13 ನೀವು ನಿಮ್ಮ ನಡತೆಯನ್ನು ಬದಲಾಯಿಸಿಕೊಂಡು, ಸತ್ಕಾರ್ಯಗಳನ್ನು ಮಾಡಲಾರಂಭಿಸಬೇಕು. ನೀವು ನಿಮ್ಮ ದೇವರಾದ ಯೆಹೋವನ ಆಜ್ಞಾಪಾಲನೆ ಮಾಡಬೇಕು. ಆಗ ಯೆಹೋವನು ತನ್ನ ಮನಸ್ಸನ್ನು ಬದಲಾಯಿಸಿ ನಿಮಗೆ ಕೇಡುಮಾಡುವುದಿಲ್ಲ.
13 ಈಗಲೇ ನಿಮ್ಮ ಮಾರ್ಗಗಳನ್ನೂ ಕೃತ್ಯಗಳನ್ನೂ ತಿದ್ದಿಕೊಂಡು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಡಿರಿ; ಹಾಗೆ ಮಾಡಿದರೆ ಯೆಹೋವನು ನಿಮ್ಮ ವಿಷಯವಾಗಿ ನುಡಿದಿರುವ ಕೇಡನ್ನು ಮನಮರುಗಿ ಮಾಡದಿರುವನು.
13 ಇದೀಗಲೇ ನೀವು ನಿಮ್ಮ ಮಾರ್ಗಗಳನ್ನೂ ನಡತೆಗಳನ್ನೂ ತಿದ್ದುಕೊಳ್ಳಿ. ನಿಮ್ಮ ದೇವರಾದ ಸರ್ವೇಶ್ವರನ ನುಡಿಗೆ ಕಿವಿಗೊಡಿ. ಆಗ ನಿಮಗೆ ತಿಳಿಸಿದ ಕೇಡು ಒದಗದಂತೆ ಸರ್ವೇಶ್ವರ ತಮ್ಮ ಮನಸ್ಸನ್ನು ಬದಲಾಯಿಸಿಕೊಳ್ಳುವರು.
13 ಈಗಲೇ ನಿಮ್ಮ ಮಾರ್ಗಗಳನ್ನೂ ಕೃತ್ಯಗಳನ್ನೂ ತಿದ್ದಿಕೊಂಡು ನಿಮ್ಮ ದೇವರಾದ ಯೆಹೋವನ ನುಡಿಗೆ ಕಿವಿಗೊಡಿರಿ; ಹಾಗಾದರೆ ಯೆಹೋವನು ನಿಮ್ಮ ವಿಷಯವಾಗಿ ನುಡಿದಿರುವ ಕೇಡನ್ನು ಮನಮರುಗಿ ಮಾಡದಿರುವನು.
13 ಹೀಗಿರುವುದರಿಂದ ನಿಮ್ಮ ಮಾರ್ಗಗಳನ್ನೂ, ನಿಮ್ಮ ಕೃತ್ಯಗಳನ್ನೂ ತಿದ್ದಿಕೊಳ್ಳಿರಿ. ನಿಮ್ಮ ದೇವರಾದ ಯೆಹೋವ ದೇವರ ಮಾತಿಗೆ ವಿಧೇಯರಾಗಿರಿ. ಆಗ ಯೆಹೋವ ದೇವರು ನಿಮಗೆ ವಿರೋಧವಾಗಿ ಮಾತನಾಡಿದ ಕೇಡಿನ ವಿಷಯಕ್ಕಾಗಿ ತಮ್ಮ ಮನಸ್ಸನ್ನು ಬದಲಾಯಿಸಿಕೊಳ್ಳುವರು.
ಯೋನನು ಯೆಹೋವನಿಗೆ ದೂರು ಹೇಳುತ್ತಾ, “ಇದು ಹೀಗಾಗುತ್ತದೆಯೆಂದು ನನಗೆ ಗೊತ್ತಿತ್ತು. ನಾನು ನನ್ನ ದೇಶದಲ್ಲಿದ್ದೆ. ಇಲ್ಲಿಗೆ ಬರಲು ನನಗೆ ಹೇಳಿದವನು ನೀನೇ. ಈ ದುಷ್ಟಪಟ್ಟಣದ ಜನರನ್ನು ನೀನು ಕ್ಷಮಿಸುತ್ತೀ ಎಂದು ನನಗೆ ಆಗಲೇ ಗೊತ್ತಿತ್ತು. ಆದ್ದರಿಂದ ನಾನು ತಾರ್ಷೀಷಿಗೆ ಓಡಿಹೋಗಲು ನಿರ್ಧರಿಸಿದೆನು. ನೀನು ದಯಾಪರನಾದ, ಕೃಪಾಪೂರ್ಣನಾದ, ಕೋಪಗೊಳ್ಳುವುದರಲ್ಲಿ ನಿಧಾನವಾದ ಮತ್ತು ಮಹಾಕನಿಕರವುಳ್ಳ ದೇವರೆಂದು ನನಗೆ ಗೊತ್ತಿತ್ತು. ಆ ಜನರು ಪಾಪ ಮಾಡುವದನ್ನು ನಿಲ್ಲಿಸಿದರೆ, ನೀನು ನಿನ್ನ ಯೋಜನೆಯಂತೆ ಅವರನ್ನು ನಾಶಮಾಡುವುದಿಲ್ಲ ಎಂದು ನನಗೆ ಗೊತ್ತಿತ್ತು.
ಒಂದುವೇಳೆ ದೇವರು ತನ್ನ ಮನಸ್ಸನ್ನು ಬದಲಾಯಿಸಾನು. ತಾನು ಯೋಚಿಸಿದ್ದನ್ನು ನೆರವೇರಿಸದೆ ಇರುವನೋ ಏನೋ? ಆತನು ತನ್ನ ಯೋಜನೆಯನ್ನು ಹಿಂದೆಗೆದು, ಕೋಪಿಸಿಕೊಳ್ಳದೆ, ನಮ್ಮನ್ನು ಶಿಕ್ಷಿಸದೆ ಇರುವನೋ ಏನೋ! ಆಗ ನಾವು ನಾಶವಾಗದಿರಬಹುದು!
ಒಂದುವೇಳೆ ಯೆಹೋವನು ತನ್ನ ಮನಸ್ಸನ್ನು ಬದಲಾಯಿಸಿದರೂ ಬದಲಾಯಿಸಬಹುದು. ಒಂದುವೇಳೆ ಆತನು ನಿಮಗಾಗಿ ಆಶೀರ್ವಾದವನ್ನು ಬಿಟ್ಟುಹೋಗಬಹುದು. ಆಗ ನೀವು ದೇವರಾದ ಯೆಹೋವನಿಗೆ ಧಾನ್ಯ ಮತ್ತು ಪಾನಸಮರ್ಪಣೆ ಮಾಡುವಿರಿ.
ಆದರೆ ಯೆರೆಮೀಯನು, “ರಾಜನಾದ ಚಿದ್ಕೀಯನೇ, ಆ ಸೈನಿಕರು ನಿನ್ನನ್ನು ಯೆಹೂದದ ಆ ಜನರಿಗೆ ಒಪ್ಪಿಸುವುದಿಲ್ಲ. ನಾನು ಹೇಳಿದಂತೆ ಮಾಡಿ ಯೆಹೋವನ ಆಜ್ಞಾಪಾಲನೆ ಮಾಡು. ಆಗ ನಿನಗೆಲ್ಲ ಒಳ್ಳೆಯದಾಗುವುದು ಮತ್ತು ನಿನ್ನ ಪ್ರಾಣ ಉಳಿಯುವುದು.
ನಾನು ಮಾಡಬೇಕೆಂದು ಯೋಚಿಸಿರುವುದನ್ನು ಯೆಹೂದ ಕುಲದವರು ಕೇಳಿಸಿಕೊಳ್ಳಬಹುದು. ಅವರು ಮಾಡುತ್ತಿರುವ ದುಷ್ಕೃತ್ಯಗಳನ್ನು ನಿಲ್ಲಿಸಬಹುದು. ಅವರು ಹಾಗೆ ಮಾಡಿದರೆ ಅವರು ಮಾಡಿದ ಪಾಪಗಳನ್ನು ನಾನು ಕ್ಷಮಿಸುವೆನು.”
ನಾನು ನನ್ನ ಸೇವಕರಾದ ಪ್ರವಾದಿಗಳನ್ನು ಇಸ್ರೇಲಿಗೆ ಮತ್ತು ಯೆಹೂದಕ್ಕೆ ಕಳುಹಿಸಿಕೊಟ್ಟೆ. ನಾನು ಅವರನ್ನು ನಿಮ್ಮಲ್ಲಿಗೆ ಪುನಃಪುನಃ ಕಳುಹಿಸಿಕೊಟ್ಟೆ. ಆ ಪ್ರವಾದಿಗಳು, “ಇಸ್ರೇಲಿನ ಮತ್ತು ಯೆಹೂದದ ಪ್ರತಿಯೊಬ್ಬರೂ ದುಷ್ಕೃತ್ಯಗಳನ್ನು ಮಾಡುವದನ್ನು ನಿಲ್ಲಿಸಬೇಕು. ನೀವು ಒಳ್ಳೆಯವರಾಗಿರಬೇಕು. ಬೇರೆ ದೇವರುಗಳನ್ನು ಅನುಸರಿಸಬಾರದು. ಅವುಗಳನ್ನು ಪೂಜಿಸಬಾರದು. ಅವುಗಳ ಸೇವೆಮಾಡಬಾರದು ಎಂದು ಹೇಳಿದರು. ನನ್ನ ಆಜ್ಞೆಯನ್ನು ಪಾಲಿಸಿದರೆ ನಾನು ನಿಮಗೂ ಮತ್ತು ನಿಮ್ಮ ಪೂರ್ವಿಕರಿಗೂ ಕೊಟ್ಟ ಪ್ರದೇಶದಲ್ಲಿ ನೀವು ವಾಸಿಸಬಹುದು” ಎಂದು ಹೇಳಿದ್ದೆ. ಆದರೆ ನೀವು ನನ್ನ ಸಂದೇಶದ ಕಡೆಗೆ ಗಮನ ಕೊಡಲಿಲ್ಲ.
“ಹಿಜ್ಕೀಯನು ಯೆಹೂದದ ರಾಜನಾಗಿದ್ದನು. ಹಿಜ್ಕೀಯನು ಮೀಕಾಯನ ಕೊಲೆ ಮಾಡಲಿಲ್ಲ. ಯೆಹೂದದ ಯಾರೂ ಮೀಕಾಯನನ್ನು ಕೊಲೆಮಾಡಲಿಲ್ಲ. ಹಿಜ್ಕೀಯನು ಯೆಹೋವನನ್ನು ಗೌರವಿಸುತ್ತಿದ್ದನೆಂಬುದು ನಿಮಗೆ ಗೊತ್ತು. ಅವನು ಯೆಹೋವನನ್ನು ಸಂತೋಷಪಡಿಸಲು ಬಯಸಿದನು. ಯೆಹೂದಕ್ಕೆ ಕೇಡನ್ನು ತರುವೆನೆಂದು ಯೆಹೋವನು ಹೇಳಿದ್ದನು. ಆದರೆ ಹಿಜ್ಕೀಯನು ಯೆಹೋವನನ್ನು ಪ್ರಾರ್ಥಿಸಿದನು. ಯೆಹೋವನು ತನ್ನ ಮನಸ್ಸನ್ನು ಬದಲಾಯಿಸಿ ಕೇಡನ್ನು ಬರಮಾಡಲಿಲ್ಲ. ನಾವು ಯೆರೆಮೀಯನನ್ನು ಕೊಂದರೆ ಅನೇಕ ಕಷ್ಟಗಳನ್ನು ತಂದುಕೊಳ್ಳುವೆವು. ಆ ಕಷ್ಟಗಳಿಗೆ ನಮ್ಮ ತಪ್ಪೇ ಕಾರಣವಾಗುವುದು.”
ಅವರು ನನ್ನ ಸಂದೇಶವನ್ನು ಕೇಳಿ ಅದರಂತೆ ನಡೆಯಬಹುದು; ತಮ್ಮ ಕೆಟ್ಟ ಜೀವನವನ್ನು ತ್ಯಜಿಸಿ ಸನ್ಮಾರ್ಗವನ್ನು ಹಿಡಿಯಬಹುದು. ಅವರು ಪರಿವರ್ತನೆ ಹೊಂದಿದರೆ ನಾನು ಅವರನ್ನು ಶಿಕ್ಷಿಸಬೇಕೆಂದು ಮಾಡಿದ ಯೋಚನೆಗಳನ್ನು ಬದಲಾಯಿಸುವೆನು. ಅವರು ಅನೇಕ ದುಷ್ಕೃತ್ಯಗಳನ್ನು ಮಾಡಿದ್ದರಿಂದ ಅವರನ್ನು ಶಿಕ್ಷಿಸಬೇಕೆಂದು ನಾನು ಯೋಚಿಸುತ್ತಿದ್ದೇನೆ.
ಆದರೆ ಆ ಜನಾಂಗದ ಜನರು ತಮ್ಮ ಮನಸ್ಸನ್ನು ಮತ್ತು ಜೀವನವನ್ನು ಪರಿವರ್ತಿಸಿಕೊಳ್ಳಬಹುದು. ಆ ಜನಾಂಗದ ಜನರು ಮಾಡುವ ದುಷ್ಕೃತ್ಯಗಳನ್ನು ನಿಲ್ಲಿಸಬಹುದು. ಆಗ ನಾನು ನನ್ನ ವಿಚಾರವನ್ನು ಬದಲಾಯಿಸಿ, ಆ ಜನಾಂಗವನ್ನು ನಾಶಪಡಿಸಬೇಕೆಂದು ಮಾಡಿದ ನನ್ನ ಮುಂಚಿನ ಯೋಜನೆಗಳನ್ನು ಕಾರ್ಯರೂಪಕ್ಕೆ ತರದಿರಬಹುದು.
ಕೆಟ್ಟಜನರು ಕೆಟ್ಟತನದಲ್ಲಿ ಜೀವಿಸುವದನ್ನು ನಿಲ್ಲಿಸಲಿ. ಅವರು ಕೆಟ್ಟ ಆಲೋಚನೆಗಳನ್ನು ಮಾಡದಿರಲಿ. ಅವರು ಯೆಹೋವನ ಬಳಿಗೆ ಹಿಂತಿರುಗಲಿ. ಆಗ ಯೆಹೋವನು ಅವರನ್ನು ಆದರಿಸುವನು. ದೇವರಾದ ಯೆಹೋವನು ಕ್ಷಮಿಸುವುದರಿಂದ ಅವರು ಆತನ ಬಳಿಗೆ ಬರಲಿ.
“ಆಗ ನೀನು ಅವರಿಗೆ ಹೀಗೆ ಹೇಳಬೇಕು, ‘ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ನನ್ನ ಜೀವದಾಣೆ, ನಾನು ಜನರು ಸಾಯುವುದನ್ನು ನೋಡಲು ಇಷ್ಟಪಡುವದಿಲ್ಲ; ದುಷ್ಟರು ಸಾಯುವದರಲ್ಲಿಯೂ ನನಗೆ ಇಷ್ಟವಿಲ್ಲ. ಆ ದುಷ್ಟರು ನನ್ನ ಕಡೆಗೆ ತಿರುಗಬೇಕೆಂದು ನಾನು ಇಷ್ಟಪಡುತ್ತೇನೆ. ಅವರು ತಮ್ಮ ದುರ್ನಡತೆಯನ್ನು ಬಿಟ್ಟು ನಿಜವಾದ ಜೀವನವನ್ನು ನಡೆಸಬೇಕು. ಆದ್ದರಿಂದ ನನ್ನ ಬಳಿಗೆ ಹಿಂದಿರುಗಿ ಬನ್ನಿರಿ. ದುಷ್ಟತನವನ್ನು ಬಿಟ್ಟುಬಿಡಿರಿ. ಇಸ್ರೇಲ್ ಜನರೇ, ನೀವು ಯಾಕೆ ಸಾಯುತ್ತೀರಿ?’
‘ನೀವು ಯೆಹೂದದಲ್ಲಿ ವಾಸಮಾಡಿದರೆ ನಾನು ನಿಮ್ಮನ್ನು ನಾಶಮಾಡದೆ ಬಲಶಾಲಿಗಳನ್ನಾಗಿ ಮಾಡುತ್ತೇನೆ. ನಾನು ನಿಮ್ಮನ್ನು ನೆಡುತ್ತೇನೆ, ನಿಮ್ಮನ್ನು ಕೀಳುವುದಿಲ್ಲ. ನಾನು ನಿಮಗೆ ಬರಮಾಡಿದ ಭಯಂಕರವಾದ ಕೇಡಿಗಾಗಿ ದುಃಖಿತನಾಗಿದ್ದೇನೆ.
ಅನೇಕ ಸಲ ಶತ್ರುಗಳು ಇಸ್ರೇಲರಿಗೆ ತುಂಬ ಕಷ್ಟಗಳನ್ನು ಉಂಟು ಮಾಡುತ್ತಿದ್ದರು. ಇಸ್ರೇಲರು ಸಹಾಯಕ್ಕಾಗಿ ಯೆಹೋವನಿಗೆ ಮೊರೆಯಿಡುತ್ತಿದ್ದರು; ಪ್ರತಿಸಲವೂ ಯೆಹೋವನು ಅವರ ಗೋಳಾಟವನ್ನು ಕೇಳಿ ಮರುಕಪಡುತ್ತಿದ್ದನು. ಪ್ರತಿಸಲವೂ ಅವರನ್ನು ಶತ್ರುಗಳಿಂದ ರಕ್ಷಿಸಲು ಒಬ್ಬ ನ್ಯಾಯಾಧೀಶನನ್ನು ಕಳುಹಿಸಿ ಕೊಡುತ್ತಿದ್ದನು. ಯೆಹೋವನು ಆ ನ್ಯಾಯಾಧೀಶರ ಜೊತೆಯಲ್ಲಿಯೇ ಇರುತ್ತಿದ್ದನು. ಹೀಗಾಗಿ ಪ್ರತಿಸಲವೂ ಇಸ್ರೇಲರನ್ನು ಅವರ ಶತ್ರುಗಳಿಂದ ರಕ್ಷಿಸಲಾಯಿತು.
“ಯೆಹೋವನು ತನ್ನ ಜನರಿಗೆ ನ್ಯಾಯತೀರಿಸುವನು. ಅವರು ಆತನ ಸೇವಕರಾಗಿದ್ದಾರೆ. ಆತನು ಅವರಿಗೆ ಕರುಣೆ ತೋರುವನು. ಅವರ ಬಲವು ಕುಂದುವಂತೆ ಮಾಡುವನು. ಗುಲಾಮರಾಗಿರಲಿ ಸ್ವತಂತ್ರರಾಗಿರಲಿ ಅವರನ್ನು ಆತನು ನಿಸ್ಸಹಾಯಕರನ್ನಾಗಿ ಮಾಡುವನು.
ನಾನು ನಿಮ್ಮ ಪೂರ್ವಿಕರ ಸಂಗಡ ಮಾಡಿಕೊಂಡ ಒಡಂಬಡಿಕೆಯ ಬಗ್ಗೆ ಮಾತನಾಡುತ್ತಿದ್ದೇನೆ. ನಾನು ಈಜಿಪ್ಟಿನಿಂದ ಅವರನ್ನು ಹೊರತಂದಾಗ ನಾನು ಅವರೊಂದಿಗೆ ಈ ಒಡಂಬಡಿಕೆಯನ್ನು ಮಾಡಿಕೊಂಡೆ. ಈಜಿಪ್ಟು ಅನೇಕ ಕಷ್ಟಗಳ ನಾಡಾಗಿತ್ತು. ಅದು ಕಬ್ಬಿಣವನ್ನು ಕರಗಿಸುವ ಉರಿಯುವ ಕುಲುಮೆಯಂತಿತ್ತು. ನಾನು ಅವರಿಗೆ, ‘ನನ್ನ ಆಜ್ಞಾಪಾಲನೆಯನ್ನು ಮಾಡಿರಿ ಮತ್ತು ನಾನು ಹೇಳಿದಂತೆ ಎಲ್ಲವನ್ನು ಮಾಡಿರಿ. ಆಗ ನೀವು ನನ್ನ ಭಕ್ತರಾಗುವಿರಿ. ನಾನು ನಿಮ್ಮ ದೇವರಾಗುವೆನು’ ಎಂದೆ.
“ಯೆರೆಮೀಯನೇ, ಯೆಹೂದದ ಜನರಿಗೆ ಮತ್ತು ಜೆರುಸಲೇಮಿನಲ್ಲಿ ವಾಸಿಸುವ ಜನರಿಗೆ ಯೆಹೋವನು ಹೀಗೆನ್ನುವನು: ‘ಈಗಲೇ ನಾನು ನಿಮಗೋಸ್ಕರ ತೊಂದರೆಗಳನ್ನು ಎಬ್ಬಿಸುತ್ತೇನೆ. ನಿಮ್ಮ ವಿರುದ್ಧ ಯೋಜನೆಗಳನ್ನು ಹಾಕುತ್ತಿದ್ದೇನೆ. ಆದ್ದರಿಂದ ನೀವು ಮಾಡುತ್ತಿರುವ ದುಷ್ಕೃತ್ಯಗಳನ್ನು ನಿಲ್ಲಿಸಬೇಕು. ಪ್ರತಿಯೊಬ್ಬನು ಪರಿವರ್ತನೆ ಹೊಂದಿ ಒಳ್ಳೆಯ ಕೆಲಸಗಳನ್ನು ಮಾಡಲು ಪ್ರಾರಂಭಿಸಬೇಕು’ ಎಂದು ಹೇಳು.