Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 29:23 - ಪರಿಶುದ್ದ ಬೈಬಲ್‌

23 ಆ ಪ್ರವಾದಿಗಳಿಬ್ಬರು ಇಸ್ರೇಲಿನಲ್ಲಿ ಹೆಚ್ಚಿನ ದುರಾಚಾರವನ್ನು ನಡೆಸಿದರು. ಅವರು ತಮ್ಮ ನೆರೆಯವರ ಹೆಂಡತಿಯರೊಂದಿಗೆ ವ್ಯಭಿಚಾರ ಮಾಡಿದರು. ಅವರು ಸುಳ್ಳುಗಳನ್ನು ಹೇಳಿದರು. ಆ ಸುಳ್ಳುಗಳನ್ನು ಯೆಹೋವನಾದ ನನ್ನ ಸಂದೇಶವೆಂದು ಹೇಳಿದರು. ಹಾಗೆ ಮಾಡಲು ನಾನು ಅವರಿಗೆ ಹೇಳಿಲ್ಲ, ಅವರು ಏನು ಮಾಡಿದ್ದಾರೆಂಬುದನ್ನು ನಾನು ಬಲ್ಲೆ. ಅದಕ್ಕೆ ನಾನೇ ಸಾಕ್ಷಿ.” ಇದು ಯೆಹೋವನ ಸಂದೇಶ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಇವರು ಇಸ್ರಾಯೇಲಿನಲ್ಲಿ ದುರಾಚಾರವನ್ನು ನಡೆಸಿ, ನೆರೆಯವರ ಹೆಂಡತಿಯರೊಂದಿಗೆ ವ್ಯಭಿಚಾರಮಾಡಿ, ನಾನು ಆಜ್ಞಾಪಿಸದ ಮಾತುಗಳನ್ನು ನನ್ನ ಹೆಸರಿನ ಮೇಲೆ ಸುಳ್ಳಾಗಿ ಸಾರಿದಿರಲ್ಲಾ; ನಾನೇ ಬಲ್ಲೆ, ನಾನೇ ಸಾಕ್ಷಿ ಎಂದು ಯೆಹೋವನು ಅನ್ನುತ್ತಾನೆ” ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಏಕೆಂದರೆ ಇವರು ಇಸ್ರಯೇಲಿನಲ್ಲಿ ದುರಾಚಾರವನ್ನು ನಡೆಸಿದರು. ನೆರೆಯವರ ಹೆಂಡಿರಲ್ಲಿ ವ್ಯಭಿಚಾರಮಾಡಿದರು. ನಾನು ಆಜ್ಞಾಪಿಸಿದ ಮಾತುಗಳನ್ನು ನನ್ನ ಹೆಸರೆತ್ತಿಯೇ ಸುಳ್ಳಾಗಿ ಸಾರಿದರು. ಇದೆಲ್ಲ ನನಗೆ ಗೊತ್ತಿದೆ, ಇದಕ್ಕೆಲ್ಲಾ ನಾನೇ ಸಾಕ್ಷಿ’ ಎನ್ನುತ್ತಾರೆ ಸರ್ವೇಶ್ವರ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಇವರು ಇಸ್ರಾಯೇಲಿನಲ್ಲಿ ದುರಾಚಾರವನ್ನು ನಡಿಸಿ ನೆರೆಯವರ ಹೆಂಡಿರಲ್ಲಿ ವ್ಯಭಿಚಾರಮಾಡಿ ನಾನು ಆಜ್ಞಾಪಿಸಿದ ಮಾತುಗಳನ್ನು ನನ್ನ ಹೆಸರಿನ ಮೇಲೆ ಸುಳ್ಳಾಗಿ ಸಾರಿದರಲ್ಲಾ; ನಾನೇ ಬಲ್ಲೆ, ನಾನೇ ಸಾಕ್ಷಿ ಎಂದು ಯೆಹೋವನು ಅನ್ನುತ್ತಾನೆ ಎಂಬದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಏಕೆಂದರೆ ಅವರು ತಮ್ಮ ನೆರೆಯವರ ಹೆಂಡರ ಸಂಗಡ ವ್ಯಭಿಚಾರ ಮಾಡಿ, ನನ್ನ ಹೆಸರಿನಲ್ಲಿ ಸುಳ್ಳಾಗಿ ನಾನು ಅವರಿಗೆ ಆಜ್ಞಾಪಿಸದೆ ಇದ್ದ ಮಾತುಗಳನ್ನಾಡಿ, ಇಸ್ರಾಯೇಲಿನಲ್ಲಿ ನೀಚತನವನ್ನು ನಡೆಸಿದರು. ನಾನೇ ಅದನ್ನು ತಿಳಿದು ಸಾಕ್ಷಿಯಾಗಿದ್ದೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 29:23
28 ತಿಳಿವುಗಳ ಹೋಲಿಕೆ  

ಆಗ ನಾನು ನಿಮ್ಮ ಬಳಿಗೆ ಬಂದು ಯೋಗ್ಯವಾದ ಕಾರ್ಯವನ್ನು ಮಾಡುವೆನು. ದುಷ್ಟ ಕ್ರಿಯೆಗಳನ್ನು ಮಾಡಿದ ಜನರ ಬಗ್ಗೆ ನ್ಯಾಯಾಧೀಶರೊಡನೆ ದೂರು ಹೇಳುವ ಮನುಷ್ಯನಂತಿರುವೆನು. ಕೆಲವರು ಮಾಟಮಂತ್ರ ಮಾಡುವರು; ಕೆಲವರು ವ್ಯಭಿಚಾರ ಮಾಡುವರು; ಕೆಲವರು ಸುಳ್ಳು ವಾಗ್ದಾನಗಳನ್ನು ಮಾಡುವರು; ಕೆಲವರು ಕೂಲಿಯಾಳುಗಳಿಗೆ ಹೇಳಿದ ಕೂಲಿಯನ್ನು ಕೊಡದೆ ಅವರಿಗೆ ಮೋಸಮಾಡುವರು. ಜನರು ವಿಧವೆಯರಿಗೂ ಅನಾಥರಿಗೂ ಸಹಾಯ ಮಾಡುವದಿಲ್ಲ. ಪರದೇಶಿಗಳಿಗೆ ಸಹಾಯ ಮಾಡುವದಿಲ್ಲ. ನನಗೆ ಗೌರವ ಸಲ್ಲಿಸುವದಿಲ್ಲ.” ಇದು ಸರ್ವಶಕ್ತನಾದ ಯೆಹೋವನ ನುಡಿ.


ಯೆಹೂದದ ಪ್ರವಾದಿಗಳು ಜೆರುಸಲೇಮಿನಲ್ಲಿ ಭಯಂಕರ ದುಷ್ಕೃತ್ಯಗಳನ್ನು ಮಾಡುವುದನ್ನು ನಾನು ನೋಡಿದ್ದೇನೆ. ಈ ಪ್ರವಾದಿಗಳು ವ್ಯಭಿಚಾರ ಮಾಡುತ್ತಾರೆ. ಅವರು ಸುಳ್ಳುಗಳನ್ನು ಕೇಳಿ, ಆ ಸುಳ್ಳುಬೋಧನೆಗಳನ್ನು ಪಾಲಿಸುತ್ತಾರೆ. ಅವರು ದುಷ್ಟರಿಗೆ ಅವರ ದುಷ್ಟತನವನ್ನು ಮುಂದುವರಿಸಲು ಪ್ರೋತ್ಸಾಹಿಸುತ್ತಾರೆ. ಆದ್ದರಿಂದ ಜನರು ಪಾಪಮಾಡುವುದನ್ನು ನಿಲ್ಲಿಸಲಿಲ್ಲ. ಅವರೆಲ್ಲರು ನನಗೆ ಸೊದೋಮ್ ನಗರದಂತೆ ಇದ್ದಾರೆ. ಜೆರುಸಲೇಮಿನ ಜನರು ಗೊಮೋರ ನಗರದಂತೆ ಇದ್ದಾರೆ.”


ದೇವರ ದೃಷ್ಟಿಗೆ ಯಾವುದೂ ಮುಚ್ಚುಮರೆಯಾಗಿಲ್ಲ. ಆತನ ಕಣ್ಣೆದುರಿನಲ್ಲಿ ಪ್ರತಿಯೊಂದೂ ತೆರೆಯಲ್ಪಟ್ಟು ಬಟ್ಟಬಯಲಾಗಿವೆ. ನಾವು ನಮ್ಮ ಜೀವಿತದ ಬಗ್ಗೆ ಲೆಕ್ಕ ಒಪ್ಪಿಸಬೇಕಾಗಿರುವುದು ಆತನಿಗೇ.


ಕೊಲಾಯನ ಮಗನಾದ ಅಹಾಬ ಮತ್ತು ಮಾಸೇಯನ ಮಗನಾದ ಚಿದ್ಕೀಯ ಇವರ ವಿಷಯವಾಗಿ ಸರ್ವಶಕ್ತನಾದ ಯೆಹೋವನು ಹೀಗೆಂದನು: “ಇವರಿಬ್ಬರು ನಿಮಗೆ ಸುಳ್ಳುಪ್ರವಾದನೆ ಮಾಡಿದ್ದಾರೆ. ಅವರ ಸಂದೇಶವು ನನ್ನಿಂದ ಬಂದದ್ದು ಎಂದು ಅವರು ಹೇಳಿದ್ದಾರೆ. ಆದರೆ ಅವರು ಹೇಳಿದ್ದು ಸುಳ್ಳು. ನಾನು ಆ ಇಬ್ಬರು ಪ್ರವಾದಿಗಳನ್ನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನಿಗೆ ಒಪ್ಪಿಸುವೆನು. ನೆಬೂಕದ್ನೆಚ್ಚರನು ಬಾಬಿಲೋನಿನಲ್ಲಿ ಬಂಧಿಯಾಗಿರುವ ನಿಮ್ಮೆಲ್ಲರ ಸಮ್ಮುಖದಲ್ಲಿ ಆ ಇಬ್ಬರು ಪ್ರವಾದಿಗಳನ್ನು ಕೊಲ್ಲುವನು.


ಅವರು ಮಾಡುವ ಪಾಪಕೃತ್ಯಗಳು ನನಗೆ ಕಾಣಿಸುತ್ತಿವೆ. ಯೆಹೂದದ ಜನರು ತಾವು ಮಾಡುವದನ್ನು ನನ್ನಿಂದ ಮುಚ್ಚಿಡಲು ಸಾಧ್ಯವಿಲ್ಲ. ಅವರ ಪಾಪವು ನನಗೆ ಗೊತ್ತಾಗುವುದು.


ಮನುಷ್ಯನ ಮಾರ್ಗಗಳು ಯೆಹೋವನಿಗೆ ಕಾಣುತ್ತಲೇ ಇವೆ; ಯೆಹೋವನು ಅವುಗಳನ್ನು ಪರೀಕ್ಷಿಸುತ್ತಾನೆ.


“ಲವೊದಿಕೀಯದ ಸಭೆಗೆ ಈ ಪತ್ರವನ್ನು ಬರೆ: “ಆಮೆನ್ ಎಂಬಾತನು ಅಂದರೆ ನಂಬಿಗಸ್ತನೂ ಸತ್ಯಸಾಕ್ಷಿಯೂ ದೇವರ ಸೃಷ್ಟಿಗೆ ಅಧಿಪತಿಯೂ ಆಗಿರುವಾತನು ಹೇಳುವುದೇನೆಂದರೆ:


ಯೇಸು ಕ್ರಿಸ್ತನಿಂದ ನಿಮಗೆ ಕೃಪೆಯೂ ಶಾಂತಿಯೂ ಲಭಿಸಲಿ. ಯೇಸು ನಂಬಿಗಸ್ತ ಸಾಕ್ಷಿಯಾಗಿದ್ದಾನೆ. ಸತ್ತವರೊಳಗಿಂದ ಮೇಲೆದ್ದು ಬಂದವರಲ್ಲಿ ಆತನೇ ಮೊದಲಿಗನಾಗಿದ್ದಾನೆ. ಆತನು ಲೋಕದ ರಾಜರುಗಳಿಗೆ ಅಧಿಪತಿಯಾಗಿದ್ದಾನೆ. ಯೇಸು ನಮ್ಮನ್ನು ಪ್ರೀತಿಸುತ್ತಾನೆ. ಆತನು ತನ್ನ ರಕ್ತದಿಂದ (ಮರಣ) ನಮ್ಮ ಪಾಪಗಳನ್ನು ನಿವಾರಿಸಿ ಬಿಡುಗಡೆಗೊಳಿಸಿದನು;


“ನಮ್ಮ ಕಾಣಿಕೆಗಳನ್ನು ಯೆಹೋವನು ಏಕೆ ಸ್ವೀಕರಿಸುವುದಿಲ್ಲ?” ಎಂದು ನೀವು ಕೇಳಬಹುದು. ಯಾಕೆಂದರೆ ನಿಮ್ಮ ಪಾಪಕೃತ್ಯಗಳನ್ನು ಆತನು ನೋಡಿರುತ್ತಾನೆ. ಅವುಗಳಿಗೆ ವಿರೋಧವಾಗಿ ಆತನೇ ಸಾಕ್ಷಿಯಾಗಿರುತ್ತಾನೆ. ನಿಮ್ಮ ಹೆಂಡತಿಯರನ್ನು ನೀವು ಮೋಸಗೊಳಿಸಿದ್ದನ್ನು ಆತನು ನೋಡಿರುತ್ತಾನೆ. ನೀವು ಆಕೆಯನ್ನು ನಿಮ್ಮ ಯೌವನ ಕಾಲದಲ್ಲಿ ಹೆಂಡತಿಯನ್ನಾಗಿ ಮಾಡಿಕೊಂಡಿರುತ್ತೀರಿ. ಆಕೆಯು ನಿಮ್ಮ ಆಪ್ತ ಸ್ನೇಹಿತೆಯಾಗಿದ್ದಳು. ನೀವಿಬ್ಬರೂ ಮಾತುಕೊಟ್ಟಿರಿ. ಆಕೆ ನಿಮ್ಮ ಹೆಂಡತಿಯಾದಳು. ಆದರೆ ನೀವು ಅವಳಿಗೆ ಅಪನಂಬಿಗಸ್ಥರಾದಿರಿ.


ಅವರ ಪ್ರವಾದಿಗಳು ಬಡಾಯಿಗಾರರೂ ದ್ರೋಹಿಗಳೂ ಆಗಿದ್ದಾರೆ. ಅವರು ಯಾವಾಗಲೂ ಇನ್ನೂಇನ್ನೂ ಹೆಚ್ಚಾಗಿ ದೊರಕುವಂತೆ ಪ್ರಯತ್ನಿಸಿರುತ್ತಾರೆ. ಅವರ ಯಾಜಕರು ಪವಿತ್ರ ವಸ್ತುಗಳನ್ನು ಸಾಧಾರಣ ವಸ್ತುಗಳನ್ನಾಗಿ ಉಪಯೋಗಿಸಿದ್ದಾರೆ. ದೇವರ ನಿಯಮಗಳನ್ನು ನಿರ್ಲಕ್ಷಿಸಿದ್ದಾರೆ.


ನಾನು ಆ ಪ್ರವಾದಿಗಳನ್ನು ಕಳುಹಿಸಲಿಲ್ಲ. ಆದರೂ ಅವರು ತಮ್ಮ ಸಂದೇಶವನ್ನು ಕೊಡಲು ಆತುರಪಟ್ಟರು. ನಾನು ಅವರೊಂದಿಗೆ ಮಾತನಾಡಲಿಲ್ಲ ಆದರೂ ಅವರು ನನ್ನ ಹೆಸರು ಹೇಳಿ ಉಪದೇಶ ಮಾಡಿದರು.


ನೀನು ಮಾಡಿದ ಭಯಾನಕ ಕೃತ್ಯಗಳನ್ನು ನಾನು ನೋಡಿದ್ದೇನೆ. ನಿನ್ನ ಪ್ರಿಯತಮರ ಜೊತೆಗೆ ನಗುವದನ್ನೂ ಕಾಮದಾಟವಾಡುವದನ್ನೂ ನಾನು ನೋಡಿದ್ದೇನೆ. ನೀನು ವೇಶ್ಯೆಯಂತೆ ನಡೆದುಕೊಳ್ಳಬೇಕೆಂದು ಯೋಚನೆ ಮಾಡಿದ್ದು ನನಗೆ ಗೊತ್ತು. ನೀನು ಹೊಲಗಳಲ್ಲಿಯೂ ಬೆಟ್ಟಗಳಲ್ಲಿಯೂ ಮಾಡಿದ ಅಸಹ್ಯಕೃತ್ಯಗಳನ್ನು ನಾನು ನೋಡಿದ್ದೇನೆ. ಜೆರುಸಲೇಮೇ, ಇದರಿಂದ ನಿನಗೆ ತುಂಬಾ ಕೇಡಾಗುವದು. ನೀನು ಎಷ್ಟು ದಿನ ಹೀಗೆಯೇ ನಿನ್ನ ಪಾಪಕೃತ್ಯಗಳನ್ನು ಮುಂದುವರಿಸುವೆ ಎಂದು ನಾನು ಯೋಚಿಸುತ್ತಿದ್ದೇನೆ.”


ಆಮೇಲೆ ಲಾಬಾನನು “ನೀನು ನನ್ನ ಹೆಣ್ಣುಮಕ್ಕಳನ್ನು ನೋಯಿಸಿದರೆ, ದೇವರು ನಿನ್ನನ್ನು ದಂಡಿಸುವನು ಎಂಬುದನ್ನು ನೆನಪು ಮಾಡಿಕೊ. ನೀನು ಬೇರೆ ಸ್ತ್ರೀಯರನ್ನು ಮದುವೆ ಮಾಡಿಕೊಂಡರೆ, ದೇವರು ನಿನ್ನನ್ನು ನೋಡುತ್ತಿದ್ದಾನೆ ಎಂಬುದನ್ನು ನೆನಪು ಮಾಡಿಕೊ.


ಹೊಲದಲ್ಲಿದ್ದ ಯಾಕೋಬನ ಗಂಡುಮಕ್ಕಳು ನಡೆದ ಸಂಗತಿಯನ್ನು ಕೇಳಿ ತುಂಬ ಕೋಪಗೊಂಡರು. ಶೆಕೆಮನು ಯಾಕೋಬನ ಮಗಳನ್ನು ಮಾನಭಂಗ ಮಾಡಿ ಇಸ್ರೇಲರಿಗೆ ಅವಮಾನ ಮಾಡಿದ್ದರಿಂದ ಅವರು ಆವೇಶಗೊಂಡರು. ಶೆಕೆಮನು ತುಂಬ ಕೆಟ್ಟದ್ದನ್ನು ಮಾಡಿದ್ದರಿಂದ ಅಣ್ಣಂದಿರು ಹೊಲದಿಂದ ಹಿಂತಿರುಗಿದರು.


ಗಿಲ್ಯಾದಿನ ಹಿರಿಯರು ಯೆಫ್ತಾಹನಿಗೆ, “ನಾವು ಹೇಳುತ್ತಿರುವ ಎಲ್ಲವನ್ನು ಯೆಹೋವನು ಕೇಳುತ್ತಿದ್ದಾನೆ. ನೀನು ಹೇಳಿದಂತೆಯೇ ಮಾಡುತ್ತೇವೆ ಎಂದು ನಾವು ಮಾತುಕೊಡುತ್ತೇವೆ” ಎಂದರು.


ತಾಮಾರಳು ಅಮ್ನೋನನಿಗೆ, “ಸೋದರನೇ ಬೇಡ! ನನ್ನನ್ನು ಬಲಾತ್ಕರಿಸದಿರು! ಇಸ್ರೇಲಿನಲ್ಲಿ ಇಂತಹ ಕಾರ್ಯ ಎಂದೆಂದಿಗೂ ನಡೆಯಬಾರದು! ಅಪಮಾನಕರವಾದ ಈ ಕಾರ್ಯವನ್ನು ಮಾಡಬೇಡ!


ಅವರು ಮನದಣಿಯುವ ಹಾಗೆ ತಿಂದು ಕೊಬ್ಬಿ ಕಾಮವೇರಿದ ಕುದುರೆಗಳಂತಿದ್ದಾರೆ. ಅವರು ನೆರೆಮನೆಯವನ ಹೆಂಡತಿಯನ್ನು ಕೆನೆತು ಕರೆಯುವ ಕುದುರೆಯಂತಿದ್ದಾರೆ.


ಈ ಪವಿತ್ರ ಆಲಯವನ್ನು ನನ್ನ ಹೆಸರಿನಿಂದ ಕರೆಯಲಾಗಿದೆ. ಈ ಆಲಯವು ನಿಮ್ಮ ದೃಷ್ಟಿಯಲ್ಲಿ ಕೇವಲ ಕಳ್ಳರು ಅಡಗುವ ಸ್ಥಳವಾಯಿತೇ? ನಾನು ನಿಮ್ಮ ವ್ಯವಹಾರವನ್ನೆಲ್ಲಾ ನೋಡುತ್ತಿದ್ದೇನೆ’” ಎಂಬುದು ಯೆಹೋವನಾದ ನನ್ನ ನುಡಿ.


“ಯೆರೆಮೀಯನೇ, ಬಾಬಿಲೋನಿನಲ್ಲಿರುವ ಎಲ್ಲಾ ಬಂಧಿಗಳಿಗೆ ಈ ಸಂದೇಶವನ್ನು ಕಳುಹಿಸು, ‘ನೆಹೆಲಾಮ್ಯನಾದ ಶೆಮಾಯನ ವಿಷಯದಲ್ಲಿ ಯೆಹೋವನು ಹೀಗೆನ್ನುವನು: ಶೆಮಾಯನು ನಿಮಗೆ ಪ್ರವಾದನೆ ಮಾಡಿದ್ದಾನೆ. ಆದರೆ ನಾನು ಅವನನ್ನು ಕಳುಹಿಸಲಿಲ್ಲ. ನೀವು ಸುಳ್ಳನ್ನು ನಂಬುವಂತೆ ಅವನು ಮಾಡಿದ್ದಾನೆ.


ನಿನ್ನ ಹೆಮ್ಮೆಯಿಂದ ನನ್ನ ವಿರುದ್ಧವಾಗಿ ಮಾತನಾಡಿದ್ದೀ, ನೀನು ಅನೇಕ ಬಾರಿ ಹೇಳಿರುತ್ತೀ. ನಾನೆಲ್ಲವನ್ನು ಕೇಳಿದ್ದೇನೆ.”


ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: “ಆ ಪ್ರವಾದಿಗಳು ನಿಮಗೆ ಹೇಳುತ್ತಿರುವ ವಿಷಯಗಳ ಕಡೆಗೆ ಗಮನ ಕೊಡಬೇಡಿರಿ. ಅವರು ನಿಮ್ಮನ್ನು ಮರುಳುಗೊಳಿಸಲು ಪ್ರಯತ್ನಿಸುತ್ತಿದ್ದಾರೆ. ಅವರು ದರ್ಶನಗಳ ಬಗ್ಗೆ ಹೇಳುತ್ತಾರೆ. ಅವರ ದರ್ಶನಗಳು ಅವರ ಮನಸ್ಸಿನಿಂದ ಬಂದವುಗಳೇ ಹೊರತು ನನ್ನಿಂದ ಬಂದವುಗಳಲ್ಲ.


ನಾನು ಕಾಲ್ಪನಿಕ ಕನಸುಗಳನ್ನು ಬೋಧಿಸುವ ಸುಳ್ಳುಪ್ರವಾದಿಗಳ ವಿರೋಧಿಯಾಗಿದ್ದೇನೆ.” ಇದು ಪ್ರಭುವಿನ ನುಡಿ. “ಅವರು ತಮ್ಮ ಸುಳ್ಳುಬೋಧನೆಗಳಿಂದ ನನ್ನ ಜನರನ್ನು ಅಡ್ಡದಾರಿಗೆಳೆಯುತ್ತಾರೆ. ನಾನು ಜನರಿಗೆ ಉಪದೇಶ ಮಾಡುವದಕ್ಕಾಗಿ ಆ ಪ್ರವಾದಿಗಳನ್ನು ಕಳುಹಿಸಿಲ್ಲ. ನನಗೋಸ್ಕರವಾಗಿ ಏನನ್ನಾದರೂ ಮಾಡಲು ನಾನು ಅವರಿಗೆ ಎಂದೂ ಆಜ್ಞಾಪಿಸಿಲ್ಲ. ಅವರು ಯೆಹೂದದ ಜನರಿಗೆ ಸ್ವಲ್ಪವೂ ಸಹಾಯವನ್ನು ಮಾಡಲಾರರು” ಇದು ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು