Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 3:18 - ಪರಿಶುದ್ದ ಬೈಬಲ್‌

18 ಆ ಕಾಲದಲ್ಲಿ ಯೆಹೂದದ ಜನರು ಇಸ್ರೇಲ್ ಜನರನ್ನು ಕೂಡಿಕೊಳ್ಳುವರು. ಅವೆರಡೂ ಕೂಡಿ ಉತ್ತರದಿಕ್ಕಿನ ಪ್ರದೇಶದಿಂದ ಬರುವರು. ನಾನು ಅವರ ಪೂರ್ವಿಕರಿಗೆ ಕೊಟ್ಟ ಪ್ರದೇಶಕ್ಕೆ ಅವರು ಬರುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆ ಕಾಲದಲ್ಲಿ ಯೆಹೂದ ವಂಶವು ಇಸ್ರಾಯೇಲ್ ವಂಶದೊಡನೆ ಜೊತೆಯಾಗಿ ನಡೆಯುವುದು. ಎರಡೂ ಸೇರಿ ನಾನು ನಿಮ್ಮ ಪೂರ್ವಿಕರಿಗೆ ಬಾಧ್ಯವಾಗಿ ದಯಪಾಲಿಸಿದ ದೇಶಕ್ಕೆ ಉತ್ತರ ಸೀಮೆಯನ್ನು ಬಿಟ್ಟು ಬರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಆ ಕಾಲದಲ್ಲಿ ಜುದೇಯ ವಂಶವು ಇಸ್ರಯೇಲ್ ವಂಶದೊಡನೆ ಜೊತೆಯಾಗಿ ಬಾಳುವುದು. ಈ ಎರಡು ವಂಶಗಳೂ ಉತ್ತರ ಪ್ರಾಂತ್ಯವನ್ನು ಬಿಟ್ಟು ನಾನು ನಿಮ್ಮ ಪೂರ್ವಜರಿಗೆ ಬಾಧ್ಯವಾಗಿ ಕೊಟ್ಟ ನಾಡಿಗೆ ಬರುವುವು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆ ಕಾಲದಲ್ಲಿ ಯೆಹೂದವಂಶವು ಇಸ್ರಾಯೇಲ್ ವಂಶದೊಡನೆ ಜೊತೆಯಾಗಿ ನಡೆಯುವದು, ಎರಡೂ ಕಲೆತು ನಾನು ನಿಮ್ಮ ಪಿತೃಗಳಿಗೆ ಬಾಧ್ಯವಾಗಿ ದಯಪಾಲಿಸಿದ ದೇಶಕ್ಕೆ ಬಡಗಣ ಸೀಮೆಯೊಳಗಿಂದ ಬರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆ ಕಾಲದಲ್ಲಿ ಯೆಹೂದದ ವಂಶವು ಇಸ್ರಾಯೇಲ್ ವಂಶದೊಡನೆ ಜೊತೆಯಾಗಿ ಬಾಳುವುದು. ಈ ಎರಡು ವಂಶಗಳೂ ಉತ್ತರ ಪ್ರಾಂತಗಳನ್ನು ಬಿಟ್ಟು, ನಾನು ನಿಮ್ಮ ಪೂರ್ವಜರಿಗೆ ಬಾಧ್ಯವಾಗಿ ಕೊಟ್ಟ ನಾಡಿಗೆ ಬರುವುವು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 3:18
22 ತಿಳಿವುಗಳ ಹೋಲಿಕೆ  

ನಾನು ಇಸ್ರೇಲರನ್ನು ಉತ್ತರದ ದೇಶದಿಂದ ತರುವೆನು. ನಾನು ಜಗತ್ತಿನ ದೂರದೂರದ ಸ್ಥಳಗಳಿಂದ ಇಸ್ರೇಲರನ್ನು ಒಟ್ಟುಗೂಡಿಸುವೆನೆಂದು ತಿಳಿದುಕೊಳ್ಳಿರಿ. ಅವರಲ್ಲಿ ಕೆಲವರು ಕುರುಡರಾಗಿರುವರು; ಕುಂಟರಾಗಿರುವರು, ಕೆಲವು ಸ್ತ್ರೀಯರು ಗರ್ಭಿಣಿಯರಾಗಿದ್ದು ಹೆರಿಗೆಯ ದಿನಗಳು ತುಂಬಿದವರಾಗಿರುತ್ತಾರೆ. ಬಹಳಷ್ಟು ಜನರು ಹಿಂತಿರುಗಿಬರುತ್ತಾರೆ.


ನಾನು ನನ್ನ ಜನರನ್ನು ಅವರ ದೇಶದಲ್ಲಿ ಸ್ಥಾಪಿಸುವೆನು. ನಾನು ಕೊಟ್ಟಿರುವ ದೇಶದಿಂದ ಅವರು ಕೀಳಲ್ಪಡುವುದಿಲ್ಲ.” ನಿಮ್ಮ ದೇವರಾದ ಯೆಹೋವನು ಈ ಸಂಗತಿಗಳನ್ನು ಹೇಳಿದ್ದಾನೆ.


“ಆಗ ಇಸ್ರೇಲಿನ ಪ್ರಜೆಗಳು ಮತ್ತು ಯೆಹೂದ ಪ್ರಾಂತ್ಯದ ಪ್ರಜೆಗಳು ಒಂದಾಗಿ ಸೇರಲ್ಪಡುವರು. ತಮಗೆ ಒಬ್ಬ ಅರಸನನ್ನು ಅವರು ಆರಿಸಿಕೊಳ್ಳುವರು. ಅವರ ಜನಾಂಗಕ್ಕೆ ಆ ದೇಶವು ಸಾಲದೆ ಹೋಗುವದು. ಇಜ್ರೇಲನ ದಿನವು ನಿಜವಾಗಿಯೂ ಮಹತ್ವವುಳ್ಳದ್ದಾಗಿರುವದು.”


ಯೆಹೋವನು ಹೀಗೆನ್ನುತ್ತಾನೆ: “ಆ ಸಮಯದಲ್ಲಿ ಇಸ್ರೇಲಿನ ಮತ್ತು ಯೆಹೂದದ ಜನರು ಒಟ್ಟಿಗೆ ಸೇರುವರು. ಅವರು ಒಟ್ಟುಗೂಡಿ ಬಹಳವಾಗಿ ಗೋಳಾಡುವರು; ತಮ್ಮ ದೇವರಾದ ಯೆಹೋವನನ್ನು ಹುಡುಕಲು ಹೋಗುವರು.


ಆದರೆ ಹೊಸ ಕಾಲ ಬರಲಿದೆ. ಆಗ, ‘ಇಸ್ರೇಲರನ್ನು ಉತ್ತರದ ನಾಡಿನಿಂದಲೂ ಅವರನ್ನು ಚದರಿಸಿಬಿಟ್ಟಿದ್ದ ಎಲ್ಲ ದೇಶಗಳಿಂದಲೂ ಹೊರತಂದ ಯೆಹೋವನಾಣೆ’ ಎಂದು ಹೇಳುವರು. ಆಗ ಇಸ್ರೇಲರು ಸ್ವದೇಶದಲ್ಲಿ ನೆಲಸುವರು.”


ಆಗ ಅವರು ‘ಇಸ್ರೇಲರನ್ನು ಉತ್ತರದ ನಾಡಿನಿಂದಲೂ ಎಲ್ಲಾ ದೇಶಗಳಿಂದಲೂ ಹೊರತಂದ ಯೆಹೋವನ ಜೀವದಾಣೆ.’ ಇಸ್ರೇಲರನ್ನು ನಾನು ಅವರ ಪೂರ್ವಿಕರಿಗೆ ಕೊಟ್ಟ ದೇಶಕ್ಕೆ ಮತ್ತೆ ಕರೆದುಕೊಂಡು ಬರುವೆನು. ಆದ್ದರಿಂದಲೇ ಜನರು ಹೀಗೆ ಹೇಳುವರು.”


ಯೆರೆಮೀಯನೇ, ಹೋಗು. ಈ ಸಂದೇಶವನ್ನು ಉತ್ತರದಿಕ್ಕಿನಲ್ಲಿ ಸಾರು. ಯೆಹೋವನು ಹೀಗೆ ಹೇಳುತ್ತಾನೆ: “‘ವಿಶ್ವಾಸದ್ರೋಹಿಗಳಾದ ಇಸ್ರೇಲಿನ ಜನರೇ, ಹಿಂತಿರುಗಿ ಬನ್ನಿ.’ ‘ನಾನು ಕೋಪಮುಖದಿಂದ ನಿಮ್ಮನ್ನು ನೋಡುವುದನ್ನು ನಿಲ್ಲಿಸುವೆನು. ನಾನು ಕರುಣಾಶಾಲಿ, ನಿತ್ಯಕೋಪಿಯಲ್ಲ.’ ಇದು ಯೆಹೋವನ ನುಡಿ.


ಯೆಹೂದ ವಂಶವನ್ನು ನಾನು ಬಲಗೊಳಿಸುವೆನು. ಯೋಸೇಫನ ವಂಶದವರಿಗೆ ಜಯವಾಗುವಂತೆ ಮಾಡುವೆನು. ನಾನು ಅವರನ್ನು ಹಿಂದಕ್ಕೆ ಸುರಕ್ಷಿತವಾಗಿ ಕರೆದುಕೊಂಡು ಬರುವೆನು. ಅವರನ್ನು ಸಂತೈಸುವೆನು. ನಾನು ಎಂದಿಗೂ ಅವರನ್ನು ತೊರೆಯಲಿಲ್ಲವೆಂಬಂತೆ ಇರುವುದು. ನಾನು ಅವರ ದೇವರಾದ ಯೆಹೋವನು. ನಾನೇ ಅವರಿಗೆ ಸಹಾಯ ಮಾಡುವೆನು.


“ಎಫ್ರಾಯೀಮನು ಸುಳ್ಳುದೇವರುಗಳಿಂದ ನನ್ನನ್ನು ಸುತ್ತುವರಿದನು. ಇಸ್ರೇಲಿನ ಜನರು ನನಗೆ ವಿರುದ್ಧವಾಗಿ ಎದ್ದರು. ಆದರೆ ಅವರು ನಾಶವಾದರು. ಯೆಹೂದನು ಈಗಲೂ ದೇವರ ಜೊತೆಯಲ್ಲಿ ನಡೆಯುತ್ತಿದ್ದಾನೆ. ಯೆಹೂದನು ಪರಿಶುದ್ಧರಿಗೆ ನಿಷ್ಠೆಯಿಂದಿದ್ದಾನೆ.”


ಇದು ಯೆಹೋವನ ನುಡಿ. “ಆ ಸಮಯದಲ್ಲಿ ಜನರು ಇಸ್ರೇಲಿನ ದೋಷವನ್ನು ಕಂಡುಹಿಡಿಯಲು ಪ್ರಯತ್ನಿಸುವರು. ಆದರೆ ಯಾವ ದೋಷಗಳೂ ಇರುವದಿಲ್ಲ. ಜನರು ಯೆಹೂದದ ಪಾಪಗಳನ್ನು ಹುಡುಕುವ ಪ್ರಯತ್ನ ಮಾಡುವರು. ಆದರೆ ಯಾವ ಪಾಪಗಳೂ ಸಿಕ್ಕುವದಿಲ್ಲ. ಏಕೆಂದರೆ ಇಸ್ರೇಲಿನ ಮತ್ತು ಯೆಹೂದದ ಜನರಲ್ಲಿ ಅಳಿದುಳಿದ ಕೆಲವು ಜನರನ್ನು ನಾನು ರಕ್ಷಿಸುತ್ತೇನೆ. ಅವರ ಪಾಪಗಳನ್ನೆಲ್ಲ ಕ್ಷಮಿಸಿದ್ದೇನೆ.”


ಏಕೆಂದರೆ ನಾನು ನನ್ನ ಜನರಾದ ಇಸ್ರೇಲರನ್ನು ಮತ್ತು ಯೆಹೂದ್ಯರನ್ನು ಸೆರೆವಾಸದಿಂದ ಕರೆದುಕೊಂಡು ಬರುವ ದಿನಗಳು ಬರುತ್ತಿವೆ.” ಈ ಸಂದೇಶವು ಯೆಹೋವನಿಂದ ಬಂದದ್ದು. “ಆ ಜನರನ್ನು ನಾನು ಅವರ ಪೂರ್ವಿಕರಿಗೆ ಕೊಟ್ಟ ಪ್ರದೇಶದಲ್ಲಿ ನೆಲಸುವಂತೆ ಮಾಡುತ್ತೇನೆ. ಆಗ ನನ್ನ ಜನರು ಆ ಪ್ರದೇಶದ ಒಡೆತನ ಪಡೆಯುವರು.”


ನೀವು ನನ್ನ ಆಜ್ಞೆಯನ್ನು ಪಾಲಿಸಿದರೆ ಇಲ್ಲಿರಲು ನಾನು ನಿಮಗೆ ಆಸ್ಪದ ಕೊಡುತ್ತೇನೆ. ನಾನು ಈ ಪ್ರದೇಶವನ್ನು ನಿಮ್ಮ ಪೂರ್ವಿಕರಿಗೆ ಶಾಶ್ವತವಾದ ಸ್ವಾಸ್ತ್ಯವಾಗಿ ಕೊಟ್ಟಿದ್ದೇನೆ.


ಅವರು ಚೀಯೋನಿಗೆ ಹೋಗುವ ಮಾರ್ಗವನ್ನು ವಿಚಾರಿಸುವರು. ಆ ದಿಕ್ಕಿನಲ್ಲಿ ಹೋಗಲು ಪ್ರಾರಂಭಿಸುವರು. ‘ಬನ್ನಿ, ನಾವೆಲ್ಲರೂ ಯೆಹೋವನ ಆಶ್ರಯಪಡೆಯೋಣ. ಆತನೊಂದಿಗೆ ಶಾಶ್ವತವಾದ ಮತ್ತು ನಾವೆಂದೂ ಮರೆಯಲಾಗದ ಒಡಂಬಡಿಕೆಯನ್ನು ಮಾಡಿಕೊಳ್ಳೋಣ’ ಎಂದು ಅವರು ಹೇಳುವರು.


ಆದ್ದರಿಂದ ಹೀಗೆ ಹೇಳು: ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ನಾನು ನಿಮ್ಮನ್ನು ಜನಾಂಗಗಳಿಂದ ಒಟ್ಟುಗೂಡಿಸುವೆನು; ನೀವು ಚದರಿಸಲ್ಪಟ್ಟಿರುವ ದೇಶಗಳಿಂದ ನಾನು ನಿಮ್ಮನ್ನು ಒಟ್ಟುಗೂಡಿಸುವೆನು; ಮತ್ತು ನಾನು ನಿಮಗೆ ಇಸ್ರೇಲ್ ದೇಶವನ್ನು ಕೊಡುವೆನು.


ಯೆಹೋವನು ಹೀಗೆನ್ನುತ್ತಾನೆ, “ಅವಸರಪಡುತ್ತಾ ಉತ್ತರದ ದೇಶಗಳಿಂದ ಹೊರಬನ್ನಿರಿ. ಹೌದು, ನಾನು ನಿಮ್ಮ ಜನರನ್ನು ಪ್ರತಿಯೊಂದು ದಿಕ್ಕಿಗೂ ಚದರಿಸಿರುವುದು ನಿಜ.


ಯೆಹೋವನು ಅಬ್ರಾಮನಿಗೆ ಕಾಣಿಸಿಕೊಂಡು, “ನಿನ್ನ ಸಂತತಿಯವರಿಗೆ ಈ ದೇಶವನ್ನು ಕೊಡುವೆನು” ಎಂದು ಹೇಳಿದನು. ಆ ಸ್ಥಳದಲ್ಲಿ ಯೆಹೋವನು ಅಬ್ರಾಮನಿಗೆ ಕಾಣಿಸಿಕೊಂಡನು. ಆದ್ದರಿಂದ ಅಬ್ರಾಮನು ಯೆಹೋವನನ್ನು ಆರಾಧಿಸುವುದಕ್ಕಾಗಿ ಅಲ್ಲಿ ಒಂದು ಯಜ್ಞವೇದಿಕೆಯನ್ನು ಕಟ್ಟಿದನು.


“ಆದ್ದರಿಂದ ಭಯಪಡಬೇಡ, ನಾನೇ ನಿನ್ನೊಂದಿಗಿದ್ದೇನೆ. ನಾನು ನಿನ್ನ ಮಕ್ಕಳನ್ನು ಒಟ್ಟುಗೂಡಿಸಿ ನಿನ್ನ ಬಳಿಗೆ ಕರೆತರುವೆನು. ನಾನು ಪೂರ್ವಪಶ್ಚಿಮ ದಿಕ್ಕುಗಳಿಂದ ಅವರನ್ನು ಒಟ್ಟುಗೂಡಿಸುವೆನು.


ನಾನು ಉತ್ತರಕ್ಕೆ ‘ನನ್ನ ಜನರನ್ನು ಬಿಟ್ಟುಕೊಡು’ ಎಂದು ಹೇಳುವೆನು. ದಕ್ಷಿಣಕ್ಕೆ, ‘ನನ್ನ ಜನರನ್ನು ಸೆರೆಮನೆಯಲ್ಲಿರಿಸಬೇಡ’ ಎಂದು ಹೇಳುವೆನು. ಬಹುದೂರ ದೇಶಗಳಿಂದ ನನ್ನ ಮಕ್ಕಳನ್ನು ನನ್ನ ಬಳಿಗೆ ಕರೆದುಕೊಂಡು ಬಾ.


“ನಿಮ್ಮ ತಾಯಿಯೊಂದಿಗೆ ವಾದಿಸಿರಿ. ಯಾಕೆಂದರೆ ಆಕೆ ನನ್ನ ಹೆಂಡತಿಯಲ್ಲ. ನಾನು ಆಕೆಯ ಗಂಡನಲ್ಲ. ವೇಶ್ಯೆಯ ಹಾಗೆ ಆಕೆ ವರ್ತಿಸುವದನ್ನು ನಿಲ್ಲಿಸು ಎಂದು ಹೇಳಿರಿ. ಆಕೆಯ ಸ್ತನಗಳ ಮಧ್ಯದಿಂದ ಆಕೆಯ ಪ್ರಿಯತಮರನ್ನು ತೆಗೆದುಹಾಕಲು ಹೇಳಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು