Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 25:25 - ಪರಿಶುದ್ದ ಬೈಬಲ್‌

25 ನಾನು ಜಿಮ್ರಿಯ ಎಲ್ಲಾ ರಾಜರು, ಏಲಾಮಿನ ಎಲ್ಲಾ ರಾಜರು, ಮೇದ್ಯರ ಎಲ್ಲಾ ರಾಜರು ಈ ಪಾತ್ರೆಯಿಂದ ಕುಡಿಯುವಂತೆ ಮಾಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಜಿಮ್ರಿಯ ಎಲ್ಲಾ ಅರಸರು, ಏಲಾಮಿನ ಎಲ್ಲಾ ಅರಸರು, ಮೇದ್ಯರ ಎಲ್ಲಾ ಅರಸರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಏಲಾಮಿನ ಎಲ್ಲ ಅರಸರು, ಮೇದ್ಯರ ಎಲ್ಲ ಅರಸರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಜಿಮ್ರಿಯ ಎಲ್ಲಾ ಅರಸರು, ಏಲಾವಿುನ ಎಲ್ಲಾ ಅರಸರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಜಿಮ್ರಿಯ ಅರಸರೆಲ್ಲರಿಗೂ, ಏಲಾಮಿನ ಅರಸರೆಲ್ಲರಿಗೂ, ಮೇದ್ಯದ ಅರಸರೆಲ್ಲರಿಗೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 25:25
14 ತಿಳಿವುಗಳ ಹೋಲಿಕೆ  

ಆ ಸಮಯದಲ್ಲಿ ನನ್ನ ಒಡೆಯನು ಎರಡನೆ ಸಾರಿ ಕೈಚಾಚಿ, ಉಳಿದ ತನ್ನ ಜನರನ್ನು ತೆಗೆದುಕೊಳ್ಳುವನು. ಇವರು ಅಶ್ಶೂರ, ಉತ್ತರ ಈಜಿಪ್ಟ್, ದಕ್ಷಿಣ ಈಜಿಪ್ಟ್, ಇಥಿಯೋಪ್ಯ, ಏಲಾಮ್, ಬಾಬಿಲೋನಿಯ, ಹಮಾಥ್ ಮತ್ತು ಕರಾವಳಿ ಪ್ರದೇಶಗಳಲ್ಲಿರುವ ಎಲ್ಲಾ ಜನಾಂಗಗಳವರು.


ಶೇಮನ ಗಂಡುಮಕ್ಕಳು: ಏಲಾಮ್, ಅಶ್ಶೂರ್, ಅರ್ಪಕ್ಷದ್, ಲೂದ್ ಮತ್ತು ಅರಾಮ್.


ಅದರ ವಿರುದ್ಧ ಯುದ್ಧಕ್ಕಾಗಿ ಜನಾಂಗಗಳನ್ನು ಸಿದ್ಧಮಾಡಿರಿ. ಮೇದ್ಯರ ರಾಜರನ್ನು ಸಿದ್ಧಮಾಡಿರಿ. ಅವರ ಅಧಿಪತಿಗಳನ್ನು ಮತ್ತು ಎಲ್ಲಾ ಮುಖ್ಯ ಅಧಿಕಾರಿಗಳನ್ನು ಸಿದ್ಧಗೊಳಿಸಿರಿ. ಬಾಬಿಲೋನಿನ ವಿರುದ್ಧ ಯುದ್ಧಮಾಡಲು ಅವರು ಆಳುವ ಎಲ್ಲಾ ದೇಶಗಳನ್ನು ಸನ್ನದ್ಧಗೊಳಿಸಿರಿ.


ನಿಮ್ಮ ಬಾಣಗಳನ್ನು ಮಸೆಯಿರಿ. ನಿಮ್ಮ ಕವಚಗಳನ್ನು ಧರಿಸಿರಿ. ಯೆಹೋವನು ಮೇದ್ಯರ ರಾಜರನ್ನು ಪ್ರಚೋದಿಸಿದ್ದಾನೆ. ಬಾಬಿಲೋನನ್ನು ನಾಶಪಡಿಸಬೇಕೆಂಬ ಉದ್ದೇಶದಿಂದ ಆತನು ಅವರನ್ನು ಪ್ರಚೋದಿಸಿದ್ದಾನೆ. ಯೆಹೋವನು ಬಾಬಿಲೋನಿನ ಜನರಿಗೆ ತಕ್ಕ ಶಿಕ್ಷೆಯನ್ನು ಕೊಡುತ್ತಾನೆ. ಬಾಬಿಲೋನಿನ ಸೈನ್ಯವು ಜೆರುಸಲೇಮಿನಲ್ಲಿದ್ದ ಯೆಹೋವನ ಪವಿತ್ರ ಆಲಯವನ್ನು ನಾಶಮಾಡಿತು. ಆದ್ದರಿಂದ ಯೆಹೋವನು ಅವರಿಗೆ ತಕ್ಕ ಶಿಕ್ಷೆಯನ್ನು ಕೊಡುವನು.


ದೇವರು ಹೇಳುವುದೇನೆಂದರೆ: “ಮೇದ್ಯರ ಸೈನ್ಯವು ಬಾಬಿಲೋನನ್ನು ಮುತ್ತುವಂತೆ ಮಾಡುವೆನು. ಮೇದ್ಯರ ಸೈನ್ಯಕ್ಕೆ ಬೆಳ್ಳಿಬಂಗಾರ ಸುರಿಸಿದರೂ ಅವರು ಬಾಬಿಲೋನಿನ ಮೇಲೆ ಧಾಳಿ ಮಾಡುವದನ್ನು ನಿಲ್ಲಿಸುವದಿಲ್ಲ.


ಈ ದರ್ಶನದಲ್ಲಿ ನಾನು ಶೂಷನ್ ನಗರದಲ್ಲಿದ್ದೆನು. ಶೂಷನ್ ನಗರವು ಏಲಾಮ್ ಸಂಸ್ಥಾನದ ರಾಜಧಾನಿಯಾಗಿತ್ತು. ನಾನು ಊಲಾ ನದಿಯ ದಡದ ಮೇಲೆ ನಿಂತುಕೊಂಡಿದ್ದೆನು.


ಉಪರ್ಸಿನ್ ಎಂದರೆ: ನಿನ್ನ ರಾಜ್ಯವನ್ನು ನಿನ್ನಿಂದ ತೆಗೆದುಕೊಂಡು ವಿಭಜಿಸಲಾಗಿದೆ. ಅದನ್ನು ಮೇದ್ಯಯರಿಗೂ ಪಾರಸಿಯರಿಗೂ ಕೊಡಲಾಗುವುದು” ಎಂದು ವಿವರಿಸಿದನು.


“ಏಲಾಮು ಕೂಡಾ ಅಲ್ಲಿದೆ. ಆಕೆಯ ಸೈನ್ಯವೆಲ್ಲಾ ಆಕೆಯ ಸಮಾಧಿಯ ಸುತ್ತಲಿದೆ. ಅವರೆಲ್ಲಾ ಯುದ್ಧದಲ್ಲಿ ಮಡಿದರು. ಆ ಪರದೇಶದವರು ಪಾತಾಳವನ್ನು ಸೇರಿದರು. ಅವರು ಜೀವಿಸಿದ್ದಾಗ ಜನರನ್ನು ಭಯಗೊಳಿಸಿದರು. ಆದರೆ ಈಗ ನಾಚಿಕೆಯೊಂದಿಗೆ ಅವರು ಪಾತಾಳವನ್ನು ಸೇರಿದರು.


ಏಲಾಮಿನ ಅಶ್ವಸೈನಿಕರು ತಮ್ಮ ಬತ್ತಳಿಕೆಯನ್ನು ತೆಗೆದುಕೊಂಡು ರಣರಂಗಕ್ಕೆ ಹೊರಡುವರು. ಕೀರ್ ಸ್ಥಳದ ಜನರು ತಮ್ಮ ಗುರಾಣಿಗಳಿಂದ ಶಬ್ದಮಾಡುವರು.


ಆಕೆ ಅವನಿಗೆ; ಜಿಮ್ರಾನ್, ಯೊಕ್ಷಾನ್, ಮೆದಾನ್, ಮಿದ್ಯಾನ್, ಇಷ್ಬಾಕ್, ಶೂಹ ಎಂಬವರನ್ನು ಹೆತ್ತಳು.


ಆ ದಿನಗಳಲ್ಲಿ ಅಮ್ರಾಫೆಲನು ಶಿನಾರಿನ ರಾಜನಾಗಿದ್ದನು; ಅರಿಯೋಕನು ಎಲ್ಲಸಾರಿನ ರಾಜನಾಗಿದ್ದನು; ಕೆದೊರ್ಲಗೋಮರನು ಏಲಾಮಿನ ರಾಜನಾಗಿದ್ದನು; ತಿದ್ಗಾಲನು ಗೋಯಿಮದ ರಾಜನಾಗಿದ್ದನು.


ನಮ್ಮಲ್ಲಿ ಪಾರ್ಥ್ಯರು, ಮೇದ್ಯರು, ಏಲಾಮಿನವರು, ಮೆಸೊಪೊಟೇಮದವರು, ಯೂದಾಯದವರು, ಕಪ್ಪದೋಕ್ಯಯದವರು, ಪೊಂತದವರು, ಏಷ್ಯಾದವರು,


ನಡೆಯಲಿರುವ ಒಂದು ಭಯಂಕರ ಘಟನೆಯನ್ನು ನಾನು ದರ್ಶನದಲ್ಲಿ ನೋಡಿದ್ದೇನೆ. ನಿನಗೆ ವಿರುದ್ಧವಾಗಿ ದ್ರೋಹಿಗಳು ಏಳುತ್ತಿದ್ದಾರೆ. ನಿನ್ನ ಧನೈಶ್ವರ್ಯಗಳನ್ನು ಜನರು ಕಿತ್ತುಕೊಳ್ಳುತ್ತಿದ್ದಾರೆ. ಏಲಾಮೇ, ಹೋಗಿ ಆ ಜನರೊಂದಿಗೆ ಹೋರಾಡು. ಮೇದ್ಯವೇ, ಆ ಪಟ್ಟಣವನ್ನು ನಿನ್ನ ಸೈನ್ಯದಿಂದ ಸೋಲಿಸು. ಆ ನಗರದ ಎಲ್ಲಾ ದುಷ್ಟತನವನ್ನು ನಾನು ಕೊನೆಗಾಣಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು