ಯೆರೆಮೀಯ 25:29 - ಪರಿಶುದ್ದ ಬೈಬಲ್29 ಈಗಾಗಲೆ ನನ್ನ ಹೆಸರುಗೊಂಡಿರುವ ಜೆರುಸಲೇಮ್ ನಗರಕ್ಕೆ ಕೇಡಾಗುವಂತೆ ಮಾಡುತ್ತಿದ್ದೇನೆ. ನಿಮ್ಮನ್ನು ದಂಡನೆಗೆ ಗುರಿ ಮಾಡಲಾಗುವುದಿಲ್ಲವೆಂದು ನೀವು ಯೋಚಿಸುತ್ತಿರಬಹುದು. ಆದರೆ ನಿಮ್ಮ ಯೋಚನೆ ತಪ್ಪು. ನಿಮ್ಮನ್ನು ದಂಡಿಸಲಾಗುವುದು. ಈ ಭೂಮಿಯ ಮೇಲಿನ ಜನರೆಲ್ಲರ ಮೇಲೆ ಆಕ್ರಮಣಮಾಡಲು ನಾನು ಒಂದು ಖಡ್ಗವನ್ನು ಕರೆಯುತ್ತಿದ್ದೇನೆ.’” ಇದು ಯೆಹೋವನ ಸಂದೇಶ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಇಗೋ, ನನ್ನ ಹೆಸರುಗೊಂಡಿರುವ ಪಟ್ಟಣದಲ್ಲಿ ಬಾಧಿಸಲು ಪ್ರಾರಂಭಿಸುತ್ತೇನೆ. ನೀವು ಆ ದಂಡನೆಗೆ ತಪ್ಪಿಸಿಕೊಂಡೀರೋ? ಆಗುವುದೇ ಇಲ್ಲ. ಖಡ್ಗವೇ, ಭೂನಿವಾಸಿಗಳನ್ನೆಲ್ಲ ಸಂಹರಿಸಲಿಕ್ಕೆ ಬಾ” ಎಂದು ಕೂಗುವೆನು. ಇದು ಸೇನಾಧೀಶ್ವರನಾದ ಯೆಹೋವನೆಂಬ ನನ್ನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಇಗೋ, ನನ್ನ ಹೆಸರುಗೊಂಡಿರುವ ನಗರದಲ್ಲಿ ಬಾಧಿಸಲು ಪ್ರಾರಂಭಿಸುತ್ತೇನೆ. ನೀವು ಆ ದಂಡನೆಗೆ ತಪ್ಪಿಸಿಕೊಳ್ಳುವಿರೊ? ಆಗುವುದೇ ಇಲ್ಲ. ಏಕೆಂದರೆ ಭೂನಿವಾಸಿಗಳೆಲ್ಲರಿಗೆ ವಿರುದ್ಧವಾಗಿ ಖಡ್ಗವನ್ನು ಬರಮಾಡುವೆನು. ಇದು ಸರ್ವಶಕ್ತ ಸರ್ವೇಶ್ವರನ ನುಡಿ.’ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಇಗೋ, ನನ್ನ ಹೆಸರುಗೊಂಡಿರುವ ಪಟ್ಟಣದಲ್ಲಿ ಬಾಧಿಸಲು ಪ್ರಾರಂಭಿಸುತ್ತೇನೆ. ನೀವು ಆ ದಂಡನೆಗೆ ತಪ್ಪಿಸಿಕೊಂಡೀರೋ? ಆಗುವದೇ ಇಲ್ಲ. ಖಡ್ಗವೇ, ಭೂನಿವಾಸಿಗಳನ್ನೆಲ್ಲ ಸಂಹರಿಸಲಿಕ್ಕೆ ಬಾ ಎಂದು ಕೂಗುವೆನು. ಇದು ಸೇನಾಧೀಶ್ವರನಾದ ಯೆಹೋವನೆಂಬ ನನ್ನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಏಕೆಂದರೆ ಇಗೋ, ನನ್ನ ಹೆಸರಿನಿಂದ ಕರೆಯಲಾಗಿರುವ ಪಟ್ಟಣದ ಮೇಲೆ ನಾನು ಕೇಡನ್ನು ತರಿಸುವುದಕ್ಕೆ ಆರಂಭ ಮಾಡುತ್ತೇನೆ. ಹಾಗಾದರೆ ನೀವು ಸಂಪೂರ್ಣ ದಂಡನೆಗೆ ತಪ್ಪಿಸಿಕೊಂಡೀರೋ? ತಪ್ಪಿಸಿಕೊಳ್ಳುವುದಿಲ್ಲ. ಏಕೆಂದರೆ ನಾನು ಭೂನಿವಾಸಿಗಳೆಲ್ಲರ ಮೇಲೆ ಖಡ್ಗವನ್ನು ಕರೆಯುತ್ತೇನೆಂದು ಸೇನಾಧೀಶ್ವರ ಯೆಹೋವ ದೇವರು ನುಡಿಯುತ್ತಾರೆ.’ ಅಧ್ಯಾಯವನ್ನು ನೋಡಿ |
ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಭಯಂಕರವಾದ ನಾಲ್ಕು ದಂಡನೆಗಳನ್ನು ನಾನು ಜೆರುಸಲೇಮ್ ಪಟ್ಟಣದ ಮೇಲೆ ಕಳುಹಿಸುವೆನು. ಆದ್ದರಿಂದ ಜೆರುಸಲೇಮಿಗೆ ಇನ್ನೂ ಎಷ್ಟು ಹೆಚ್ಚಾಗಿ ಕಷ್ಟಕರವಾಗಬಹುದೆಂದು ಯೋಚಿಸಿರಿ. ನಾನು ಆ ನಗರದ ವಿರುದ್ಧವಾಗಿ ಶತ್ರು ಸೈನಿಕರನ್ನು, ಹಸಿವೆ, ರೋಗ ಮತ್ತು ಕ್ರೂರಜಂತುಗಳನ್ನು ಕಳುಹಿಸುತ್ತೇನೆ. ದೇಶದಲ್ಲಿರುವ ಎಲ್ಲಾ ಜನರನ್ನೂ ಪಶುಗಳನ್ನೂ ನಿರ್ಮೂಲ ಮಾಡುವೆನು.
ಯೆಹೋವನು ಹೀಗೆನ್ನುತ್ತಾನೆ: “ನನ್ನ ಸೇವಕನಾದ ಯಾಕೋಬೇ, ಭಯಪಡಬೇಡ. ನಾನು ನಿನ್ನ ಜೊತೆಯಲ್ಲಿದ್ದೇನೆ. ನಾನು ನಿನ್ನನ್ನು ಅನೇಕ ಸ್ಥಳಗಳಿಗೆ ಕಳುಹಿಸಿದೆ. ನಾನು ಆ ಜನಾಂಗಗಳನ್ನೆಲ್ಲ ಸಂಪೂರ್ಣವಾಗಿ ನಾಶಮಾಡುತ್ತೇನೆ. ಆದರೆ ನಿನ್ನನ್ನು ನಾನು ಸಂಪೂರ್ಣವಾಗಿ ನಾಶಮಾಡುವದಿಲ್ಲ. ನೀನು ಮಾಡಿದ ದುಷ್ಕೃತ್ಯಗಳಿಗಾಗಿ ನಿನಗೆ ಶಿಕ್ಷೆ ಆಗಲೇಬೇಕು. ಆದ್ದರಿಂದ ನೀನು ದಂಡನೆಯಿಂದ ತಪ್ಪಿಸಿಕೊಳ್ಳಲು ನಾನು ಬಿಡುವದಿಲ್ಲ. ನಾನು ನಿನಗೆ ಸರಿಯಾಗಿ ಬುದ್ಧಿ ಕಲಿಸುತ್ತೇನೆ, ಆದರೆ ನ್ಯಾಯವಂತನಾಗಿರುವೆನು.”
“ಇಸ್ರೇಲರೇ, ಯೆಹೂದ್ಯರೇ ನಾನು ನಿಮ್ಮೊಂದಿಗಿದ್ದೇನೆ. ನಾನು ನಿಮ್ಮನ್ನು ರಕ್ಷಿಸುತ್ತೇನೆ. ನಾನು ನಿಮ್ಮನ್ನು ಆ ಜನಾಂಗಗಳ ಬಳಿಗೆ ಕಳುಹಿಸಿದೆ. ಆದರೆ ನಾನು ಆ ಎಲ್ಲಾ ಜನಾಂಗಗಳನ್ನು ಸಂಪೂರ್ಣವಾಗಿ ನಾಶಮಾಡುವೆನು. ಇದು ನಿಜ. ನಾನು ಆ ಜನಾಂಗಗಳನ್ನು ನಾಶಮಾಡುವೆನು. ಆದರೆ ನಾನು ನಿಮ್ಮನ್ನು ನಾಶಮಾಡುವದಿಲ್ಲ. ನೀವು ಮಾಡಿದ ದುಷ್ಕೃತ್ಯಗಳಿಗಾಗಿ ನಿಮಗೆ ದಂಡನೆಯಾಗಲೇಬೇಕು. ನಾನು ನಿಮ್ಮನ್ನು ಸರಿಯಾಗಿ ಶಿಕ್ಷಿಸುತ್ತೇನೆ.”