ಯೆರೆಮೀಯ 21:9 - ಪರಿಶುದ್ದ ಬೈಬಲ್9 ಜೆರುಸಲೇಮಿನಲ್ಲಿ ಉಳಿಯುವವನು ಮರಣಹೊಂದುವನು. ಆತನು ಖಡ್ಗದಿಂದಾಗಲಿ ಹಸಿವಿನಿಂದಾಗಲಿ ಭಯಂಕರವಾದ ರೋಗದಿಂದಾಗಲಿ ಮಡಿಯುವನು. ಆದರೆ ಜೆರುಸಲೇಮಿನಿಂದ ಹೊರಗೆ ಬಾಬಿಲೋನಿನ ಸೈನಿಕರಿಗೆ ಶರಣಾಗತನಾದವನು ಬದುಕುವನು. ಆ ಸೈನಿಕರು ನಗರವನ್ನು ಮುತ್ತಿದ್ದಾರೆ. ಯಾರೂ ನಗರದಲ್ಲಿ ಆಹಾರವನ್ನು ತರುವಂತಿಲ್ಲ. ಆದರೆ ನಗರವನ್ನು ಬಿಟ್ಟು ಹೊರಗೆ ಹೋದವರು ಬದುಕುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಪಟ್ಟಣದಲ್ಲಿ ನಿಲ್ಲುವವನು ಖಡ್ಗ, ಕ್ಷಾಮ, ವ್ಯಾಧಿಗಳಿಂದ ಸಾಯುವನು. ನಿಮ್ಮನ್ನು ಮುತ್ತುವ ಕಸ್ದೀಯರನ್ನು ಮೊರೆಹೋಗಲು ಪಟ್ಟಣವನ್ನು ಬಿಡುವವನು ಬದುಕುವನು, ತನ್ನ ಪ್ರಾಣವೊಂದನ್ನೇ ಬಾಚಿಕೊಂಡು ಹೋಗುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ನಗರದಲ್ಲೆ ನಿಲ್ಲುವವನು ಖಡ್ಗ - ಕ್ಷಾಮ - ವ್ಯಾಧಿಗಳಿಂದ ಸಾಯುವನು. ನಿಮಗೆ ಮುತ್ತಿಗೆ ಹಾಕುತ್ತಿರುವ ಬಾಬಿಲೋನಿಯಾದವರಿಗೆ ಮರೆಹೋಗಲು ನಗರವನ್ನು ಬಿಡುವವನು ಬದುಕುವನು. ತನ್ನ ಪ್ರಾಣವನ್ನಾದರು ಬಾಚಿಕೊಂಡು ಹೋಗುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಪಟ್ಟಣದಲ್ಲಿ ನಿಲ್ಲುವವನು ಖಡ್ಗಕ್ಷಾಮವ್ಯಾಧಿಗಳಿಂದ ಸಾಯುವನು; ನಿಮ್ಮನ್ನು ಮುತ್ತುವ ಕಸ್ದೀಯರನ್ನು ಮರೆಹೊಗಲು ಪಟ್ಟಣವನ್ನು ಬಿಡುವವನು ಬದುಕುವನು, ತನ್ನ ಪ್ರಾಣವೊಂದನ್ನೇ ಬಾಚಿಕೊಂಡು ಹೋಗುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಈ ಪಟ್ಟಣದಲ್ಲಿ ನಿಲ್ಲುವವನು ಖಡ್ಗದಿಂದಲೂ, ಕ್ಷಾಮದಿಂದಲೂ, ವ್ಯಾಧಿಯಿಂದಲೂ ಸಾಯುವನು. ಆದರೆ ಹೊರಗೆ ಹೋಗಿ, ನಿಮಗೆ ಮುತ್ತಿಗೆ ಹಾಕುವ ಕಸ್ದೀಯರ ಕಡೆಗೆ ಸೇರುವವನು ಬದುಕುವನು. ತನ್ನ ಪ್ರಾಣವೊಂದನ್ನೇ ಬಾಚಿಕೊಂಡು ಹೋಗುವನು. ಅಧ್ಯಾಯವನ್ನು ನೋಡಿ |
ಯೆಹೂದದ ಜನರು ಉಪವಾಸ ವ್ರತವನ್ನು ಕೈಕೊಳ್ಳಬಹುದು ಮತ್ತು ನನಗೆ ಪ್ರಾರ್ಥನೆ ಮಾಡಬಹುದು. ಆದರೆ ನಾನು ಅವರ ಪ್ರಾರ್ಥನೆಗಳನ್ನು ಕೇಳುವದಿಲ್ಲ. ಅವರು ನನಗೆ ಸರ್ವಾಂಗಹೋಮಗಳನ್ನು ಮತ್ತು ಧಾನ್ಯನೈವೇದ್ಯಗಳನ್ನು ಅರ್ಪಿಸಿದರೂ ಸಹ ನಾನು ಅವರನ್ನು ಸ್ವಿಕರಿಸುವದಿಲ್ಲ. ನಾನು ಯುದ್ಧದಿಂದ ಯೆಹೂದದ ಜನರನ್ನು ನಾಶಮಾಡುತ್ತೇನೆ. ನಾನು ಅವರ ಆಹಾರವನ್ನು ಕಿತ್ತುಕೊಳ್ಳುತ್ತೇನೆ; ಯೆಹೂದದ ಜನರು ಉಪವಾಸದಿಂದ ಸಾಯುವಂತೆ ಮಾಡುತ್ತೇನೆ. ನಾನು ಅವರನ್ನು ಭಯಂಕರವಾದ ವ್ಯಾಧಿಗಳಿಂದ ನಾಶಮಾಡುತ್ತೇನೆ” ಎಂದು ಹೇಳಿದನು.
“‘ಇದಾದ ಮೇಲೆ ನಾನು ಯೆಹೂದದ ರಾಜನಾದ ಚಿದ್ಕೀಯನನ್ನು ಮತ್ತು ಅಧಿಪತಿಗಳನ್ನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನಿಗೆ ಒಪ್ಪಿಸುತ್ತೇನೆ. ಜೆರುಸಲೇಮಿನ ಕೆಲವು ಜನರು ಭಯಂಕರವಾದ ರೋಗದಿಂದ ಸಾಯುವುದಿಲ್ಲ; ಕೆಲವು ಜನರು ಖಡ್ಗಗಳಿಗೆ ಆಹುತಿಯಾಗುವದಿಲ್ಲ; ಕೆಲವರು ಹಸಿವಿನಿಂದ ಸಾಯುವುದಿಲ್ಲ. ಅಂಥವರನ್ನು ನಾನು ನೆಬೂಕದ್ನೆಚ್ಚರನಿಗೆ ಕೊಡುತ್ತೇನೆ. ಯೆಹೂದದ ವೈರಿಯು ಗೆಲ್ಲುವಂತೆ ನಾನು ಮಾಡುತ್ತೇನೆ. ನೆಬೂಕದ್ನೆಚ್ಚರನ ಸೈನಿಕರು ಯೆಹೂದ್ಯರನ್ನು ಕೊಲ್ಲಬಯಸುತ್ತಾರೆ. ಆದ್ದರಿಂದ ಯೆಹೂದ ಮತ್ತು ಜೆರುಸಲೇಮಿನ ಜನರು ಖಡ್ಗಗಳಿಗೆ ಬಲಿಯಾಗುವರು. ನೆಬೂಕದ್ನೆಚ್ಚರನು ಸ್ವಲ್ಪವೂ ದಯೆ ತೋರುವದಿಲ್ಲ. ಆ ಜನರ ಸಲುವಾಗಿ ಅವನು ಮರುಗುವದಿಲ್ಲ.’