Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 26:6 - ಪರಿಶುದ್ದ ಬೈಬಲ್‌

6 ನೀವು ನನ್ನ ಆಜ್ಞಾಪಾಲನೆ ಮಾಡದಿದ್ದರೆ ಜೆರುಸಲೇಮಿನ ನನ್ನ ಈ ಆಲಯಕ್ಕೆ ಶಿಲೋವಿನ ನನ್ನ ಪವಿತ್ರವಾದ ಗುಡಾರದ ಗತಿಯನ್ನು ತರುತ್ತೇನೆ. ಜಗತ್ತಿನ ಜನರು ಬೇರೆ ನಗರಗಳಿಗೆ ದುರ್ಗತಿ ಬರಲಿ ಎಂದು ಕೇಳಿಕೊಳ್ಳುವಾಗ ಜೆರುಸಲೇಮನ್ನು ಜ್ಞಾಪಿಸಿಕೊಳ್ಳುವರು.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆಗ ನಾನು ಈ ಆಲಯವನ್ನು ಶಿಲೋವಿನ ಗತಿಗೆ ತಂದು, ಈ ಪಟ್ಟಣವು ಲೋಕದ ಸಮಸ್ತ ಜನಾಂಗಗಳಲ್ಲಿ ಶಾಪದ ಮಾತಾಗುವಂತೆ ಮಾಡುವೆನು’” ಎಂದು ಹೇಳು ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆಗ ನಾನು ಈ ಆಲಯವನ್ನು ಶಿಲೋವಿನ ಗತಿಗೆ ಇಳಿಸುವೆನು. ಈ ನಗರವು ವಿಶ್ವದ ಜನರಿಗೆಲ್ಲ ಶಾಪಗ್ರಸ್ತ ನಗರವಾಗುವಂತೆ ಮಾಡುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆಗ ನಾನು ಈ ಆಲಯವನ್ನು ಶಿಲೋವಿನ ಗತಿಗೆ ತಂದು ಈ ಪಟ್ಟಣವು ಲೋಕದ ಸಮಸ್ತಜನಾಂಗಗಳಲ್ಲಿ ಶಾಪದ ಮಾತಾಗುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆಗ ನಾನು ಈ ಆಲಯವನ್ನು ಶೀಲೋವಿನ ಗತಿಗೆ ಇಳಿಸುವೆನು. ಈ ನಗರವು ವಿಶ್ವದ ಜನರಿಗೆಲ್ಲಾ ಶಾಪಗ್ರಸ್ತ ನಗರವಾಗುವಂತೆ ಮಾಡುವೆನು.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 26:6
20 ತಿಳಿವುಗಳ ಹೋಲಿಕೆ  

ನಾನು ಆ ಜನರನ್ನು ದಂಡಿಸುವೆನು. ಆ ಶಿಕ್ಷೆಯು ಭೂಲೋಕದ ಎಲ್ಲಾ ಜನರಲ್ಲಿ ಭೀತಿಯನ್ನು ಉಂಟು ಮಾಡುವುದು. ಜನರು ಯೆಹೂದದ ಜನರನ್ನು ಗೇಲಿಮಾಡುವರು. ನಾನು ಅವರನ್ನು ತಳ್ಳಿದ ಎಲ್ಲಾ ದೇಶಗಳಲ್ಲಿ ಜನರು ಅವರ ಬಗ್ಗೆ ಪರಿಹಾಸ್ಯದ ಮಾತುಗಳನ್ನು ಆಡುವರು; ಅವರನ್ನು ಶಪಿಸುವರು.


ನಾನು ಈ ದ್ರಾಕ್ಷಾರಸವನ್ನು ಜೆರುಸಲೇಮಿನ ಮತ್ತು ಯೆಹೂದದ ಜನರಿಗೆ ಸುರಿದೆನು. ನಾನು ರಾಜನನ್ನು ಮತ್ತು ಯೆಹೂದದ ನಾಯಕರನ್ನು ಈ ಪಾತ್ರೆಯಲ್ಲಿಯ ದ್ರಾಕ್ಷಾರಸವನ್ನು ಕುಡಿಯುವಂತೆ ಮಾಡಿದೆನು. ಅವರು ಬರಿದಾದ ಮರುಭೂಮಿಯಂತಾಗಲೆಂದು ಹೀಗೆ ಮಾಡಿದೆನು. ಆ ಸ್ಥಳವು ತುಂಬಾ ಹಾಳಾಗಲಿ, ಜನರು ಅದರ ಬಗ್ಗೆ ಸಿಳ್ಳುಹಾಕಲಿ, ಶಾಪಹಾಕಲಿ ಎಂಬ ಉದ್ದೇಶದಿಂದ ನಾನು ಹಾಗೆ ಮಾಡಿದೆನು. ಹಾಗೆಯೇ ಆಯಿತು. ಯೆಹೂದವು ಈಗ ಹಾಗೆಯೇ ಇದೆ.


ನಿಮ್ಮ ಹೆಸರುಗಳು ನನ್ನ ಸೇವಕರಿಗೆ ಶಾಪವಾಗಿ ಉಪಯೋಗಿಸಲ್ಪಡುತ್ತವೆ.” ನನ್ನ ಒಡೆಯನಾದ ಯೆಹೋವನು ನಿಮ್ಮನ್ನು ಸಾಯಿಸುವನು. ಆತನು ತನ್ನ ಸೇವಕರನ್ನು ಹೊಸ ಹೆಸರಿನಿಂದ ಕರೆಯುವನು.


ತಂದೆತಾಯಿಗಳು ಮಕ್ಕಳಿಗೂ ಮಕ್ಕಳು ತಂದೆತಾಯಿಗಳಿಗೂ ನಿಕಟ ಸಂಬಂಧಿಗಳಾಗುವಂತೆ ಅವನು ಮಾಡುವನು. ಇದು ನೆರವೇರಲೇಬೇಕು, ಇಲ್ಲದಿದ್ದಲ್ಲಿ ನಾನು ಬಂದು ನಿಮ್ಮ ದೇಶವನ್ನು ಸಂಪೂರ್ಣವಾಗಿ ನಾಶಮಾಡುವೆನು.”


ಇಸ್ರೇಲಿನ ಜನರಲ್ಲಿ ಒಬ್ಬರೂ ಸಹ ನಿನ್ನ ಉಪದೇಶವನ್ನು ಪಾಲಿಸಲಿಲ್ಲ. ಅವರೆಲ್ಲರೂ ಅದರಿಂದ ದೂರಾದರು. ಅವರು ನಿನ್ನ ಆಜ್ಞೆಯನ್ನು ಪಾಲಿಸಲಿಲ್ಲ. ಮೋಶೆಯ ಧರ್ಮಶಾಸ್ತ್ರದಲ್ಲಿ ಶಾಪಗಳ ಮತ್ತು ವಾಗ್ದಾನಗಳ ಬಗ್ಗೆ ಹೇಳಲಾಗಿದೆ. (ಮೋಶೆಯು ದೇವರ ಸೇವಕನಾಗಿದ್ದನು) ಆ ಶಾಪಗಳು ಧರ್ಮಶಾಸ್ತ್ರವನ್ನು ಪಾಲಿಸದಿದ್ದವರಿಗೆ ಆಗುವ ಶಿಕ್ಷೆಯಾಗಿದೆ. ಆ ಎಲ್ಲಾ ಶಿಕ್ಷೆಗಳು ನಮಗೆ ಆಗಿವೆ. ನಾವು ಯೆಹೋವನಾದ ನಿನ್ನ ವಿರುದ್ಧ ಪಾಪ ಮಾಡಿದ್ದರಿಂದ ನಮಗೆ ಹೀಗಾಯಿತು.


ಯೆಹೋವನು ಇನ್ನು ಮುಂದೆ ತಾಳ್ಮೆಯಿಂದ ಇರಲಾರನು. ನೀವು ಮಾಡಿದ ಅಸಹ್ಯಕೃತ್ಯಗಳನ್ನು ಯೆಹೋವನು ದ್ವೇಷಿಸುತ್ತಾನೆ. ಆದ್ದರಿಂದ ಆತನು ನಿಮ್ಮ ದೇಶವನ್ನು ಬರಿದಾದ ಮರುಭೂಮಿಯನ್ನಾಗಿ ಮಾಡಿದ್ದಾನೆ, ಈಗ ಅಲ್ಲಿ ಯಾರೂ ವಾಸಿಸುವದಿಲ್ಲ. ಬೇರೆಯವರು ಆ ದೇಶದ ಬಗ್ಗೆ ಕೆಟ್ಟ ಮಾತುಗಳನ್ನಾಡುತ್ತಾರೆ.


“ಸರ್ವಶಕ್ತನೂ ಇಸ್ರೇಲರ ದೇವರೂ ಆಗಿರುವ ಯೆಹೋವನು ಹೀಗೆಂದನು: ‘ನಾನು ಜೆರುಸಲೇಮಿನ ಮೇಲೆ ನನ್ನ ಕೋಪವನ್ನು ತೋರಿಸಿದೆ. ಜೆರುಸಲೇಮಿನಲ್ಲಿ ವಾಸಿಸುವ ಜನರನ್ನು ನಾನು ದಂಡಿಸಿದೆ. ಅದೇ ರೀತಿ, ಈಜಿಪ್ಟಿಗೆ ಹೋಗುವವರೆಲ್ಲರ ಮೇಲೂ ನಾನು ನನ್ನ ಕೋಪವನ್ನು ತೋರಿಸುವೆನು. ಬೇರೆಯವರಿಗೆ ಕೆಟ್ಟದಾಗಲಿ ಎಂದು ಹೇಳಬೇಕಾದಾಗ ಜನರು ನಿಮ್ಮಂತೆ ಆಗಲಿ ಎಂದು ನಿಮ್ಮ ಉದಾಹರಣೆಯನ್ನು ಕೊಡುವರು. ನೀವು ಒಂದು ಶಾಪದ ಶಬ್ದವಾಗುವಿರಿ. ಜನರು ನಿಮ್ಮಿಂದ ನಾಚಿಕೆಪಟ್ಟುಕೊಳ್ಳುವರು. ಜನರು ನಿಮ್ಮನ್ನು ಅಪಮಾನ ಮಾಡುವರು. ಯೆಹೂದವನ್ನು ಪುನಃ ನೀವು ಎಂದೂ ನೋಡುವದಿಲ್ಲ.’


ಯೆಹೂದದ ಬಂಧಿಗಳೆಲ್ಲಾ ಬೇರೆಯವರಿಗೆ ಕೇಡಾಗಲಿ ಎಂದು ಕೇಳಿಕೊಳ್ಳುವಾಗ ಆ ಜನರ ಉದಾಹರಣೆ ಕೊಡುವರು. ಆ ಬಂಧಿಗಳು ಹೀಗೆನ್ನುವರು: ‘ಬಾಬಿಲೋನಿನ ರಾಜನು ಬೆಂಕಿಯಲ್ಲಿ ಸುಟ್ಟುಬಿಟ್ಟ ಚಿದ್ಕೀಯನ ಮತ್ತು ಅಹಾಬನ ಗತಿಯನ್ನು ಯೆಹೋವನು ನಿನಗೆ ತರಲಿ.’


ಪರಿಶುದ್ಧವಾಗಿ ಆಳುವ ನಿನ್ನವರನ್ನು ನಾನು ಅಪರಿಶುದ್ಧ ಮಾಡುವೆನು. ಯಾಕೋಬನನ್ನು ಸಂಪೂರ್ಣವಾಗಿ ನಾಶಮಾಡುವೆನು. ಇಸ್ರೇಲಿಗೆ ಕೆಟ್ಟ ವಿಷಯಗಳು ಸಂಭವಿಸುವವು.”


ಇಸ್ರೇಲರೆಲ್ಲರು ಶೀಲೋವಿನಲ್ಲಿ ಒಟ್ಟಾಗಿ ಸೇರಿದರು. ಆ ಸ್ಥಳದಲ್ಲಿ ಅವರು ದೇವದರ್ಶನ ಗುಡಾರವನ್ನು ನಿಲ್ಲಿಸಿದರು. ಇಸ್ರೇಲರು ಆ ದೇಶವನ್ನು ಸ್ವಾಧೀನ ಮಾಡಿಕೊಂಡಿದ್ದರು. ಅವರು ಆ ದೇಶದ ಎಲ್ಲ ಶತ್ರುಗಳನ್ನು ಸೋಲಿಸಿದ್ದರು.


ಆಗ ದೇವದೂತನು ನನಗೆ ಹೇಳಿದ್ದೇನೆಂದರೆ, “ಈ ಸುರುಳಿಯಲ್ಲಿ ಶಾಪವು ಬರೆಯಲ್ಪಟ್ಟಿದೆ. ಸುರುಳಿಯ ಒಂದು ಬದಿಯಲ್ಲಿ ಕದಿಯುವ ಜನರಿಗೆ ಶಾಪ ಬರೆಯಲ್ಪಟ್ಟಿದೆ. ಅದರ ಇನ್ನೊಂದು ಬದಿಯಲ್ಲಿ ವಾಗ್ದಾನ ಮಾಡಿಯೂ ಅದನ್ನು ಪಾಲಿಸದೆ ಸುಳ್ಳಾಡುವವರಿಗೆ ಶಾಪ ಬರೆಯಲ್ಪಟ್ಟಿದೆ.


ಇನ್ನೂ ಜೆರುಸಲೇಮಿನಲ್ಲಿರುವ ಜನರಿಗೆ ಖಡ್ಗ, ಹಸಿವು ಮತ್ತು ಭಯಂಕರವಾದ ವ್ಯಾಧಿಗಳಿಂದೊಡಗೂಡಿ ಬೆನ್ನಟ್ಟುವೆನು. ಆ ಜನರ ದುರ್ಗತಿಯನ್ನು ನೋಡಿ ಭೂಲೋಕದ ಸಮಸ್ತ ರಾಜ್ಯಗಳಿಗೆ ಭಯ ಉಂಟಾಗುವಂತೆ ಮಾಡುವೆನು. ಆ ಜನರನ್ನು ನಾಶಮಾಡುವೆನು. ನಡೆದ ವಿಷಯಗಳ ಬಗ್ಗೆ ಕೇಳಿ ಜನರು ಬೆರಗಾಗಿ ಸಿಳ್ಳುಹಾಕುವರು. ಯಾರಿಗಾದರೂ, ಕೇಡಾಗಲಿ ಎಂದು ಹೇಳಬೇಕಾದರೆ ಜನರು ಅವರ ಉದಾಹರಣೆಯನ್ನು ಕೊಡುವರು. ನಾನು ಅವರನ್ನು ಅಟ್ಟಿದ ಎಲ್ಲೆಡೆಯಲ್ಲಿಯೂ ಜನರು ಅವರನ್ನು ಅವಮಾನಗೊಳಿಸುವರು.


ಪಕ್ಕದಲ್ಲಿ ದಾರಿ ಹಿಡಿದುಹೋಗುವ ಜನರು ನಿನ್ನನ್ನು ನೋಡಿ ಅಪಹಾಸ್ಯದಿಂದ ಚಪ್ಪಾಳೆ ತಟ್ಟುತ್ತಾರೆ. ಜೆರುಸಲೇಮಿನ ಮಗಳ ಸ್ಥಿತಿಯನ್ನು ನೋಡಿ ಅವರು ಸಿಳ್ಳುಹಾಕುತ್ತಾರೆ ಮತ್ತು ತಲೆಯಾಡಿಸುತ್ತಾರೆ. “ಜನರಿಂದ ‘ಪರಿಪೂರ್ಣ ಸುಂದರ ನಗರ’ ‘ಸಮಸ್ತಲೋಕದ ಸಂತೋಷ’ ಎಂದು ಕರೆಸಿಕೊಂಡದ್ದು ಇದೇ ನಗರವೇ?” ಎಂದು ಅವರು ಕೇಳುತ್ತಾರೆ.


ನಿನ್ನ ಎಲ್ಲ ವೈರಿಗಳು ನಿನ್ನನ್ನು ನೋಡಿ ಬಾಯಿ ತೆರೆದು ಸಿಳ್ಳುಹಾಕಿ ಹಲ್ಲು ಕಡಿಯುತ್ತಾರೆ. “ನಾವು ಅವರನ್ನು ಸಂಪೂರ್ಣವಾಗಿ ನುಂಗಿದೆವು! ನಿಜವಾಗಿ ನಾವು ಈ ದಿನವನ್ನೇ ನಿರೀಕ್ಷಿಸುತ್ತಿದ್ದೆವು. ಅಂತೂ ಕೊನೆಗೆ ಇದು ನೆರವೇರುವುದನ್ನು ನಾವು ಕಂಡೆವು” ಎಂದು ಅವರು ಅನ್ನುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು