಂದಿಗೆ ರಹಸ್ಯವಾಗಿ ಮಾತನಾಡಿ, “ಯೆಹೋವನಿಂದ ಏನಾದರೂ ಸಂದೇಶವಿದೆಯೊ?” ಎಂದು ಕೇಳಿದನು. “ಹೌದು, ಯೆಹೋವನಿಂದ ಒಂದು ಸಂದೇಶವಿದೆ. ಚಿದ್ಕೀಯನೇ, ನಿನ್ನನ್ನು ಬಾಬಿಲೋನಿನ ರಾಜನಿಗೆ ಒಪ್ಪಿಸಲಾಗುವುದು” ಎಂದು ಯೆರೆಮೀಯನು ಉತ್ತರಿಸಿದನು.


ನಾನು ನಿಮಗೆ ಕರುಣೆ ತೋರಿಸೆನು. ನಿಮಗಾಗಿ ನಾನು ದುಃಖಿಸುವದಿಲ್ಲ. ನೀವು ಮಾಡಿದ ದುಷ್ಕೃತ್ಯಗಳಿಗಾಗಿ ನಾನು ನಿಮ್ಮನ್ನು ಶಿಕ್ಷಿಸುವೆನು. ಅಂಥಾ ಭಯಂಕರವಾದ ಕೃತ್ಯಗಳನ್ನು ನೀವು ಮಾಡಿದ್ದೀರಿ. ನಿಮ್ಮನ್ನು ದಂಡಿಸಿದಾತನು ಯೆಹೋವನಾದ ನಾನೇ ಎಂಬುದು ಆಗ ನಿಮಗೆ ತಿಳಿಯುವುದು.


ಯೆಹೂದದ ಜನರು ಎಡವಿ, ಒಬ್ಬರಮೇಲೊಬ್ಬರು ಬೀಳುವಂತೆ ನಾನು ಮಾಡುವೆನು. ತಂದೆ ಮತ್ತು ಮಕ್ಕಳು ಒಬ್ಬರಮೇಲೊಬ್ಬರು ಬೀಳುವರು.’” ಇದು ಯೆಹೋವನ ನುಡಿ. “‘ನಾನು ಅವರಿಗಾಗಿ ಕನಿಕರಪಡುವದಿಲ್ಲ ಅಥವಾ ಕರುಣೆ ತೋರಿಸುವದಿಲ್ಲ. ಯೆಹೂದದ ಜನರ ವಿನಾಶವನ್ನು ಕರುಣೆಯು ತಡೆಯದಂತೆ ನೋಡಿಕೊಳ್ಳುತ್ತೇನೆ.’”


ಅವರು ಮಹಾಕ್ರೂರಿಗಳು. ಅವರು ನಿಮ್ಮಲ್ಲಿರುವ ಮುದುಕರಿಗೆ ಅಥವಾ ಎಳೆಗೂಸುಗಳಿಗೆ ಕರುಣೆ ತೋರಿಸರು.


ಅವರಿಗೆ ನಾನು ಕನಿಕರ ತೋರಿಸುವುದಿಲ್ಲ. ಅವರಿಗಾಗಿ ನಾನು ದುಃಖಿಸುವುದಿಲ್ಲ. ಅವರು ತಾವೇ ಇದನ್ನು ತಮ್ಮ ಮೇಲೆ ಬರಮಾಡಿಕೊಂಡರು. ಅವರು ಹೊಂದಲು ಯೋಗ್ಯವಾದ ಶಿಕ್ಷೆಯನ್ನೇ ನಾನು ಕೊಡುತ್ತಿರುವುದು.”


ಅವರಿಗೆ ನಾನು ನನ್ನ ರೌದ್ರವನ್ನು ತೋರಿಸುವೆನು. ಅವರಿಗೆ ನಾನು ಕರುಣೆಯನ್ನು ಎಂದಿಗೂ ತೋರಿಸುವುದಿಲ್ಲ. ಅವರಿಗಾಗಿ ನಾನು ದುಃಖಿಸುವುದೂ ಇಲ್ಲ. ಅವರು ನನ್ನನ್ನು ಕೂಗುವರು, ಆದರೆ ನಾನು ಅವರಿಗೆ ಕಿವಿಗೊಡುವುದಿಲ್ಲ.”


“ನನ್ನ ಜನರ ಮೇಲೆ ನಾನು ಸಿಟ್ಟಿಗೆದ್ದಿದ್ದೆನು. ಅವರು ನನಗೆ ಸೇರಿದವರಾಗಿದ್ದಾರೆ. ಆದರೆ ನಾನು ಅವರ ಮೇಲೆ ಸಿಟ್ಟಾದೆನು. ಆದ್ದರಿಂದ ನಾನು ಅವರನ್ನು ತಳ್ಳಿಬಿಟ್ಟೆನು. ಅವರನ್ನು ನಿನಗೆ ಕೊಟ್ಟೆನು; ನೀನು ಅವರನ್ನು ಶಿಕ್ಷಿಸಿದೆ. ಅವರ ಮೇಲೆ ಕರುಣೆ ತೋರಿಸಲಿಲ್ಲ. ವೃದ್ಧರೂ ಕಷ್ಟದ ಕೆಲಸ ಮಾಡುವಂತೆ ಮಾಡಿದೆ.


ದ್ರಾಕ್ಷಿಬಳ್ಳಿ ಒಣಗಿಹೋಗುವದು. ಅದರ ಕೊಂಬೆಗಳು ಮುರಿದುಬೀಳುವವು. ಹೆಂಗಸರು ಆ ಕೊಂಬೆಗಳನ್ನು ಸೌದೆಯಾಗಿ ಉಪಯೋಗಿಸುವರು. ಜನರು ತಿಳಿದುಕೊಳ್ಳುವದಕ್ಕೆ ಮನಸ್ಸು ಕೊಡುವದಿಲ್ಲ. ಆದ್ದರಿಂದ ಅವರ ನಿರ್ಮಾಣಿಕನಾದ ದೇವರು ಅವರನ್ನು ಸಂತೈಸುವದಿಲ್ಲ. ಅವರ ನಿರ್ಮಾಣಿಕನು ಅವರಿಗೆ ದಯೆ ತೋರುವದಿಲ್ಲ.


“ಜೆರುಸಲೇಮ್ ನಗರವೇ, ನಿನಗಾಗಿ ಯಾರೂ ವ್ಯಥೆಪಡುವದಿಲ್ಲ. ನಿನಗಾಗಿ ದುಃಖಪಡುವುದಿಲ್ಲ ಮತ್ತು ಆಳುವುದಿಲ್ಲ. ಯಾರೂ ತಮ್ಮ ದಿನನಿತ್ಯದ ಕೆಲಸಕಾರ್ಯಗಳನ್ನು ಬಿಟ್ಟು ನಿನ್ನ ಯೋಗಕ್ಷೇಮವನ್ನು ವಿಚಾರಿಸಲು ಬರುವುದಿಲ್ಲ.


ಶತ್ರುಗಳು ಖಡ್ಗಧಾರಿಗಳಾಗಿ ಬಂದು ಜನರ ಮೇಲೆರಗಿ ಕೊಲೆಮಾಡುವರು. ಯೆಹೂದದಲ್ಲಿ ಜೀವಂತ ಉಳಿದವರನ್ನು ಅವರು ವಧಿಸುವರು. ಒಬ್ಬ ಸ್ತ್ರೀಗೆ ಏಳು ಜನ ಮಕ್ಕಳಿದ್ದರೂ ಅವರೆಲ್ಲ ಸತ್ತುಹೋಗುವರು. ಅವಳು ಅತ್ತೂಅತ್ತೂ ಬಳಲಿ ಉಸಿರಾಡದಂತಾಗುವಳು. ಅವಳು ಕಳವಳಪಡುವಳು ಮತ್ತು ಗಾಬರಿಗೊಳ್ಳುವಳು. ಪ್ರಕಾಶಮಯವಾದ ದಿನವು ದುಃಖದ ನಿಮಿತ್ತ ಅವಳಿಗೆ ಕತ್ತಲಾಗುವುದು.”


ಯೆಹೋಯಾಚೀನನೇ, ನಾನು ನಿನಗೆ ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನ ಮತ್ತು ಕಸ್ದೀಯರ ಕೈಗೆ ಕೊಟ್ಟುಬಿಡುವೆನು. ನೀನು ಹೆದರಿಕೊಂಡಿರುವುದು ಆ ಜನರಿಗೇ. ಆ ಜನರು ನಿನ್ನನ್ನು ಕೊಲ್ಲಬಯಸುತ್ತಾರೆ.


ಈಗ ನಾನು ನಿಮ್ಮೆಲ್ಲ ದೇಶಗಳನ್ನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನಿಗೆ ಒಪ್ಪಿಸಿದ್ದೇನೆ. ಅವನು ನನ್ನ ಸೇವಕನಾಗಿದ್ದಾನೆ. ಕಾಡುಪ್ರಾಣಿಗಳು ಸಹ ಅವನ ಆಜ್ಞೆಯನ್ನು ಪಾಲಿಸುವಂತೆ ಮಾಡುವೆನು.


ಚಿದ್ಕೀಯನೇ, ನೀನು ಬಾಬಿಲೋನಿನ ರಾಜನಿಂದ ತಪ್ಪಿಸಿಕೊಳ್ಳಲಾರೆ. ನಿಶ್ಚಿತವಾಗಿ ನಿನ್ನನ್ನು ಹಿಡಿದು ಅವನಿಗೆ ಒಪ್ಪಿಸಲಾಗುವುದು. ಬಾಬಿಲೋನಿನ ರಾಜನನ್ನು ನೀನು ಪ್ರತ್ಯಕ್ಷವಾಗಿ ನೋಡುವೆ. ಅವನು ನಿನ್ನೊಂದಿಗೆ ಮುಖಾಮುಖಿಯಾಗಿ ಮಾತನಾಡುವನು; ನೀನು ಬಾಬಿಲೋನಿಗೆ ಹೋಗುವೆ.


ನನ್ನ ಒಡೆಯನಾದ ಯೆಹೋವನು ಇದನ್ನು ಹೇಳುತ್ತಾನೆ. “ನೀನು ದ್ವೇಷಿಸುವ ಜನರ ಕೈಗೆ ನಿನ್ನನ್ನು ಒಪ್ಪಿಸುವೆನು. ನೀನು ಜಿಗುಪ್ಸೆಗೊಂಡ ಜನರಿಗೆ ನಿನ್ನನ್ನು ಒಪ್ಪಿಸುವೆನು.


ಯೆಹೂದದ ಜನರು ಉಪವಾಸ ವ್ರತವನ್ನು ಕೈಕೊಳ್ಳಬಹುದು ಮತ್ತು ನನಗೆ ಪ್ರಾರ್ಥನೆ ಮಾಡಬಹುದು. ಆದರೆ ನಾನು ಅವರ ಪ್ರಾರ್ಥನೆಗಳನ್ನು ಕೇಳುವದಿಲ್ಲ. ಅವರು ನನಗೆ ಸರ್ವಾಂಗಹೋಮಗಳನ್ನು ಮತ್ತು ಧಾನ್ಯನೈವೇದ್ಯಗಳನ್ನು ಅರ್ಪಿಸಿದರೂ ಸಹ ನಾನು ಅವರನ್ನು ಸ್ವಿಕರಿಸುವದಿಲ್ಲ. ನಾನು ಯುದ್ಧದಿಂದ ಯೆಹೂದದ ಜನರನ್ನು ನಾಶಮಾಡುತ್ತೇನೆ. ನಾನು ಅವರ ಆಹಾರವನ್ನು ಕಿತ್ತುಕೊಳ್ಳುತ್ತೇನೆ; ಯೆಹೂದದ ಜನರು ಉಪವಾಸದಿಂದ ಸಾಯುವಂತೆ ಮಾಡುತ್ತೇನೆ. ನಾನು ಅವರನ್ನು ಭಯಂಕರವಾದ ವ್ಯಾಧಿಗಳಿಂದ ನಾಶಮಾಡುತ್ತೇನೆ” ಎಂದು ಹೇಳಿದನು.


ಈ ಸ್ಥಳದಲ್ಲಿ ನಾನು ಯೆಹೂದದ ಮತ್ತು ಜೆರುಸಲೇಮಿನ ಜನರ ಯೋಜನೆಗಳನ್ನು ಹಾಳು ಮಾಡುತ್ತೇನೆ. ಶತ್ರುವು ಈ ಜನರನ್ನು ಬೆನ್ನಟ್ಟಿ ಬರುವನು. ನಾನು ಈ ಸ್ಥಳದಲ್ಲಿ ಖಡ್ಗದಿಂದ ಯೆಹೂದದ ಜನರ ಕೊಲೆಯಾಗುವಂತೆ ಮಾಡುವೆನು. ಅವರ ಹೆಣಗಳು ಪಕ್ಷಿಗಳಿಗೆ ಮತ್ತು ಕಾಡುಪ್ರಾಣಿಗಳಿಗೆ ಆಹಾರವಾಗುವಂತೆ ಮಾಡುವೆನು.


ಅದು ನಿನ್ನ ಹೆಸರು. ಏಕೆಂದರೆ ಯೆಹೋವನು ಹೇಳುತ್ತಾನೆ: ‘ನಾನು ತಕ್ಷಣ ನಿನ್ನನ್ನು ನಿನಗೆ ಭಯಂಕಾರಿಯನ್ನಾಗಿ ಮಾಡುವೆನು. ನಾನು ನಿನ್ನನ್ನು ನಿನ್ನ ಎಲ್ಲಾ ಸ್ನೇಹಿತರಿಗೆ ಭಯಂಕಾರಿಯನ್ನಾಗಿ ಮಾಡುವೆನು. ವೈರಿಗಳು ಖಡ್ಗಗಳಿಂದ ನಿನ್ನ ಸ್ನೇಹಿತರನ್ನು ಕೊಲ್ಲುವುದನ್ನು ನೀನು ನೋಡುವೆ. ಯೆಹೂದದ ಎಲ್ಲಾ ಜನರನ್ನು ನಾನು ಬಾಬಿಲೋನಿನ ರಾಜನಿಗೆ ಒಪ್ಪಿಸುವೆನು. ಅವನು ಯೆಹೂದ್ಯರನ್ನು ಬಾಬಿಲೋನಿಗೆ ತೆಗೆದುಕೊಂಡು ಹೋಗುವನು; ಅವನ ಸೈನಿಕರು ಯೆಹೂದ್ಯರನ್ನು ತಮ್ಮ ಕತ್ತಿಗಳಿಂದ ಕೊಂದುಹಾಕುವರು.


ಯೆಹೂದದ ರಾಜನಾದ ಚಿದ್ಕೀಯನು ಬಾಬಿಲೋನಿನ ಸೈನಿಕರಿಂದ ತಪ್ಪಿಸಿಕೊಳ್ಳಲಾರ. ಖಂಡಿತವಾಗಿಯೂ ಅವನನ್ನು ಬಾಬಿಲೋನಿನ ರಾಜನಿಗೆ ಒಪ್ಪಿಸಲಾಗುವುದು. ಚಿದ್ಕೀಯನು ಮುಖಾಮುಖಿಯಾಗಿ ಬಾಬಿಲೋನಿನ ರಾಜನೊಂದಿಗೆ ಮಾತನಾಡುವನು. ಚಿದ್ಕೀಯನು ತನ್ನ ಕಣ್ಣುಗಳಿಂದ ಅವನನ್ನು ನೋಡುವನು.


ಯೆರೆಮೀಯನೇ, ಯೆಹೂದದ ರಾಜನಾದ ಯೆಹೋಯಾಕೀಮನಿಗೆ ಹೀಗೆ ಹೇಳು, ‘ಯೆಹೋವನು ಹೀಗೆನ್ನುತ್ತಾನೆ: ಯೆಹೋಯಾಕೀಮನೇ, ನೀನು ಆ ಸುರುಳಿಯನ್ನು ಸುಟ್ಟುಬಿಟ್ಟೆ. ನೀನು, “ಬಾಬಿಲೋನ್ ರಾಜನು ಖಂಡಿತವಾಗಿ ಬಂದು ಈ ದೇಶವನ್ನು ನಾಶಮಾಡುವನು ಎಂದು ಯೆರೆಮೀಯನು ಏಕೆ ಬರೆದನು? ಬಾಬಿಲೋನ್ ರಾಜನು ಈ ದೇಶದ ಮನುಷ್ಯರನ್ನು ಮತ್ತು ಪ್ರಾಣಿಗಳನ್ನು ನಾಶಮಾಡುವನು ಎಂದು ಏಕೆ ಹೇಳಿದನು?” ಎಂದು ಕೇಳಿದೆ.


“ಇಸ್ರೇಲು ದೇಶಗಳಲ್ಲೆಲ್ಲಾ ಚದರಿಹೋದ ಕುರಿಹಿಂಡಿನಂತಾಗಿದೆ. ಸಿಂಹಗಳಿಗೆ ಹೆದರಿ ಓಡಿಹೋದ ಕುರಿಗಳಂತಾಗಿದೆ ಇಸ್ರೇಲು. ಅದನ್ನು ತಿಂದು ಮುಗಿಸಿದ ಮೊದಲನೆ ಸಿಂಹವೆಂದರೆ ಅಶ್ಶೂರದ ರಾಜನು. ಅದರ ಎಲುಬುಗಳನ್ನು ಜಗಿದ ಕೊನೆಯ ಸಿಂಹವೆಂದರೆ ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು.


ನನ್ನ ಕಡೆಗೆ ನೋಡು. ನೀನು ಇಷ್ಟೆಲ್ಲ ಮಾಡಿದ್ದು ಯಾರಿಗೆ ಎಂಬುದನ್ನು ನೋಡು. ನಾನು ನಿನಗೆ ಈ ಪ್ರಶ್ನೆಗಳನ್ನು ಕೇಳಬಯಸುತ್ತೇನೆ. ಏನು, ಸ್ತ್ರೀಯರು ತಾವು ಹೆತ್ತ ಮಕ್ಕಳನ್ನೇ ತಿನ್ನಬೇಕೇ? ಸ್ತ್ರೀಯರು ತಾವು ಲಾಲನೆಪಾಲನೆ ಮಾಡಿದ ಮಕ್ಕಳನ್ನೇ ತಿನ್ನಬೇಕೇ? ಯೆಹೋವನ ಪವಿತ್ರ ಆಲಯದಲ್ಲಿಯೇ ಯಾಜಕನನ್ನು ಮತ್ತು ಪ್ರವಾದಿಯನ್ನು ಕೊಲ್ಲಬೇಕೇ?


ಭೀತಿಯು ಸುತ್ತಮುತ್ತಲಿಂದ ನನ್ನ ಕಡೆಗೆ ಬರುವಂತೆ ನೀನು ಆಹ್ವಾನಿಸಿದೆ. ಯೆಹೋವನ ಕೋಪದ ದಿನದಂದು ಯಾರೂ ತಪ್ಪಿಸಿಕೊಳ್ಳಲಿಲ್ಲ. ಯಾರೂ ಉಳಿಯಲಿಲ್ಲ. ನಾನು ಸಾಕಿಸಲಹಿದವರನ್ನು ನನ್ನ ವೈರಿಯು ಸಂಹರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು