Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 26:23 - ಪರಿಶುದ್ದ ಬೈಬಲ್‌

23 ಅವರು ಊರೀಯನನ್ನು ಈಜಿಪ್ಟಿನಿಂದ ತಂದರು. ಅವರು ಊರೀಯನನ್ನು ರಾಜನಾದ ಯೆಹೋಯಾಕೀಮನ ಹತ್ತಿರ ತೆಗೆದುಕೊಂಡು ಹೋದರು. ಯೆಹೋಯಾಕೀಮನು ಕತ್ತಿಯಿಂದ ಊರೀಯನ ಕೊಲೆಮಾಡಬೇಕೆಂದು ಆಜ್ಞಾಪಿಸಿದನು. ಊರೀಯನ ದೇಹವನ್ನು ಬಡವರ ಸ್ಮಶಾನದಲ್ಲಿ ಎಸೆಯಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅವರು ಊರೀಯನನ್ನು ಐಗುಪ್ತದಿಂದ ಎಳೆದು ಅರಸನಾದ ಯೆಹೋಯಾಕೀಮನ ಬಳಿಗೆ ತರಲು ಅವನು ಇವನನ್ನು ಕತ್ತಿಯಿಂದ ಕಡಿಸಿ, ಶವವನ್ನು ಸಾಧಾರಣ ಜನರ ಗೋರಿಗಳ ನಡುವೆ ಹಾಕಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಅವರು ಊರೀಯನನ್ನು ಈಜಿಪ್ಟಿನಿಂದ ಎಳೆದು ಅರಸ ಯೆಹೋಯಾಕೀಮನ ಬಳಿಗೆ ತಂದರು. ಅರಸ ಅವನನ್ನು ಕತ್ತಿಯಿಂದ ಕಡಿಸಿ, ಶವವನ್ನು ಜನಸಾಮಾನ್ಯರ ಸಮಾಧಿಗಳ ನಡುವೆ ಹೂಣಿಸಿದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಅವರು ಊರೀಯನನ್ನು ಐಗುಪ್ತದಿಂದ ಎಳೆದು ಅರಸನಾದ ಯೆಹೋಯಾಕೀಮನ ಬಳಿಗೆ ತರಲು ಅವನು ಇವನನ್ನು ಕತ್ತಿಯಿಂದ ಕಡಿಸಿ ಶವವನ್ನು ಸಾಧಾರಣ ಜನರ ಗೋರಿಗಳ ನಡುವೆ ಹಾಕಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಅವರು ಊರೀಯನನ್ನು ಈಜಿಪ್ಟಿನಿಂದ ತೆಗೆದುಕೊಂಡು ಅರಸನಾದ ಯೆಹೋಯಾಕೀಮನ ಬಳಿಗೆ ತಂದರು. ಇವನು ಅವನನ್ನು ಖಡ್ಗದಿಂದ ಹೊಡೆದು, ಅವನ ಹೆಣವನ್ನು ಸಾಧಾರಣವಾದ ಜನರ ಸಮಾಧಿಗಳಲ್ಲಿ ಹಾಕಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 26:23
13 ತಿಳಿವುಗಳ ಹೋಲಿಕೆ  

“ಯೆಹೂದದ ಜನರೇ ನಾನು ನಿಮ್ಮನ್ನು ಶಿಕ್ಷಿಸಿದೆ, ಆದರೆ ಅದರಿಂದ ಪ್ರಯೋಜನವಾಗಲಿಲ್ಲ. ಶಿಕ್ಷಿಸಿದರೂ ನೀವು ಹಿಂತಿರುಗಿ ಬರಲಿಲ್ಲ. ನಿಮ್ಮಲ್ಲಿಗೆ ಬಂದ ಪ್ರವಾದಿಗಳನ್ನು ನೀವು ಕತ್ತಿಯಿಂದ ಕೊಂದುಹಾಕಿದಿರಿ. ನೀವು ಅಪಾಯಕಾರಿಯಾದ ಸಿಂಹದಂತಿದ್ದು ಪ್ರವಾದಿಗಳನ್ನು ಕೊಂದುಹಾಕಿದಿರಿ.”


ಈ ಇಬ್ಬರು ಸಾಕ್ಷಿಗಳು ತಮ್ಮ ಸಂದೇಶವನ್ನು ಹೇಳಿ ಮುಗಿಸಿದ ನಂತರ, ತಳವಿಲ್ಲದ ಕೂಪದಿಂದ ಮೇಲಕ್ಕೆ ಬರುವ ಮೃಗವು ಅವರ ವಿರುದ್ಧ ಹೋರಾಟ ಮಾಡುತ್ತದೆ. ಈ ಮೃಗವು ಅವರನ್ನು ಸೋಲಿಸಿ, ಕೊಂದು ಹಾಕುತ್ತದೆ.


ಆ ಯೆಹೂದ್ಯರು ಪ್ರಭುವಾದ ಯೇಸುವನ್ನೂ ಪ್ರವಾದಿಗಳನ್ನೂ ಕೊಂದುಹಾಕಿದರು. ತಮ್ಮ ದೇಶದಿಂದ (ಜುದೇಯ) ನಮ್ಮನ್ನು ಬಲವಂತವಾಗಿ ಹೊರಗಟ್ಟಿದರು. ಅವರು ದೇವರಿಗೆ ಮೆಚ್ಚಿಕೆಯಾದವರಾಗಿಲ್ಲ ಮತ್ತು ಜನರೆಲ್ಲರ ವಿರುದ್ಧವಾಗಿದ್ದಾರೆ.


ಸೆರೆಮನೆಗೆ ಹೋಗಿ ಯೋಹಾನನ ತಲೆಯನ್ನು ಕತ್ತರಿಸಿಕೊಂಡು ಬರಲು ಅವನು ಸೈನಿಕರನ್ನು ಕಳುಹಿಸಿಕೊಟ್ಟನು.


ಅದು ಬೆಳೆದು ಪ್ರಾಯದ ಸಿಂಹವಾಗಿ ಸಿಂಹಗಳೊಂದಿಗೆ ಬೇಟೆಯಾಡಲು ಹೋಯಿತು; ತನ್ನ ಆಹಾರವನ್ನು ತಾನೇ ಬೇಟೆಯಾಡತೊಡಗಿ ಮನುಷ್ಯರನ್ನು ಕೊಂದು ತಿನ್ನಲಾರಂಭಿಸಿತು.


ಇಗೋ ಯೆಹೂದದ ರಾಜನಾದ ಯೆಹೋಯಾಕೀಮನ ಬಗ್ಗೆ ಯೆಹೋವನು ಹೀಗೆ ಹೇಳುತ್ತಾನೆ: ಯೆಹೋಯಾಕೀಮನ ಸಂತಾನದವರು ದಾವೀದನ ಸಿಂಹಾಸನದ ಮೇಲೆ ಕುಳಿತುಕೊಳ್ಳಲಾಗದು. ಯೆಹೋಯಾಕೀಮನು ಸತ್ತರೆ ರಾಜ ಮರ್ಯಾದೆಯಿಂದ ಅವನ ಶವಸಂಸ್ಕಾರ ಮಾಡಲಾಗುವದಿಲ್ಲ. ಅವನ ಶವವನ್ನು ನೆಲದ ಮೇಲೆ ಎಸೆಯಲಾಗುವುದು. ಅವನ ಶವ ಹಗಲಿನ ತಾಪದಲ್ಲಿ ಮತ್ತು ರಾತ್ರಿಯ ಚಳಿಯಲ್ಲಿ ಹೊರಗೆ ಬಿದ್ದಿರುವದು.


ಆದರೆ ನೀವು ನನ್ನನ್ನು ಕೊಂದರೆ ಒಬ್ಬ ನಿರಪರಾಧಿಯನ್ನು ಕೊಂದದೋಷಕ್ಕೆ ಗುರಿಯಾಗುವಿರೆಂಬುದನ್ನು ಸ್ಪಷ್ಟವಾಗಿ ತಿಳಿದುಕೊಳ್ಳಿರಿ. ನೀವು ಈ ನಗರವನ್ನೂ ಇದರ ಪ್ರತಿಯೊಬ್ಬ ನಿವಾಸಿಯನ್ನೂ ಸಹ ದೋಷಿಗಳನ್ನಾಗಿ ಮಾಡುವಿರಿ. ನಿಜವಾಗಿಯೂ, ಯೆಹೋವನು ನನ್ನನ್ನು ನಿಮ್ಮಲ್ಲಿಗೆ ಕಳಿಸಿದ್ದಾನೆ. ನೀವು ಕೇಳಿದ ಸಂದೇಶವು ನಿಜವಾಗಿಯೂ ಯೆಹೋವನಿಂದ ಬಂದದ್ದು.”


ಜೆರುಸಲೇಮಿನ ಜನರು ಯೆಹೋಯಾಕೀಮನನ್ನು ಒಂದು ಕತ್ತೆಯನ್ನು ಹೂಳಿದಂತೆ ಹೂಳಿಬಿಡುತ್ತಾರೆ. ಅವರು ಅವನ ಶವವನ್ನು ದೂರ ಎಳೆದುಕೊಂಡು ಹೋಗುತ್ತಾರೆ. ಅವನ ಶವವನ್ನು ಜೆರುಸಲೇಮಿನ ದ್ವಾರಗಳ ಹೊರಗೆ ಎಸೆದುಬಿಡುತ್ತಾರೆ.


ಕೆಲವರನ್ನು ಕಲ್ಲೆಸೆದು ಕೊಂದರು, ಕೆಲವರನ್ನು ಅರ್ಧಕತ್ತರಿಸಿ ಎರಡು ಭಾಗ ಮಾಡಿದರು. ಕೆಲವರನ್ನು ಕತ್ತಿಗಳಿಂದ ಇರಿದುಕೊಂದರು. ಇವರಲ್ಲಿ ಕೆಲವರು ಕುರಿ ಮತ್ತು ಹೋತಗಳ ಚರ್ಮಗಳನ್ನು ತೊಟ್ಟುಕೊಂಡಿದ್ದರು; ಕೆಲವರು ಬಡವರಾಗಿದ್ದರು; ಹಿಂಸೆಗೆ ಒಳಗಾಗಿದ್ದರು ಮತ್ತು ಜನರ ಕ್ರೂರ ವರ್ತನೆಗೆ ಗುರಿಯಾಗಿದ್ದರು.


ಯೆಹೋಯಾಕೀಮನು ಯೆಹೋವನು ಕೆಟ್ಟದ್ದೆಂದು ಹೇಳಿದವುಗಳನ್ನು ಮಾಡಿದನು. ಯೆಹೋಯಾಕೀಮನು ತನ್ನ ಪೂರ್ವಿಕರು ಮಾಡಿದ ಕಾರ್ಯಗಳನ್ನು ಮಾಡಿದನು.


“ಯೆಹೋಯಾಕೀಮನೇ, ನಿನಗೆ ಲಾಭದಾಯಕವಾದದ್ದು ಮಾತ್ರ ನಿನ್ನ ಕಣ್ಣಿಗೆ ಕಾಣುತ್ತದೆ. ನೀನು ಯಾವಾಗಲೂ ನಿನಗೆ ಹೆಚ್ಚು ಲಾಭ ಬರುವದನ್ನು ನೋಡುವೆ. ನೀನು ನಿರಪರಾಧಿಗಳನ್ನು ಕೊಲ್ಲಲು ಸಿದ್ಧನಾಗಿರುವೆ. ನೀನು ಬೇರೆಯವರ ವಸ್ತುಗಳನ್ನು ಅಪಹರಿಸಲು ಸಿದ್ಧನಾಗಿರುವೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು