Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 29:7 - ಪರಿಶುದ್ದ ಬೈಬಲ್‌

7 ಅಂತೆಯೇ, ನಾನು ನಿಮ್ಮನ್ನು ಕಳುಹಿಸಿದ ನಗರಕ್ಕೆ ಒಳ್ಳೆಯದನ್ನು ಮಾಡಿರಿ. ನೀವು ವಾಸಮಾಡುತ್ತಿರುವ ನಗರಕ್ಕಾಗಿ ಯೆಹೋವನಿಗೆ ಪ್ರಾರ್ಥಿಸಿರಿ. ಏಕೆಂದರೆ ಆ ನಗರದಲ್ಲಿ ನೆಮ್ಮದಿಯಿದ್ದರೆ ನಿಮಗೂ ನೆಮ್ಮದಿ ಸಿಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಾನು ಯಾವ ಪಟ್ಟಣಕ್ಕೆ ನಿಮ್ಮನ್ನು ಸಾಗಿಸಿದೆನೋ, ಅದರ ಕ್ಷೇಮವನ್ನು ಹಾರೈಸಿ ಅದಕ್ಕಾಗಿ ಯೆಹೋವನನ್ನು ಪ್ರಾರ್ಥಿಸಿರಿ; ಅದರ ಕ್ಷೇಮವೇ ನಿಮ್ಮ ಕ್ಷೇಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನಾನು ಯಾವ ನಗರಕ್ಕೆ ನಿಮ್ಮನ್ನು ಸಾಗಿಸಿದ್ದೇನೋ ಅದರ ಕ್ಷೇಮವನ್ನು ಹಾರೈಸಿ, ಅದಕ್ಕಾಗಿ ಸರ್ವೇಶ್ವರನಾದ ನನ್ನನ್ನು ಪ್ರಾರ್ಥಿಸಿರಿ. ಅದರ ಕ್ಷೇಮವೇ ನಿಮ್ಮ ಕ್ಷೇಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನಾನು ಯಾವ ಪಟ್ಟಣಕ್ಕೆ ನಿಮ್ಮನ್ನು ಸಾಗಿಸಿದೆನೋ ಅದರ ಕ್ಷೇಮವನ್ನು ಹಾರೈಸಿ ಅದಕ್ಕಾಗಿ ಯೆಹೋವನನ್ನು ಪ್ರಾರ್ಥಿಸಿರಿ; ಅದರ ಕ್ಷೇಮವೇ ನಿಮ್ಮ ಕ್ಷೇಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನಾನು ನಿಮ್ಮನ್ನು ಸೆರೆಯಾಗಿ ಒಯ್ದ ಪಟ್ಟಣದ ಸಮಾಧಾನ ಮತ್ತು ಸಮೃದ್ಧಿಯನ್ನು ಹುಡುಕಿರಿ. ಅದಕ್ಕೋಸ್ಕರ ಯೆಹೋವ ದೇವರಿಗೆ ಪ್ರಾರ್ಥನೆಮಾಡಿರಿ. ಏಕೆಂದರೆ ಅದರ ಸಮಾಧಾನದಿಂದ ನಿಮಗೆ ಸಮಾಧಾನವಾಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 29:7
12 ತಿಳಿವುಗಳ ಹೋಲಿಕೆ  

ಅವುಗಳನ್ನು ಜೆರುಸಲೇಮಿನ ಯಾಜಕರಿಗೆ ಕೊಡಿರಿ. ಅವುಗಳನ್ನು ಯಜ್ಞವಾಗಿ ಸಮರ್ಪಿಸಿದಾಗ ಪರಲೋಕದ ದೇವರು ಅದನ್ನು ಮೆಚ್ಚುವನು. ಯಾಜಕರು ನನಗಾಗಿಯೂ ನನ್ನ ಮಕ್ಕಳಿಗಾಗಿಯು ಪ್ರಾರ್ಥಿಸಲಿ.


ಆದ್ದರಿಂದ ರಾಜನೇ, ನನ್ನ ಬುದ್ಧಿವಾದವನ್ನು ದಯವಿಟ್ಟು ಒಪ್ಪಿಕೊ. ನೀನು ಪಾಪಕೃತ್ಯಗಳನ್ನು ಮಾಡಬೇಡ. ನೀತಿಯನ್ನು ಅನುಸರಿಸು; ಕೆಟ್ಟದ್ದನ್ನು ಮಾಡಬೇಡ. ಬಡಜನರಿಗೆ ಕರುಣೆಯನ್ನು ತೋರು. ಇದರಿಂದ ನಿನ್ನ ನೆಮ್ಮದಿಯ ಕಾಲವು ಹೆಚ್ಚಾಗುವುದು. ಇದೇ ನನ್ನ ಬುದ್ಧಿವಾದ” ಎಂದು ಅರಿಕೆ ಮಾಡಿದನು.


ಪರಲೋಕದ ದೇವರು ಯಾವಯಾವ ವಸ್ತುಗಳಿಗಾಗಿ ಎಜ್ರನಿಗೆ ಆಜ್ಞಾಪಿಸಿರುವನೊ ಅವುಗಳನ್ನೆಲ್ಲ ನೀವು ಎಜ್ರನಿಗೆ ಸಂಪೂರ್ಣವಾಗಿಯೂ ಶೀಘ್ರವಾಗಿಯೂ ಒದಗಿಸಬೇಕು. ಇವುಗಳನ್ನು ಪರಲೋಕದ ದೇವರ ಆಲಯಕ್ಕಾಗಿ ಮಾಡಿರಿ. ನನ್ನ ರಾಜ್ಯದ ಮೇಲಾಗಲಿ ನನ್ನ ಮಕ್ಕಳ ಮೇಲಾಗಲಿ ದೇವರು ಸಿಟ್ಟುಗೊಳ್ಳುವುದು ನಮಗೆ ಇಷ್ಟವಿಲ್ಲ.


ನೀವೆಲ್ಲರೂ ಸರ್ಕಾರದ ಅಧಿಕಾರಿಗಳಿಗೆ ವಿಧೇಯರಾಗಿರಬೇಕು. ಪ್ರತಿಯೊಬ್ಬ ಅಧಿಕಾರಿಗೆ ಅಧಿಕಾರವನ್ನು ಕೊಟ್ಟಿರುವವನು ದೇವರೇ. ಈಗಿರುವ ಎಲ್ಲಾ ಅಧಿಕಾರಿಗಳಿಗೆ ದೇವರೇ ಅಧಿಕಾರವನ್ನು ಕೊಟ್ಟಿದ್ದಾನೆ.


ಆಗ ದಾನಿಯೇಲನು (ಬೇಲ್ತೆಶಚ್ಚರನು) ಸುಮಾರು ಒಂದು ಗಂಟೆಯವರೆಗೆ ಮೌನವಾಗಿದ್ದನು. ಅವನ ಬುದ್ಧಿಗೆ ತೋರಿದ ವಿಷಯಗಳು ಅವನನ್ನು ಗಾಬರಿಪಡಿಸಿದವು. ಆಗ ರಾಜನು, “ಬೇಲ್ತೆಶಚ್ಚರನೇ, ಕನಸು ಅಥವಾ ಕನಸಿನ ಅರ್ಥವು ನಿನ್ನನ್ನು ಭಯಗೊಳಿಸದಿರಲಿ” ಎಂದು ಧೈರ್ಯ ಹೇಳಿದನು. ಆಗ ಬೇಲ್ತೆಶಚ್ಚರನು ಅರಸನಿಗೆ, “ನನ್ನ ಒಡೆಯನೇ, ಈ ಕನಸು ನಿನ್ನ ವಿರೋಧಿಗಳಿಗೆ ಫಲಿಸಲಿ. ಇದರ ಅರ್ಥವು ನಿನ್ನ ವಿರೋಧಿಗಳ ಅನುಭವಕ್ಕೆ ಬರಲಿ ಎಂದು ನಾನು ಹಾರೈಸುತ್ತೇನೆ.


ಆದ್ದರಿಂದ ನೀವು ಸರ್ಕಾರಕ್ಕೆ ವಿಧೇಯರಾಗಬೇಕು. ನೀವು ದಂಡನೆಗೆ ಗುರಿಯಾಗಬಹುದೆಂಬ ಕಾರಣದಿಂದ ಮಾತ್ರವಲ್ಲದೆ, ನಿಮ್ಮ ಮನಸ್ಸಾಕ್ಷಿಯ ದೆಸೆಯಿಂದಲೂ ನೀವು ಅವರಿಗೆ ವಿಧೇಯರಾಗಬೇಕು.


ಜೆರುಸಲೇಮಿನ ಶಾಂತಿಗೋಸ್ಕರ ಪ್ರಾರ್ಥಿಸಿರಿ: “ನಿನ್ನನ್ನು ಪ್ರೀತಿಸುವ ಜನರು ಅಲ್ಲಿ ಶಾಂತಿಯನ್ನು ಕಂಡುಕೊಳ್ಳಲಿ.


ಯೆರೆಮೀಯನು ಜನರಿಗೆ ಹೇಳುತ್ತಿರುವ ವಿಷಯಗಳನ್ನು ಕೇಳಿದ ರಾಜಾಧಿಕಾರಿಗಳು ರಾಜನಾದ ಚಿದ್ಕೀಯನ ಬಳಿಗೆ ಹೋಗಿ, “ಯೆರೆಮೀಯನಿಗೆ ಮರಣದಂಡನೆಯಾಗಬೇಕು. ಇನ್ನೂ ನಗರದಲ್ಲಿರುವ ಸೈನಿಕರನ್ನೂ ಎಲ್ಲರನ್ನೂ ತನ್ನ ಮಾತುಗಳಿಂದ ಧೈರ್ಯಗೆಡಿಸುತ್ತಿದ್ದಾನೆ. ನಮಗೆ ಒಳ್ಳೆಯದಾಗಬೇಕೆಂದು ಅವನು ಬಯಸದೆ ಜೆರುಸಲೇಮಿನ ಜನರ ನಾಶನವನ್ನು ಬಯಸುತ್ತಾನೆ” ಎಂದು ಹೇಳಿದರು.


“ಆದ್ದರಿಂದ ಜನರಿಗೆ ಹೀಗೆ ಹೇಳು: ನಮ್ಮ ಒಡೆಯನಾದ ಯೆಹೋವನು ಹೇಳುವುದೇನೆಂದರೆ: ‘ನಾನು ನನ್ನ ಜನರನ್ನು ಬಹುದೂರದಲ್ಲಿರುವ ಜನಾಂಗಗಳ ಮಧ್ಯಕ್ಕೆ ಹೋಗುವಂತೆ ಮಾಡಿದ್ದು ನಿಜ. ನಾನು ಅನೇಕ ದೇಶಗಳಲ್ಲಿ ಅವರನ್ನು ಚದರಿಸಿರುತ್ತೇನೆ. ಅವರು ಪರದೇಶಗಳಲ್ಲಿರುವಾಗ ಸ್ವಲ್ಪಕಾಲ ನಾನೇ ಅವರಿಗೆ ದೇವಾಲಯವಾಗಿರುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು