Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 22:24 - ಪರಿಶುದ್ದ ಬೈಬಲ್‌

24 ಯೆಹೋವನು ಹೀಗೆನ್ನುತ್ತಾನೆ: “ಯೆಹೋಯಾಕೀಮನ ಮಗನೂ ಯೆಹೂದದ ರಾಜನೂ ಆಗಿರುವ ಯೆಹೋಯಾಚೀನನೇ, ನನ್ನ ಜೀವದಾಣೆಯಾಗಿಯೂ ನಿನಗೆ ಹೀಗೆ ಮಾಡುವೆನು. ನೀನು ನನ್ನ ಬಲಗೈಯ ಮುದ್ರೆಯುಂಗುರವಾಗಿದ್ದರೂ ನಾನು ನಿನ್ನನ್ನು ಅಲ್ಲಿಂದ ಕಿತ್ತುಹಾಕುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಯೆಹೋವನು ಹೀಗೆನ್ನುತ್ತಾನೆ, “ನನ್ನ ಜೀವದಾಣೆ, ಯೆಹೋಯಾಕೀಮನ ಮಗನೂ ಯೆಹೂದದ ಅರಸನೂ ಆದ ಕೊನ್ಯನೆಂಬ ನೀನು ನನ್ನ ಬಲಗೈಯ ಮುದ್ರೆಯುಂಗರವಾಗಿದ್ದರೂ ನಾನು ನಿನ್ನನ್ನು ಅಲ್ಲಿಂದ ಕಿತ್ತುಹಾಕುತ್ತಿದ್ದೆನು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಸರ್ವೇಶ್ವರನ ಮಾತಿದು - “ನನ್ನ ಜೀವದಾಣೆ, ಯೆಹೋಯಾಕೀಮನ ಮಗನೂ ಜುದೇಯದ ಅರಸನೂ ಆದ ಕೊನ್ಯನೇ, ನೀನು ನನ್ನ ಬಲಗೈ ಮುದ್ರೆಯುಂಗುರವಾಗಿದ್ದರೂ ನಾನು ನಿನ್ನನ್ನು ಅಲ್ಲಿಂದ ಕಿತ್ತುಹಾಕುತ್ತಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಯೆಹೋವನು ಹೀಗನ್ನುತ್ತಾನೆ - ನನ್ನ ಜೀವದಾಣೆ, ಯೆಹೋಯಾಕೀಮನ ಮಗನೂ ಯೆಹೂದದ ಅರಸನೂ ಆದ ಕೊನ್ಯನೆಂಬ ನೀನು ನನ್ನ ಬಲಗೈಯ ಮುದ್ರೆಯುಂಗುರವಾಗಿದ್ದರೂ ನಾನು ನಿನ್ನನ್ನು ಅಲ್ಲಿಂದ ಕಿತ್ತು ಹಾಕುತ್ತಿದ್ದೆನು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 “ನನ್ನ ಜೀವದಾಣೆ, ಯೆಹೋಯಾಕೀಮನ ಮಗ ಯೆಹೂದದ ಅರಸನಾದ ಕೊನ್ಯನು ನನ್ನ ಬಲಗೈಯ ಮುದ್ರೆ ಉಂಗುರವಾಗಿದ್ದರೂ, ನಿನ್ನನ್ನು ಅಲ್ಲಿಂದ ಕಿತ್ತುಹಾಕಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 22:24
16 ತಿಳಿವುಗಳ ಹೋಲಿಕೆ  

ನೆಬೂಕದ್ನೆಚ್ಚರನು ಬಾಬಿಲೋನಿನ ರಾಜನಾಗಿದ್ದನು. ನೆಬೂಕದ್ನೆಚ್ಚರನು ಯೆಹೋಯಾಕೀಮನ ಮಗನಾದ ಕೊನ್ಯನ ಸ್ಥಾನದಲ್ಲಿ ಚಿದ್ಕೀಯನನ್ನು ಯೆಹೂದದ ರಾಜನನ್ನಾಗಿ ನೇಮಿಸಿದ್ದನು. ಚಿದ್ಕೀಯನು ರಾಜನಾದ ಯೋಷೀಯನ ಮಗನಾಗಿದ್ದನು.


ನನ್ನನ್ನು ನಿನ್ನ ಹೃದಯದ ಮೇಲೆ ಮುದ್ರೆಯನ್ನಾಗಿಯೂ, ನಿನ್ನ ಬೆರಳಿನಲ್ಲಿರುವ ಮುದ್ರೆಯೊತ್ತಿದ ಉಂಗುರದಂತೆಯೂ ಇಟ್ಟುಕೋ. ಪ್ರೀತಿಯು ಮರಣದಷ್ಟೇ ಬಲಿಷ್ಠ; ಕಾಮೋದ್ರೇಕವು ಸಮಾಧಿಯಷ್ಟೇ ಬಲಿಷ್ಠ. ಅದರ ಜ್ವಾಲೆಗಳು ಧಗಧಗಿಸುವ ಬೆಂಕಿ. ಅದು ಅತಿ ತೀಕ್ಷ್ಣವಾದ ಅಗ್ನಿಯೇ.


ಯೆಹೋಯಾಕೀಮನ ಗಂಡುಮಕ್ಕಳು ಯಾರೆಂದರೆ: ಯೆಕೊನ್ಯ ಮತ್ತು ಚಿದ್ಕೀಯ.


ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: “ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲನೇ, ನೀನು ನನ್ನ ಸೇವಕ. ನಿನ್ನನ್ನು ನಾನು ಆರಿಸಿಕೊಂಡಿದ್ದೇನೆ. ಆ ಸಮಯದಲ್ಲಿ ನಾನು ನಿನ್ನನ್ನು ಒಂದು ಮುದ್ರೆಯುಂಗುರವನ್ನಾಗಿ ಮಾಡುವೆನು. ನಾನು ಇವೆಲ್ಲವನ್ನು ಮಾಡಿದೆನೆಂಬುದಕ್ಕೆ ನೀನು ಸಾಕ್ಷಿಯಾಗಿರುವೆ.” ಸರ್ವಶಕ್ತನಾದ ಯೆಹೋವನು ಇವೆಲ್ಲವನ್ನು ನುಡಿದಿದ್ದಾನೆ.


ಯೆಹೋಯಾಚೀನನು ಎಸೆಯಲ್ಪಟ್ಟ ಒಡೆದ ಮಡಕೆಯಂತಿದ್ದಾನೆ. ಅವನು ಯಾರಿಗೂ ಬೇಡವಾಗದ ಮಡಕೆಯಂತಿದ್ದಾನೆ. ಯೆಹೋಯಾಚೀನನು ಮತ್ತು ಅವನ ಮಕ್ಕಳು ಏಕೆ ಹೊರಗೆ ಎಸೆಯಲ್ಪಡುವರು? ಅವರು ಪರದೇಶಕ್ಕೆ ಏಕೆ ಒಯ್ಯಲ್ಪಡುವರು?


ಯೆಹೂದದ ರಾಜನು ವಾಸಮಾಡುವ ಅರಮನೆಯ ಬಗ್ಗೆ ಯೆಹೋವನು ಹೀಗೆನ್ನುತ್ತಾನೆ: “ಈ ಅರಮನೆಯು ಗಿಲ್ಯಾದಿನ ಅರಣ್ಯದಂತೆ, ಲೆಬನೋನಿನ ಪರ್ವತದಂತೆ ಎತ್ತರವಾಗಿದೆ. ಆದರೆ ನಾನು ಅದನ್ನು ನಿಜವಾಗಿ ಮರುಭೂಮಿಯಂತೆ ಮಾಡುತ್ತೇನೆ. ಈ ಅರಮನೆಯು ಹಾಳುಬಿದ್ದ ನಗರದಂತಾಗುವುದು.


ಯೆಹೂದದ ರಾಜನಾದ ಯೆಹೋಯಾಖೀನನು ಬಾಬಿಲೋನ್ ರಾಜನನ್ನು ಭೇಟಿಮಾಡಲು ಹೋದನು. ಯೆಹೋಯಾಖೀನನ ತಾಯಿ, ಅವನ ಅಧಿಕಾರಿಗಳು, ನಾಯಕರು ಮತ್ತು ಸಿಬ್ಬಂದಿಯೆಲ್ಲವೂ ಅವನೊಂದಿಗೆ ಹೋದರು. ಆಗ ಬಾಬಿಲೋನ್ ರಾಜ ಯೆಹೋಯಾಖೀನನನ್ನು ಸೆರೆಹಿಡಿದನು. ಇದು ಸಂಭವಿಸಿದ್ದು ನೆಬೂಕದ್ನೆಚ್ಚರನ ಆಳ್ವಿಕೆಯ ಎಂಟನೆಯ ವರ್ಷದಲ್ಲಿ.


ನೆಬೂಕದ್ನೆಚ್ಚರನು ಯೆಹೋಯಾಖೀನನನ್ನು ಸೆರೆಯಾಳಾಗಿ ಬಾಬಿಲೋನಿಗೆ ಕರೆದೊಯ್ದನು. ನೆಬೂಕದ್ನೆಚ್ಚರನು ರಾಜನ ತಾಯಿಯನ್ನು, ಅವನ ಪತ್ನಿಯರನ್ನು, ಅಧಿಕಾರಿಗಳನ್ನು ಮತ್ತು ದೇಶದ ಪ್ರತಿಷ್ಠಿತರನ್ನು ಕರೆದೊಯ್ದನು. ನೆಬೂಕದ್ನೆಚ್ಚರನು ಅವರನ್ನು ಜೆರುಸಲೇಮಿನಿಂದ ಬಾಬಿಲೋನಿಗೆ ಸೆರೆಯಾಳುಗಳನ್ನಾಗಿ ಒಯ್ದನು.


ಯೆಹೋಯಾಕೀನನು ಯೆಹೂದ ದೇಶದ ಪಟ್ಟಕ್ಕೆ ಬಂದಾಗ ಹದಿನೆಂಟು ವರ್ಷದವನಾಗಿದ್ದನು. ಅವನು ಜೆರುಸಲೇಮಿನಲ್ಲಿ ಮೂರು ತಿಂಗಳು ಹತ್ತು ದಿವಸಗಳ ಕಾಲ ರಾಜ್ಯವನ್ನಾಳಿದನು. ಅವನು ಯೆಹೋವನ ಚಿತ್ತಕ್ಕನುಸಾರವಾಗಿ ನಡೆಯಲಿಲ್ಲ. ಯೆಹೋಯಾಕೀನನು ದೇವರಿಗೆ ವಿರುದ್ಧವಾಗಿ ಪಾಪ ಮಾಡಿದನು.


ನೋಡಿ, ನಿಮ್ಮ ಹೆಸರುಗಳನ್ನು ನಾನು ನನ್ನ ಅಂಗೈಗಳಲ್ಲಿ ಕೆತ್ತಿರುತ್ತೇನೆ. ನಿಮ್ಮನ್ನು ಯಾವಾಗಲೂ ಜ್ಞಾಪಿಸಿಕೊಳ್ಳುತ್ತೇನೆ.


ನಾನು ಯೆಹೂದದ ರಾಜನಾದ ಯೆಹೋಯಾಕೀನನನ್ನು ಇಲ್ಲಿಗೆ ಕರೆದುಕೊಂಡು ಬರುತ್ತೇನೆ. ಯೆಹೋಯಾಕೀನನು ಯೆಹೋಯಾಕೀಮನ ಮಗನು. ನೆಬೂಕದ್ನೆಚ್ಚರನು ಬಾಬಿಲೋನಿಗೆ ತೆಗೆದುಕೊಂಡು ಹೋದ ಎಲ್ಲಾ ಯೆಹೂದ್ಯರನ್ನು ನಾನು ಮತ್ತೆ ಕರೆದುಕೊಂಡು ಬರುತ್ತೇನೆ. ಬಾಬಿಲೋನಿನ ರಾಜನು ಯೆಹೂದದ ಜನರ ಮೇಲೆ ಹೇರಿದ ನೊಗವನ್ನು ನಾನು ಮುರಿದುಹಾಕುತ್ತೇನೆ.’” ಇದು ಯೆಹೋವನ ಸಂದೇಶ.


(ರಾಜನಾದ ಯೆಹೋಯಾಕೀನನನ್ನು, ರಾಜಮಾತೆಯನ್ನು, ಯೆಹೂದದ ಮತ್ತು ಜೆರುಸಲೇಮಿನ ಅಧಿಕಾರಿಗಳನ್ನು, ಮುಂದಾಳುಗಳನ್ನು, ಬಡಗಿಗಳನ್ನು ಮತ್ತು ಕಮ್ಮಾರರನ್ನು ಜೆರುಸಲೇಮಿನಿಂದ ತೆಗೆದುಕೊಂಡು ಹೋದ ಮೇಲೆ ಈ ಪತ್ರವನ್ನು ಕಳಿಸಲಾಯಿತು.)


ಈ ಸಂಗತಿಗಳನ್ನು ರಾಜನಿಗೂ ರಾಣಿಗೂ ಹೇಳಿರಿ: “ನಿಮ್ಮ ಸಿಂಹಾಸನಗಳಿಂದ ಕೆಳಗಿಳಿದು ಬನ್ನಿ. ನಿಮ್ಮ ಸುಂದರವಾದ ಕಿರೀಟಗಳು ನಿಮ್ಮ ತಲೆಯಿಂದ ಉರುಳಿ ಕೆಳಗೆ ಬಿದ್ದಿವೆ” ಎಂದು ಹೇಳಿರಿ.


ಯೆಹೋವನು ನನಗೆ ಈ ವಸ್ತುಗಳನ್ನು ತೋರಿಸಿದನು: ಯೆಹೋವನು ಪವಿತ್ರಾಲಯದ ಎದುರುಗಡೆಯಲ್ಲಿ ಅಂಜೂರದ ಎರಡು ಬುಟ್ಟಿಗಳನ್ನು ಜೋಡಿಸಿಟ್ಟಿದ್ದು ನನಗೆ ಕಂಡುಬಂತು. (ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ಯೆಕೊನ್ಯನನ್ನು ಸೆರೆಹಿಡಿದ ಮೇಲೆ ನಾನು ಈ ದರ್ಶನವನ್ನು ಕಂಡೆ. ಯೆಕೊನ್ಯನು ರಾಜನಾದ ಯೆಹೋಯಾಕೀಮನ ಮಗ. ಯೆಕೊನ್ಯನನ್ನು ಮತ್ತು ಅವನ ಪ್ರಮುಖ ಅಧಿಕಾರಿಗಳನ್ನು ಜೆರುಸಲೇಮಿನಿಂದ ಬಾಬಿಲೋನಿಗೆ ತೆಗೆದುಕೊಂಡು ಹೋಗಲಾಯಿತು. ನೆಬೂಕದ್ನೆಚ್ಚರನು ಯೆಹೂದದ ಎಲ್ಲಾ ಬಡಗಿಗಳನ್ನು ಮತ್ತು ಕಮ್ಮಾರರನ್ನು ತೆಗೆದುಕೊಂಡು ಹೋಗಿದ್ದನು.)


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು