Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 27:5 - ಪರಿಶುದ್ದ ಬೈಬಲ್‌

5 ನಾನು ಭೂಮಿಯನ್ನೂ ಮತ್ತು ಅದರ ಮೇಲಿರುವ ಎಲ್ಲಾ ಜನರನ್ನೂ ಸೃಷ್ಟಿಸಿದೆ. ನಾನು ಭೂಮಿಯ ಮೇಲಿನ ಎಲ್ಲಾ ಪ್ರಾಣಿಗಳನ್ನು ಸೃಷ್ಟಿಸಿದೆ. ನಾನು ಇದನ್ನು ನನ್ನ ಮಹಾಶಕ್ತಿಯಿಂದಲೂ ಬಲವಾದ ತೋಳುಗಳಿಂದಲೂ ಸೃಷ್ಟಿಸಿದೆ. ನಾನು ಆ ಭೂಮಿಯನ್ನು ನನ್ನ ಮನಸ್ಸಿಗೆ ಬಂದವರಿಗೆ ಕೊಡಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ‘ನಾನೇ ಕೈ ನೀಡಿ ನನ್ನ ಮಹಾ ಶಕ್ತಿಯಿಂದ ಲೋಕವನ್ನೂ ಭೂಮಿಯ ಮೇಲಣ ಮಾನವರನ್ನೂ ಪಶುಗಳನ್ನೂ ಸೃಷ್ಟಿಸಿದ್ದೇನೆ; ಈ ನನ್ನ ಸೃಷ್ಟಿಯನ್ನು ನನಗೆ ಸರಿತೋಚಿದವನಿಗೇ ಕೊಡಬಲ್ಲೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನನ್ನ ಮಹಾಶಕ್ತಿಯಿಂದಲೂ ನೀಡುಗೈಯಿಂದಲೂ ಲೋಕವನ್ನೂ ಭೂಮಿಯನ್ನೂ ಅದರ ಮಾನವರನ್ನು ಮತ್ತು ಪ್ರಾಣಿಗಳನ್ನೂ ಸೃಷ್ಟಿಸಿದವನೂ ನಾನೇ. ಈ ನನ್ನ ಸೃಷ್ಟಿಯನ್ನು ನನಗೆ ಸರಿ ತೋಚಿದವನಿಗೆ ಕೊಡಬಲ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನಾನೇ ಕೈ ನೀಡಿ ನನ್ನ ಮಹಾ ಶಕ್ತಿಯಿಂದ ಲೋಕವನ್ನೂ ಭೂವಿುಯನ್ನೂ ಅದರ ಮಾನವರನ್ನೂ ಪಶುಗಳನ್ನೂ ಸೃಷ್ಟಿಸಿದ್ದೇನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನಾನೇ ಭೂಮಿಯನ್ನೂ, ಭೂಮಿಯ ಮೇಲಿರುವ ಮನುಷ್ಯರನ್ನೂ, ಮೃಗಗಳನ್ನೂ ನನ್ನ ಮಹಾ ಬಲದಿಂದಲೂ, ನನ್ನ ಚಾಚಿದ ಕೈಯಿಂದಲೂ ಉಂಟುಮಾಡಿ, ನನಗೆ ಸರಿ ತೋಚಿದವರಿಗೆ ಅದನ್ನು ಕೊಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 27:5
54 ತಿಳಿವುಗಳ ಹೋಲಿಕೆ  

ಯೆಹೋವನು ತನ್ನ ಅಪಾರ ಶಕ್ತಿಯಿಂದ ಭೂಮಿಯನ್ನು ಸೃಷ್ಟಿಸಿದನು. ತನ್ನ ಜ್ಞಾನದಿಂದ ಈ ಲೋಕವನ್ನು ನಿರ್ಮಿಸಿದನು. ತನ್ನ ವಿವೇಕದಿಂದ ಆಕಾಶವನ್ನು ಹರಡಿದನು.


“ದೇವರಾದ ಯೆಹೋವನೇ, ನೀನು ಭೂಮ್ಯಾಕಾಶಗಳನ್ನು ಸೃಷ್ಟಿಸಿದೆ. ಅವುಗಳನ್ನು ನೀನು ನಿನ್ನ ಅಪಾರವಾದ ಶಕ್ತಿಯಿಂದ ಸೃಷ್ಟಿಸಿದೆ. ನಿನಗೆ ಅಸಾಧ್ಯವಾದುದು ಯಾವುದೂ ಇಲ್ಲ.


“ಈ ಶಿಕ್ಷೆಯನ್ನು ದೇವದೂತನು ಸಾರಿದನು. ಮಾನವ ಸಾಮ್ರಾಜ್ಯಗಳ ಮೇಲೆ ಮಹೋನ್ನತನಾದ ದೇವರು ಆಳುವನು. ಅವನು ಆ ಸಾಮ್ರಾಜ್ಯಗಳನ್ನು ತನಗೆ ಬೇಕಾದವರಿಗೆ ಒಪ್ಪಿಸುವನು, ಕನಿಷ್ಠರನ್ನು ನೇಮಿಸುವನು ಎಂಬುದು ಲೋಕದ ಜನರಿಗೆಲ್ಲ ತಿಳಿದುಬರಲಿ ಎಂದೇ ಅವನು ಸಾರಿದನು.


ಭೂಮಿಯನ್ನು ನಿರ್ಮಿಸಿದವನೂ ಅದರಲ್ಲಿ ವಾಸಿಸುವ ಎಲ್ಲಾ ಜನರನ್ನು ಉಂಟುಮಾಡಿದವನೂ ನಾನೇ. ನನ್ನ ಸ್ವಹಸ್ತದಿಂದ ಆಕಾಶಮಂಡಲವನ್ನು ನಿರ್ಮಿಸಿದ್ದೇನೆ. ಆಕಾಶದಲ್ಲಿರುವ ಎಲ್ಲಾ ನಕ್ಷತ್ರಪುಂಜಗಳನ್ನು ನನ್ನ ಹತೋಟಿಯಲ್ಲಿಟ್ಟಿದ್ದೇನೆ.


ಭೂಲೋಕ ಮತ್ತು ಪರಲೋಕಗಳಲ್ಲಿರುವ ಎಲ್ಲವುಗಳು, ದೃಶ್ಯ ಮತ್ತು ಅದೃಶ್ಯವಾದವುಗಳು, ಆತ್ಮಿಕ ಶಕ್ತಿಗಳು, ಪ್ರಭುತ್ವಗಳು ಆತನ ಶಕ್ತಿಯಿಂದ ನಿರ್ಮಿತವಾಗಿವೆ. ಅಧಿಪತಿಗಳು ಮತ್ತು ಅಧಿಕಾರಿಗಳು ಆತನ ಶಕ್ತಿಯಿಂದ ನಿರ್ಮಿತರಾದರು. ಸಮಸ್ತವೂ ಕ್ರಿಸ್ತನ ಮೂಲಕವಾಗಿ ಆತನಿಗೋಸ್ಕರ ಸೃಷ್ಟಿಸಲ್ಪಟ್ಟವು.


ನಿಜದೇವರಾದ ಯೆಹೋವನು ಹೀಗೆನ್ನುತ್ತಾನೆ: ಆಕಾಶವನ್ನು ನಿರ್ಮಿಸಿ ಅದನ್ನು ಭೂಮಿಯ ಮೇಲೆ ಹರಡಿದಾತನು ಯೆಹೋವನೇ. ಭೂಮಿಯ ಮೇಲಿರುವದನ್ನೆಲ್ಲಾ ಸೃಷ್ಟಿಸಿದಾತನು ಯೆಹೋವನೇ. ಭೂಮಿಯ ಮೇಲಿರುವ ಮನುಷ್ಯರಿಗೆಲ್ಲಾ ಜೀವಶ್ವಾಸವನ್ನು ಕೊಟ್ಟವನು ಆತನೇ. ಭೂಮಿಯ ಮೇಲೆ ನಡೆಯುವ ಪ್ರತಿಯೊಬ್ಬನಿಗೂ ಪ್ರಾಣವನ್ನು ಕೊಟ್ಟವನು ಆತನೇ.


“ನಮ್ಮ ಪ್ರಭುವೇ, ನಮ್ಮ ದೇವರೇ! ನೀನು ಪ್ರಭಾವ, ಗೌರವ, ಅಧಿಕಾರಗಳನ್ನು ಪಡೆಯಲು ಯೋಗ್ಯನಾಗಿರುವೆ. ಎಲ್ಲವನ್ನೂ ನಿರ್ಮಿಸಿದಾತನು ನೀನೇ. ನಿನ್ನ ಚಿತ್ತದಂತೆಯೇ ಎಲ್ಲವೂ ಇದ್ದವು; ಎಲ್ಲವೂ ಸೃಷ್ಟಿಗೊಂಡವು.”


ಈಗ, ಕೊನೆಯ ದಿನಗಳಲ್ಲಿ ದೇವರು ಮತ್ತೆ ನಮ್ಮ ಜೊತೆಯಲ್ಲಿ ತನ್ನ ಮಗನ ಮೂಲಕ ಮಾತನಾಡಿದನು. ದೇವರು ತನ್ನ ಮಗನ ಮೂಲಕ ಲೋಕವನ್ನೆಲ್ಲ ಸೃಷ್ಟಿಸಿ, ಸಮಸ್ತಕ್ಕೂ ಆತನನ್ನೇ ಬಾಧ್ಯಸ್ತನನ್ನಾಗಿ ಮಾಡಿದನು.


“ದೇವರ ಬಗ್ಗೆಯೇ ನಾನು ನಿಮಗೆ ಹೇಳುತ್ತಿದ್ದೇನೆ! ಇಡೀ ಪ್ರಪಂಚವನ್ನು ಮತ್ತು ಅದರಲ್ಲಿರುವ ಪ್ರತಿಯೊಂದನ್ನು ಸೃಷ್ಟಿಮಾಡಿದಾತನೇ ಆ ದೇವರು. ಆತನೇ ಭೂಮ್ಯಾಕಾಶಗಳ ಒಡೆಯನು. ಮನುಷ್ಯರು ನಿರ್ಮಿಸುವ ಗುಡಿಗಳಲ್ಲಿ ಆತನು ಜೀವಿಸುವವನಲ್ಲ.


“ಜನರೇ, ನೀವು ಈ ಕಾರ್ಯಗಳನ್ನು ಮಾಡುತ್ತಿರುವುದೇಕೆ? ನಾವು ದೇವರುಗಳಲ್ಲ. ನಾವು ನಿಮ್ಮಂತೆ ಕೇವಲ ಮನುಷ್ಯರು. ನಿಮಗೆ ಸುವಾರ್ತೆಯನ್ನು ಹೇಳುವುದಕ್ಕಾಗಿ ನಾವು ಬಂದೆವು. ವ್ಯರ್ಥವಾದ ಈ ಕಾರ್ಯಗಳನ್ನು ನೀವು ಬಿಟ್ಟುಬಿಡಿರಿ; ಜೀವಸ್ವರೂಪನಾದ ದೇವರ ಕಡೆಗೆ ತಿರುಗಿಕೊಳ್ಳಿರಿ. ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಮತ್ತು ಅವುಗಳಲ್ಲಿರುವ ಪ್ರತಿಯೊಂದನ್ನೂ ಸೃಷ್ಟಿಮಾಡಿದಾತನು ಆತನೇ.


ಯೆಹೋವನು ನಿನ್ನನ್ನು ಸೃಷ್ಟಿಸಿದ್ದಾನೆ. ತನ್ನ ಶಕ್ತಿಯಿಂದ ಭೂಮಿಯನ್ನು ಸೃಷ್ಟಿಸಿದವನು ಆತನೇ. ಆತನು ತನ್ನ ಶಕ್ತಿಯಿಂದ ಭೂಮಿಯ ಮೇಲೆ ಆಕಾಶವನ್ನು ಹರಡಿದ್ದಾನೆ. ಆದರೆ ನೀನು ಆತನನ್ನೂ ಆತನ ಶಕ್ತಿಯನ್ನೂ ಮರೆತುಬಿಟ್ಟೆ ಆದ್ದರಿಂದಲೇ ನಿನಗೆ ಕೇಡುಮಾಡುವ ದುಷ್ಟರಿಗೆ ನೀನು ಯಾವಾಗಲೂ ಹೆದರಿಕೊಂಡಿರುವೆ. ಅವರು ನಿನ್ನನ್ನು ನಾಶಮಾಡಲು ಆಲೋಚಿಸಿದ್ದಾರೆ. ಈಗ ಅವರೆಲ್ಲಿದ್ದಾರೆ? ಅವರೆಲ್ಲಾ ಹೋಗಿಬಿಟ್ಟಿದ್ದಾರೆ.


ಭೂಮಿಯನ್ನು ನನ್ನ ಕೈಗಳಿಂದಲೇ ನಿರ್ಮಿಸಿದೆನು. ನನ್ನ ಬಲಗೈ ಆಕಾಶವನ್ನು ಉಂಟುಮಾಡಿತು. ನಾನು ಅವುಗಳನ್ನು ಕರೆದಾಗ ಅವು ನನ್ನ ಬಳಿಗೆ ಬರುವವು.


ಯೆಹೋವನು ನಿನ್ನನ್ನು ರೂಪಿಸಿದನು. ನೀನು ನಿನ್ನ ತಾಯಿಯ ಗರ್ಭದಲ್ಲಿರುವಾಗಲೇ ಆತನು ನಿನ್ನನ್ನು ರೂಪಿಸಿದನು. ಆತನು ಹೇಳುವುದೇನೆಂದರೆ, “ಯೆಹೋವನಾದ ನಾನು ಸಮಸ್ತವನ್ನೂ ಸೃಷ್ಟಿಸಿದೆನು. ಆಕಾಶಮಂಡಲವನ್ನು ಅದರ ಸ್ಥಳದಲ್ಲಿ ಇಟ್ಟೆನು; ಭೂಮಿಯನ್ನು ನನ್ನ ಮುಂದೆ ಹರಡಿದೆನು.”


“ಪರ್ಶಿಯಾದ ರಾಜನಾದ ಸೈರಸನ ಪ್ರಕಟನೆ: “ಪರಲೋಕದ ದೇವರಾದ ಯೆಹೋವನು ಭೂಲೋಕದಲ್ಲಿರುವ ಎಲ್ಲಾ ದೇಶಗಳನ್ನು ನನ್ನ ವಶಕ್ಕೆ ಕೊಟ್ಟಿದ್ದಾನೆ. ಯೆಹೂದ ದೇಶದ ಜೆರುಸಲೇಮ್‌ನಲ್ಲಿ ತನಗೊಂದು ಆಲಯವನ್ನು ಕಟ್ಟಲು ಆತನು ನನ್ನನ್ನು ಆರಿಸಿಕೊಂಡಿದ್ದಾನೆ.


ನಿಮ್ಮ ದೇವರಾದ ಯೆಹೋವನು ಪ್ರತಿಯೊಂದು ವಿಷಯದಲ್ಲಿ ನಿಮ್ಮನ್ನು ಆಶೀರ್ವದಿಸಿದ್ದನ್ನು ನೆನಪಿಗೆ ತಂದುಕೊಳ್ಳಿರಿ. ಈ ಮಹಾ ಮರುಭೂಮಿಯ ಮೂಲಕ ನೀವು ನಡೆದುಹೋದದ್ದರ ಬಗ್ಗೆಯೂ ಆತನಿಗೆ ತಿಳಿದಿದೆ. ಕಳೆದ ನಲವತ್ತು ವರ್ಷಗಳಿಂದ ದೇವರು ನಿಮ್ಮೊಂದಿಗಿದ್ದು ನಿಮ್ಮನ್ನು ನಡಿಸಿದ್ದಾನೆ. ನಿಮಗೆ ಬೇಕಾದವುಗಳನ್ನೆಲ್ಲಾ ಒದಗಿಸಿರುತ್ತಾನೆ.’


ಬಹುಕಾಲದ ಹಿಂದೆ, ನೀನು ಪ್ರಪಂಚವನ್ನು ಸೃಷ್ಟಿಮಾಡಿದೆ. ನೀನು ಆಕಾಶವನ್ನು ನಿನ್ನ ಕೈಗಳಿಂದ ನಿರ್ಮಿಸಿದೆ!


ಪರಲೋಕದಲ್ಲಿರುವ ದೇವರು ಭೂಮಿಯ ಮೇಲಿದ್ದ ಜನರನ್ನು ಪ್ರತ್ಯೇಕಿಸಿದನು. ಪ್ರತಿಯೊಂದು ಜನಾಂಗಕ್ಕೆ ಅದರದೇ ಆದ ದೇಶವನ್ನು ಕೊಟ್ಟನು. ಅದಕ್ಕೆ ಮೇರೆಯನ್ನು ಆತನು ಮಾಡಿಕೊಟ್ಟನು. ಇಸ್ರೇಲರಲ್ಲಿ ಎಷ್ಟು ಜನರು ಇದ್ದಾರೋ ಅಷ್ಟು ಜನಾಂಗಗಳಿವೆ.


ಆದರೆ ಅವರು ನಿನ್ನ ಜನರಾಗಿದ್ದಾರೆ. ಅವರು ನಿನಗೆ ಸಂಬಂಧಪಟ್ಟವರಾಗಿದ್ದಾರೆ; ನಿನ್ನ ಬಲಪರಾಕ್ರಮದಿಂದ ಅವರನ್ನು ದಾಸತ್ವದಿಂದ ಬಿಡುಗಡೆ ಮಾಡಿರುವೆ.’


‘ನಿಮ್ಮ ತಂದೆತಾಯಿಗಳನ್ನು ನೀವು ಸನ್ಮಾನಿಸಬೇಕು. ಇದು ನಿಮ್ಮ ದೇವರ ಆಜ್ಞೆ. ನೀವು ಇದಕ್ಕೆ ವಿಧೇಯರಾದರೆ ದೇವರು ನಿಮಗೆ ಕೊಡುವ ದೇಶದಲ್ಲಿ ನೀವು ಬಹುಕಾಲ ಬಾಳುವಿರಿ ಮತ್ತು ನಿಮಗೆ ಯಾವಾಗಲೂ ಶುಭವಿರುವುದು.


ಯೆಹೋವನು ನಿಮಗೆ ಇವುಗಳನ್ನು ತೋರಿಸಿದ್ದಾನೆ, ಯಾಕೆಂದರೆ ಆತನೇ ದೇವರೆಂದೂ ಆತನಲ್ಲದೆ ಬೇರೆ ಯಾವ ದೇವರಿಲ್ಲವೆಂದೂ ನೀವು ತಿಳಿದುಕೊಳ್ಳಬೇಕೆಂಬುದು ಆತನ ಉದ್ದೇಶವಾಗಿತ್ತು.


“ಇಂಥಾ ಅದ್ಭುತಕಾರ್ಯಗಳು ಹಿಂದೆ ಎಂದಾದರೂ ನಡೆದಿವೆಯೋ? ದೇವರು ಭೂಮಿಯ ಮೇಲೆ ಮಾನವನನ್ನು ನಿರ್ಮಿಸಿದ ಕಾಲದಿಂದಿಡಿದು ಇಂದಿನವರೆಗೂ ಲೋಕದ ಎಲ್ಲಾ ಕಡೆಗಳಲ್ಲಿ ನಡೆದಿರುವ ಸಂಗತಿಗಳನ್ನು ವೀಕ್ಷಿಸಿ ನೋಡಿರಿ. ಇದರಷ್ಟು ಮಹತ್ತಾದ ಯಾವುದನ್ನಾದರೂ ಎಂದಾದರೂ ಕೇಳಿರುವುದುಂಟೇ?


“ನೀವು ಹೋಗುವ ದೇಶದಲ್ಲಿ ಬಹಳ ವರ್ಷ ಬಾಳಿದ ನಂತರ ನಿಮಗೆ ಮಕ್ಕಳೂ ಮೊಮ್ಮಕ್ಕಳೂ ಆಗುವರು. ಬಳಿಕ ನೀವು ನಿಮ್ಮ ಜೀವಿತಗಳನ್ನು ಹಾಳುಮಾಡಿಕೊಳ್ಳುವಿರಿ. ನೀವು ಎಲ್ಲಾ ಬಗೆಯ ವಿಗ್ರಹಗಳನ್ನು ಮಾಡಿಕೊಳ್ಳುವಿರಿ. ಅದು ದೇವರಿಗೆ ಬಹಳ ಕೋಪವನ್ನು ಉಂಟುಮಾಡುವುದು!


ಆಕಾಶದಲ್ಲಿ ಹಾರಾಡುವ ಪಕ್ಷಿಯ ರೂಪವನ್ನಾಗಲಿ ಭೂಮಿಯ ಮೇಲೆ ಸಂಚರಿಸುವ ಪ್ರಾಣಿಯ ರೂಪವನ್ನಾಗಲಿ


ಜಮ್‌ಜುಮ್ಯರು ತುಂಬಾ ಬಲಶಾಲಿಗಳಾಗಿದ್ದರು; ಅನಾಕ್ಯರಂತೆ ಉನ್ನತ ಪುರುಷರಾಗಿದ್ದರು. ಆದರೆ ಯೆಹೋವನು ಜಮ್‌ಜುಮ್ಯರನ್ನು ಸೋಲಿಸಲು ಅಮೋರಿಯರಿಗೆ ಸಹಾಯ ಮಾಡಿದನು. ಅಮೋರಿಯರು ಆ ದೇಶವನ್ನು ತಮ್ಮ ಸ್ವಾಧೀನಕ್ಕೆ ತೆಗೆದುಕೊಂಡು ಈಗ ಅದರಲ್ಲಿ ನೆಲೆಸಿರುತ್ತಾರೆ.


ನೀನು ಅಮ್ಮೋನಿಯರ ಬಳಿಗೆ ಹೋಗಬೇಕು. ಆದರೆ ಅವರಿಗೆ ತೊಂದರೆ ಕೊಡಬೇಡ. ಅವರೊಂದಿಗೆ ಯುದ್ಧಮಾಡಬೇಡ. ಯಾಕೆಂದರೆ ಅವರ ದೇಶದಲ್ಲಿ ನಿನಗೆ ಪಾಲಿಲ್ಲ. ಅವರು ಲೋಟನ ಸಂತತಿಯವರು, ಆ ದೇಶವನ್ನು ನಾನು ಅವರಿಗೆ ಕೊಟ್ಟಿರುತ್ತೇನೆ.’”


“ಯೆಹೋವನು ನನಗೆ ಹೀಗೆ ಹೇಳಿದನು: ‘ಮೋವಾಬಿನ ಜನರಿಗೆ ತೊಂದರೆ ಕೊಡಬೇಡ. ಅವರ ವಿರುದ್ಧ ಯುದ್ಧಕ್ಕೆ ಹೋಗಬೇಡ; ಅವರ ದೇಶದಲ್ಲಿ ನಿಮಗೆ ಯಾವ ಪಾಲೂ ಸಿಗದು. ಅವರು ಲೋಟನ ಸಂತತಿಯವರು. ನಾನು ಅವರಿಗೆ ಆರ್ ಪಟ್ಟಣವನ್ನು ಕೊಟ್ಟಿರುತ್ತೇನೆ.’”


ಯಾಕೆಂದರೆ ಯೆಹೋವನು ಆರು ದಿನಗಳಲ್ಲಿ ಕೆಲಸ ಮಾಡಿ ಭೂಮ್ಯಾಕಾಶಗಳನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಸಮಸ್ತವನ್ನೂ ನಿರ್ಮಿಸಿ ಏಳನೆಯ ದಿನದಲ್ಲಿ ವಿಶ್ರಮಿಸಿದನು. ಆದ್ದರಿಂದ ಯೆಹೋವನು ಸಬ್ಬತ್ ದಿನವನ್ನು ಆಶೀರ್ವದಿಸಿ ಅದನ್ನು ತನ್ನ ದಿನವನ್ನಾಗಿ ಮಾಡಿದನು.


“ದೇವರು ಮನುಷ್ಯನನ್ನು ತನ್ನ ಹೋಲಿಕೆಗನುಸಾರವಾಗಿ ನಿರ್ಮಿಸಿದನು. ಆದ್ದರಿಂದ ಯಾವನು ಮನುಷ್ಯನ ರಕ್ತವನ್ನು ಸುರಿಸುವನೋ ಅವನ ರಕ್ತವನ್ನು ಮನುಷ್ಯನೇ ಸುರಿಸುವನು.”


ದೇವರು ಒಬ್ಬ ಮನುಷ್ಯನನ್ನು ಸೃಷ್ಟಿ ಮಾಡುವುದರ ಮೂಲಕ ಮಾನವ ಜನಾಂಗವನ್ನು ಆರಂಭಿಸಿದನು. ಅವನಿಂದ ಬೇರೆಲ್ಲ ಜನರನ್ನು ಉತ್ಪತ್ತಿಮಾಡಿ, ಪ್ರಪಂಚದ ಎಲ್ಲೆಲ್ಲಿಯೂ ಅವರು ವಾಸಿಸುವಂತೆ ಮಾಡಿದನು; ಅವರು ಯಾವಾಗ ಮತ್ತು ಎಲ್ಲೆಲ್ಲಿ ವಾಸಿಸಬೇಕೆಂಬುದನ್ನು ಸರಿಯಾಗಿ ನಿರ್ಧರಿಸಿದನು.


ಹೀಗೆ ದೇವರು ಪ್ರತಿಯೊಂದು ಬಗೆಯ ಕಾಡುಪ್ರಾಣಿಗಳನ್ನು, ಸಾಕುಪ್ರಾಣಿಗಳನ್ನು ಮತ್ತು ಹರಿದಾಡುವ ಎಲ್ಲಾ ಕ್ರಿಮಿಗಳನ್ನು ಸೃಷ್ಟಿಸಿದನು. ಆತನಿಗೆ ಇವು ಒಳ್ಳೆಯದಾಗಿ ಕಂಡವು.


ಅನ್ಯಜನಾಂಗಗಳ ದೇವರುಗಳೆಲ್ಲಾ ಕೇವಲ ಪ್ರತಿಮೆಗಳಾಗಿವೆ. ನಮ್ಮ ಯೆಹೋವನಾದರೋ ಆಕಾಶಮಂಡಲವನ್ನು ಸೃಷ್ಟಿಸಿದಾತನು.


ಈ ಸಂದೇಶವನ್ನು ತಮ್ಮ ಒಡೆಯರಿಗೆ ತಿಳಿಸಬೇಕೆಂದು ಆ ರಾಯಭಾರಿಗಳಿಗೆ ಹೇಳು. ಅವರಿಗೆ ಹೀಗೆ ಹೇಳು: ‘ಇಸ್ರೇಲಿನ ದೇವರು ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳುತ್ತಾನೆ ಎಂದು ನಿಮ್ಮ ಒಡೆಯರಿಗೆ ತಿಳಿಸಿ.


ರಾಜನಾದ ನೆಬೂಕದ್ನೆಚ್ಚರನೇ, ನಿನ್ನನ್ನು ಬಲವಂತದಿಂದ ಜನರಿಂದ ದೂರಮಾಡುವರು. ನೀನು ಕಾಡುಪ್ರಾಣಿಗಳೊಂದಿಗೆ ವಾಸಮಾಡುವೆ; ಹಸುಗಳಂತೆ ಹುಲ್ಲು ತಿನ್ನುವೆ; ಇಬ್ಬನಿಯಿಂದ ತೋಯಿಸಿಕೊಳ್ಳುವೆ. ಏಳು ವರ್ಷಗಳು ಕಳೆಯುವವು. ಆಗ ನೀನು ಮಹೋನ್ನತನಾದ ದೇವರು ಮಾನವರ ಸಾಮ್ರಾಜ್ಯದ ಮೇಲೆ ಆಳ್ವಿಕೆ ಮಾಡುತ್ತಾನೆ ಮತ್ತು ತನಗೆ ಬೇಕಾದವರಿಗೆ ರಾಜ್ಯವನ್ನು ಕೊಡುತ್ತಾನೆ ಎಂಬ ಪಾಠವನ್ನು ಕಲಿಯುವೆ.


“ರಾಜನೇ, ಮಹೋನ್ನತನಾದ ದೇವರು ನಿನ್ನ ತಂದೆಯಾದ ನೆಬೂಕದ್ನೆಚ್ಚರನನ್ನು ಮಹಾ ದೊಡ್ಡ ರಾಜನನ್ನಾಗಿಯೂ ಬಲಿಷ್ಠನಾದ ರಾಜನನ್ನಾಗಿಯೂ ಪ್ರಮುಖನಾದ ರಾಜನನ್ನಾಗಿಯೂ ಮಾಡಿದ್ದನು.


ಆದ್ದರಿಂದ ನನ್ನ ಈ ಮಾತುಗಳನ್ನು ಇಸ್ರೇಲರಿಗೆ ತಿಳಿಸು: ‘ನಾನೇ ಯೆಹೋವನು. ಈಜಿಪ್ಟಿನವರು ನಿಮ್ಮಿಂದ ಮಾಡಿಸುವ ಬಿಟ್ಟೀಕೆಲಸದಿಂದ ತಪ್ಪಿಸಿ ಈಜಿಪ್ಟಿನವರ ಗುಲಾಮಗಿರಿಯಿಂದ ಬಿಡಿಸುವೆನು. ನನ್ನ ಮಹಾಶಕ್ತಿಯಿಂದ ಈಜಿಪ್ಟಿನವರನ್ನು ಭಯಂಕರವಾಗಿ ದಂಡಿಸುವೆನು; ಬಳಿಕ ನಿಮ್ಮನ್ನು ರಕ್ಷಿಸುವೆನು.


ಯೆಹೋವನೇ, ನೀನು ಅವರಿಗೆ ರಾಜ್ಯಗಳನ್ನೂ ಜನಾಂಗಗಳನ್ನೂ ಕೊಟ್ಟೆ. ಕೆಲವೇ ಜನರು ವಾಸವಾಗಿದ್ದ ಬಹುದೂರದ ಸ್ಥಳಗಳನ್ನು ಕೊಟ್ಟೆ. ಹೆಷ್ಬೋನಿನ ರಾಜನಾದ ಸೀಹೋನನ ನಾಡನ್ನು ಮತ್ತು ಬಾಷಾನಿನ ರಾಜನಾದ ಓಗನ ನಾಡನ್ನು ಅವರು ಪಡೆದುಕೊಂಡರು.


ದೇವರು ನಿನಗೆ ಅಧಿಕಾರವನ್ನು ಕೊಟ್ಟಿದ್ದಾನೆ. ಆ ದೇವರು ನಿನ್ನನ್ನು ಎಲ್ಲೆಡೆಯಲ್ಲಿರುವ ಜನರ ಮೇಲೆ, ಕಾಡುಪ್ರಾಣಿಗಳ ಮೇಲೆ, ಪಕ್ಷಿಗಳ ಮೇಲೆ ಆಳುವಂತೆ ಮಾಡಿದ್ದಾನೆ. ಅರಸನಾದ ನೆಬೂಕದ್ನೆಚ್ಚರನೇ, ನೀನೇ ಆ ಪ್ರತಿಮೆಯ ಬಂಗಾರದ ತಲೆ.


ಅವನು ಮಹಾ ಧ್ವನಿಯಿಂದ, ‘ಮರವನ್ನು ಕಡಿದುಹಾಕಿರಿ; ಅದರ ಕೊಂಬೆಗಳನ್ನು ಕಡಿದುಹಾಕಿರಿ; ಅದರ ಎಲೆಗಳನ್ನು ಕಿತ್ತುಹಾಕಿರಿ; ಹಣ್ಣುಗಳನ್ನು ಸುತ್ತಲೂ ಉದುರಿಸಿಬಿಡಿ. ಮರದ ಕೆಳಗೆ ಇದ್ದ ಪ್ರಾಣಿಗಳು ಓಡಿಹೋಗುವವು. ಅದರ ಕೊಂಬೆಗಳಲ್ಲಿ ವಾಸವಾಗಿದ್ದ ಪಕ್ಷಿಗಳು ಹಾರಿಹೋಗುವವು.


ಅರಸನೇ, ನೀನೇ ಆ ಮರ. ನೀನು ಪ್ರಖ್ಯಾತನೂ ಮತ್ತು ಪ್ರಬಲನೂ ಆಗಿರುವೆ. ನೀನು ಗಗನಚುಂಬಿಯಾದ ಆ ಮರದಂತೆ ಬೆಳೆದಿರುವೆ. ನಿನ್ನ ಪ್ರಾಬಲ್ಯವು ಈ ಭೂಮಿಯಲ್ಲಿ ದೂರದೂರದವರೆಗೆ ಹಬ್ಬಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು