Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 25:9 - ಪರಿಶುದ್ದ ಬೈಬಲ್‌

9 ಆದ್ದರಿಂದ ನಾನು ಉತ್ತರದ ಎಲ್ಲಾ ಜನಾಂಗಗಳನ್ನು ಕರೆಸುತ್ತೇನೆ.” ಇದು ಯೆಹೋವನ ಸಂದೇಶ. “ನಾನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನನ್ನು ಕೂಡಲೇ ಕರೆಸುವೆನು. ಅವನು ನನ್ನ ಸೇವಕ. ನಾನು ಆ ಜನರನ್ನು ಯೆಹೂದ ದೇಶದ ವಿರುದ್ಧವಾಗಿಯೂ ಯೆಹೂದ್ಯರ ವಿರುದ್ಧವಾಗಿಯೂ ತರುತ್ತೇನೆ. ನಾನು ನಿಮ್ಮ ಸುತ್ತಮುತ್ತಲಿನಲ್ಲಿದ್ದ ಜನಾಂಗಗಳ ವಿರುದ್ಧವಾಗಿಯೂ ಅವರನ್ನು ಕರೆತರುವೆನು. ನಾನು ಆ ದೇಶಗಳನ್ನೆಲ್ಲ ನಾಶಮಾಡುವೆನು. ನಾನು ಆ ಭೂಮಿಗಳನ್ನು ಶಾಶ್ವತವಾಗಿ ಬರಿದಾದ ಮರುಭೂಮಿಗಳನ್ನಾಗಿ ಮಾಡುವೆನು. ಜನರು ಆ ದೇಶಗಳನ್ನು ನೋಡಿ ಅವು ಹಾಳಾಗಿರುವುದನ್ನು ಕಂಡು ಬೆರಗಾಗಿ ಸಿಳ್ಳುಹಾಕುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಾನು ಉತ್ತರ ದಿಕ್ಕಿನ ಜನಾಂಗಗಳನ್ನೆಲ್ಲಾ ಕರೆಯಿಸಿ, ಬಾಬೆಲಿನ ಅರಸನೂ ನನ್ನ ಸೇವಕನೂ ಆದ ನೆಬೂಕದ್ನೆಚ್ಚರನನ್ನು ಬರಮಾಡುವೆನು. ಇವರೆಲ್ಲರನ್ನು ಈ ದೇಶದ ಮೇಲೂ, ಇದರ ನಿವಾಸಿಗಳ ಮೇಲೂ ಸುತ್ತಲಿನ ಸಕಲ ಜನಾಂಗಗಳ ಮೇಲೂ ಬೀಳಿಸಿ, ಅವುಗಳನ್ನು ತುಂಬಾ ಹಾಳುಗೈದು, ಪರಿಹಾಸ್ಯಕ್ಕೂ, ನಿತ್ಯನಾಶನಕ್ಕೂ ಈಡುಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 “ನೀವು ನನ್ನ ಮಾತನ್ನು ಕೇಳದ ಕಾರಣ ನಾನು ಉತ್ತರಭಾಗದ ರಾಷ್ಟ್ರಗಳನ್ನೆಲ್ಲ ಕರೆಯಿಸುವೆನು. ಬಾಬಿಲೋನಿನ ಅರಸ ಹಾಗು ನನ್ನ ಸೇವಕನಾದ ನೆಬೂಕದ್ನೆಚ್ಚರನನ್ನೂ ಬರಮಾಡುವೆನು. ಅವರು ಈ ನಾಡಿನ, ಇದರ ನಿವಾಸಿಗಳ, ಮತ್ತು ಸುತ್ತಮುತ್ತಲಿನ ನಾಡುಗಳ ಮೇಲೂ ಬೀಳುವರು. ಹೀಗೆ ಇವುಗಳನ್ನು ತೀರ ಹಾಳುಮಾಡುವೆನು. ನಿರಂತರ ಪರಿಹಾಸ್ಯಕ್ಕೂ ಪರಿವಿನಾಶಕ್ಕೂ ಇವನ್ನು ಗುರಿಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಇಗೋ, ನಾನು ಬಡಗಣ ಜನಾಂಗಗಳನ್ನೆಲ್ಲಾ ಕರೆಯಿಸಿ ಬಾಬೆಲಿನ ಅರಸನೂ ನನ್ನ ಸೇವಕನೂ ಆದ ನೆಬೂಕದ್ನೆಚ್ಚರನನ್ನು ಬರಮಾಡಿ ಇವರೆಲ್ಲರನ್ನು ಈ ದೇಶದ ಮೇಲೂ ಇದರ ನಿವಾಸಿಗಳ ಮೇಲೂ ಸುತ್ತಲಿನ ಸಕಲ ಜನಾಂಗಗಳ ಮೇಲೂ ಬೀಳಿಸಿ ಅವುಗಳನ್ನು ತುಂಬಾ ಹಾಳುಗೈದು ಬೆರಗಿನ ಸಿಳ್ಳಿಗೆ ಗುರಿಪಡಿಸಿ ನಿತ್ಯನಾಶನಕ್ಕೆ ಈಡುಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಇಗೋ, ನಾನು ಕಳುಹಿಸಿ ಉತ್ತರ ದಿಕ್ಕಿನ ಗೋತ್ರಗಳೆಲ್ಲವನ್ನೂ, ನನ್ನ ಸೇವಕನಾದ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನನ್ನೂ ತೆಗೆದುಕೊಂಡು, ಈ ದೇಶಕ್ಕೆ ವಿರೋಧವಾಗಿಯೂ, ಅವರ ನಿವಾಸಿಗಳಿಗೆ ವಿರೋಧವಾಗಿಯೂ ಸುತ್ತಲಿರುವ ಈ ಎಲ್ಲಾ ಜನಾಂಗಗಳಿಗೆ ವಿರೋಧವಾಗಿಯೂ ತರಿಸಿ, ಅವರನ್ನು ಸಂಪೂರ್ಣ ನಾಶಮಾಡಿ ಅವರನ್ನು ಭಯಕ್ಕೂ, ಪರಿಹಾಸ್ಯಕ್ಕೂ ಗುರಿಮಾಡಿ ನಿತ್ಯ ನಾಶಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 25:9
48 ತಿಳಿವುಗಳ ಹೋಲಿಕೆ  

ಆದ್ದರಿಂದ ಯೆಹೂದ್ಯರ ದೇಶವು ಬರಿದಾದ ಮರುಭೂಮಿಯಾಗುವುದು. ಜನರು ಇಲ್ಲಿಂದ ಹಾದುಹೋಗುವಾಗಲೆಲ್ಲಾ ಸಿಳ್ಳುಹಾಕಿ ತಲೆಯಾಡಿಸುವರು. ದೇಶವು ಹಾಳಾದುದನ್ನು ನೋಡಿ ಬೆರಗಾಗುವರು.


ಸ್ವಲ್ಪ ಸಮಯದಲ್ಲಿಯೇ ನಾನು ಉತ್ತರ ರಾಜ್ಯಗಳ ಎಲ್ಲಾ ಜನರನ್ನು ಕರೆಯುತ್ತೇನೆ” ಎಂದನು. ಮತ್ತೆ ಯೆಹೋವನು ಹೀಗೆ ಹೇಳಿದನು: “ಆ ದೇಶಗಳ ರಾಜರು ಬರುವರು. ಅವರು ಜೆರುಸಲೇಮಿನ ಹೆಬ್ಬಾಗಿಲಿನ ಹತ್ತಿರ ತಮ್ಮ ಆಸನಗಳನ್ನು ಹಾಕುವರು. ಅವರು ಜೆರುಸಲೇಮಿನ ಎಲ್ಲಾ ಕೋಟೆಗೋಡೆಗಳಿಗೆ ಮುತ್ತಿಗೆಹಾಕುವರು. ಅವರು ಯೆಹೂದ ಪ್ರದೇಶದ ಎಲ್ಲಾ ನಗರಗಳ ಮೇಲೆ ಧಾಳಿ ಮಾಡುವರು.


“ನಾನು ಅವರನ್ನು ಆ ಜನರಿಂದ ಪ್ರತ್ಯೇಕಿಸಿದ್ದೇನೆ; ನಾನೇ ಅವರಿಗೆ ಆಜ್ಞಾಪಿಸುವೆನು. ನಾನು ಕೋಪಗೊಂಡಿರುವುದರಿಂದ ಆ ಜನರನ್ನು ಶಿಕ್ಷಿಸಲು ನನ್ನ ಉತ್ತಮವಾದ ಜನರನ್ನು ಒಟ್ಟಾಗಿ ಸೇರಿಸಿದ್ದೇನೆ. ಉತ್ಸಾಹಶಾಲಿಗಳಾದ ನನ್ನ ಜನರ ಬಗ್ಗೆ ನಾನು ಹೆಮ್ಮೆಪಡುತ್ತೇನೆ.


ನಿನ್ನನ್ನು ನೋಡುತ್ತಿದ್ದ ಆ ಯೆಹೂದ್ಯರಿಗೆ ಹೀಗೆ ಹೇಳು: ‘ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳುತ್ತಾನೆ: ನಾನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನನ್ನು ಇಲ್ಲಿಗೆ ಕರೆಸುತ್ತೇನೆ. ಅವನು ನನ್ನ ಸೇವಕನಾಗಿದ್ದಾನೆ. ನಾನು ಈ ಸ್ಥಳದಲ್ಲಿ ಹೂಳಿದ ಕಲ್ಲುಗಳ ಮೇಲೆ ಅವನ ಸಿಂಹಾಸನವನ್ನು ಸ್ಥಾಪಿಸುತ್ತೇನೆ. ನೆಬೂಕದ್ನೆಚ್ಚರನು ಈ ಕಲ್ಲುಗಳ ಮೇಲೆ ತನ್ನ ಗುಡಾರವನ್ನು ಹಾಕುವನು.


ನಾನು ಆ ಜನರನ್ನು ದಂಡಿಸುವೆನು. ಆ ಶಿಕ್ಷೆಯು ಭೂಲೋಕದ ಎಲ್ಲಾ ಜನರಲ್ಲಿ ಭೀತಿಯನ್ನು ಉಂಟು ಮಾಡುವುದು. ಜನರು ಯೆಹೂದದ ಜನರನ್ನು ಗೇಲಿಮಾಡುವರು. ನಾನು ಅವರನ್ನು ತಳ್ಳಿದ ಎಲ್ಲಾ ದೇಶಗಳಲ್ಲಿ ಜನರು ಅವರ ಬಗ್ಗೆ ಪರಿಹಾಸ್ಯದ ಮಾತುಗಳನ್ನು ಆಡುವರು; ಅವರನ್ನು ಶಪಿಸುವರು.


ಸೈರಸನಿಗೆ ಯೆಹೋವನು ಹೀಗೆನ್ನುತ್ತಾನೆ, “ನೀನೇ ನನ್ನ ಕುರುಬನು. ನಾನು ಬಯಸುವ ಕಾರ್ಯಗಳನ್ನು ನೀನು ಮಾಡುವೆ. ನೀನು ಜೆರುಸಲೇಮಿಗೆ, ‘ನೀನು ಕಟ್ಟಲ್ಪಡುವೆ’ ಎಂದೂ ದೇವಾಲಯಕ್ಕೆ ‘ನಿನ್ನ ಅಸ್ತಿವಾರವು ಮತ್ತೆ ಹಾಕಲ್ಪಡುವದು’ ಎಂದೂ ಹೇಳುವೆ.”


ಬಾಬಿಲೋನಿನವರು ನಿನ್ನ ಗಂಡುಮಕ್ಕಳನ್ನು ತೆಗೆದುಕೊಂಡು ಹೋಗುವರು. ಅವರು ಬಾಬಿಲೋನಿನ ಅರಮನೆಗಳಲ್ಲಿ ಕಂಚುಕಿಯರಾಗಿ ಸೇವೆ ಮಾಡುವರು” ಎಂದು ಹೇಳಿದನು.


ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಉತ್ತರ ದಿಕ್ಕಿನಿಂದ ಒಬ್ಬ ಶತ್ರುವನ್ನು ನಾನು ತೂರಿಗೆ ವಿರುದ್ಧವಾಗಿ ಬರಮಾಡುವೆನು. ಅವನೇ ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು. ಅವನು ಲೆಕ್ಕವಿಲ್ಲದಷ್ಟು ಕುದುರೆ ಸವಾರರು, ರಥಗಳು, ಕಾಲ್ಬಲವುಳ್ಳ ದೊಡ್ಡ ಸೈನ್ಯವನ್ನು ತೆಗೆದುಕೊಂಡು ಬರುವನು. ಅವನ ಸೈನಿಕರೆಲ್ಲಾ ಬೇರೆಬೇರೆ ಜನಾಂಗದವರು.


ಅಧಿಪತಿಯಾದ ನೆಬೂಜರದಾನನು ಯೆರೆಮೀಯನನ್ನು ಕಂಡಾಗ ಅವನನ್ನು ಮಾತನಾಡಿಸಿ ಹೀಗೆಂದನು: “ಯೆರೆಮೀಯನೇ, ನಿಮ್ಮ ದೇವರಾದ ಯೆಹೋವನು ಈ ಸ್ಥಳಕ್ಕೆ ಇಂಥಾ ದುಸ್ಥಿತಿ ಬರುವದೆಂದು ಸಾರಿದ್ದನು.


ದಾನ್‌ಕುಲದವರ ಪ್ರದೇಶದಿಂದ ನಾವು ಶತ್ರುಗಳ ಕುದುರೆಗಳ ಕೆನೆತವನ್ನು ಕೇಳುತ್ತಿದ್ದೇವೆ. ಅವುಗಳ ಪಾದಗಳ ಬಡಿತದಿಂದ ಭೂಮಿ ನಡುಗುತ್ತಿದೆ. ಅವರು ನಮ್ಮ ಪ್ರದೇಶವನ್ನು ಮತ್ತು ಅಲ್ಲಿದ್ದ ಎಲ್ಲವನ್ನು ಹಾಳುಮಾಡಲು ಬಂದಿದ್ದಾರೆ. ಅವರು ನಗರವನ್ನು ಮತ್ತು ಅಲ್ಲಿದ್ದ ಎಲ್ಲಾ ಜನರನ್ನು ಹಾಳುಮಾಡಲು ಬಂದಿದ್ದಾರೆ.


ಬೆನ್ಯಾಮೀನನ ಕುಲದವರೇ, ನಿಮ್ಮ ಪ್ರಾಣ ರಕ್ಷಣೆಗಾಗಿ ಓಡಿಹೋಗಿರಿ; ಜೆರುಸಲೇಮ್ ನಗರದಿಂದ ಓಡಿಹೋಗಿರಿ. ತೆಕೋವ ನಗರದಲ್ಲಿ ಯುದ್ಧದ ತುತ್ತೂರಿಗಳನ್ನು ಊದಿರಿ; ಬೇತ್‌ಹಕ್ಕೆರೆಮಿನಲ್ಲಿ ಎಚ್ಚರಿಕೆಯ ಧ್ವಜಗಳನ್ನು ಹಾರಿಸಿರಿ. ಉತ್ತರದಿಕ್ಕಿನಿಂದ ವಿಪತ್ತು ಬರುತ್ತಿರುವುದರಿಂದ ಇವೆಲ್ಲವನ್ನು ಮಾಡಿರಿ. ಭಯಂಕರವಾದ ವಿನಾಶವು ನಿಮಗೆ ಬರುತ್ತಿದೆ.


ದೇವರು ಹೀಗೆ ಹೇಳುವನು: “ನಾನು ಕೋಪಗೊಂಡಾಗ ಬೆತ್ತವನ್ನು ಹೇಗೆ ಉಪಯೋಗಿಸುವೆನೋ ಹಾಗೆಯೇ ಇಸ್ರೇಲನ್ನು ಶಿಕ್ಷಿಸಲು ಅಶ್ಶೂರವನ್ನು ಉಪಯೋಗಿಸುವೆನು.


ಯೆಹೋವನು ರಾಜನ ಮನಸ್ಸನ್ನು ನೀರಿನ ಕಾಲುವೆಯಂತೆ ಹತೋಟಿಯಲ್ಲಿಡುವನು. ಆತನು ತನ್ನ ಇಷ್ಟಾನುಸಾರ ಅದಕ್ಕೆ ಮಾರ್ಗದರ್ಶನ ನೀಡುವನು.


ನೀವು ಯಾವ ದೇಶಕ್ಕೆ ಕಳುಹಿಸಲ್ಪಡುವಿರೋ ಆ ದೇಶದವರು ನಿಮ್ಮ ದುರವಸ್ಥೆಯನ್ನು ನೋಡಿ ನಗುವರು; ಕೆಟ್ಟಮಾತುಗಳನ್ನಾಡುವರು.


ಆದ್ದರಿಂದ ಯೆಹೋವನು ಯೆಹೂದದ ಮತ್ತು ಜೆರುಸಲೇಮಿನ ಜನರ ಮೇಲೆ ಬಹು ಕೋಪಗೊಂಡು ಅವರನ್ನು ಶಿಕ್ಷಿಸಿದನು. ಯೆಹೋವನು ಯೆಹೂದ ಮತ್ತು ಜೆರುಸಲೇಮಿನ ಜನರಿಗೆ ಮಾಡಿದ್ದ ಸಂಗತಿಗಳನ್ನು ನೋಡಿದ ಅನ್ಯರು ಗೇಲಿ ಮಾಡುತ್ತ ವೈರತ್ವದಿಂದ ತಲೆಯಾಡಿಸಿದರು. ಇವೆಲ್ಲಾ ಸತ್ಯವೆಂದು ನಿಮಗೆ ತಿಳಿದದೆ. ಇದನ್ನು ನಿಮ್ಮ ಸ್ವಂತ ಕಣ್ಣುಗಳಿಂದ ನೋಡಿದ್ದೀರಿ.


ತನ್ನ ಗುಹೆಯಿಂದ ಒಂದು “ಸಿಂಹವು” ಹೊರಬಂದಿದೆ. ಜನಾಂಗಗಳ ವಿನಾಶಕವಾದ ಸಿಂಹವು ಹೆಜ್ಜೆ ಹಾಕುತ್ತಿದೆ. ಅದು ನಿಮ್ಮ ಪ್ರದೇಶವನ್ನು ನಾಶಮಾಡಲು ತನ್ನ ಗುಹೆಯನ್ನು ಬಿಟ್ಟು ಹೊರಟಿದೆ. ನಿಮ್ಮ ಪಟ್ಟಣಗಳೆಲ್ಲ ನಾಶಹೊಂದುವವು. ಅಲ್ಲಿ ವಾಸಿಸಲು ಜನರೇ ಇಲ್ಲದಂತಾಗುವುದು.


ಕೇಳಿರಿ, ಉತ್ತರ ದಿಕ್ಕಿನಿಂದ ಬರುತ್ತಿರುವ ಮಹಾಧ್ವನಿಯನ್ನು! ಇದು ಯೆಹೂದದ ನಗರಗಳನ್ನು ನಾಶಮಾಡುತ್ತದೆ. ಯೆಹೂದವು ಒಂದು ಬರಿದಾದ ಮರಳುಗಾಡಾಗುವದು, ನರಿಗಳ ನಿವಾಸವಾಗುವುದು.


ಅದು ನಿನ್ನ ಹೆಸರು. ಏಕೆಂದರೆ ಯೆಹೋವನು ಹೇಳುತ್ತಾನೆ: ‘ನಾನು ತಕ್ಷಣ ನಿನ್ನನ್ನು ನಿನಗೆ ಭಯಂಕಾರಿಯನ್ನಾಗಿ ಮಾಡುವೆನು. ನಾನು ನಿನ್ನನ್ನು ನಿನ್ನ ಎಲ್ಲಾ ಸ್ನೇಹಿತರಿಗೆ ಭಯಂಕಾರಿಯನ್ನಾಗಿ ಮಾಡುವೆನು. ವೈರಿಗಳು ಖಡ್ಗಗಳಿಂದ ನಿನ್ನ ಸ್ನೇಹಿತರನ್ನು ಕೊಲ್ಲುವುದನ್ನು ನೀನು ನೋಡುವೆ. ಯೆಹೂದದ ಎಲ್ಲಾ ಜನರನ್ನು ನಾನು ಬಾಬಿಲೋನಿನ ರಾಜನಿಗೆ ಒಪ್ಪಿಸುವೆನು. ಅವನು ಯೆಹೂದ್ಯರನ್ನು ಬಾಬಿಲೋನಿಗೆ ತೆಗೆದುಕೊಂಡು ಹೋಗುವನು; ಅವನ ಸೈನಿಕರು ಯೆಹೂದ್ಯರನ್ನು ತಮ್ಮ ಕತ್ತಿಗಳಿಂದ ಕೊಂದುಹಾಕುವರು.


ಸರ್ವಶಕ್ತನಾದ ಯೆಹೋವನು ಹೀಗೆಂದನು: “ನೀವು ನನ್ನ ಸಂದೇಶಗಳನ್ನು ಕೇಳಿ ಅದರಂತೆ ನಡೆಯಲಿಲ್ಲ.


ಇನ್ನೂ ಜೆರುಸಲೇಮಿನಲ್ಲಿರುವ ಜನರಿಗೆ ಖಡ್ಗ, ಹಸಿವು ಮತ್ತು ಭಯಂಕರವಾದ ವ್ಯಾಧಿಗಳಿಂದೊಡಗೂಡಿ ಬೆನ್ನಟ್ಟುವೆನು. ಆ ಜನರ ದುರ್ಗತಿಯನ್ನು ನೋಡಿ ಭೂಲೋಕದ ಸಮಸ್ತ ರಾಜ್ಯಗಳಿಗೆ ಭಯ ಉಂಟಾಗುವಂತೆ ಮಾಡುವೆನು. ಆ ಜನರನ್ನು ನಾಶಮಾಡುವೆನು. ನಡೆದ ವಿಷಯಗಳ ಬಗ್ಗೆ ಕೇಳಿ ಜನರು ಬೆರಗಾಗಿ ಸಿಳ್ಳುಹಾಕುವರು. ಯಾರಿಗಾದರೂ, ಕೇಡಾಗಲಿ ಎಂದು ಹೇಳಬೇಕಾದರೆ ಜನರು ಅವರ ಉದಾಹರಣೆಯನ್ನು ಕೊಡುವರು. ನಾನು ಅವರನ್ನು ಅಟ್ಟಿದ ಎಲ್ಲೆಡೆಯಲ್ಲಿಯೂ ಜನರು ಅವರನ್ನು ಅವಮಾನಗೊಳಿಸುವರು.


“ಯೆರೆಮೀಯನೇ, ಒಂದು ಸುರಳಿಯನ್ನು ತೆಗೆದುಕೊಂಡು ನಾನು ನಿನಗೆ ಹೇಳಿದ ಎಲ್ಲಾ ಸಂದೇಶಗಳನ್ನು ಅದರಲ್ಲಿ ಬರೆದಿಡು. ನಾನು ನಿನಗೆ ಇಸ್ರೇಲ್ ಮತ್ತು ಯೆಹೂದ ಜನಾಂಗಗಳ ಬಗ್ಗೆಯೂ ಮತ್ತು ಉಳಿದ ಜನಾಂಗಗಳ ಬಗ್ಗೆಯೂ ಹೇಳಿದ್ದೇನೆ. ಯೋಷೀಯನ ಆಳ್ವಿಕೆಯ ಕಾಲದಿಂದ ಇಲ್ಲಿಯವರೆಗೂ ನಾನು ನಿನಗೆ ಹೇಳಿದ ಪ್ರತಿಯೊಂದು ಶಬ್ಧವನ್ನೂ ಬರೆದಿಡು.


ಯೆರೆಮೀಯನೇ, ಯೆಹೂದದ ರಾಜನಾದ ಯೆಹೋಯಾಕೀಮನಿಗೆ ಹೀಗೆ ಹೇಳು, ‘ಯೆಹೋವನು ಹೀಗೆನ್ನುತ್ತಾನೆ: ಯೆಹೋಯಾಕೀಮನೇ, ನೀನು ಆ ಸುರುಳಿಯನ್ನು ಸುಟ್ಟುಬಿಟ್ಟೆ. ನೀನು, “ಬಾಬಿಲೋನ್ ರಾಜನು ಖಂಡಿತವಾಗಿ ಬಂದು ಈ ದೇಶವನ್ನು ನಾಶಮಾಡುವನು ಎಂದು ಯೆರೆಮೀಯನು ಏಕೆ ಬರೆದನು? ಬಾಬಿಲೋನ್ ರಾಜನು ಈ ದೇಶದ ಮನುಷ್ಯರನ್ನು ಮತ್ತು ಪ್ರಾಣಿಗಳನ್ನು ನಾಶಮಾಡುವನು ಎಂದು ಏಕೆ ಹೇಳಿದನು?” ಎಂದು ಕೇಳಿದೆ.


ಜನರು ವಾಸವಾಗಿರುವ ಪಟ್ಟಣಗಳು ನಾಶವಾಗುತ್ತವೆ; ಇಡೀ ದೇಶವೇ ನಾಶವಾಗುತ್ತದೆ. ನಾನೇ ಯೆಹೋವನೆಂದು ಆಗ ನಿಮಗೆ ತಿಳಿಯುವುದು.’”


“ಎದೋಮಿನ ಬಗ್ಗೆಯೂ ಉಳಿದ ಆ ವಿದೇಶಗಳ ಬಗ್ಗೆಯೂ ನಾನು ರೋಷದಿಂದ ಮಾತಾಡುತ್ತಿದ್ದೇನೆಂದು ಪ್ರಮಾಣ ಮಾಡುತ್ತೇನೆ. ಆ ಜನಾಂಗಗಳು ನನ್ನ ದೇಶವನ್ನು ತಮ್ಮ ಸ್ವಾಸ್ತ್ಯವನ್ನಾಗಿ ಸಂತೋಷದಿಂದ ತೆಗೆದುಕೊಂಡರು. ಅವರು ಅದನ್ನು ವಶಪಡಿಸಿಕೊಂಡು ಸೂರೆ ಮಾಡಿದಾಗ ಮತ್ತು ನನ್ನ ಜನರಿಗೆ ಅವಮಾನ ಮಾಡಿದಾಗ ನನ್ನ ಜನರನ್ನು ಅವರು ಎಷ್ಟೊಂದು ದ್ವೇಷಿಸುತ್ತಾರೆಂದು ತೋರಿಸುತ್ತಾ ಉಲ್ಲಾಸಪಟ್ಟರು.


“ರಾಜನೇ, ಮಹೋನ್ನತನಾದ ದೇವರು ನಿನ್ನ ತಂದೆಯಾದ ನೆಬೂಕದ್ನೆಚ್ಚರನನ್ನು ಮಹಾ ದೊಡ್ಡ ರಾಜನನ್ನಾಗಿಯೂ ಬಲಿಷ್ಠನಾದ ರಾಜನನ್ನಾಗಿಯೂ ಪ್ರಮುಖನಾದ ರಾಜನನ್ನಾಗಿಯೂ ಮಾಡಿದ್ದನು.


ಯೆಹೋವನು ಬಾಬಿಲೋನಿನವರನ್ನು, ಅರಾಮ್ಯರನ್ನು, ಮೋವಾಬ್ಯರನ್ನು ಮತ್ತು ಅಮ್ಮೋನಿಯರನ್ನು ಯೆಹೋಯಾಕೀಮನ ವಿರುದ್ಧ ಹೋರಾಡಲು ಕಳುಹಿಸಿದನು. ಯೆಹೋವನು ಯೆಹೂದವನ್ನು ನಾಶಗೊಳಿಸಲು ಈ ಗುಂಪುಗಳನ್ನು ಕಳುಹಿಸಿದನು. ಯೆಹೋವನು ತನ್ನ ಸೇವಕರಾದ ಪ್ರವಾದಿಗಳ ಮೂಲಕ ತಿಳಿಸಿದ್ದಂತೆಯೇ ಇದು ಸಂಭವಿಸಿತು.


ಹೀಗೆ ಯೆಹೋವನು ತನ್ನ ಪ್ರವಾದಿಯಾದ ಯೆರೆಮೀಯನ ಮೂಲಕ ಹೇಳಿಸಿದ ಮಾತುಗಳನ್ನು ನೆರವೇರಿಸಿದನು. “ಈ ಸ್ಥಳವು ಎಪ್ಪತ್ತು ವರ್ಷಗಳ ತನಕ ಪಾಳುಬೀಳುವದು. ಜನರು ಆಚರಿಸದೆಹೋದ ಸಬ್ಬತ್ ಹಬ್ಬಗಳಿಗೆ ಅದು ಪರಿಹಾರವಾಗಿರುವುದು” ಎಂದು ಯೆರೆಮೀಯನು ಹೇಳಿದ್ದನು.


ಯೆಹೋವನು ನನಗೆ, “ಉತ್ತರ ದಿಕ್ಕಿನಿಂದ ಈ ದೇಶದ ನಿವಾಸಿಗಳೆಲ್ಲರ ಮೇಲೆ ಒಂದು ಕೇಡು ಬರುವದು.


ಪ್ರಾಯದಸಿಂಹಗಳು (ವೈರಿಗಳು) ಇಸ್ರೇಲ್ ಜನಾಂಗದ ಮೇಲೆ ಗರ್ಜಿಸುತ್ತಿವೆ. ಆ ಸಿಂಹಗಳು ಆರ್ಭಟಿಸುತ್ತಿವೆ; ಇಸ್ರೇಲರ ನಾಡನ್ನು ನಾಶಮಾಡಿವೆ. ಇಸ್ರೇಲ್‌ನ ನಗರಗಳು ಸುಡಲ್ಪಟ್ಟಿವೆ; ಅವುಗಳು ನಿರ್ಜನವಾಗಿವೆ.


ಯೆಹೋವನು ಹೀಗೆ ಹೇಳುತ್ತಾನೆ: “ಇಸ್ರೇಲ್ ಪ್ರದೇಶದ ಸುತ್ತಮುತ್ತ ವಾಸಮಾಡುವ ಜನರಿಗಾಗಿ ನಾನು ಏನು ಮಾಡುವೆನೆಂಬುದನ್ನು ನಿಮಗೆ ಹೇಳುವೆನು. ಆ ಜನರು ತುಂಬ ದುಷ್ಟರಾಗಿದ್ದಾರೆ. ನಾನು ಇಸ್ರೇಲಿನ ಜನರಿಗೆ ಕೊಟ್ಟ ಪ್ರದೇಶವನ್ನು ಅವರು ಹಾಳು ಮಾಡಿದರು. ನಾನು ಆ ಜನರನ್ನು ಅವರ ಪ್ರದೇಶದಿಂದ ಹೊರಗೆ ಎಸೆಯುವೆನು. ನಾನು ಅವರೊಂದಿಗೆ ಯೆಹೂದದ ಜನರನ್ನೂ ಎಸೆಯುವೆನು.


ಆದರೆ ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ಯೆಹೂದ ದೇಶದ ಮೇಲೆ ಧಾಳಿ ಮಾಡಿದಾಗ ನಾವು ಜೆರುಸಲೇಮ್ ನಗರದಲ್ಲಿ ಪ್ರವೇಶ ಮಾಡಿ ಹೀಗೆ ಮಾತನಾಡಿಕೊಂಡೆವು, ‘ಬನ್ನಿ, ನಾವು ಬಾಬಿಲೋನಿನ ಸೈನ್ಯದಿಂದ ಮತ್ತು ಅರಾಮ್ಯರ ಸೈನ್ಯದಿಂದ ತಪ್ಪಿಸಿಕೊಳ್ಳುವದಕ್ಕಾಗಿ ಜೆರುಸಲೇಮ್ ನಗರವನ್ನು ಪ್ರವೇಶಿಸೋಣ.’ ಹೀಗಾಗಿ ನಾವು ಜೆರುಸಲೇಮ್ ನಗರದಲ್ಲಿ ವಾಸಿಸುತ್ತಿದ್ದೇವೆ” ಎಂದು ಹೇಳಿದರು.


“ಈಜಿಪ್ಟು ಸುಂದರವಾದ ಹಸುವಿನಂತಿದೆ, ಆದರೆ ಉತ್ತರದಿಂದ ತೊಣಚಿಯು ಅದನ್ನು ಪೀಡಿಸಲು ಬರುತ್ತಿದೆ.


“ಜೋರ್ಡನ್ ನದಿಯ ಸಮೀಪದ ದಟ್ಟವಾದ ಕಾಡಿನಿಂದ ಫಕ್ಕನೆ ಒಂದು ಸಿಂಹ ಬರುವದು. ಅದು ಹೊಲಗಳಲ್ಲಿದ್ದ ಜನರ ದನಕುರಿಗಳ ಹಟ್ಟಿಗಳಿಗೆ ನುಗ್ಗುವುದು. ನಾನು ಆ ಸಿಂಹದಂತೆ ಇದ್ದೇನೆ. ನಾನು ಎದೋಮ್ ನಗರಕ್ಕೆ ಹೋಗಿ ಆ ಜನರನ್ನು ಹೆದರಿಸುವೆನು; ಅವರು ಓಡಿಹೋಗುವಂತೆ ಮಾಡುವೆನು. ಅವರ ತರುಣರಲ್ಲಿ ಯಾರೂ ನನ್ನನ್ನು ತಡೆಯಲಾರರು. ನನ್ನತೆ ಯಾರೂ ಇಲ್ಲ. ಯಾರೂ ನನ್ನನ್ನು ಪ್ರತಿಭಟಿಸುವದಿಲ್ಲ. ಅವರ ನಾಯಕರಲ್ಲಿ ಯಾರೂ ನನ್ನ ವಿರುದ್ಧ ನಿಲ್ಲುವದಿಲ್ಲ.”


ನಿನ್ನನ್ನು ಕಲ್ಲುಗಳಿಂದ ಕೊಲ್ಲುವದಕ್ಕಾಗಿ ಅವರು ಜನರನ್ನು ಒಂದುಗೂಡಿಸುವರು. ಬಳಿಕ ಅವರು ನಿನ್ನನ್ನು ಖಡ್ಗಗಳಿಂದ ತುಂಡುತುಂಡಾಗಿ ಕತ್ತರಿಸುವರು.


ಖಡ್ಗವು ಉಜ್ಜಲ್ಪಟ್ಟಿದೆ. ಅದು ಈಗ ಉಪಯೋಗಿಸಲ್ಪಡುತ್ತದೆ. ಖಡ್ಗವು ಹರಿತಮಾಡಲ್ಪಟ್ಟು ಚೆನ್ನಾಗಿ ಉಜ್ಜಲ್ಪಟ್ಟಿದೆ. ಅದನ್ನು ಈಗ ಕೊಲ್ಲುವವನ ಕೈಯಲ್ಲಿ ಕೊಡಲಾಗುವುದು.


ಆಗ ಹಬಕ್ಕೂಕನು ಹೇಳಿದ್ದೇನೆಂದರೆ, ಯೆಹೋವನೇ, ನೀನು ನಿತ್ಯಕಾಲಕ್ಕೂ ಜೀವಿಸುವ ದೇವರು. ನೀನು ಎಂದಿಗೂ ಸಾಯದ ನನ್ನ ಪರಿಶುದ್ಧ ದೇವರು. ನೀನು ಯೋಚಿಸುವದನ್ನು ನೆರವೇರಿಸಲು ಬಾಬಿಲೋನಿನವರನ್ನು ಸೃಷ್ಟಿಸಿರುವೆ. ನಮ್ಮ ಬಂಡೆಯಾದ ನೀನು ಯೆಹೂದದ ಜನರನ್ನು ಶಿಕ್ಷಿಸುವುದಕ್ಕಾಗಿಯೇ ಅವರನ್ನು ಸೃಷ್ಟಿಸಿರುವೆ.


ಅವನು ತನ್ನ ಬಲೆಯಿಂದ ಐಶ್ವರ್ಯವನ್ನು ಹೊಂದುತ್ತಾ ಮುಂದರಿಯುವನೋ? ನಿರ್ದಯೆಯಿಂದ ಜನರನ್ನು ನಾಶಮಾಡುತ್ತಲೇ ಇರುವನೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು