Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 25:16 - ಪರಿಶುದ್ದ ಬೈಬಲ್‌

16 ಅವರು ಈ ದ್ರಾಕ್ಷಾರಸವನ್ನು ಕುಡಿಯುವರು. ಆಮೇಲೆ ಅವರು ವಾಂತಿ ಮಾಡಿಕೊಳ್ಳುವರು ಮತ್ತು ಹುಚ್ಚರಂತೆ ವರ್ತಿಸುವರು. ನಾನು ಬೇಗನೆ ಅವರ ವಿರುದ್ಧ ಖಡ್ಗವನ್ನು ಕಳುಹಿಸುತ್ತಿರುವುದರಿಂದ ಅವರು ಹೀಗೆ ಮಾಡುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನಾನು ಅವರಲ್ಲಿಗೆ ಖಡ್ಗವನ್ನು ಕಳುಹಿಸುವೆನು. ಆ ನನ್ನ ರೋಷವನ್ನು ಅವರು ಕುಡಿದು ಓಲಾಡುವರು, ಹುಚ್ಚುಚ್ಚಾಗುವರು” ಎಂದು ಅಪ್ಪಣೆಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಅವರು ಅದನ್ನು ಕುಡಿದು ಓಲಾಡುವರು, ನಾನು ಕಳಿಸುವ ಖಡ್ಗದಿಂದ ಹುಚ್ಚುಚ್ಚಾಗುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನಾನು ಅವರಲ್ಲಿಗೆ ಖಡ್ಗವನ್ನು ಕಳುಹಿಸುವೆನು; [ಆ ನನ್ನ ರೋಷವನ್ನು] ಅವರು ಕುಡಿದು ಓಲಾಡುವರು, ಹುಚ್ಚುಚ್ಚಾಗುವರು, ಎಂದು ಅಪ್ಪಣೆಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆಗ ಅವರು ಕುಡಿದು ನಾನು ಅವರ ಮಧ್ಯದಲ್ಲಿ ಕಳುಹಿಸುವ ಖಡ್ಗದ ನಿಮಿತ್ತ ಕದಲಿ ಓಲಾಡುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 25:16
16 ತಿಳಿವುಗಳ ಹೋಲಿಕೆ  

ಆದ್ದರಿಂದ ನಿನೆವೆಯೇ, ನೀನು ಸಹ ಕುಡಿದು ಅಮಲೇರಿದವನಂತೆ ಕೆಳಗೆ ಬಿದ್ದುಬಿಡುವೆ. ನೀನು ಅಡಗಿಕೊಳ್ಳಲು ಪ್ರಯತ್ನಿಸುವೆ. ವೈರಿಯಿಂದ ತಪ್ಪಿಸಿಕೊಳ್ಳಲು ಸುರಕ್ಷಿತವಾದ ಸ್ಥಳವನ್ನು ಹುಡುಕುವೆ.


ಬಾಬಿಲೋನ್ ಯೆಹೋವನ ಕೈಯಲ್ಲಿನ ಬಂಗಾರದ ಪಾತ್ರೆಯಂತಿತ್ತು. ಲೋಕವೆಲ್ಲವೂ ಮದ್ಯಪಾನ ಮಾಡುವಂತೆ ಬಾಬಿಲೋನ್ ಮಾಡಿತು. ಜನಾಂಗಗಳು ಬಾಬಿಲೋನಿನ ದ್ರಾಕ್ಷಾರಸವನ್ನು ಕುಡಿದು ಹುಚ್ಚಾದವು.


ದೇವರ ಕೋಪವೆಂಬ ಮತ್ತು ಅವಳ ಲೈಂಗಿಕ ಪಾಪವೆಂಬ ದ್ರಾಕ್ಷಾರಸವನ್ನು ಲೋಕದ ಜನರೆಲ್ಲರೂ ಕುಡಿದು ಮತ್ತರಾದರು. ಭೂಲೋಕದ ರಾಜರುಗಳೆಲ್ಲ ಅವಳೊಂದಿಗೆ ಲೈಂಗಿಕ ಪಾಪ ಮಾಡಿದರು. ಭೂಲೋಕದ ವರ್ತಕರು ಅವಳ ಅತಿಯಾದ ಸುಖದಿಂದ ಶ್ರೀಮಂತರಾದರು.


ಅವನು ದೇವರ ಕೋಪವೆಂಬ ದ್ರಾಕ್ಷಾರಸವನ್ನು ಕುಡಿಯುತ್ತಾನೆ. ದೇವರ ಕೋಪವೆಂಬ ಬಟ್ಟಲಿನಲ್ಲಿ ಈ ದ್ರಾಕ್ಷಾರಸವನ್ನು ಅದರ ಪೂರ್ಣಶಕ್ತಿಯ ಸಮೇತವಾಗಿ ತಯಾರಿಸಲಾಗಿದೆ. ಅವನನ್ನು ಪರಿಶುದ್ಧ ದೇವದೂತರ ಮತ್ತು ಕುರಿಮರಿಯಾದಾತನ ಮುಂದೆ ಉರಿಯುವ ಗಂಧಕದಿಂದ ಯಾತನೆಪಡಿಸಲಾಗುವುದು.


ಎದೋಮಿನ ಜನರೇ, ಸಂತೋಷವಾಗಿರಿ. ಊಚ್ ದೇಶದಲ್ಲಿ ವಾಸವಾಗಿರುವ ಜನರೇ, ಸಂತೋಷವಾಗಿರಿ. ಆದರೆ ಜ್ಞಾಪಕದಲ್ಲಿಟ್ಟುಕೊಂಡಿರಿ, ಯೆಹೋವನ ಕೋಪದ ಪಾತ್ರೆಯು ನಿಮ್ಮ ಬಳಿಗೂ ಬರುವುದು. ನೀವು ಆ ಪಾತ್ರೆಯಿಂದ ಕುಡಿಯುವಾಗ ಮತ್ತೇರಿದವರಾಗಿ ನಿಮ್ಮನ್ನು ನೀವೇ ಬೆತ್ತಲು ಮಾಡಿಕೊಳ್ಳುವಿರಿ.


ಆ ಜನರು ಬಲಶಾಲಿಗಳಾದ ಸಿಂಹಗಳಂತೆ ವರ್ತಿಸುತ್ತಿದ್ದಾರೆ. ನಾನು ಅವರಿಗೊಂದು ಔತಣವನ್ನೇರ್ಪಡಿಸುವೆನು. ಅವರಿಗೆ ಮತ್ತೇರುವಂತೆ ಕುಡಿಸುವೆನು. ಅವರು ನಗುನಗುತ್ತಾ ಸಂತೋಷದಿಂದ ಕಾಲ ಕಳೆಯುವರು. ಆಮೇಲೆ ಅವರು ಶಾಶ್ವತವಾಗಿ ಮಲಗುವರು. ಅವರು ಮತ್ತೆ ಏಳಲಾರರು.” ಇದು ಯೆಹೋವನ ನುಡಿ.


“ಯೆರೆಮೀಯನೇ, ಇಸ್ರೇಲರ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳುತ್ತಾನೆಂದು ಆ ಜನಾಂಗಗಳಿಗೆ ಹೇಳು: ‘ನನ್ನ ರೋಷದ ಈ ಪಾತ್ರೆಯಿಂದ ಕುಡಿಯಿರಿ, ಕುಡಿದು ಅಮಲೇರಿ ವಾಂತಿಮಾಡಿಕೊಳ್ಳಿ, ಕೆಳಗೆ ಬಿದ್ದು ಮೇಲಕ್ಕೆ ಏಳದಿರಿ, ಏಕೆಂದರೆ ನಾನು ನಿಮ್ಮನ್ನು ಕೊಲ್ಲಲು ಒಂದು ಖಡ್ಗವನ್ನು ಕಳುಹಿಸುತ್ತಿದ್ದೇನೆ.’


ನಂತರ ಎರಡನೆಯ ದೇವದೂತನು ಮೊದಲನೆಯ ದೇವದೂತನನ್ನು ಹಿಂಬಾಲಿಸುತ್ತಾ, “ಅವಳು ನಾಶವಾದಳು! ಬಾಬಿಲೋನ್ ಎಂಬ ನಗರಿಯು ನಾಶವಾದಳು! ಆಕೆಯು ಸಕಲ ಜನಾಂಗಗಳಿಗೆ ತನ್ನ ಜಾರತ್ವವೆಂಬ ಮತ್ತು ದೇವರ ಕೋಪವೆಂಬ ದ್ರಾಕ್ಷಾರಸವನ್ನು ಕುಡಿಸಿದಳು” ಎಂದು ಹೇಳಿದನು.


ಯೆಹೋವನು ನನಗೆ ಕುಡಿಯಲು ಈ ವಿಷವನ್ನು (ಶಿಕ್ಷೆಯನ್ನು) ಕೊಟ್ಟನು. ಕಹಿಯಾದ ಈ ಪಾನೀಯದಿಂದ ಆತನು ನನ್ನನ್ನು ತುಂಬಿಸಿದನು.


ಯಾಕೆಂದರೆ ನನ್ನ ಪರಿಶುದ್ಧ ಪರ್ವತದಲ್ಲಿ ರಕ್ತವನ್ನು ಸುರಿಸಿದೆ. ನೀನು ಹುಟ್ಟಲೇ ಇಲ್ಲ ಎಂಬುದಾಗಿ ಅನಿಸುವದು. ಆದ್ದರಿಂದ ಇತರ ಜನಾಂಗಗಳು ನಿನ್ನ ರಕ್ತವನ್ನು ಸುರಿಸುತ್ತವೆ. ನೀನು ಕೊನೆಗೊಳ್ಳುವೆ.


“ಯೆರೆಮೀಯನೇ, ಯೆಹೂದದ ಜನರಿಗೆ, ‘ಇಸ್ರೇಲಿನ ದೇವರಾದ ಯೆಹೋವನು ಪ್ರತಿಯೊಂದು ಚರ್ಮದ ಬುದ್ದಲಿಯು ದ್ರಾಕ್ಷಾರಸದಿಂದ ತುಂಬಿರಬೇಕು ಎಂದು ಹೇಳುತ್ತಾನೆ’ ಎಂದು ಹೇಳು. ಆಗ ಆ ಜನರು ನಕ್ಕು, ‘ಪ್ರತಿಯೊಂದು ಚರ್ಮದ ಬುದ್ದಲಿಯು ದ್ರಾಕ್ಷಾರಸದಿಂದ ತುಂಬಿರಬೇಕೆಂಬುದು ನಮಗೆ ಚೆನ್ನಾಗಿ ಗೊತ್ತು’ ಎಂದು ನಿನಗೆ ಹೇಳುತ್ತಾರೆ.


ಯೆಹೂದದ ಜನರು ಎಡವಿ, ಒಬ್ಬರಮೇಲೊಬ್ಬರು ಬೀಳುವಂತೆ ನಾನು ಮಾಡುವೆನು. ತಂದೆ ಮತ್ತು ಮಕ್ಕಳು ಒಬ್ಬರಮೇಲೊಬ್ಬರು ಬೀಳುವರು.’” ಇದು ಯೆಹೋವನ ನುಡಿ. “‘ನಾನು ಅವರಿಗಾಗಿ ಕನಿಕರಪಡುವದಿಲ್ಲ ಅಥವಾ ಕರುಣೆ ತೋರಿಸುವದಿಲ್ಲ. ಯೆಹೂದದ ಜನರ ವಿನಾಶವನ್ನು ಕರುಣೆಯು ತಡೆಯದಂತೆ ನೋಡಿಕೊಳ್ಳುತ್ತೇನೆ.’”


ಬಾರೂಕನೇ, ನೀನು ದೊಡ್ಡ ಪದವಿಯನ್ನು ನಿರೀಕ್ಷಿಸುತ್ತಿರುವೆ. ಆದರೆ ನೀನು ಅದನ್ನು ನಿರೀಕ್ಷಿಸಬೇಡ. ಏಕೆಂದರೆ ನಾನು ಎಲ್ಲರಿಗೆ ಭಯಂಕರವಾದ ಸಂಗತಿಗಳನ್ನು ಬರಮಾಡುವೆನು.”’ ಯೆಹೋವನು ಹೀಗೆ ಹೇಳಿದನು, ‘ನೀನು ಅನೇಕ ಸ್ಥಳಗಳಿಗೆ ಹೋಗಬೇಕಾಗಬಹುದು. ಅದರೆ ನೀನು ಎಲ್ಲಿ ಹೋದರೂ ಪ್ರಾಣ ಉಳಿಸಿಕೊಂಡು ಪಾರಾಗುವಂತೆ ನಾನು ಮಾಡುತ್ತೇನೆ.’”


ತಾನು ಯೆಹೋವನಿಗಿಂತ ಬಹಳ ಮುಖ್ಯವಾದವನೆಂದು ಮೋವಾಬು ಭಾವಿಸಿತ್ತು. ಕುಡಿದು ಮದವೇರಿದವನಂತೆ ಆಗುವವರೆಗೆ ಮೋವಾಬನ್ನು ದಂಡಿಸಿರಿ. ಮೋವಾಬು ತನ್ನ ವಾಂತಿಯಲ್ಲಿ ಬಿದ್ದು ಹೊರಳಾಡುವದು. ಜನರು ಮೋವಾಬನ್ನು ತಮಾಷೆ ಮಾಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು