Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 22:1 - ಪರಿಶುದ್ದ ಬೈಬಲ್‌

1 ಯೆಹೋವನು ಹೇಳಿದನು: “ಯೆರೆಮೀಯನೇ, ರಾಜನ ಅರಮನೆಗೆ ಹೋಗು. ಯೆಹೂದದ ರಾಜನ ಬಳಿಗೆ ಹೋಗಿ ಅಲ್ಲಿ ಈ ಸಂದೇಶವನ್ನು ಸಾರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನು ನನಗೆ ಹೀಗೆ ಅಪ್ಪಣೆಕೊಟ್ಟನು, “ನೀನು ಯೆಹೂದದ ಅರಸನ ಮನೆಗೆ ಇಳಿದು ಹೋಗಿ ಈ ಮಾತನ್ನು ಅಲ್ಲಿ ಹೇಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸರ್ವೇಶ್ವರ ಸ್ವಾಮಿ ನನಗೆ ಹೀಗೆ ಎಂದು ಆಜ್ಞೆಮಾಡಿದರು: “ನೀನು ಜುದೇಯದ ಅರಸನ ಮನೆಗೆ ಹೋಗು. ಅಲ್ಲಿ ಈ ಮಾತನ್ನು ಹೇಳು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನು [ನನಗೆ] ಹೀಗೆ ಅಪ್ಪಣೆಕೊಟ್ಟನು - ನೀನು ಯೆಹೂದದ ಅರಸನ ಮನೆಗೆ ಇಳಿದು ಹೋಗಿ ಈ ಮಾತನ್ನು ಅಲ್ಲಿ ಹೇಳು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರು ಹೀಗೆ ಹೇಳುತ್ತಾನೆ: “ಯೆಹೂದದ ಅರಸನ ಮನೆಗೆ ಇಳಿದು ಹೋಗಿ, ಅಲ್ಲಿ ಈ ವಾಕ್ಯವನ್ನು ಹೇಳು:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 22:1
15 ತಿಳಿವುಗಳ ಹೋಲಿಕೆ  

ಆ ಸಂದೇಶ ಹೀಗಿತ್ತು: “ಇಸ್ರೇಲಿನ ದೇವರಾದ ಯೆಹೋವನು ಹೀಗೆ ಹೇಳುತ್ತಾನೆ: ಯೆರೆಮೀಯನೇ, ಯೆಹೂದದ ರಾಜನಾದ ಚಿದ್ಕೀಯನ ಬಳಿಗೆ ಹೋಗಿ ಅವನಿಗೆ ಈ ಸಂದೇಶವನ್ನು ತಿಳಿಸು. ‘ಚಿದ್ಕೀಯನೇ, ಯೆಹೋವನು ಹೀಗೆ ಹೇಳುತ್ತಾನೆ: ಅತಿ ಶೀಬ್ರದಲ್ಲಿ ನಾನು ಜೆರುಸಲೇಮ್ ನಗರವನ್ನು ಬಾಬಿಲೋನಿನ ರಾಜನಿಗೆ ಒಪ್ಪಿಸುತ್ತೇನೆ; ಅವನು ಅದನ್ನು ಸುಟ್ಟುಬಿಡುತ್ತಾನೆ.


ಯೋಹಾನನು ಹೆರೋದನಿಗೆ, “ನೀನು ನಿನ್ನ ಅಣ್ಣನ ಪತ್ನಿಯನ್ನು ಇಟ್ಟುಕೊಂಡಿರುವುದು ಸರಿಯಲ್ಲ” ಎಂದು ಹೇಳುತ್ತಿದ್ದನು.


ಬೇತೇಲಿನಲ್ಲಿ ಇನ್ನು ನೀನು ಪ್ರವಾದಿಸುವದು ಬೇಡ. ಇದು ಯಾರೊಬ್ಬಾಮನ ಪವಿತ್ರಸ್ಥಳ. ಇದು ಇಸ್ರೇಲಿನ ದೇವಾಲಯ” ಎಂದು ಹೇಳಿದನು.


“ಯಾಜಕರೇ, ಇಸ್ರೇಲ್ ಜನಾಂಗವೇ, ಅರಸನ ಪರಿವಾರದವರೇ, ನನ್ನ ಮಾತುಗಳಿಗೆ ಕಿವಿಗೊಡಿರಿ. ಯಾಕೆಂದರೆ ನಿಮಗೆ ನ್ಯಾಯತೀರ್ಪು ಬಂದಿದೆ. “ಮಿಚ್ಪದಲ್ಲಿ ನೀವು ಉರುಲಿನಂತೆ ಇದ್ದಿರಿ. ತಾಬೋರಿನಲ್ಲಿ ನೆಲದ ಮೇಲೆ ಹರಡಿಸಿದ್ದ ಬಲೆಯಂತೆ ಇದ್ದಿರಿ.


“ಯೆಹೂದದ ರಾಜಮನೆತನದವರಿಗೆ ಈ ವಿಷಯಗಳನ್ನು ತಿಳಿಸಿರಿ: ‘ಯೆಹೋವನ ಸಂದೇಶವನ್ನು ಕೇಳಿರಿ.


ಯೆಹೋವನು ಮನಸ್ಸೆಯ ಮತ್ತು ಅವನ ಜನರ ಸಂಗಡ ಮಾತಾಡಿದರೂ ಅವರು ಆತನ ಮಾತನ್ನು ಕೇಳಲಿಲ್ಲ.


ಯೆಹೋವನು ನಾತಾನನನ್ನು ದಾವೀದನ ಬಳಿಗೆ ಕಳುಹಿಸಿದನು. ನಾತಾನನು ದಾವೀದನ ಬಳಿಗೆ ಬಂದು, “ಒಂದು ನಗರದಲ್ಲಿ ಇಬ್ಬರು ಮನುಷ್ಯರಿದ್ದರು. ಒಬ್ಬನು ಶ್ರೀಮಂತ. ಆದರೆ ಮತ್ತೊಬ್ಬನು ತೀರಾ ಬಡವ.


“ನೀವು ತಕ್ಕ ಶಿಕ್ಷೆಯನ್ನು ಅನುಭವಿಸುವಿರಿ. ನಾನು ನಿಮ್ಮ ಅರಣ್ಯಗಳಲ್ಲಿ ಬೆಂಕಿಯನ್ನು ಹೊತ್ತಿಸುತ್ತೇನೆ. ಆ ಬೆಂಕಿಯು ನಿಮ್ಮ ಸುತ್ತಮುತ್ತಲಿನ ಪ್ರತಿಯೊಂದು ವಸ್ತುವನ್ನು ಸುಟ್ಟುಹಾಕುತ್ತದೆ.”


‘ಯೆಹೂದದ ರಾಜನೇ, ಯೆಹೋವನಿಂದ ಬಂದ ಸಂದೇಶವನ್ನು ಕೇಳು. ನೀನು ದಾವೀದನ ಸಿಂಹಾಸನಾರೂಢನಾಗಿ ರಾಜ್ಯಭಾರ ಮಾಡುವೆ, ಅದಕ್ಕಾಗಿ ಕೇಳು. ರಾಜನೇ, ನೀನು ಮತ್ತು ನಿನ್ನ ಅಧಿಕಾರಿಗಳು ಚೆನ್ನಾಗಿ ಕೇಳಬೇಕು. ಜೆರುಸಲೇಮಿನ ದ್ವಾರಗಳ ಮೂಲಕ ಬರುವ ನಿನ್ನ ಜನರೆಲ್ಲರೂ ಯೆಹೋವನ ಸಂದೇಶವನ್ನು ಕೇಳಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು