16 ಯೋಷೀಯನು ದೀನದರಿದ್ರರಿಗೆ ಸಹಾಯ ಮಾಡುತ್ತಿದ್ದನು. ಯೋಷೀಯನು ಹಾಗೆ ಮಾಡಿದ್ದರಿಂದ ಎಲ್ಲವೂ ಸರಿಹೋಯಿತು. ಯೆಹೋಯಾಕೀಮನೇ, ‘ದೇವರನ್ನು ಅರಿತುಕೊಳ್ಳುವುದು ಎಂದರೇನು?’ ನ್ಯಾಯ ಮತ್ತು ನೀತಿಯಿಂದ ನಡೆದುಕೊಳ್ಳುವುದು, ನನ್ನನ್ನು ಅರಿತುಕೊಳ್ಳಲು ಬೇಕಾದದ್ದು ಅದೇ. ಇದು ಯೆಹೋವನಿಂದ ಬಂದ ಸಂದೇಶ:
ಯಾವನಾದರೂ ಜಂಬಕೊಚ್ಚಿಕೊಳ್ಳಬೇಕಾದರೆ, ಅವನು ನನ್ನನ್ನು ಅರಿತಿರುವುದಾಗಿಯೂ ನನ್ನನ್ನು ತಿಳಿದುಕೊಂಡಿರುವುದಾಗಿಯೂ ಜಂಬಪಡಲಿ. ನಾನೇ ಯೆಹೋವನೆಂದು ತಿಳಿದುಕೊಂಡಿರುವುದಕ್ಕಾಗಿ ಅವನು ಜಂಬಪಡಲಿ. ನಾನು ದಯಾವಂತನೂ ನ್ಯಾಯವಂತನೂ ಆಗಿರುವೆ, ನಾನು ಭೂಲೋಕದಲ್ಲಿ ಒಳ್ಳೆಯದನ್ನು ಮಾಡುತ್ತೇನೆ ಎಂದು ತಿಳಿದುಕೊಂಡಿರುವವನು ಹೆಮ್ಮೆಪಡಲಿ. ಆಗ ನನಗೆ ಸಂತೋಷವಾಗುವುದು.” ಇದು ಯೆಹೋವನ ನುಡಿ.
ದೇವರ ಬಗ್ಗೆ ತಮಗೆ ತಿಳಿದಿದೆಯೆಂದು ಅವರು ಹೇಳಿದರೂ ಅವರು ದೇವರನ್ನು ತಿಳಿದಿಲ್ಲವೆಂದು ಅವರ ಕೆಟ್ಟಕಾರ್ಯಗಳೇ ಸ್ಪಷ್ಟಪಡಿಸುತ್ತವೆ. ಅವರು ಭಯಂಕರವಾದ ಜನರು ಮತ್ತು ಅವಿಧೇಯರು. ಯಾವ ಸತ್ಕಾರ್ಯಗಳನ್ನು ಮಾಡುವುದಕ್ಕೂ ಅವರು ಯೋಗ್ಯರಲ್ಲ.
ನಾನು ಯೆಹೂದದ ಜನರನ್ನು ಬೇರೆ ಜನಾಂಗಗಳಲ್ಲಿ ಚದರಿಸಿಬಿಡುತ್ತೇನೆ. ಅವರು ಮತ್ತು ಅವರ ತಂದೆಗಳು ಎಂದೂ ಅರಿಯದ ಅಪರಿಚಿತ ದೇಶಗಳಲ್ಲಿ ಅವರು ವಾಸಿಸುವರು. ನಾನು ಖಡ್ಗಧಾರಿಗಳಾದ ಜನರನ್ನು ಕಳುಹಿಸುತ್ತೇನೆ. ಅವರು ಯೆಹೂದದ ಜನರನ್ನು ನಿರ್ಮೂಲವಾಗುವವರೆಗೆ ಕೊಲ್ಲುವರು.”
ಅವರು ಮಾಡಿದ ದುಷ್ಕೃತ್ಯಗಳಿಂದ ಅವರು ಬೆಳೆದಿದ್ದಾರೆ, ಕೊಬ್ಬಿದ್ದಾರೆ. ಅವರು ಮಾಡುವ ದುಷ್ಕೃತ್ಯಗಳಿಗೆ ಕೊನೆಯೇ ಇಲ್ಲ. ಅವರು ಅನಾಥ ಮಕ್ಕಳ ಪಕ್ಷವಹಿಸಿ ಮಾತನಾಡುವದಿಲ್ಲ. ಅವರು ಅನಾಥರಿಗೆ ಸಹಾಯ ಮಾಡುವದಿಲ್ಲ. ಅವರು ದಿಕ್ಕಿಲ್ಲದವರಿಗೆ ನ್ಯಾಯ ದೊರೆಯದಂತೆ ಮಾಡುವರು.
“ನನ್ನ ಮಗನಾದ ಸೊಲೊಮೋನನೇ, ನಿನ್ನ ತಂದೆಯ ದೇವರನ್ನು ನೀನು ಚೆನ್ನಾಗಿ ಅರಿತುಕೋ. ನೀನು ಪೂರ್ಣಹೃದಯದಿಂದಲೂ ಪೂರ್ಣಮನಸ್ಸಿನಿಂದಲೂ ನಿನ್ನ ದೇವರನ್ನು ಸೇವಿಸು. ದೇವರು ಪ್ರತಿಯೊಬ್ಬನ ಹೃದಯ ಮನಸ್ಸುಗಳನ್ನು ನೋಡುತ್ತಾನೆ. ನೀನು ದೇವರ ಸಹಾಯವನ್ನು ಕೇಳಿದರೆ ಆತನು ನಿನ್ನ ಪ್ರಾರ್ಥನೆಯನ್ನು ಲಾಲಿಸುವನು. ಆದರೆ ನೀನು ದೇವರನ್ನು ಬಿಟ್ಟರೆ ಆತನು ನಿನ್ನನ್ನು ಬಿಟ್ಟುಹೋಗುವನು.
“ನೀನು ಈ ಲೋಕದೊಳಗಿಂದ ಕೆಲವು ಜನರನ್ನು ನನಗೆ ಕೊಟ್ಟೆ. ನಿನ್ನ ಸ್ವರೂಪವನ್ನು ನಾನು ಇವರಿಗೆ ತೋರಿಸಿದೆನು. ಇವರು ನಿನ್ನವರಾಗಿದ್ದಾರೆ ಮತ್ತು ನೀನೇ ಇವರನ್ನು ನನಗೆ ಕೊಟ್ಟೆ. ಇವರು ನಿನ್ನ ಆಜ್ಞೆಗಳಿಗೆ ವಿಧೇಯರಾದರು.
“ಅವರು ತಮ್ಮ ನಾಲಿಗೆಗಳನ್ನು ಬಿಲ್ಲಿನಂತೆ ಉಪಯೋಗಿಸುತ್ತಿದ್ದಾರೆ. ಅವರ ಬಾಯಿಂದ ಬಾಣಗಳಂತೆ ಸುಳ್ಳುಗಳು ಬರುತ್ತಿವೆ. ಈ ನಾಡಿನಲ್ಲಿ ಸತ್ಯವಲ್ಲ, ‘ಅಸತ್ಯ’ ಪ್ರಬಲವಾಗುತ್ತಿದೆ. ಅವರು ಒಂದು ಪಾಪದಿಂದ ಮತ್ತೊಂದು ಪಾಪಕ್ಕೆ ಹೋಗುತ್ತಿದ್ದಾರೆ. ಅವರು ನನ್ನನ್ನು ಅರಿತಿಲ್ಲ.” ಯೆಹೋವನು ಈ ಮಾತನ್ನು ಹೇಳಿದನು.
ಜನರು, “ನಿನ್ನ ತಂದೆ ಎಲ್ಲಿದ್ದಾನೆ?” ಎಂದು ಕೇಳಿದರು. ಯೇಸು, “ನಿಮಗೆ ನಾನಾಗಲಿ, ನನ್ನ ತಂದೆಯಾಗಲಿ ಗೊತ್ತಿಲ್ಲ. ನೀವು ನನ್ನನ್ನು ತಿಳಿದಿದ್ದರೆ, ನನ್ನ ತಂದೆಯನ್ನು ಸಹ ತಿಳಿದಿರುವಿರಿ” ಎಂದು ಹೇಳಿದನು.
ಮನುಷ್ಯನೇ, ಒಳ್ಳೆಯದು ಏನೆಂದು ಯೆಹೋವನು ನಿನಗೆ ತಿಳಿಸಿದ್ದಾನೆ. ಯೆಹೋವನು ನಿನ್ನಿಂದ ಅಪೇಕ್ಷಿಸುವದೇನೆಂದರೆ, ಇತರರಿಗೆ ನೀನು ಅನ್ಯಾಯ ಮಾಡದಿರು. ದಯೆ ಮತ್ತು ನಂಬಿಗಸ್ತಿಕೆಗಳನ್ನು ಪ್ರೀತಿಸು. ದೀನತೆಯಿಂದ ನಿನ್ನ ದೇವರಿಗೆ ವಿಧೇಯನಾಗಿರು.