Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 29:32 - ಪರಿಶುದ್ದ ಬೈಬಲ್‌

32 ಆದ್ದರಿಂದ ಅವನನ್ನು ನಾನು ತಕ್ಷಣ ದಂಡಿಸುತ್ತೇನೆ. ನಾನು ಅವನ ಕುಟುಂಬವನ್ನು ಸಂಪೂರ್ಣವಾಗಿ ನಾಶಮಾಡುತ್ತೇನೆ. ನಾನು ನನ್ನ ಜನರಿಗಾಗಿ ಮಾಡುವ ಒಳ್ಳೆಯವುಗಳಲ್ಲಿ ಅವನು ಪಾಲು ಹೊಂದುವುದಿಲ್ಲ.’” ಇದು ಯೆಹೋವನ ನುಡಿ. “‘ಶೆಮಾಯನು, ಜನರನ್ನು ಯೆಹೋವನಾದ ನನ್ನ ವಿರುದ್ಧ ತಿರುಗುವಂತೆ ಮಾಡಿದ್ದರಿಂದ ನಾನು ಅವನನ್ನು ದಂಡಿಸುವೆನು.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ನಾನು ಆ ನೆಹೆಲಾಮ್ಯನಾದ ಶೆಮಾಯನನ್ನೂ ಮತ್ತು ಅವನ ಸಂತತಿಯವರನ್ನೂ ದಂಡಿಸುವೆನು; ಅವನು ಯೆಹೋವನಾದ ನನ್ನ ವಿರುದ್ಧವಾಗಿ ದ್ರೋಹದ ಮಾತನ್ನು ಆಡಿದ್ದರಿಂದ ಈ ಜನರ ಮಧ್ಯದಲ್ಲಿ ವಾಸಿಸಲು ಅವನಿಗೆ ಯಾವ ಸಂತಾನವೂ ಇರದು; ನಾನು ನನ್ನ ಜನರಿಗೆ ಉಂಟುಮಾಡಬೇಕೆಂದಿರುವ ಮೇಲನ್ನು ಅವನು ನೋಡದೆ ಹೋಗುವನು; ಇದು ಯೆಹೋವನ ನುಡಿ” ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಈ ಕಾರಣ, ಇಗೋ, ನಾನು ಆ ನೆಹೆಲಾಮ್ಯನಾದ ಶೆಮಾಯನನ್ನು ಮತ್ತು ಅವನ ಸಂತತಿಯವರನ್ನು ದಂಡಿಸುವೆನು. ಈ ಜನರ ಮಧ್ಯೆ ಅವನಿಗೆ ಯಾವ ಸಂತಾನವೂ ಇರದು. ಜನರಿಗೆ ‘ನಾನು ಮಾಡಬೇಕೆಂದಿರುವ ಒಳಿತನ್ನು ಅವನು ನೋಡದೆಹೋಗುವನು. ಏಕೆಂದರೆ ಅವನು ನನಗೆ ವಿರುದ್ಧ ಪ್ರಚೋದನೆಯ ಮಾತನ್ನು ಆಡಿದ್ದಾನೆ. ಇದು ಸರ್ವೇಶ್ವರನಾದ ನನ್ನ ನುಡಿ’.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಇಗೋ, ನಾನು ನೆಹೆಲಾಮ್ಯನಾದ ಶೆಮಾಯನನ್ನೂ ಅವನ ಸಂತತಿಯವರನ್ನೂ ದಂಡಿಸುವೆನು; ಅವನು ಯೆಹೋವನಾದ ನನಗೆ ವಿರುದ್ಧವಾಗಿ ದ್ರೋಹದ ಮಾತನ್ನು ಆಡಿದ್ದರಿಂದ ಈ ಜನರ ಮಧ್ಯದಲ್ಲಿ ವಾಸಿಸಲು ಅವನಿಗೆ ಯಾವ ಸಂತಾನವೂ ಇರದು; ನಾನು ನನ್ನ ಜನರಿಗೆ ಉಂಟುಮಾಡಬೇಕೆಂದಿರುವ ಮೇಲನ್ನು ಅವನು ನೋಡದೆ ಹೋಗುವನು; ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಯೆಹೋವ ದೇವರು ಹೀಗೆ ಹೇಳುತ್ತಾರೆ, ಇಗೋ, ನಾನು ನೆಹೆಲಾಮ್ಯನಾದ ಶೆಮಾಯನನ್ನೂ, ಅವನ ಸಂತಾನವನ್ನೂ ದಂಡಿಸುತ್ತೇನೆ. ಈ ಜನರೊಳಗೆ ವಾಸಿಸುವುದಕ್ಕೆ ಅವನಿಗೆ ಒಬ್ಬನೂ ಇರುವುದಿಲ್ಲ. ನಾನು ನನ್ನ ಜನರಿಗೆ ಮಾಡುವ ಒಳ್ಳೆಯದನ್ನು ಅವನು ನೋಡುವುದಿಲ್ಲವೆಂದು ಯೆಹೋವ ದೇವರು ಹೇಳುತ್ತಾರೆ. ಏಕೆಂದರೆ ಅವನು ಯೆಹೋವ ದೇವರಿಗೆ ವಿರೋಧವಾಗಿ ಬೋಧಿಸಿದ್ದಾನೆ.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 29:32
24 ತಿಳಿವುಗಳ ಹೋಲಿಕೆ  

ಅದಕ್ಕಾಗಿ ಯೆಹೋವನು ಹೀಗೆ ಹೇಳುತ್ತಾನೆ: ‘ಹನನ್ಯನೇ, ನಾನು ನಿನ್ನನ್ನು ಶೀಘ್ರದಲ್ಲಿ ಈ ಜಗತ್ತಿನಿಂದ ತೆಗೆದುಬಿಡುತ್ತೇನೆ. ನೀನು ಈ ವರ್ಷ ಮರಣಹೊಂದುವೆ. ಏಕೆಂದರೆ ನೀನು ಜನರನ್ನು ಯೆಹೋವನ ವಿರುದ್ಧ ತಿರುಗುವಂತೆ ಮಾಡಿದೆ.’”


ಆ ಜನರು ನಿರ್ಜನವಾದ ಪ್ರದೇಶದಲ್ಲಿದ್ದ, ಸುಡುವ ಬರಡು ಭೂಮಿಯಲ್ಲಿದ್ದ, ಬಂಜರು ಭೂಮಿಯಲ್ಲಿ ಬೆಳೆದ, ದೇವರು ನೀಡಬಹುದಾದ ಒಳ್ಳೆಯ ವಸ್ತುಗಳ ಬಗ್ಗೆ ಏನೂ ಅರಿಯದ ಒಂದು ಪೊದೆಯಂತಿರುತ್ತಾರೆ.


ಯೆಹೋವನು ಹೇಳುವುದೇನೆಂದರೆ: “ಯೆಹೋಯಾಚೀನನು ಮಕ್ಕಳಿಲ್ಲದವನೆಂದು ನೊಂದಾಯಿಸಿರಿ. ಯೆಹೋಯಾಚೀನನು ತನ್ನ ಜೀವನದಲ್ಲಿ ಯಶಸ್ವಿಯಾಗುವುದಿಲ್ಲ. ಅವನ ಮಕ್ಕಳಲ್ಲಿ ಯಾರೂ ದಾವೀದನ ಸಿಂಹಾಸನವನ್ನೇರುವದಿಲ್ಲ. ಅವನ ಮಕ್ಕಳಲ್ಲಿ ಯಾರೂ ಯೆಹೂದದಲ್ಲಿ ರಾಜ್ಯಭಾರ ಮಾಡುವುದಿಲ್ಲ.”


ಆಗ ರಾಜನಿಗೆ ಆಪ್ತನಾಗಿದ್ದ ಅಧಿಕಾರಿಯು ದೇವಮನುಷ್ಯನಿಗೆ, “ಯೆಹೋವನು ಪರಲೋಕಕ್ಕೆ ಕಿಟಕಿಗಳನ್ನು ಮಾಡಿಸಿದರೂ ಇದು ಸಂಭವಿಸುವುದಿಲ್ಲ!” ಎಂದು ಉತ್ತರಿಸಿದನು. ಎಲೀಷನು, “ನೀನು ನಿನ್ನ ಸ್ವಂತ ಕಣ್ಣುಗಳಿಂದಲೇ ಇದನ್ನು ನೋಡುವೆ. ಆದರೆ ಆ ಆಹಾರದಲ್ಲಿ ಯಾವುದನ್ನೂ ನೀನು ತಿನ್ನುವುದಿಲ್ಲ” ಎಂದನು.


ಆದರೆ ದೇವರಾದ ಯೆಹೋವನು ಹೇಳುವುದೇನೆಂದರೆ, ‘ನಿನ್ನ ಹೆಂಡತಿಯು ಪಟ್ಟಣದೊಳಗೆ ವೇಶ್ಯೆಯಾಗುವಳು. ನಿನ್ನ ಗಂಡು, ಹೆಣ್ಣುಮಕ್ಕಳು ಕತ್ತಿಯಿಂದ ಸಾಯುವರು. ಅನ್ಯರು ನಿನ್ನ ದೇಶವನ್ನು ಕಿತ್ತುಕೊಂಡು ತಮ್ಮೊಳಗೆ ಹಂಚಿಕೊಳ್ಳುವರು. ಮತ್ತು ನೀನು ಪರದೇಶದಲ್ಲಿ ಸಾಯುವೆ. ಇಸ್ರೇಲಿನ ಜನರು ಖಂಡಿತವಾಗಿಯೂ ಸೆರೆಹಿಡಿಯಲ್ಪಟ್ಟು ತಮ್ಮ ದೇಶದಿಂದ ಒಯ್ಯಲ್ಪಡುವರು.’”


ಆದ್ದರಿಂದ ಇಸ್ರೇಲಿನ ದೇವರಾದ ಸರ್ವಶಕ್ತನಾದ ಯೆಹೋವನು ‘ರೇಕಾಬನ ಮಗನಾದ ಯೋನಾದಾಬನ ಸಂತಾನದವರು ಯಾವಾಗಲೂ ನನ್ನ ಸೇವೆಯಲ್ಲಿರುವರು’ ಎಂದು ನುಡಿದನು.”


ಪಷ್ಹೂರನೇ, ನಿನ್ನನ್ನೂ ನಿನ್ನ ಮನೆಯಲ್ಲಿರುವವರೆಲ್ಲರನ್ನೂ ಬಲವಂತವಾಗಿ ಬಾಬಿಲೋನ್ ದೇಶಕ್ಕೆ ಸೆರೆ ಒಯ್ಯಲಾಗುವುದು. ನೀನು ಬಾಬಿಲೋನ್‌ನಲ್ಲಿ ಮರಣಹೊಂದುವೆ; ನಿನ್ನನ್ನು ಆ ಪರದೇಶದಲ್ಲಿಯೇ ಹೂಳಲಾಗುವುದು. ನೀನು ನಿನ್ನ ಸ್ನೇಹಿತರಿಗೆ ಸುಳ್ಳುಬೋಧನೆಯನ್ನು ಮಾಡಿದೆ. ಹೀಗಾಗುವುದಿಲ್ಲವೆಂದು ನೀನು ಹೇಳಿದೆ. ಆದರೆ ನಿನ್ನೆಲ್ಲ ಸ್ನೇಹಿತರು ಸಹ ಸತ್ತು ಬಾಬಿಲೋನಿನಲ್ಲಿ ಹೂಳಲ್ಪಡುವರು.’”


ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ನಾನು ಎದ್ದುನಿಂತು ಅವರಿಗೆ ವಿರುದ್ಧವಾಗಿ ಹೋರಾಡುವೆನು. ನಾನು ಹೆಸರುವಾಸಿಯಾದ ಬಾಬಿಲೋನ್ ನಗರವನ್ನು ನಾಶಮಾಡುವೆನು. ಬಾಬಿಲೋನಿನ ಎಲ್ಲಾ ಜನರನ್ನು ನಾಶಮಾಡುವೆನು. ಅವರ ಮಕ್ಕಳನ್ನು ಮತ್ತು ಮರಿಮಕ್ಕಳನ್ನು ನಾಶಮಾಡುವೆನು” ಯೆಹೋವನೇ ಈ ಮಾತುಗಳನ್ನು ನುಡಿದಿದ್ದಾನೆ.


ಬೇರೆ ಅನೇಕ ಅರಸರು ಸತ್ತುಹೋದರು. ಅವರೆಲ್ಲರಿಗೂ ಸ್ವಂತ ಸಮಾಧಿ ಇದೆ. ಆದರೆ ನೀನು ಅವರೊಂದಿಗೆ ಸೇರಲಾರೆ. ಯಾಕೆಂದರೆ ನಿನ್ನ ರಾಜ್ಯವನ್ನು ನೀನೇ ನಾಶಮಾಡಿರುವೆ. ನೀನು ನಿನ್ನ ಜನರನ್ನೇ ಸಾಯಿಸಿರುವೆ. ಆದರೆ ನೀನು ನಾಶಮಾಡಿದಂತೆ ನಾಶಮಾಡಲು ನಿನ್ನ ಮಕ್ಕಳಿಗೆ ಅವಕಾಶಕೊಡಲಾಗದು.


ಈಗ, ನಿನ್ನನ್ನೂ ನಿನ್ನ ಸಂತಾನದವರನ್ನೂ ಸದಾಕಾಲ ನಾಮಾನನ ರೋಗವು ಹಿಡಿದುಕೊಳ್ಳುವುದು. ನಿನಗೆ ಎಂದೆಂದಿಗೂ ಕುಷ್ಠರೋಗವಿರುವುದು!” ಎಂದು ಹೇಳಿದನು. ಗೇಹಜಿಯು ಎಲೀಷನನ್ನು ಬಿಟ್ಟುಹೋದಾಗ, ಗೇಹಜಿಯ ಚರ್ಮವು ಮಂಜುಗಡ್ಡೆಯಂತೆ ಬಿಳುಪಾಯಿತು! ಗೇಹಜಿಯು ಕುಷ್ಠರೋಗ ಪೀಡಿತನಾದನು.


ನಿಮ್ಮ ದೇವರಾದ ಯೆಹೋವನೆಂಬ ನನಗೆ ಸಲ್ಲತಕ್ಕ ಗೌರವವನ್ನು ನೀವು ಬೇರೆಯವರಿಗೆ ಸಲ್ಲಿಸಿದರೆ ನಾನು ನಿಮ್ಮನ್ನು ದ್ವೇಷಿಸುತ್ತೇನೆ. ನನಗೆ ವಿರುದ್ಧವಾಗಿ ಪಾಪಮಾಡುವವರ ದೋಷಫಲವನ್ನು ಅವರ ಮೂರು ನಾಲ್ಕು ತಲೆಮಾರುಗಳವರೆಗೂ ಬರಮಾಡುವೆನು.


ಅಂಥ ಪ್ರವಾದಿ ಅಥವಾ ಕನಸಿನ ಅರ್ಥ ಹೇಳುವವನನ್ನು ಕೊಂದು ಹಾಕಬೇಕು. ಯಾಕೆಂದರೆ ಅವನು ಯೆಹೋವನನ್ನು ತೊರೆಯಲು ಪ್ರೇರೇಪಿಸಿದನಲ್ಲಾ? ದೇವರಾದ ಯೆಹೋವನೇ ನಿಮ್ಮನ್ನು ಈಜಿಪ್ಟಿನಿಂದ ಬಿಡಿಸಿದವನು. ಆತನು ನಿಮಗೆ ಹೇಳಿದ ನಿಯಮಗಳಿಗೆ ವಿರುದ್ಧವಾಗಿ ನಡೆಯಲು ಪ್ರೇರೇಪಿಸುವವನನ್ನು ಕೊಲ್ಲಬೇಕು; ನಿಮ್ಮ ಮಧ್ಯದಿಂದ ಅಂಥ ದುಷ್ಟತನವನ್ನು ತೆಗೆದುಹಾಕಬೇಕು.


ಆಗ ಆ ಪ್ರವಾದಿಯು, “ಆದರೆ ನಾನೂ ನಿನ್ನಂತೆಯೇ ಒಬ್ಬ ಪ್ರವಾದಿ” ಎಂದು ಹೇಳಿದನು. ನಂತರ ವಯಸ್ಸಾದ ಪ್ರವಾದಿಯು ಅವನಿಗೆ “ಯೆಹೋವನಿಂದ ಒಬ್ಬ ದೇವದೂತನು ನನ್ನ ಬಳಿಗೆ ಬಂದಿದ್ದನು. ಆ ದೂತನು ನಿನ್ನನ್ನು ನನ್ನ ಮನೆಗೆ ಕರೆತರಲು ನಿನ್ನೊಂದಿಗೆ ಅನ್ನಪಾನಗಳನ್ನು ತೆಗೆದುಕೊಳ್ಳಲು ನನಗೆ ತಿಳಿಸಿದನು” ಎಂದು ಸುಳ್ಳು ಹೇಳಿದನು.


(ಯೆಹೋವನು ಯೆರೆಮೀಯನಿಗೆ ಈ ಅಪ್ಪಣೆಯನ್ನು ಕೊಟ್ಟನು.) ನೀನು ನೆಹೆಲಾಮ್ಯನಾದ ಶೆಮಾಯನಿಗೆ ಕೂಡ ಒಂದು ಸಂದೇಶವನ್ನು ಕೊಡು.


ಯೆಹೋವನಿಂದ ಯೆರೆಮೀಯನಿಗೆ ಈ ಸಂದೇಶ ಬಂದಿತು.


ಯೆಹೋವನಾದ ನಾನು ಯೆಹೋಯಾಕೀಮ ಮತ್ತು ಅವನ ಮಕ್ಕಳನ್ನು ದಂಡಿಸುವೆನು. ನಾನು ಅವನ ಅಧಿಕಾರಿಗಳನ್ನೂ ದಂಡಿಸುವೆನು. ಅವರು ದುಷ್ಟರಾದುದರಿಂದ ಹೀಗೆ ಮಾಡುವೆನು. ನಾನು ಅವರ ಮೇಲೂ ಜೆರುಸಲೇಮಿನಲ್ಲಿ ವಾಸಮಾಡುವ ಜನರೆಲ್ಲರ ಮೇಲೂ ಮತ್ತು ಯೆಹೂದದ ಜನರ ಮೇಲೂ ಭಯಂಕರವಾದ ಕೇಡನ್ನು ತರಲು ನಿಶ್ಚಯಿಸಿದ್ದೇನೆ. ನಾನು ಹೇಳಿದಂತೆ ಅವರಿಗೆ ಎಲ್ಲಾ ಕೆಡುಕನ್ನು ಉಂಟುಮಾಡುವೆನು. ಏಕೆಂದರೆ ಅವರು ನನ್ನ ಮಾತನ್ನು ಕೇಳಲಿಲ್ಲ.’”


ನನಗೆ ವಿರೋಧವಾಗಿ ಎದ್ದು ಪಾಪಮಾಡಿದ ಜನರನ್ನು ಅವರ ಸ್ವದೇಶದಿಂದ ತೆಗೆದುಬಿಡುವೆನು. ಅವರು ಇನ್ನೆಂದಿಗೂ ಇಸ್ರೇಲ್ ದೇಶಕ್ಕೆ ಹಿಂತಿರುಗಿ ಬರುವುದೇ ಇಲ್ಲ. ನಾನೇ ಯೆಹೋವನೆಂಬುದು ಆಗ ನಿಮಗೆ ತಿಳಿಯುವುದು.”


“ನನ್ನ ಜನರಲ್ಲಿ ಪಾಪಿಗಳು ಹೇಳುತ್ತಾರೆ: ‘ನಮಗೆ ಯಾವ ಕೇಡೂ ಸಂಭವಿಸುವುದಿಲ್ಲ.’ ಆದರೆ ಅವರೆಲ್ಲಾ ಕತ್ತಿಯಿಂದ ಸಾಯುವರು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು