Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 23:15 - ಪರಿಶುದ್ದ ಬೈಬಲ್‌

15 ಸರ್ವಶಕ್ತನಾದ ಯೆಹೋವನು ಪ್ರವಾದಿಗಳ ಬಗ್ಗೆ ಹೀಗೆನ್ನುತ್ತಾನೆ, “ನಾನು ಆ ಪ್ರವಾದಿಗಳನ್ನು ದಂಡಿಸುವೆನು. ಆ ಶಿಕ್ಷೆಯು ವಿಷಪೂರಿತ ಆಹಾರದಂತೆಯೂ ನೀರಿನಂತೆಯೂ ಇರುವುದು. ಪ್ರವಾದಿಗಳು ಒಂದು ಆಧ್ಯಾತ್ಮಿಕ ವ್ಯಾಧಿಯನ್ನು ಪ್ರಾರಂಭಿಸಿದರು. ಆ ವ್ಯಾಧಿಯು ಇಡೀ ದೇಶದಲ್ಲೆಲ್ಲ ಪ್ರಸರಿಸಿತು. ಆದ್ದರಿಂದ ನಾನು ಆ ಪ್ರವಾದಿಗಳನ್ನು ಶಿಕ್ಷಿಸುತ್ತೇನೆ. ಆ ವ್ಯಾಧಿಯು ಆ ಪ್ರವಾದಿಗಳಿಂದ ಜೆರುಸಲೇಮಿಗೆ ಬಂದಿತು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆದಕಾರಣ ಸೇನಾಧೀಶ್ವರನಾದ ಯೆಹೋವನು ಪ್ರವಾದಿಗಳ ವಿಷಯದಲ್ಲಿ, “ಆಹಾ, ನಾನು ಇವರಿಗೆ ಕಹಿಯಾದ ಆಹಾರ ಮತ್ತು ಪಾನಗಳನ್ನು ಕೊಡುವೆನು; ಯೆರೂಸಲೇಮಿನ ಪ್ರವಾದಿಗಳಿಂದ ಭ್ರಷ್ಟತನವು ದೇಶದಲ್ಲೆಲ್ಲಾ ಹರಡಿದೆಯಷ್ಟೆ” ಎಂದು ನುಡಿಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಆದಕಾರಣ ಸರ್ವಶಕ್ತ ಸರ್ವೇಶ್ವರ ಪ್ರವಾದಿಗಳ ವಿಷಯದಲ್ಲಿ ಹೇಳುವುದನ್ನು ಕೇಳಿ: “ಇವರು ಇಟ್ಟಿಕಾಯನ್ನು ತಿನ್ನುವಂತೆ ಮಾಡುವೆನು. ವಿಷಬೆರೆತ ನೀರನ್ನು ಕುಡಿಯುವಂತೆ ಮಾಡುವೆನು ಜೆರುಸಲೇಮಿನ ಈ ಪ್ರವಾದಿಗಳಿಂದ ಭ್ರಷ್ಟತನ ನಾಡಿನಲ್ಲೆಲ್ಲೂ ಹರಡಿರುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆದಕಾರಣ ಸೇನಾಧೀಶ್ವರನಾದ ಯೆಹೋವನು ಪ್ರವಾದಿಗಳ ವಿಷಯದಲ್ಲಿ ಹೀಗನ್ನುತ್ತಾನೆ - ಆಹಾ, ನಾನು ಇವರಿಗೆ ಕಹಿಯಾದ ಆಹಾರಪಾನಗಳನ್ನು ಕೊಡುವೆನು; ಯೆರೂಸಲೇವಿುನ ಪ್ರವಾದಿಗಳಿಂದ ಭ್ರಷ್ಟತನವು ದೇಶದಲ್ಲೆಲ್ಲಾ ಹರಡಿದೆಯಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆದ್ದರಿಂದ ಸೇನಾಧೀಶ್ವರ ಯೆಹೋವ ದೇವರು ಪ್ರವಾದಿಗಳ ವಿಷಯವಾಗಿ ಹೇಳುವುದೇನೆಂದರೆ: “ನಾನು ಅವರಿಗೆ ಕಹಿಯಾದ ಆಹಾರ ತಿನ್ನುವುದಕ್ಕೆ ಕೊಡುವೆನು. ವಿಷದ ನೀರನ್ನು ಕುಡಿಯ ಕೊಡುವೆನು. ಏಕೆಂದರೆ ಯೆರೂಸಲೇಮಿನ ಪ್ರವಾದಿಗಳ ಕಡೆಯಿಂದ ಭ್ರಷ್ಟತ್ವವು ದೇಶಕ್ಕೆಲ್ಲಾ ಹರಡಿದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 23:15
12 ತಿಳಿವುಗಳ ಹೋಲಿಕೆ  

“ನಾವು ಇಲ್ಲಿ ಸುಮ್ಮನೆ ಕುಳಿತುಕೊಂಡಿರುವುದೇಕೆ? ಬನ್ನಿ, ನಾವು ಭದ್ರವಾದ ಪಟ್ಟಣಗಳಿಗೆ ಓಡಿಹೋಗೋಣ. ನಮ್ಮ ದೇವರಾದ ಯೆಹೋವನು ನಮ್ಮನ್ನು ಸಾಯುವಂತೆ ಮಾಡಿದರೆ ಅಲ್ಲಿಯೇ ಸತ್ತುಹೋಗೋಣ. ನಾವು ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದ್ದೇವೆ. ಆದ್ದರಿಂದ ಆತನು ನಮಗೆ ಕುಡಿಯಲು ವಿಷಮಿಶ್ರಿತ ನೀರನ್ನು ಕೊಟ್ಟಿದ್ದಾನೆ.


ಇಸ್ರೇಲಿನ ದೇವರಾದ ಸರ್ವಶಕ್ತನಾದ ಯೆಹೋವನ ಸಂದೇಶವಿದು: “ಯೆಹೂದದ ಜನರು ಕಹಿಯಾದ ಆಹಾರವನ್ನು ತಿನ್ನುವಂತೆ ನಾನು ಬೇಗನೆ ಮಾಡುವೆನು; ಅವರು ವಿಷಮಿಶ್ರಿತ ನೀರನ್ನು ಕುಡಿಯುವಂತೆ ಮಾಡುವೆನು.


ಯೆಹೋವನು ನನಗೆ ಕುಡಿಯಲು ಈ ವಿಷವನ್ನು (ಶಿಕ್ಷೆಯನ್ನು) ಕೊಟ್ಟನು. ಕಹಿಯಾದ ಈ ಪಾನೀಯದಿಂದ ಆತನು ನನ್ನನ್ನು ತುಂಬಿಸಿದನು.


ಆತನು ನನ್ನನ್ನು ಕಠೋರತೆಯಿಂದಲೂ ಆಪತ್ತಿನಿಂದಲೂ ಸುತ್ತುವರಿದು ಮುತ್ತಿಗೆಹಾಕಿದ್ದಾನೆ.


ಅವರು ನನಗೆ ಕೊಟ್ಟದ್ದು ವಿಷ, ಆಹಾರವಲ್ಲ. ಅವರು ನನಗೆ ಕೊಟ್ಟದ್ದು ಹುಳಿರಸ, ದ್ರಾಕ್ಷಾರಸವಲ್ಲ.


ಆ ನಕ್ಷತ್ರಕ್ಕೆ “ಕಹಿ ಮರ” ಎಂದು ಹೆಸರು. ನೀರಿನಲ್ಲಿ ಮೂರನೆಯ ಒಂದು ಭಾಗವು ಕಹಿಯಾಯಿತು. ಈ ಕಹಿಯಾದ ನೀರನ್ನು ಕುಡಿದು ಅನೇಕ ಜನರು ಸತ್ತುಹೋದರು.


ಗೊಲ್ಗೊಥಾದಲ್ಲಿ ಸೈನಿಕರು ಆತನಿಗೆ ಕುಡಿಯಲು ದ್ರಾಕ್ಷಾರಸವನ್ನು ಕೊಟ್ಟರು. ಈ ದ್ರಾಕ್ಷಾರಸಕ್ಕೆ ನೋವು ನಿವಾರಕ ಔಷಧಿಯನ್ನು ಬೆರೆಸಿದ್ದರು. ಆತನು ದ್ರಾಕ್ಷಾರಸದ ರುಚಿ ನೋಡಿ ಅದನ್ನು ಕುಡಿಯಲಿಲ್ಲ.


ನನ್ನ ಸಂಕಟವನ್ನು ಮತ್ತು ಮನೆಯಿಲ್ಲದ ಸ್ಥಿತಿಯನ್ನು ನೆನಸಿಕೊಂಡರೆ ಅದು ಕಹಿ ವಿಷದಂತಿದೆ.


ಇಲ್ಲಿರುವ ಯಾವ ಪುರುಷನಾಗಲಿ ಸ್ತ್ರೀಯಾಗಲಿ ಯಾವ ಗೋತ್ರದವರಾಗಲಿ ನಿಮ್ಮ ದೇವರಾದ ಯೆಹೋವನನ್ನು ಬಿಟ್ಟುಹೋಗದಂತೆ ನೋಡಿಕೊಳ್ಳಿರಿ. ಯಾವನೂ ಹೋಗಿ ಬೇರೆ ಜನಾಂಗಗಳ ದೇವರುಗಳ ಸೇವೆಮಾಡಬಾರದು. ಅಂಥದ್ದನ್ನು ಮಾಡುವ ಜನರು ಕಹಿಯಾದ ಮತ್ತು ವಿಷಭರಿತವಾದ ಹಣ್ಣನ್ನು ಬಿಡುವ ಗಿಡದಂತಿದ್ದಾರೆ.


ನನ್ನ ಹೆಸರಿನಲ್ಲಿ ಬೋಧನೆ ಮಾಡುತ್ತಿರುವ ಈ ಪ್ರವಾದಿಗಳ ಬಗ್ಗೆ ನಾನು ಹೇಳುವದು ಇಷ್ಟೇ. ನಾನು ಆ ಪ್ರವಾದಿಗಳನ್ನು ಕಳುಹಿಸಿಲ್ಲ. ಆ ಪ್ರವಾದಿಗಳು ‘ಶತ್ರುಗಳು ಖಡ್ಗಧಾರಿಗಳಾಗಿ ಎಂದಿಗೂ ಈ ದೇಶದ ಮೇಲೆ ಧಾಳಿ ಮಾಡುವದಿಲ್ಲ. ಈ ದೇಶದಲ್ಲಿ ಎಂದೂ ಕ್ಷಾಮ ಕಾಣಿಸಿಕೊಳ್ಳುವದಿಲ್ಲ’ ಎಂದು ಹೇಳಿದ್ದಾರೆ. ಆದರೆ ಆ ಪ್ರವಾದಿಗಳು ಹಸಿವಿನ ತಾಪದಿಂದ ಸಾಯುತ್ತಾರೆ ಮತ್ತು ಶತ್ರುವಿನ ಖಡ್ಗ ಅವರನ್ನು ಕೊಲ್ಲುತ್ತದೆ.


ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ಆ ಸಮಯದಲ್ಲಿ ಈ ಪ್ರಪಂಚದಲ್ಲಿರುವ ವಿಗ್ರಹಗಳನ್ನೆಲ್ಲಾ ನಾನು ತೆಗೆದುಬಿಡುವೆನು. ಜನರು ಅವುಗಳ ಹೆಸರನ್ನು ತಮ್ಮ ನೆನಪಿಗೆ ತಾರರು. ಸುಳ್ಳು ಪ್ರವಾದಿಗಳನ್ನೂ ಅಶುದ್ಧ ಆತ್ಮಗಳನ್ನೂ ನಾನು ಭೂಮಿಯ ಮೇಲಿಂದ ತೆಗೆದುಬಿಡುವೆನು.


ಯೆಹೂದದ ಜನರು ತಮ್ಮದೇ ಆದ ರೀತಿಯಲ್ಲಿ ಜೀವಿಸಿದರು. ಅವರು ಹಟಮಾರಿಗಳಾಗಿದ್ದರು. ಅವರು ಸುಳ್ಳುದೇವರಾದ ಬಾಳನನ್ನು ಅನುಸರಿಸಿದರು. ಅವರ ಪೂರ್ವಿಕರು ಸುಳ್ಳುದೇವರುಗಳ ಸೇವೆ ಮಾಡುವದನ್ನು ಅವರಿಗೆ ಕಲಿಸಿದರು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು