Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 25:38 - ಪರಿಶುದ್ದ ಬೈಬಲ್‌

38 ಯೆಹೋವನು, ತನ್ನ ಗುಹೆಯಿಂದ ಹೊರಬರುತ್ತಿರುವ ಭಯಂಕರವಾದ ಸಿಂಹದಂತಿದ್ದಾನೆ. ಯೆಹೋವನು ಕೋಪಗೊಂಡಿದ್ದಾನೆ. ಯೆಹೋವನ ಕೋಪವು ಆ ಜನರನ್ನು ಪೀಡಿಸುವುದು. ಅವರ ದೇಶವು ಬರಿದಾದ ಮರುಭೂಮಿಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಆತನು ಸಿಂಹದಂತೆ ತನ್ನ ಗವಿಯನ್ನು ಬಿಟ್ಟು ಬಂದಿದ್ದಾನೆ. ಹಿಂಸಿಸುವ ಖಡ್ಗದಿಂದಲೂ ಆತನ ರೋಷಾಗ್ನಿಯಿಂದಲೂ ಅವರ ದೇಶವು ಬೆರಗಿಗೆ ಈಡಾಗಿದೆ” ಎಂದು ನುಡಿಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ಗುಹೆಬಿಟ್ಟು ಬಂದ ಸಿಂಹದಂತೆ ಬಂದಿರುವನಾತ. ಆತನ ಕೋಪಾಗ್ನಿಯ ನಿಮಿತ್ತ ತುಂಡರಿಸುವಾ ಖಡ್ಗದ ಪ್ರಯುಕ್ತ ಅವರ ನಾಡಾಗಿದೆ ಬೆಂಗಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ಆತನು ಸಿಂಹದಂತೆ ತನ್ನ ಹಕ್ಕೆಯನ್ನು ಬಿಟ್ಟುಬಂದಿದ್ದಾನೆ; ಹಿಂಸಿಸುವ ಖಡ್ಗದಿಂದಲೂ ಆತನ ರೋಷಾಗ್ನಿಯಿಂದಲೂ ಅವರ ದೇಶವು ಬೆರಗಿಗೆ ಈಡಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ಅವರು ಸಿಂಹದಂತೆ ತಮ್ಮ ಗವಿಯನ್ನು ತೊರೆದುಬಿಟ್ಟಿದ್ದಾರೆ. ಏಕೆಂದರೆ ಉಪದ್ರವ ಪಡಿಸುವವನ ಉರಿಯ ನಿಮಿತ್ತವೂ, ಅವರ ಕೋಪದ ಉರಿಯ ನಿಮಿತ್ತವೂ ಅವರ ದೇಶವು ಹಾಳಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 25:38
15 ತಿಳಿವುಗಳ ಹೋಲಿಕೆ  

ತನ್ನ ಗುಹೆಯಿಂದ ಒಂದು “ಸಿಂಹವು” ಹೊರಬಂದಿದೆ. ಜನಾಂಗಗಳ ವಿನಾಶಕವಾದ ಸಿಂಹವು ಹೆಜ್ಜೆ ಹಾಕುತ್ತಿದೆ. ಅದು ನಿಮ್ಮ ಪ್ರದೇಶವನ್ನು ನಾಶಮಾಡಲು ತನ್ನ ಗುಹೆಯನ್ನು ಬಿಟ್ಟು ಹೊರಟಿದೆ. ನಿಮ್ಮ ಪಟ್ಟಣಗಳೆಲ್ಲ ನಾಶಹೊಂದುವವು. ಅಲ್ಲಿ ವಾಸಿಸಲು ಜನರೇ ಇಲ್ಲದಂತಾಗುವುದು.


ಯಾಕೆಂದರೆ ನಾನು ಎಫ್ರಾಯೀಮನಿಗೆ ಸಿಂಹದಂತಿರುವೆನು. ಯೆಹೂದ ಜನಾಂಗದವರಿಗೆ ನಾನು ಪ್ರಾಯದ ಸಿಂಹದಂತಿರುವೆನು. ಹೌದು, ಯೆಹೋವನಾದ ನಾನು ಅವರನ್ನು ಹರಿದು ಚೂರುಚೂರಾಗಿ ಮಾಡುವೆನು. ನಾನು ಅವರನ್ನು ಎತ್ತಿಕೊಂಡು ಹೋಗುವೆನು. ಯಾರೂ ಅವರನ್ನು ನನ್ನಿಂದ ರಕ್ಷಿಸಲಾರರು.


ಆದ್ದರಿಂದ ಕಾಡಿನ ಸಿಂಹವು ಅವರ ಮೇಲೆರಗುವುದು, ಮರಳುಗಾಡಿನ ತೋಳವು ಅವರನ್ನು ಕೊಂದು ಬಿಡುವದು. ಅವರ ನಗರಗಳ ಹತ್ತಿರ ಚಿರತೆಯು ಅಡಗಿಕೊಂಡಿದೆ. ನಗರದಿಂದ ಹೊರಗೆ ಬಂದವರನ್ನೆಲ್ಲ ಅದು ಚೂರುಚೂರು ಮಾಡುವುದು. ಯೆಹೂದದ ಜನರು ಮತ್ತೆಮತ್ತೆ ಪಾಪಗಳನ್ನು ಮಾಡಿದ್ದರಿಂದ ಹೀಗಾಗುವದು. ಅವರು ಅನೇಕಸಲ ಯೆಹೋವನಿಂದ ದೂರ ಹೋಗಿದ್ದಾರೆ.


ಆಗ ನನ್ನೊಡನೆ ಮಾತನಾಡುತ್ತಿದ್ದ ದೂತನು ನನ್ನನ್ನು ಬಿಟ್ಟುಹೋದನು. ಅವನೊಡನೆ ಮಾತನಾಡಲು ಇನ್ನೊಬ್ಬ ದೂತನು ಬಂದನು.


ಅದರ ಸಲುವಾಗಿ ಇಡೀ ದೇಶವು ಅಲುಗಾಡುವದು. ಸತ್ತವರಿಗಾಗಿ ದೇಶದ ಪ್ರತಿ ನಿವಾಸಿಯೂ ರೋಧಿಸುವನು. ಈಜಿಪ್ಟಿನ ನೈಲ್ ನದಿಯ ರೀತಿಯಲ್ಲಿ ದೇಶವು ತಿರುಗುಮುರುಗಾಗುವುದು.”


ನಾನು ಸಿಂಹದಂತೆ ಗರ್ಜಿಸುವೆನು. ನಾನು ಗರ್ಜಿಸುವಾಗ ನನ್ನ ಮಕ್ಕಳು ಬರುವರು ಮತ್ತು ನನ್ನನ್ನು ಹಿಂಬಾಲಿಸುವರು. ಪಶ್ಚಿಮದಿಂದ ನನ್ನ ಮಕ್ಕಳು ಹೆದರಿ ನಡುಗುತ್ತಾ ಬರುವರು.


ಯೆಹೋವನು ಹೀಗೆನ್ನುತ್ತಾನೆ: “ಜೋರ್ಡನ್ ನದಿಯ ಸಮೀಪದ ದಟ್ಟವಾದ ಅರಣ್ಯದಿಂದ ಒಮ್ಮೆ ಒಂದು ಸಿಂಹವು ಬರುವುದು. ಆ ಸಿಂಹವು ಜನರ ಸಾಕುಪ್ರಾಣಿಗಳಿದ್ದ ಹೊಲಗಳಿಗೆ ನುಗ್ಗುವುದು. ಆ ಪ್ರಾಣಿಗಳೆಲ್ಲ ಓಡಿಹೋಗುವವು. ನಾನು ಆ ಸಿಂಹದಂತಾಗುವೆನು. ನಾನು ಬಾಬಿಲೋನನ್ನು ಅದರ ಪ್ರದೇಶದಿಂದ ಓಡಿಸಿಬಿಡುವೆನು. ಈ ಕಾರ್ಯ ಮಾಡಲು ನಾನು ಯಾರನ್ನು ಆರಿಸಲಿ? ನನ್ನತೆ ಯಾರೂ ಇಲ್ಲ. ನನ್ನನ್ನು ಪ್ರತಿಭಟಿಸುವವರು ಯಾರೂ ಇಲ್ಲ. ಆದ್ದರಿಂದ ನಾನೇ ಅದನ್ನು ಮಾಡುತ್ತೇನೆ. ನನ್ನನ್ನು ಓಡಿಸಲು ಯಾವ ಕುರುಬನೂ ಬರಲಾರನು. ನಾನು ಬಾಬಿಲೋನಿನ ಜನರನ್ನು ಓಡಿಸಿಬಿಡುವೆನು.”


“ಜೋರ್ಡನ್ ನದಿಯ ಸಮೀಪದ ದಟ್ಟವಾದ ಕಾಡಿನಿಂದ ಫಕ್ಕನೆ ಒಂದು ಸಿಂಹ ಬರುವದು. ಅದು ಹೊಲಗಳಲ್ಲಿದ್ದ ಜನರ ದನಕುರಿಗಳ ಹಟ್ಟಿಗಳಿಗೆ ನುಗ್ಗುವುದು. ನಾನು ಆ ಸಿಂಹದಂತೆ ಇದ್ದೇನೆ. ನಾನು ಎದೋಮ್ ನಗರಕ್ಕೆ ಹೋಗಿ ಆ ಜನರನ್ನು ಹೆದರಿಸುವೆನು; ಅವರು ಓಡಿಹೋಗುವಂತೆ ಮಾಡುವೆನು. ಅವರ ತರುಣರಲ್ಲಿ ಯಾರೂ ನನ್ನನ್ನು ತಡೆಯಲಾರರು. ನನ್ನತೆ ಯಾರೂ ಇಲ್ಲ. ಯಾರೂ ನನ್ನನ್ನು ಪ್ರತಿಭಟಿಸುವದಿಲ್ಲ. ಅವರ ನಾಯಕರಲ್ಲಿ ಯಾರೂ ನನ್ನ ವಿರುದ್ಧ ನಿಲ್ಲುವದಿಲ್ಲ.”


ಆತನ ಗುಡಾರವು ಸಾಲೇಮಿನಲ್ಲಿದೆ. ಆತನ ಆಲಯವು ಸಿಯೋನ್ ಬೆಟ್ಟದ ಮೇಲಿದೆ.


ಜನರು ಗೋಧಿಯನ್ನು ಬಿತ್ತುವರು; ಆದರೆ ಅವರು ಕೇವಲ ಮುಳ್ಳಿನ ರಾಶಿಯನ್ನು ಕೊಯ್ಯುವರು. ಅವರು ತುಂಬ ದಣಿಯುವವರೆಗೆ ಕಷ್ಟಪಟ್ಟು ಕೆಲಸ ಮಾಡುವರು. ಆದರೆ ಆ ಎಲ್ಲಾ ಕೆಲಸದ ಪ್ರತಿಫಲವಾಗಿ ಅವರಿಗೆ ಏನೂ ಸಿಗುವದಿಲ್ಲ. ಅವರು ತಮ್ಮ ಬೆಳೆಗಳಿಂದ ನಾಚಿಕೆಪಟ್ಟುಕೊಳ್ಳುವರು. ಯೆಹೋವನ ರೋಷವು ಹಾಗೆಲ್ಲ ಮಾಡುವುದು.”


“ಯೆರೆಮೀಯನೇ, ನೀನು ಅವರಿಗೆ ಈ ಸಂದೇಶವನ್ನು ಕೊಡು: ‘ಉನ್ನತವಾದ ಮತ್ತು ಪವಿತ್ರವಾದ ಆಲಯದಿಂದ ಯೆಹೋವನು ಗರ್ಜಿಸುವನು. ಯೆಹೋವನು ಗಟ್ಟಿಯಾಗಿ ಗರ್ಜಿಸಿ ತನ್ನ ಹುಲ್ಲುಗಾವಲಿನ ಮಂದೆಯನ್ನು ಬೆದರಿಸುವನು. ದ್ರಾಕ್ಷಾರಸವನ್ನು ತಯಾರಿಸುವಾಗ ದ್ರಾಕ್ಷೆಯ ಹಣ್ಣನ್ನು ತುಳಿಯುವವರು ಕೂಗಾಡುವಂತೆ ಭಯಂಕರವಾಗಿ ಕೂಗುವನು.


ಬಾಬಿಲೋನಿನ ಜನರಿಗೆ ಬೀಜಗಳನ್ನು ಬಿತ್ತಲು ಬಿಡಬೇಡಿ. ಸುಗ್ಗಿ ಮಾಡಲು ಅವರಿಗೆ ಬಿಡಬೇಡಿ. ಬಾಬಿಲೋನಿನ ಸೈನಿಕರು ಹಲವಾರು ಸೆರೆಯಾಳುಗಳನ್ನು ಹಿಡಿದುತಂದಿದ್ದಾರೆ. ಈಗ ಶತ್ರು ಸೈನಿಕರು ಬಂದುದರಿಂದ ಆ ಸೆರೆಯಾಳುಗಳು ತಮ್ಮ ಪ್ರದೇಶಗಳಿಗೆ ಹಿಂತಿರುಗುತ್ತಿದ್ದಾರೆ, ಆ ಸೆರೆಯಾಳುಗಳು ತಮ್ಮ ದೇಶಗಳಿಗೆ ಓಡುತ್ತಿದ್ದಾರೆ.


ಅನೇಕ ಕುರುಬರು ದ್ರಾಕ್ಷಿತೋಟವನ್ನು ಹಾಳುಮಾಡಿದ್ದಾರೆ. ಆ ಕುರುಬರು ನನ್ನ ತೋಟದ ಸಸಿಗಳನ್ನು ತುಳಿದುಬಿಟ್ಟಿದ್ದಾರೆ: ನನ್ನ ಸುಂದರವಾದ ತೋಟವನ್ನು ಮರಳುಗಾಡನ್ನಾಗಿ ಮಾಡಿದ್ದಾರೆ.


ಆ ಇಡೀ ಪ್ರದೇಶವು ಒಂದು ಮರುಭೂಮಿಯಾಗುವುದು. ಆ ಜನಾಂಗಗಳೆಲ್ಲ ಎಪ್ಪತ್ತು ವರ್ಷಗಳವರೆಗೆ ಬಾಬಿಲೋನಿನ ರಾಜನ ಗುಲಾಮರಾಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು