Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 27:19 - ಪರಿಶುದ್ದ ಬೈಬಲ್‌

19 “ಸರ್ವಶಕ್ತನಾದ ಯೆಹೋವನು ಜೆರುಸಲೇಮಿನಲ್ಲಿ ಇನ್ನೂ ಉಳಿದ ವಸ್ತುಗಳ ಬಗ್ಗೆ ಹೀಗೆ ಹೇಳುತ್ತಾನೆ. ಯೆಹೋವನ ಆಲಯದಲ್ಲಿ ಕಂಬಗಳಿವೆ, ಕಂಚಿನ ಸಾಗರವಿದೆ, ಪೀಠಗಳಿವೆ ಮತ್ತು ಇತರ ವಸ್ತುಗಳಿವೆ. ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ಆ ವಸ್ತುಗಳನ್ನು ಜೆರುಸಲೇಮಿನಲ್ಲಿಯೇ ಬಿಟ್ಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆಹೋಯಾಕೀಮನ ಸಮಸ್ತ ಪ್ರಧಾನರನ್ನೂ ಯೆರೂಸಲೇಮಿನ ಸಮಸ್ತ ಪ್ರಧಾನರನ್ನೂ ಯೆರೂಸಲೇಮಿನಿಂದ ಬಾಬಿಲೋನಿಗೆ ಸೆರೆ ಒಯ್ದಾಗ ಕೆಲವು ಉಪಕರಣಗಳನ್ನು ತೆಗೆದುಕೊಳ್ಳಲಿಲ್ಲವಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19-20 (ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ಯೆಹೋಯಾಕೀಮನ ಮಗನೂ ಜುದೇಯದ ಅರಸನೂ ಆದ ಯೆಕೊನ್ಯನನ್ನು ಮತ್ತು ಜುದೇಯದ ಹಾಗು ಜೆರುಸಲೇಮಿನ ಎಲ್ಲ ಮಂತ್ರಿಗಳನ್ನು ಜೆರುಸಲೇಮಿನಿಂದ ಬಾಬಿಲೋನಿಗೆ ಸೆರೆ ಒಯ್ದಾಗ ಕೆಲವು ಸಾಮಾನುಗಳನ್ನು, ಅಂದರೆ ಕಂಬಗಳು, ಕಂಚಿನ ಕಡಲು, ಪೀಠಗಳು, ನಗರದಲ್ಲಿ ಉಳಿದಿರುವ ಮತ್ತಿತರ ಉಪಕರಣಗಳು ಇವನ್ನು ತೆಗೆದುಕೊಂಡು ಹೋಗಲಿಲ್ಲ.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆಹೋಯಾಕೀಮನ ಮಗನೂ ಯೆಹೂದದ ಅರಸನೂ ಆದ ಯೆಕೊನ್ಯನನ್ನೂ ಯೆಹೂದದ ಮತ್ತು ಯೆರೂಸಲೇವಿುನ ಸಮಸ್ತ ಪ್ರಧಾನರನ್ನೂ ಯೆರೂಸಲೇವಿುನಿಂದ ಬಾಬೆಲಿಗೆ ಸೆರೆ ಒಯ್ದಾಗ ಕೆಲವು ಸಾಮಾನುಗಳನ್ನು ತೆಗೆದುಕೊಳ್ಳಲಿಲ್ಲವಲ್ಲಾ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19-20 ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಯೆಹೋಯಾಕೀಮನ ಮಗನೂ, ಯೆಹೂದದ ಅರಸನೂ ಆದ ಯೆಕೊನ್ಯನನ್ನು ಮತ್ತು ಯೆಹೂದದ ಹಾಗೂ ಯೆರೂಸಲೇಮಿನ ಎಲ್ಲ ಮಂತ್ರಿಗಳನ್ನು ಯೆರೂಸಲೇಮಿನಿಂದ ಬಾಬಿಲೋನಿಗೆ ಸೆರೆ ಒಯ್ದಾಗ, ಕೆಲವು ವಸ್ತುಗಳನ್ನು ಅಂದರೆ ಕಂಬಗಳು, ಕಂಚಿನ ಕಡಲು, ಪೀಠಗಳು, ನಗರದಲ್ಲಿ ಉಳಿದಿರುವ ಮತ್ತಿತರ ಉಪಕರಣಗಳು ಇವನ್ನು ತೆಗೆದುಕೊಂಡು ಹೋಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 27:19
10 ತಿಳಿವುಗಳ ಹೋಲಿಕೆ  

ಬಾಬಿಲೋನ್ ಸೈನಿಕರು ದೇವಾಲಯದಲ್ಲಿದ್ದ ತಾಮ್ರದ ಸ್ತಂಭಗಳನ್ನು ಚೂರುಚೂರು ಮಾಡಿದರು. ಅವರು ಯೆಹೋವನ ಆಲಯದಲ್ಲಿದ್ದ ತಾಮ್ರದ ದೊಡ್ಡ ತೊಟ್ಟಿಯನ್ನು ಮತ್ತು ತಾಮ್ರದ ಬಂಡಿಯನ್ನು ಚೂರುಚೂರಾಗಿ ಒಡೆದುಹಾಕಿದರು. ನಂತರ ಬಾಬಿಲೋನ್ ಸೈನಿಕರು ತಾಮ್ರದ ಚೂರುಗಳನ್ನು ಬಾಬಿಲೋನಿಗೆ ತೆಗೆದುಕೊಂಡು ಹೋದರು.


ಪ್ರತಿಯೊಂದು ಕಂಬವೂ ಸುಮಾರು ಇಪ್ಪತ್ತೇಳು ಅಡಿ ಉದ್ದವಾಗಿತ್ತು. ಕಂಬಗಳ ಮೇಲಿದ್ದ ಬೋದಿಗೆಗಳನ್ನು ತಾಮ್ರದಿಂದ ನಿರ್ಮಿಸಿದ್ದರು. ಪ್ರತಿಯೊಂದು ಬೋದಿಗೆಯೂ ನಾಲ್ಕುವರೆ ಅಡಿ ಉದ್ದವಾಗಿತ್ತು. ಪ್ರತಿಯೊಂದು ಬೋದಿಗೆಯ ಮೇಲೆ ಜಾಲರಿಯ ಆಕಾರವಿತ್ತು ಮತ್ತು ದಾಳಿಂಬೆ ಹಣ್ಣುಗಳ ಆಕಾರಗಳಿದ್ದವು. ಇವೆಲ್ಲವುಗಳನ್ನು ತಾಮ್ರದಿಂದಲೇ ಮಾಡಿದ್ದರು. ಎರಡು ಕಂಬಗಳೂ ಒಂದೇ ರೀತಿಯ ಆಕಾರದಲ್ಲಿದ್ದವು.


ನೆಬೂಕದ್ನೆಚ್ಚರನು ಯೆಹೂದದ ಅರಸನಾದ ಯೆಹೋಯಾಕೀಮನನ್ನು ಸೋಲಿಸುವಂತೆ ಯೆಹೋವನು ಮಾಡಿದನು. ಅವನು ಆಲಯದ ಸಾಮಾಗ್ರಿಗಳನ್ನು ಬಾಬಿಲೋನಿಗೆ ತೆಗೆದುಕೊಂಡು ಹೋದನು. ಆ ಸಾಮಾಗ್ರಿಗಳನ್ನು ಅವನು ತನ್ನ ವಿಗ್ರಹಾಲಯದಲ್ಲಿಟ್ಟನು.


ನಂತರ ಹೀರಾಮನು ವೃತ್ತಾಕಾರದ ಹಿತ್ತಾಳೆಯ ತೊಟ್ಟಿಯನ್ನು ಮಾಡಿದನು. ಅವರು ಈ ತೊಟ್ಟಿಯನ್ನು “ಸಮುದ್ರ”ವೆಂದು ಕರೆದರು. ಆ ತೊಟ್ಟಿಯ ಸುತ್ತಳತೆಯು ನಲವತ್ತೈದು ಅಡಿಗಳು. ಅದರ ಒಂದು ಅಂಚಿನಿಂದ ಮತ್ತೊಂದು ಅಂಚಿಗೆ ಹದಿನೈದು ಅಡಿಗಳು ಮತ್ತು ಆಳ ಏಳುವರೆ ಅಡಿಗಳು.


ಹೀರಾಮನು ಹತ್ತು ಬಂಡಿಗಳನ್ನು ಮಾಡಿದನು. ಪ್ರತಿಯೊಂದರ ಉದ್ದ ಆರು ಅಡಿಗಳು; ಅಗಲ ಆರು ಅಡಿಗಳು; ಮತ್ತು ಎತ್ತರ ನಾಲ್ಕುವರೆ ಅಡಿಗಳು.


ದೇವಾಲಯದೊಳಗಿದ್ದ ಎಲ್ಲಾ ವಸ್ತುಗಳನ್ನು ನೆಬೂಕದ್ನೆಚ್ಚರನು ಬಾಬಿಲೋನಿಗೆ ಸಾಗಿಸಿದನು. ದೇವಾಲಯದೊಳಗೂ ಅರಸನ ಬಳಿಯಲ್ಲಿಯೂ ಅಧಿಕಾರಿಗಳ ಬಳಿಯಲ್ಲಿಯೂ ಇದ್ದ ಬೆಲೆಬಾಳುವ ವಸ್ತುಗಳನ್ನೆಲ್ಲಾ ಬಾಬಿಲೋನಿಗೆ ಸಾಗಿಸಿದನು.


ಶತ್ರು ತನ್ನ ಕೈಗಳನ್ನು ಚಾಚಿದನು. ಅವಳ ಎಲ್ಲ ಅಮೂಲ್ಯ ವಸ್ತುಗಳನ್ನು ತೆಗೆದುಕೊಂಡನು. ಯೆಹೋವನೇ, ಆ ಜನರು ನಿನ್ನ ಸಭೆಯನ್ನು ಪ್ರವೇಶಿಸಬಾರದೆಂದು ನೀನು ಆಜ್ಞಾಪಿಸಿದ್ದರೂ ಪರಕೀಯರು ತನ್ನ ಪವಿತ್ರಾಲಯವನ್ನು ಪ್ರವೇಶಿಸುವದನ್ನು ಅವಳು ನೋಡಬೇಕಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು