Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 28:11 - ಪರಿಶುದ್ದ ಬೈಬಲ್‌

11 ಆಮೇಲೆ ಹನನ್ಯನು ಗಟ್ಟಿಯಾಗಿ ಎಲ್ಲರೂ ಕೇಳುವಂತೆ ಮಾತನಾಡಿದನು. “ಯೆಹೋವನು ಹೇಳುತ್ತಾನೆ: ‘ಇದೇ ರೀತಿಯಲ್ಲಿ ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ಹೇರಿದ ನೊಗವನ್ನು ನಾನು ಮುರಿದುಹಾಕುವೆನು. ಅವನು ಆ ನೊಗವನ್ನು ಜಗತ್ತಿನ ಸಮಸ್ತ ಜನಾಂಗಗಳ ಮೇಲೆ ಹೇರಿದ್ದಾನೆ. ಆದರೆ ನಾನು ಆ ನೊಗವನ್ನು ಎರಡು ವರ್ಷದೊಳಗಾಗಿ ಮುರಿದುಹಾಕುವೆನು.’” ಹನನ್ಯನು ಹಾಗೆ ಹೇಳಿದ ಮೇಲೆ ಯೆರೆಮೀಯನು ಪವಿತ್ರಾಲಯವನ್ನು ಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 “ಯೆಹೋವನು ಹೇಳಿರುವುದೇನೆಂದರೆ, ನಾನು ಹೀಗೆಯೇ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ನೊಗವನ್ನು ಎರಡು ವರ್ಷದೊಳಗಾಗಿ ಸಮಸ್ತ ಜನಾಂಗಗಳ ಹೆಗಲಿನಿಂದ ತೆಗೆದು ಮುರಿದು ಹಾಕುವೆನು” ಎಂದು ಹೇಳಿದನು. ಇದನ್ನು ಕೇಳಿ ಪ್ರವಾದಿಯಾದ ಯೆರೆಮೀಯನು ಅಲ್ಲಿಂದ ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ನೆರೆದಿದ್ದ ಜನರೆಲ್ಲರ ಮುಂದೆ, “ಸರ್ವೇಶ್ವರನೇ ಹೇಳಿದ್ದಾರೆ - ಇದೇ ಪ್ರಕಾರ, ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ಹೊರಿಸಿರುವ ನೊಗವನ್ನು ಇನ್ನೆರಡು ವರ್ಷದೊಳಗೆ ಸಮಸ್ತ ರಾಷ್ಟ್ರಗಳ ಹೆಗಲಿನಿಂದ ತೆಗೆದು ಮುರಿದು ಹಾಕಲಾಗುವುದು,” ಎಂದು ಹೇಳಿದನು. ಇದನ್ನು ಕೇಳಿದ ಪ್ರವಾದಿ ಯೆರೆಮೀಯನು ಅಲ್ಲಿಂದ ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನಾನು ಹೀಗೆಯೇ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ನೊಗವನ್ನು ಎರಡು ವರುಷದೊಳಗಾಗಿ ಸಮಸ್ತ ಜನಾಂಗಗಳ ಹೆಗಲಿನಿಂದ ತೆಗೆದು ಮುರಿದುಹಾಕುವೆನು ಎಂದು ಹೇಳಿದನು. ಇದನ್ನು ಕೇಳಿ ಪ್ರವಾದಿಯಾದ ಯೆರೆಮೀಯನು ಅಲ್ಲಿಂದ ಹೊರಟು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಹನನ್ಯನು ಜನರೆಲ್ಲರ ಮುಂದೆ ಹೇಳಿದ್ದೇನೆಂದರೆ, “ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಇದೇ ಪ್ರಕಾರ ನಾನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ನೊಗವನ್ನು ಎರಡು ವರ್ಷದೊಳಗಾಗಿ ಎಲ್ಲಾ ಜನಾಂಗಗಳ ಕುತ್ತಿಗೆಯ ಮೇಲಿನಿಂದ ಮುರಿದು ಹಾಕುವೆನು,’ ” ಎಂದನು. ಆಗ ಪ್ರವಾದಿಯಾದ ಯೆರೆಮೀಯನು ತನ್ನ ಮಾರ್ಗವಾಗಿ ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 28:11
13 ತಿಳಿವುಗಳ ಹೋಲಿಕೆ  

ಆಗ ಯೆಹೋವನು ನನಗೆ, “ಯೆರೆಮೀಯನೇ, ಆ ಪ್ರವಾದಿಗಳು ನನ್ನ ಹೆಸರಿನಿಂದ ಸುಳ್ಳುಬೋಧನೆ ಮಾಡುತ್ತಾರೆ. ನಾನು ಆ ಪ್ರವಾದಿಗಳನ್ನು ಕಳುಹಿಸಲಿಲ್ಲ. ಅವರಿಗೆ ನಾನು ಯಾವ ಅಪ್ಪಣೆಯನ್ನೂ ಕೊಟ್ಟಿಲ್ಲ, ಅವರೊಂದಿಗೆ ನಾನು ಮಾತನ್ನೂ ಆಡಿಲ್ಲ. ಆ ಪ್ರವಾದಿಗಳು ಸುಳ್ಳುದರ್ಶನಗಳನ್ನು ನಿಷ್ಪ್ರಯೋಜಕವಾದ ಮಾಟಮಂತ್ರಗಳನ್ನು ಸ್ವಕಲ್ಪಿತ ವಿಚಾರಗಳನ್ನೂ ಬೋಧಿಸುತ್ತಿದ್ದಾರೆ.


ಅಜ್ಞಾನಿಯೊಡನೆ ಸ್ನೇಹ ಬೆಳಸಬೇಡಿ; ನಿಮಗೆ ಉಪದೇಶಿಸಲು ಅವನಲ್ಲೇನೂ ಇಲ್ಲ.


ಅವರು ಸುಳ್ಳುಗಳನ್ನು ಬೋಧಿಸುತ್ತಿರುವರು. ಅವರ ಸಂದೇಶವು ನನ್ನಿಂದ ಬಂದಿದೆ ಎಂದು ಅವರು ಹೇಳುತ್ತಿರುವರು. ಆದರೆ ನಾನು ಅದನ್ನು ಕಳುಹಿಸಲಿಲ್ಲ.” ಈ ಸಂದೇಶವು ಯೆಹೋವನಿಂದ ಬಂದದ್ದು.


ಕೆಲವು ಜನರು ಯೆಹೋವನ ನಿಜವಾದ ಸಂದೇಶಗಳನ್ನು ದ್ವೇಷಿಸುತ್ತಾರೆ. ಆದ್ದರಿಂದ ಆ ಪ್ರವಾದಿಗಳು ಆ ಜನರಿಗೆ ಬೇರೆಯದನ್ನೇ ಹೇಳುತ್ತಾರೆ. ಅವರು ‘ನಿಮಗೆ ಶುಭವಾಗುವುದು’ ಎನ್ನುತ್ತಾರೆ. ಕೆಲವು ಜನರು ಬಹಳ ಮೊಂಡರಾಗಿದ್ದಾರೆ. ಅವರು ತಮ್ಮ ಮನಸ್ಸಿಗೆ ಬಂದುದನ್ನೇ ಮಾಡುತ್ತಾರೆ. ಅವರಿಗೆ ಈ ಪ್ರವಾದಿಗಳು ‘ನಿಮಗೆ ಯಾವ ಕೇಡೂ ಸಂಭವಿಸುವದಿಲ್ಲ’ ಎಂದು ಹೇಳುತ್ತಾರೆ.


ಚಿದ್ಕೀಯನು ಕೆನಾನನ ಮಗ. ಚಿದ್ಕೀಯನು ಕಬ್ಬಿಣದ ಕೊಂಬುಗಳನ್ನು ತಯಾರಿಸಿ, “ಇದು ಯೆಹೋವನ ನುಡಿ. ಈ ಕಬ್ಬಿಣದ ಕೊಂಬುಗಳಿಂದಲೋ ಎಂಬಂತೆ ನೀನು ಅರಾಮ್ಯರನ್ನು ನಾಶಮಾಡುವೆ” ಎಂದು ಹೇಳಿದನು.


ಅಹಾಬನು ಪ್ರವಾದಿಗಳ ಸಭೆಯೊಂದನ್ನು ಕರೆದನು. ಆ ಸಮಯದಲ್ಲಿ ನಾನೂರುಮಂದಿ ಪ್ರವಾದಿಗಳಿದ್ದರು. ಅಹಾಬನು ಪ್ರವಾದಿಗಳನ್ನು, “ಅರಾಮ್ಯರ ಸೇನೆಯ ವಿರುದ್ಧ ಹೋರಾಡಲು ನಾನು ರಾಮೋತಿಗೆ ಹೋಗಬೇಕೇ? ಅಥವಾ ನಾನು ಬೇರೊಂದು ಸಮಯಕ್ಕಾಗಿ ಕಾಯಬೇಕೇ?” ಎಂದು ಕೇಳಿದನು. ಪ್ರವಾದಿಗಳು, “ನೀನು ಹೋಗಿ ಯುದ್ಧಮಾಡು. ನೀನು ಗೆಲ್ಲುವಂತೆ ಯೆಹೋವನು ಮಾಡುವನು” ಎಂದು ಹೇಳಿದರು.


ಆಗ ಆ ಪ್ರವಾದಿಯು, “ಆದರೆ ನಾನೂ ನಿನ್ನಂತೆಯೇ ಒಬ್ಬ ಪ್ರವಾದಿ” ಎಂದು ಹೇಳಿದನು. ನಂತರ ವಯಸ್ಸಾದ ಪ್ರವಾದಿಯು ಅವನಿಗೆ “ಯೆಹೋವನಿಂದ ಒಬ್ಬ ದೇವದೂತನು ನನ್ನ ಬಳಿಗೆ ಬಂದಿದ್ದನು. ಆ ದೂತನು ನಿನ್ನನ್ನು ನನ್ನ ಮನೆಗೆ ಕರೆತರಲು ನಿನ್ನೊಂದಿಗೆ ಅನ್ನಪಾನಗಳನ್ನು ತೆಗೆದುಕೊಳ್ಳಲು ನನಗೆ ತಿಳಿಸಿದನು” ಎಂದು ಸುಳ್ಳು ಹೇಳಿದನು.


“‘ಎಲೈ ಸುಳ್ಳುಪ್ರವಾದಿಗಳೇ, ನೀವು ನೋಡಿದ ದರ್ಶನಗಳು ಸತ್ಯವಾದವುಗಳಲ್ಲ. ನೀವು ಮಂತ್ರತಂತ್ರ ಮಾಡಿ ಇಂತಿಂಥದ್ದು ಸಂಭವಿಸುವುದು ಎಂದು ಸುಳ್ಳು ಹೇಳಿದ್ದೀರಿ. ನಾನು ಮಾತಾಡಿಲ್ಲದಿದ್ದರೂ ಯೆಹೋವನೇ ಇದನ್ನು ಹೇಳಿದನೆಂದು ನೀವು ಹೇಳುತ್ತೀರಿ.’”


ತರುವಾಯ ಪ್ರವಾದಿಯಾದ ಯೆರೆಮೀಯನು ಪ್ರವಾದಿಯಾದ ಹನನ್ಯನಿಗೆ ಹೀಗೆ ಹೇಳಿದನು: “ಹನನ್ಯನೇ, ಕೇಳು. ಯೆಹೋವನು ನಿನ್ನನ್ನು ಕಳುಹಿಸಲಿಲ್ಲ. ಆದರೆ ಯೆಹೂದದ ಜನರಿಗೆ ಸುಳ್ಳನ್ನು ನಂಬುವಂತೆ ನೀನು ಮಾಡಿರುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು