Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 25:32 - ಪರಿಶುದ್ದ ಬೈಬಲ್‌

32 “ವಿಪತ್ತುಗಳು ಬಹುಬೇಗ ದೇಶದಿಂದ ದೇಶಕ್ಕೆ ಹರಡುವವು. ಅವು ಭೂಲೋಕದ ಎಲ್ಲಾ ದೂರದೂರದ ದೇಶಗಳಲ್ಲಿ ಭಯಂಕರವಾದ ಬಿರುಗಾಳಿಯಂತೆ ಬರುವವು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಸೇನಾಧೀಶ್ವರನಾದ ಯೆಹೋವನು, “ಆಹಾ, ಕೇಡು ಜನಾಂಗದಿಂದ ಜನಾಂಗಕ್ಕೆ ಹರಡುವುದು; ದೊಡ್ಡ ಬಿರುಗಾಳಿಯು ಲೋಕದ ಕಟ್ಟಕಡೆಯಿಂದ ಎದ್ದು ಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಸೇನಾಧೀಶ್ವರ ಸರ್ವೇಶ್ವರ ಹೀಗೆನ್ನುತ್ತಾರೆ: ‘ಹರಡುವುದು ಕೇಡು ಜನಾಂಗದಿಂದ ಜನಾಂಗಕ್ಕೆ ಏಳುವುದು ಚಂಡಮಾರುತ ಲೋಕದ ಕಟ್ಟಕಡೆಯಿಂದ’.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ - ಆಹಾ, ಕೇಡು ಜನಾಂಗದಿಂದ ಜನಾಂಗಕ್ಕೆ ಹರಡುವದು; ದೊಡ್ಡ ಬಿರುಗಾಳಿಯು ಲೋಕದ ಕಟ್ಟಕಡೆಯಿಂದ ಎದ್ದುಬರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ಜನಾಂಗದಿಂದ ಜನಾಂಗಕ್ಕೆ ಕೇಡು ಹೊರಡುವುದು. ಭೂಮಿಯ ಮೇರೆಗಳಿಂದ ಮಹಾ ಬಿರುಗಾಳಿ ಏಳುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 25:32
12 ತಿಳಿವುಗಳ ಹೋಲಿಕೆ  

ಈಗ ಯೆಹೋವನಿಂದ ದಂಡನೆಯು ಬಿರುಗಾಳಿಯಂತೆ ಬರುವುದು. ಯೆಹೋವನ ಕೋಪವು ತೂಫಾನಿನಂತೆ ದುಷ್ಟರ ತಲೆಯ ಮೇಲೆ ಆರ್ಭಟಿಸಿ ಬೀಳುವುದು.


ಯೆಹೋವನು ಎಲ್ಲಾ ದೇಶಗಳವರ ಮೇಲೆಯೂ ಅವುಗಳ ಸೈನ್ಯದ ಮೇಲೆಯೂ ಕೋಪಗೊಂಡಿದ್ದಾನೆ. ಯೆಹೋವನು ಅವರೆಲ್ಲರನ್ನು ನಾಶಮಾಡುತ್ತಾನೆ. ಅವರೆಲ್ಲರೂ ಕೊಲ್ಲಲ್ಪಡುವಂತೆ ಮಾಡುತ್ತಾನೆ.


ಒಂದು ದೇಶವು ಇನ್ನೊಂದು ದೇಶವನ್ನು ನಾಶಮಾಡುತ್ತಿತ್ತು; ಒಂದು ಪಟ್ಟಣವು ಇನ್ನೊಂದು ಪಟ್ಟಣವನ್ನು ಸೂರೆಮಾಡುತ್ತಿತ್ತು. ಹೀಗೆ ದೇವರು ಎಲ್ಲಾ ಬಗೆಯ ತೊಂದರೆಗಳಿಂದ ಅವರನ್ನು ತಳಮಳಗೊಳಿಸಿದನು.


ಯೆಹೋವನು ಬಹಳ ಕೋಪ ತಾಳಿದ್ದನು. ಅವನು ಜನರನ್ನು ಶಿಕ್ಷಿಸಿದನು. ಆ ಶಿಕ್ಷೆಯು ಒಂದು ಬಿರುಗಾಳಿಯಂತೆ ಬಂದಿತು. ಆ ಶಿಕ್ಷೆಯು ದುಷ್ಟಜನರ ಮೇಲೆ ತೂಫಾನಿನಂತೆ ಬಂದಿತು.


ಯೆಹೋವನು ತನ್ನ ಮಹಾಸ್ವರವನ್ನು ಜನರು ಕೇಳುವಂತೆ ಮಾಡುವನು. ತನ್ನ ಸಾಮರ್ಥ್ಯದ ಬಾಹುವು ಕೋಪದಿಂದ ನಡುಗುವದನ್ನು ಜನರು ನೋಡುವಂತೆ ಮಾಡುವನು. ಆ ಬಾಹುವು ಎಲ್ಲವನ್ನು ಸುಡುವ ದೊಡ್ಡ ಅಗ್ನಿಯಂತಿರುವದು. ಯೆಹೋವನ ಶಕ್ತಿಯು ಆಲಿಕಲ್ಲಿನಿಂದಲೂ ಮಳೆಯಿಂದಲೂ ಕೂಡಿರುವ ಬಿರುಗಾಳಿಯಂತಿರುವುದು.


“ಸೂರ್ಯ, ಚಂದ್ರ ಮತ್ತು ನಕ್ಷತ್ರಗಳಲ್ಲಿ ವಿಚಿತ್ರವಾದ ಸೂಚನೆಗಳು ಕಾಣಿಸಿಕೊಳ್ಳುವವು. ಮೊರೆಯುವ ತೆರೆಗಳ ಹಾಗೂ ಭೋರ್ಗರೆಯುವ ಸಮುದ್ರದ ನಿಮಿತ್ತ ಭೂಮಿಯಲ್ಲಿ ಜನಾಂಗಗಳು ದಿಕ್ಕುತೋಚದೆ ತತ್ತರಿಸಿ ಹೋಗುವವು.


ಬಳಿಕ ಯೇಸು ಅವರಿಗೆ, “ಜನಾಂಗಗಳು ಬೇರೆ ಜನಾಂಗಗಳಿಗೆ ವಿರುದ್ಧವಾಗಿ ಹೋರಾಡುವವು. ರಾಜ್ಯಗಳು ಬೇರೆ ರಾಜ್ಯಗಳಿಗೆ ವಿರುದ್ಧವಾಗಿ ಹೋರಾಡುವವು.


ಯೆಹೋವನು ಹೀಗೆ ಹೇಳುತ್ತಾನೆ: “ನನ್ನನ್ನು ಕಾದುಕೊಂಡಿರಿ. ನೀವು ನನ್ನ ನ್ಯಾಯತೀರ್ಪಿನ ತನಕ ಕಾದುಕೊಂಡಿರಿ. ನಾನು ಬೇರೆ ಜನಾಂಗಗಳನ್ನು ಇಲ್ಲಿಗೆ ಕರೆದು ನಿಮ್ಮನ್ನು ಶಿಕ್ಷಿಸುವಂತೆ ಮಾಡುವ ಹಕ್ಕು ನನಗಿದೆ. ನಿಮ್ಮ ಮೇಲೆ ನನಗಿರುವ ಸಿಟ್ಟು ತೋರಿಸಲು ನಾನು ಆ ಜನಾಂಗಗಳನ್ನು ಉಪಯೋಗಿಸುವೆನು. ನಿಮ್ಮ ಮೇಲೆ ನಾನು ಎಷ್ಟರಮಟ್ಟಿಗೆ ಕೋಪಗೊಂಡಿದ್ದೇನೆ ಎಂದು ಅವರ ಮೂಲಕ ನಿಮಗೆ ತಿಳಿದುಬರುವುದು. ಆಗ ಇಡೀ ದೇಶವೇ ನಾಶವಾಗುವುದು.


“ಆ ಜನರಲ್ಲಿ ಕೆಟ್ಟ ಯೋಜನೆಗಳು ಇದ್ದು ಕೆಟ್ಟದ್ದನ್ನೇ ಮಾಡುವವರಾಗಿದ್ದಾರೆ. ಅದಕ್ಕಾಗಿ ನಾನು ಅವರನ್ನು ಶಿಕ್ಷಿಸಲು ಬರುತ್ತಿದ್ದೇನೆ. ನಾನು ಎಲ್ಲಾ ಜನಾಂಗಗಳನ್ನೂ ಎಲ್ಲಾ ಜನರನ್ನೂ ಒಟ್ಟುಗೂಡಿಸುವೆನು. ಎಲ್ಲಾ ಜನರು ಒಟ್ಟುಗೂಡಿ ನನ್ನ ಸಾಮರ್ಥ್ಯವನ್ನು ನೋಡುವರು.


ವೈರಿಗಳ ಬಾಣಗಳು ಬಹು ಹರಿತವಾದದ್ದು. ಅವರ ಬಿಲ್ಲುಗಳೆಲ್ಲವೂ ಬಾಣವೆಸೆಯಲು ತಯಾರಾಗಿವೆ. ಅವರ ಕುದುರೆಗಳ ಪಾದಗಳು ಬಂಡೆಯಂತೆ ಗಟ್ಟಿಯಾಗಿವೆ. ಅವರ ರಥಗಳ ಹಿಂದಿನಿಂದ ಧೂಳಿನ ಮೋಡವೇ ಹಾರುವದು.


ಯೆಹೋವನು ಹೇಳುವುದೇನೆಂದರೆ: “ಉತ್ತರ ದಿಕ್ಕಿನಿಂದ ಒಂದು ಸೈನ್ಯವು ಬರಲಿದೆ. ಭೂಮಿಯ ಬಹುದೂರದ ಸ್ಥಳಗಳಿಂದ ಒಂದು ಮಹಾಜನಾಂಗವು ಬರಲಿದೆ.


ಆ ಸೈನಿಕರು ಬಿಲ್ಲುಗಳನ್ನು ಮತ್ತು ಈಟಿಗಳನ್ನು ಹಿಡಿದುಕೊಂಡಿದ್ದಾರೆ. ಅವರು ಕ್ರೂರಿಗಳಾಗಿದ್ದಾರೆ. ಅವರು ನಿಷ್ಕರುಣಿಗಳಾಗಿದ್ದಾರೆ. ಅವರು ಬಲಶಾಲಿಗಳಾಗಿದ್ದಾರೆ. ಅವರು ತಮ್ಮ ಕುದುರೆ ಹತ್ತಿ ಬರುವಾಗ ಸಮುದ್ರದ ಗರ್ಜನೆಯಂತೆ ಶಬ್ದ ಕೇಳಿಬರುತ್ತದೆ. ಚೀಯೋನ್ ಕುಮಾರಿಯೇ, ಆ ಸೈನ್ಯವು ಯುದ್ಧಕ್ಕಾಗಿ ಬರುತ್ತಿದೆ. ಆ ಸೈನ್ಯವು ನಿನ್ನ ಮೇಲೆ ಧಾಳಿಮಾಡಲು ಬರುತ್ತಿದೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು