Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 23:28 - ಪರಿಶುದ್ದ ಬೈಬಲ್‌

28 ಹೊಟ್ಟು, ಗೋಧಿಯ ಕಾಳಲ್ಲ. ಅದೇ ರೀತಿ, ಆ ಪ್ರವಾದಿಗಳ ಕನಸುಗಳು ನನ್ನ ಸಂದೇಶಗಳಲ್ಲ. ಒಬ್ಬ ವ್ಯಕ್ತಿಗೆ ತನ್ನ ಕನಸಿನ ಬಗ್ಗೆ ಹೇಳಬೇಕೆನಿಸಿದರೆ, ಅವನು ಹೇಳಲಿ. ಆದರೆ ನನ್ನ ಸಂದೇಶವನ್ನು ಕೇಳಿದ ಮನುಷ್ಯನು ಆ ಸಂದೇಶವನ್ನು ಯಥಾರ್ಥವಾಗಿ ಹೇಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಕನಸು ಕಂಡ ಪ್ರವಾದಿಯು ಕನಸನ್ನು ತಿಳಿಸಿದರೆ ತಿಳಿಸಲಿ. ನನ್ನ ಮಾತನ್ನು ಕೇಳಿದವನೋ ನನ್ನ ಮಾತನ್ನು ಯಥಾರ್ಥವಾಗಿ ನುಡಿಯಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಆದರೆ ನನ್ನ ವಾಕ್ಯವನ್ನು ಕೇಳಿದವನು ಅದನ್ನು ಯಥಾರ್ಥವಾಗಿ ನುಡಿಯಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ನನ್ನ ಮಾತನ್ನು ಕೇಳಿದವನೋ ನನ್ನ ಮಾತನ್ನು ಯಥಾರ್ಥವಾಗಿ ನುಡಿಯಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಕನಸುಕಂಡ ಪ್ರವಾದಿಯು ಕನಸನ್ನು ತಿಳಿಸಿದರೆ ತಿಳಿಸಲಿ ಆದರೆ ನನ್ನ ವಾಕ್ಯವನ್ನು ಕೇಳಿದವನು ಅದನ್ನು ಯಥಾರ್ಥವಾಗಿ ನುಡಿಯಲಿ. ಹೊಟ್ಟನ್ನು ಕಾಳಿನೊಂದಿಗೆ ಹೋಲಿಸಲಾದೀತೆ?” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 23:28
15 ತಿಳಿವುಗಳ ಹೋಲಿಕೆ  

ನಮ್ಮ ಪ್ರಭುವಾದ ಕ್ರಿಸ್ತ ಯೇಸು ನನ್ನ ಮೇಲಿನ ನಂಬಿಕೆಯಿಂದ, ಆತನ ಸೇವೆ ಮಾಡುವ ಈ ಕಾರ್ಯವನ್ನು ನನಗೆ ದಯಪಾಲಿಸಿದ್ದರಿಂದ ನಾನು ಆತನಿಗೆ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ಆತನು ನನ್ನನ್ನು ಬಲಪಡಿಸುತ್ತಾನೆ.


ಇತರ ಅನೇಕರು ಮಾಡುವಂತೆ ನಾವು ದೇವರ ವಾಕ್ಯವನ್ನು ಕಲಬೆರಕೆ ಮಾಡುವುದಿಲ್ಲ. ಆದರೆ ಕ್ರಿಸ್ತನಲ್ಲಿದ್ದುಕೊಂಡು ದೇವರ ಸನ್ನಿಧಾನದಲ್ಲಿ ಸತ್ಯವನ್ನು ಹೇಳುತ್ತೇವೆ. ದೇವರಿಂದ ಕಳುಹಿಸಲ್ಪಟ್ಟ ಜನರಂತೆ ನಾವು ಮಾತಾಡುತ್ತೇವೆ.


ಪ್ರಭುವು ಹೀಗೆಂದನು: “ವಿವೇಕಿಯೂ ನಂಬಿಗಸ್ತನೂ ಆದ ಆಳು ಯಾರು? ಕಾಲಕಾಲಕ್ಕೆ ಸರಿಯಾಗಿ ಕೂಲಿಯಾಳುಗಳಿಗೆ ದವಸಧಾನ್ಯವನ್ನು ಅಳೆದುಕೊಟ್ಟು, ಮನೆಯ ಮೇಲ್ವಿಚಾರಣೆಯನ್ನು ನೋಡಿಕೊಳ್ಳಲು ಯಜಮಾನನಿಂದ ನೇಮಿಸಲ್ಪಟ್ಟವನೇ.


“ವಿವೇಕಿಯೂ ನಂಬಿಗಸ್ತನೂ ಆದ ಸೇವಕನು ಯಾರು? ಇತರ ಸೇವಕರಿಗೆ ಆಹಾರವನ್ನು ತಕ್ಕ ಸಮಯದಲ್ಲಿ ಕೊಡುವುದಕ್ಕಾಗಿ ಯಜಮಾನನು ಯಾವ ಸೇವಕನ ಮೇಲೆ ಭರವಸೆಯಿಡುತ್ತಾನೋ ಅವನೇ.


ಸತ್ಯಸಾಕ್ಷಿಯು ಸುಳ್ಳು ಹೇಳುವುದಿಲ್ಲ. ಆದರೆ ಸುಳ್ಳು ಸಾಕ್ಷಿಯು ಸುಳ್ಳನ್ನೇ ಹೇಳುವುದು.


ಹೀಗಿರಲು, ಜವಾಬ್ದಾರಿಕೆಯನ್ನು ವಹಿಸಿಕೊಂಡವರು ತಾವು ತಮ್ಮ ಕೆಲಸದಲ್ಲಿ ನಂಬಿಗಸ್ತರೆಂಬುದನ್ನು ತೋರಿಸಬೇಕು.


ಈ ಭೂಮಿಯನ್ನು ಏಕೆ ಹಾಳು ಮಾಡಲಾಯಿತು? ಇದನ್ನು ಯಾರೂ ಹೋಗದ ಬರಿದಾದ ಮರಳುಗಾಡನ್ನಾಗಿ ಏಕೆ ಮಾಡಲಾಯಿತು? ಇದನ್ನರಿತ ಜ್ಞಾನಿಯೊಬ್ಬನಿದ್ದಾನೆಯೇ? ಯೆಹೋವನಿಂದ ತಿಳಿದುಕೊಂಡ ಜ್ಞಾನಿಯೊಬ್ಬನಿದ್ದಾನೆಯೇ? ಯೆಹೋವನ ಸಂದೇಶವನ್ನು ವಿವರಿಸಬಲ್ಲವನೊಬ್ಬನಿದ್ದಾನೆಯೇ?


ಯೆಹೂದದ ಸ್ತ್ರೀಯರೇ, ಯೆಹೋವನ ಸಂದೇಶವನ್ನು ಕೇಳಿರಿ. ಯೆಹೋವನ ಬಾಯಿಂದ ಬರುವ ಮಾತುಗಳನ್ನು ಕೇಳಲು ನಿಮ್ಮ ಕಿವಿಗಳನ್ನು ತೆರೆಯಿರಿ. ಯೆಹೋವನು ಹೇಳುತ್ತಾನೆ, “ಹೇಗೆ ದೊಡ್ಡ ಧ್ವನಿಯಲ್ಲಿ ಅಳಬೇಕೆಂಬುದನ್ನು ನಿಮ್ಮ ಹೆಣ್ಣುಮಕ್ಕಳಿಗೆ ಕಲಿಸಿಕೊಡಿ. ಪ್ರತಿಯೊಬ್ಬ ಸ್ತ್ರೀಯು ಈ ಶೋಕಗೀತೆಯನ್ನು ಹಾಡಲು ಕಲಿಯಬೇಕು.


“ನನ್ನ ಹೆಸರಿನಿಂದ ಸುಳ್ಳುಬೋಧನೆ ಮಾಡುವ ಪ್ರವಾದಿಗಳಿದ್ದಾರೆ. ಅವರು ‘ನಾನೊಂದು ಕನಸು ಕಂಡೆ, ನಾನೊಂದು ಕನಸು ಕಂಡೆ’ ಎಂದು ಹೇಳುತ್ತಾರೆ.


ಆಗ ಪ್ರವಾದಿಯಾದ ಯೆರೆಮೀಯನು, “ನಾನು ಏನು ಮಾಡಬೇಕೆಂದು ನೀವು ಬಯಸುವಿರೆಂಬುದು ನನಗೆ ಗೊತ್ತು. ನೀವು ಹೇಳಿದಂತೆಯೇ, ನಿಮ್ಮ ದೇವರಾದ ಯೆಹೋವನನ್ನು ಪ್ರಾರ್ಥಿಸುವೆನು. ಯೆಹೋವನು ಹೇಳಿದ್ದನ್ನೆಲ್ಲವನ್ನು ನಾನು ನಿಮಗೆ ಹೇಳುತ್ತೇನೆ. ನಾನು ನಿಮ್ಮಿಂದ ಏನನ್ನೂ ಮುಚ್ಚಿಡುವದಿಲ್ಲ” ಎಂದನು.


ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ಬುದ್ಧಿಯಿಲ್ಲದ ಪ್ರವಾದಿಗಳೇ, ನಿಮಗೆ ಸಂಕಟಗಳು ಬರುವವು. ನೀವು ನಿಮ್ಮ ಸ್ವಂತ ಆತ್ಮವನ್ನು ಅನುಸರಿಸುತ್ತೀರಿ. ನೀವು ದರ್ಶನಗಳಲ್ಲಿ ಏನನ್ನೂ ಕಂಡಿಲ್ಲ.


ಆದರೆ ಮೀಕಾಯೆಹುವು, “ಇಲ್ಲ! ಯೆಹೋವನಾಣೆ, ಆತನು ತಿಳಿಸುವುದನ್ನೇ ನಾನು ಹೇಳುತ್ತೇನೆ” ಎಂದು ಉತ್ತರಿಸಿದನು.


ಆದರೆ ಅಹಾಬನು, “ಯೆಹೋವನ ಶಕ್ತಿಯಿಂದ ನೀನು ಮಾತನಾಡುತ್ತಿಲ್ಲ. ನೀನು ನಿನ್ನ ಸ್ವಂತ ಮಾತುಗಳನ್ನು ಹೇಳುತ್ತಿರುವೆ. ನನಗೆ ನೀನು ನಿಜವನ್ನು ಹೇಳು! ನಾನು ನಿನಗೆ ಎಷ್ಟು ಸಲ ಹೇಳಬೇಕು? ಯೆಹೋವನು ತಿಳಿಸುವುದನ್ನೇ ನನಗೆ ಹೇಳು!” ಎಂದು ಕೇಳಿದನು.


ನನ್ನ ಬಡಿತಕ್ಕೆ ಈಡಾದ ಜನರೇ, ಸರ್ವಶಕ್ತನೂ ದೇವರೂ ಆಗಿರುವ ಯೆಹೋವನು ಹೇಳಿದ್ದನ್ನೆಲ್ಲಾ ಇಸ್ರೇಲರಾದ ನಿಮಗೆ ತಿಳಿಸಿದ್ದೇನೆ. ಕಣದಲ್ಲಿ ಧಾನ್ಯವು ನುಚ್ಚುನೂರಾಗುವಂತೆ ನೀವು ನಜ್ಜುಗುಜ್ಜಾಗುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು