Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 29:4 - ಪರಿಶುದ್ದ ಬೈಬಲ್‌

4 ಇಸ್ರೇಲರ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ತಾನು ಜೆರುಸಲೇಮಿನಿಂದ ಬಾಬಿಲೋನಿಗೆ ಬಂಧಿಗಳನ್ನಾಗಿ ಕಳುಹಿಸಿದ ಎಲ್ಲಾ ಜನರಿಗೆ ಈ ಮಾತುಗಳನ್ನು ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅದರಲ್ಲಿ, “ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ತಾನು ಯೆರೂಸಲೇಮಿನಿಂದ ಬಾಬಿಲೋನಿಗೆ ಸಾಗಿಸಿದ ಸೆರೆಯವರೆಲ್ಲರಿಗೂ ಹೀಗೆ ಹೇಳುತ್ತಾನೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 “ಇಸ್ರಯೇಲರ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರ ಸ್ವಾಮಿ ಜೆರುಸಲೇಮಿನಿಂದ ಬಾಬಿಲೋನಿಗೆ ಸಾಗಿಸಲಾಗಿರುವ ಸೆರೆಯವರೆಲ್ಲರಿಗೆ ಹೀಗೆಂದು ತಿಳಿಸುತ್ತಾರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಇಸ್ರಾಯೇಲ್ಯರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ತಾನು ಯೆರೂಸಲೇವಿುನಿಂದ ಬಾಬೆಲಿಗೆ ಸಾಗಿಸಿದ ಸೆರೆಯವರೆಲ್ಲರಿಗೂ ಹೀಗೆ ಹೇಳುತ್ತಾನೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಯೆರೂಸಲೇಮಿನಿಂದ ಬಾಬಿಲೋನಿಗೆ ನಾನು ಕರೆದೊಯ್ದ ಸೆರೆಯವರೆಲ್ಲರಿಗೆ ಹೇಳುವುದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 29:4
7 ತಿಳಿವುಗಳ ಹೋಲಿಕೆ  

ಇಸ್ರೇಲಿನ ದೇವರಾದ ಯೆಹೋವನು ಹೇಳಿದನು: “ಯೆಹೂದದ ಜನರನ್ನು ಅವರ ದೇಶದಿಂದ ತೆಗೆದುಕೊಂಡು ಹೋಗಲಾಯಿತು. ಅವರ ಶತ್ರು ಅವರನ್ನು ಬಾಬಿಲೋನಿಗೆ ತಂದನು. ಆ ಜನರು ಈ ಒಳ್ಳೆಯ ಅಂಜೂರದಂತಿರುವರು. ಆ ಜನರಿಗೆ ನಾನು ದಯೆತೋರುವೆನು.


ತುತ್ತೂರಿಯ ಎಚ್ಚರಿಕೆಯ ಶಬ್ಧವನ್ನು ಕೇಳಿದ ಜನರು ಖಂಡಿತವಾಗಿ ಹೆದರಿ ನಡುಗುವರು. ಒಂದು ಗಂಡಾಂತರವು ಪಟ್ಟಣಕ್ಕೆ ಬಂದಿರುವುದಾದರೆ ಅದನ್ನು ಬರಮಾಡಿದಾತನು ಯೆಹೋವನೇ.


ಬೆಳಕನ್ನೂ ಕತ್ತಲೆಯನ್ನೂ ಉಂಟುಮಾಡಿದವನು ನಾನೇ. ಸಮಾಧಾನವನ್ನು ತರುವವನೂ ತೊಂದರೆಗಳನ್ನು ಬರಮಾಡುವವನೂ ನಾನೇ. ಯೆಹೋವನಾದ ನಾನೇ ಇವೆಲ್ಲವನ್ನು ಮಾಡುವೆನು.


“ನಾನೀಗ ನನ್ನ ದ್ರಾಕ್ಷಿತೋಟಕ್ಕೆ ಏನು ಮಾಡುವೆನೆಂದು ತಿಳಿಸುವೆನು: ಅದರ ಸುತ್ತಲೂ ರಕ್ಷಣೆಗಾಗಿ ಹಾಕಿದ್ದ ಮುಳ್ಳಿನ ಬೇಲಿಯನ್ನು ಕಿತ್ತು ಸುಟ್ಟುಬಿಡುವೆನು. ಅದರ ಕಲ್ಲಿನ ಗೋಡೆಯನ್ನು ಕೆಡವಿ ತುಳಿದಾಟಕ್ಕೆ ಈಡುಮಾಡುವೆನು.


“ಮನೆಗಳನ್ನು ಕಟ್ಟಿ ಅವುಗಳಲ್ಲಿ ವಾಸಿಸಿರಿ. ಆ ಪ್ರದೇಶದಲ್ಲಿ ನೆಲೆಸಿರಿ. ತೋಟಗಳನ್ನು ಬೆಳೆಸಿರಿ ಮತ್ತು ನೀವು ಬೆಳೆಸಿದ ಆಹಾರವನ್ನು ಸೇವಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು