Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 23:3 - ಪರಿಶುದ್ದ ಬೈಬಲ್‌

3 “ನಾನು ನನ್ನ ಕುರಿಗಳನ್ನು ಬೇರೆ ದೇಶಗಳಿಗೆ ಕಳುಹಿಸಿದೆ. ಆದರೆ ಉಳಿದ ನನ್ನ ಕುರಿಗಳನ್ನು ಒಂದೆಡೆ ಸೇರಿಸುವೆನು. ಅವುಗಳನ್ನು ಅವುಗಳ ಹುಲ್ಲುಗಾವಲಿಗೆ ತರುವೆನು. ಅವುಗಳಿಗೆ ಅನೇಕ ಮಕ್ಕಳಾಗಿ ಅವುಗಳ ಸಂಖ್ಯೆ ಬೆಳೆಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನಾನು ನನ್ನ ಮಂದೆಯನ್ನು ಯಾವ ದೇಶಗಳಿಗೆ ಅಟ್ಟಿಬಿಟ್ಟೆನೋ, ಆ ಸಕಲ ದೇಶಗಳಿಂದ ಉಳಿದ ಕುರಿಗಳನ್ನು ಕೂಡಿಸಿ, ತಮ್ಮ ತಮ್ಮ ಹಟ್ಟಿಗಳಿಗೆ ತಿರುಗಿ ಬರಮಾಡುವೆನು; ಅವು ದೊಡ್ಡ ಸಂತಾನವಾಗಿ ಹೆಚ್ಚುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ನನ್ನ ಮಂದೆಯನ್ನು ಯಾವ ಯಾವ ದೇಶಗಳಿಗೆ ಅಟ್ಟಲಾಗಿದೆಯೋ ಆ ಎಲ್ಲ ದೇಶಗಳಿಂದ ಅಳಿದುಳಿದ ಕುರಿಗಳನ್ನು ಒಟ್ಟುಗೂಡಿಸಿ ತಮ್ಮ ತಮ್ಮ ಹಟ್ಟಿಗಳಿಗೆ ಮರಳಿ ಬರಮಾಡುವೆನು. ಅವು ದೊಡ್ಡ ಪೀಳಿಗೆಯಾಗಿ ಬೆಳೆಯುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನಾನು ನನ್ನ ಮಂದೆಯನ್ನು ಯಾವ ದೇಶಗಳಿಗೆ ಅಟ್ಟಿಬಿಟ್ಟೆನೋ ಆ ಸಕಲ ದೇಶಗಳಿಂದ ಉಳಿದ ಕುರಿಗಳನ್ನು ಕೂಡಿಸಿ ತಮ್ಮ ತಮ್ಮ ಹಟ್ಟಿಗಳಿಗೆ ತಿರಿಗಿ ಬರಮಾಡುವೆನು; ಅವು ದೊಡ್ಡ ಪೀಳಿಗೆಯಾಗಿ ಹೆಚ್ಚುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 “ಆದರೆ ನಾನು ನನ್ನ ಮಂದೆಯ ಶೇಷವನ್ನು, ನಾನು ಅವರನ್ನು ಓಡಿಸಿಬಿಟ್ಟ ಎಲ್ಲಾ ದೇಶಗಳಿಂದ ಕೂಡಿಸಿ, ಅವರನ್ನು ತಮ್ಮ ಹಟ್ಟಿಗಳಿಗೆ ತಿರುಗಿ ತರುವೆನು. ಅವರು ಪೀಳಿಗೆಯಾಗಿ ಹೆಚ್ಚುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 23:3
28 ತಿಳಿವುಗಳ ಹೋಲಿಕೆ  

‘ಇಸ್ರೇಲರನ್ನು ಮತ್ತು ಯೆಹೂದ್ಯರನ್ನು ತಮ್ಮ ಪ್ರದೇಶವನ್ನು ಬಿಟ್ಟುಹೋಗಲು ನಾನು ಒತ್ತಾಯಿಸಿದ್ದೇನೆ. ನಾನು ಅವರ ಮೇಲೆ ತುಂಬ ಕೋಪಗೊಂಡಿದ್ದೆ. ಆದರೆ ನಾನು ಅವರನ್ನು ಈ ಸ್ಥಳಕ್ಕೆ ಹಿಂದಿರುಗಿಸುವೆನು. ನಾನು ಒತ್ತಾಯಿಸಿ ಅವರನ್ನು ಅಟ್ಟಿದ ಸ್ಥಳಗಳಿಂದ ಅವರನ್ನು ಒಟ್ಟುಗೂಡಿಸುವೆನು. ಅವರನ್ನು ಪುನಃ ಈ ಸ್ಥಳಕ್ಕೆ ಕರೆತರುವೆನು. ಅವರು ನೆಮ್ಮದಿಯಿಂದ ಮತ್ತು ಸುರಕ್ಷಿತವಾಗಿ ಇರುವಂತೆ ಮಾಡುವೆನು.


ನಾನು ನಿಮಗೆ ದೊರೆಯುವೆನು.” ಇದು ಯೆಹೋವನ ನುಡಿ. “ನಾನು ನಿಮ್ಮನ್ನು ನಿಮ್ಮ ಬಂಧನದಿಂದ ಬಿಡಿಸಿ ಕರೆದುತರುವೆನು. ನಾನು ಈ ಸ್ಥಳವನ್ನು ಬಿಡಲು ನಿಮಗೆ ಒತ್ತಾಯಿಸಿದೆ. ಆದರೆ ನಾನು ನಿಮ್ಮನ್ನು ಕಳುಹಿಸಿದ್ದ ಎಲ್ಲಾ ಜನಾಂಗಗಳಿಂದ ಮತ್ತು ಎಲ್ಲಾ ಸ್ಥಳಗಳಿಂದ ನಿಮ್ಮನ್ನು ಒಟ್ಟುಗೂಡಿಸಿ ಈ ಸ್ಥಳಕ್ಕೆ ಕರೆದು ತರುವೆನು.” ಇದು ಯೆಹೋವನ ನುಡಿ.


ಏಕೆಂದರೆ ನಾನು ನನ್ನ ಜನರಾದ ಇಸ್ರೇಲರನ್ನು ಮತ್ತು ಯೆಹೂದ್ಯರನ್ನು ಸೆರೆವಾಸದಿಂದ ಕರೆದುಕೊಂಡು ಬರುವ ದಿನಗಳು ಬರುತ್ತಿವೆ.” ಈ ಸಂದೇಶವು ಯೆಹೋವನಿಂದ ಬಂದದ್ದು. “ಆ ಜನರನ್ನು ನಾನು ಅವರ ಪೂರ್ವಿಕರಿಗೆ ಕೊಟ್ಟ ಪ್ರದೇಶದಲ್ಲಿ ನೆಲಸುವಂತೆ ಮಾಡುತ್ತೇನೆ. ಆಗ ನನ್ನ ಜನರು ಆ ಪ್ರದೇಶದ ಒಡೆತನ ಪಡೆಯುವರು.”


ಆದ್ದರಿಂದ ಹೀಗೆ ಹೇಳು: ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ನಾನು ನಿಮ್ಮನ್ನು ಜನಾಂಗಗಳಿಂದ ಒಟ್ಟುಗೂಡಿಸುವೆನು; ನೀವು ಚದರಿಸಲ್ಪಟ್ಟಿರುವ ದೇಶಗಳಿಂದ ನಾನು ನಿಮ್ಮನ್ನು ಒಟ್ಟುಗೂಡಿಸುವೆನು; ಮತ್ತು ನಾನು ನಿಮಗೆ ಇಸ್ರೇಲ್ ದೇಶವನ್ನು ಕೊಡುವೆನು.


ನಾನು ಇಸ್ರೇಲರನ್ನು ಉತ್ತರದ ದೇಶದಿಂದ ತರುವೆನು. ನಾನು ಜಗತ್ತಿನ ದೂರದೂರದ ಸ್ಥಳಗಳಿಂದ ಇಸ್ರೇಲರನ್ನು ಒಟ್ಟುಗೂಡಿಸುವೆನೆಂದು ತಿಳಿದುಕೊಳ್ಳಿರಿ. ಅವರಲ್ಲಿ ಕೆಲವರು ಕುರುಡರಾಗಿರುವರು; ಕುಂಟರಾಗಿರುವರು, ಕೆಲವು ಸ್ತ್ರೀಯರು ಗರ್ಭಿಣಿಯರಾಗಿದ್ದು ಹೆರಿಗೆಯ ದಿನಗಳು ತುಂಬಿದವರಾಗಿರುತ್ತಾರೆ. ಬಹಳಷ್ಟು ಜನರು ಹಿಂತಿರುಗಿಬರುತ್ತಾರೆ.


ನಮ್ಮ ದೇವರಾದ ಯೆಹೋವನು ನಮ್ಮನ್ನು ರಕ್ಷಿಸಿದನು! ಅನ್ಯಜನಾಂಗಗಳಿಂದ ನಮ್ಮನ್ನು ಬಿಡಿಸಿಕೊಂಡು ಬಂದನು. ಆಗ ನಾವು ಆತನ ಪವಿತ್ರ ಹೆಸರನ್ನು ಕೊಂಡಾಡುವುದಕ್ಕೂ ಆತನನ್ನು ಸಂಕೀರ್ತಿಸುವುದಕ್ಕೂ ಸಾಧ್ಯವಾಯಿತು.


ದೇವರು ಹೇಳಿದ್ದೇನೆಂದರೆ, “ನಾನು ಆ ದೇಶಗಳಿಂದ ನಿಮ್ಮನ್ನು ತೆಗೆದು, ನಿಮ್ಮನ್ನು ಒಟ್ಟುಗೂಡಿಸಿ ನಿಮ್ಮ ಸ್ವದೇಶಕ್ಕೆ ತಿರುಗಿ ಬರಮಾಡುವೆನು.


ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಇಸ್ರೇಲ್ ಜನರು ನನ್ನ ಬಳಿಗೆ ಬಂದು ಹೀಗೆ ಮಾಡಬೇಕೆಂದು ನನ್ನನ್ನು ಕೇಳಿಕೊಳ್ಳಲು ಅವಕಾಶ ಕೊಡುವೆನು. ನಾನು ಅವರನ್ನು ಅಭಿವೃದ್ಧಿಪಡಿಸಿ ಅವರ ಸಂಖ್ಯೆಯನ್ನು ಕುರಿಹಿಂಡಿನೋಪಾದಿಯಲ್ಲಿ ಹೆಚ್ಚಿಸುವೆನು.


ನಿನ್ನ ಜನರು ದೇಶಕ್ಕೆ ಹಿಂತಿರುಗುವರು. ಅವರು ಅಶ್ಶೂರದಿಂದಲೂ ಈಜಿಪ್ಟ್ ನಗರಗಳಿಂದಲೂ ಹಿಂದೆ ಬರುವರು. ನಿನ್ನ ಜನರು ಈಜಿಪ್ಟಿನಿಂದಲೂ ಯೂಫ್ರೇಟೀಸ್ ನದಿಯ ಆಚೆಕಡೆಯಿಂದಲೂ ಬರುವರು. ಪಶ್ಟಿಮದ ಸಮುದ್ರದ ಕಡೆಯಿಂದ ಬರುವರು. ಪೂರ್ವದ ಪರ್ವತಗಳ ಕಡೆಯಿಂದ ಬರುವರು.


“ಯೆಹೂದದ ಜನರು ತಮ್ಮ ಮನೆಗಳನ್ನು ಮತ್ತು ಪ್ರದೇಶವನ್ನು ಬಿಡುವಂತೆ ಮಾಡುತ್ತೇನೆ. ಆ ಜನರನ್ನು ಪರದೇಶಕ್ಕೆ ಒಯ್ಯಲಾಗುವುದು. ಯುದ್ಧದಲ್ಲಿ ಮರಣ ಹೊಂದದೆ ಅಳಿದುಳಿದ ಕೆಲವು ಮಂದಿ ಯೆಹೂದಿಯರು ತಾವು ಸತ್ತುಹೋಗಿದ್ದರೆ ಚೆನ್ನಾಗಿತ್ತು ಎಂದುಕೊಳ್ಳುವರು.” ಇದು ಯೆಹೋವನ ನುಡಿ.


ಯೆಹೋವನು ಹೀಗೆಂದನು: “ನನ್ನ ಸೇವಕನಾದ ಯಾಕೋಬನೇ, ಭಯಪಡಬೇಡ! ಇಸ್ರೇಲೇ, ಅಂಜಬೇಡ, ನಾನು ನಿಮ್ಮನ್ನು ಆ ದೂರಪ್ರದೇಶದಿಂದ ರಕ್ಷಿಸುವೆನು. ಆ ದೂರದೇಶದಲ್ಲಿ ನೀವು ಬಂಧಿಗಳಾಗಿದ್ದೀರಿ, ಆದರೆ ನಾನು ನಿಮ್ಮ ವಂಶದವರನ್ನು ರಕ್ಷಿಸುತ್ತೇನೆ. ಅವರನ್ನು ಆ ನಾಡಿನಿಂದ ಮತ್ತೆ ಕರೆದುತರುತ್ತೇನೆ. ಯಾಕೋಬು ಮತ್ತೆ ನೆಮ್ಮದಿಯಿಂದ ಇರುವುದು. ಜನರು ಯಾಕೋಬನನ್ನು ಪೀಡಿಸುವದಿಲ್ಲ; ನನ್ನ ಜನರನ್ನು ಹೆದರಿಸುವ ಶತ್ರುಗಳಿರುವದಿಲ್ಲ.” ಇದು ಯೆಹೋವನ ನುಡಿ.


ಯೆಹೋವನು ಹೀಗೆಂದನು: “ಸಂತೋಷದಿಂದಿರಿ, ಯಾಕೋಬಿಗೋಸ್ಕರ ಹಾಡಿರಿ. ಮಹಾ ಜನಾಂಗವಾದ ಇಸ್ರೇಲಿಗೋಸ್ಕರ ಹರ್ಷಧ್ವನಿ ಮಾಡಿರಿ. ಸ್ತೋತ್ರಗೀತೆಗಳನ್ನು ಹಾಡಿರಿ. ‘ಯೆಹೋವನು ತನ್ನ ಜನರನ್ನು ರಕ್ಷಿಸಿದನು. ಇಸ್ರೇಲ್ ಜನಾಂಗದಲ್ಲಿ ಅಳಿದುಳಿದ ಜನರನ್ನು ಆತನು ರಕ್ಷಿಸಿದನು’ ಎಂದು ಕೂಗಿರಿ.


“ನನ್ನ ಸೇವಕನಾದ ಯಾಕೋಬೇ, ಭಯಪಡಬೇಡ. ಇಸ್ರೇಲೇ, ಅಂಜಬೇಡ. ಆ ದೂರಸ್ಥಳಗಳಿಂದ ನಾನು ನಿನ್ನನ್ನು ಖಂಡಿತವಾಗಿ ರಕ್ಷಿಸುತ್ತೇನೆ. ಬಂಧಿಯಾಗಿರುವ ದೇಶಗಳಿಂದ ನಾನು ನಿನ್ನ ಮಕ್ಕಳನ್ನು ರಕ್ಷಿಸುತ್ತೇನೆ. ಯಾಕೋಬು ಪುನಃ ನೆಮ್ಮದಿಯಾಗಿಯೂ ಸುರಕ್ಷಿತವಾಗಿಯೂ ಇರುವುದು. ಯಾರೂ ಅದನ್ನು ಹೆದರಿಸಲಾರರು.”


“ಬಳಿಕ ನಾನು ನಿಮ್ಮ ಮೇಲೆ ಕಟಾಕ್ಷವಿಟ್ಟು ನಿಮಗೆ ಅನೇಕ ಮಕ್ಕಳನ್ನು ಅನುಗ್ರಹಿಸುವೆನು. ನಾನು ನಿಮ್ಮೊಡನೆ ಮಾಡಿಕೊಂಡ ನನ್ನ ಒಡಂಬಡಿಕೆಯನ್ನು ನೆರವೇರಿಸುವೆನು.


ಆಗ ಅವರು ‘ಇಸ್ರೇಲರನ್ನು ಉತ್ತರದ ನಾಡಿನಿಂದಲೂ ಎಲ್ಲಾ ದೇಶಗಳಿಂದಲೂ ಹೊರತಂದ ಯೆಹೋವನ ಜೀವದಾಣೆ.’ ಇಸ್ರೇಲರನ್ನು ನಾನು ಅವರ ಪೂರ್ವಿಕರಿಗೆ ಕೊಟ್ಟ ದೇಶಕ್ಕೆ ಮತ್ತೆ ಕರೆದುಕೊಂಡು ಬರುವೆನು. ಆದ್ದರಿಂದಲೇ ಜನರು ಹೀಗೆ ಹೇಳುವರು.”


“‘ಆದರೆ ಇಸ್ರೇಲನ್ನು ಪುನಃ ಅದರ ಹುಲ್ಲುಗಾವಲಿಗೆ ತರುವೆನು. ಅದು ಕರ್ಮೆಲ್ ಬೆಟ್ಟದ ಮೇಲೆ ಮತ್ತು ಬಾಷಾನಿನ ಪ್ರದೇಶದಲ್ಲಿ ಮೇಯುವದು. ಅದು ತಿಂದು ತೇಗುವದು. ಅದು ಎಫ್ರಾಯೀಮಿನ ಮತ್ತು ಗಿಲ್ಯಾದಿನ ಬೆಟ್ಟಗಳಲ್ಲಿ ತಿಂದು ತೃಪ್ತಿಪಡುವದು.’”


ನಾನು ನಿನಗೆ ಅನೇಕ ಜನರನ್ನೂ ಪ್ರಾಣಿಗಳನ್ನೂ ಕೊಡುವೆನು. ಪ್ರಾಣಿಗಳು ವೃದ್ಧಿಯಾಗುವವು ಮತ್ತು ಜನರು ಹೆಚ್ಚು ಮಕ್ಕಳನ್ನು ಪಡೆಯುವರು. ಹಿಂದಿನ ಕಾಲದಲ್ಲಿ ನಿನ್ನ ದೇಶ ಜನಭರಿತವಾಗಿದ್ದಂತೆ ಈಗಲೂ ಆಗುವ ಹಾಗೆ ನಾನು ಜನರನ್ನು ತರಿಸುವೆನು. ನಿನ್ನ ದೇಶವು ಹಿಂದೆ ಇದ್ದುದಕ್ಕಿಂತಲೂ ಉತ್ತಮ ದೇಶವನ್ನಾಗಿ ಮಾಡುವೆನು. ಆಗ ನಾನು ಯೆಹೋವನೆಂದು ನೀನು ತಿಳಿದುಕೊಳ್ಳುವೆ.


ಯಾಕೋಬಿನ ಜನರೇ, ನಾನು ನಿಮ್ಮೆಲ್ಲರನ್ನು ಒಟ್ಟಾಗಿ ಸೇರಿಸುತ್ತೇನೆ. ಇಸ್ರೇಲಿನಲ್ಲಿ ಉಳಿದವರನ್ನೆಲ್ಲಾ ಒಟ್ಟುಗೂಡಿಸುತ್ತೇನೆ. ಹಟ್ಟಿಯೊಳಗೆ ಕುರಿಗಳನ್ನು ಸೇರಿಸುವಂತೆ, ಹುಲ್ಲುಗಾವಲಿನಲ್ಲಿ ಕುರಿಮಂದೆ ಸೇರಿಸಲ್ಪಡುವಂತೆ ನಾನು ಅವರನ್ನು ಒಟ್ಟುಗೂಡಿಸುವೆನು. ಆಗ ಆ ಸ್ಥಳವು ಜನಸಮೂಹದ ಗದ್ದಲದಿಂದ ತುಂಬಿಹೋಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು