Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 3:20 - ಪರಿಶುದ್ದ ಬೈಬಲ್‌

20 ಆದರೆ ನೀವು ಗಂಡನಿಗೆ ವಂಚಿಸುವ ಜಾರಿಣಿಯಂತಾದಿರಿ. ಇಸ್ರೇಲ್ ವಂಶದವರೇ, ನೀವು ನನಗೆ ದ್ರೋಹ ಮಾಡಿದಿರಿ” ಎಂದು ಯೆಹೋವನು ನುಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆದರೆ ಇಸ್ರಾಯೇಲ್ ವಂಶದವರೇ, ಒಬ್ಬ ಹೆಂಗಸು ಪತಿದ್ರೋಹ ಮಾಡಿದಂತೆ ನೀವು ನನಗೆ ದ್ರೋಹವನ್ನು ಮಾಡಿದ್ದೀರಿ” ಎಂದು ಯೆಹೋವನು ನುಡಿಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 “ಆದರೆ ಓ ಇಸ್ರಯೇಲ್ ವಂಶಜರೇ, ಒಬ್ಬ ಹೆಂಗಸು ಪತಿದ್ರೋಹ ಮಾಡಿದಂತೆ ನೀವು ನನಗೆ ದ್ರೋಹಮಾಡಿರುವುದು ನಿಶ್ಚಯ. ಇದು ಸರ್ವೇಶ್ವರನಾದ ನನ್ನ ನುಡಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಇಸ್ರಾಯೇಲ್ ವಂಶದವರೇ, ಒಬ್ಬ ಹೆಂಗಸು ಪತಿದ್ರೋಹ ಮಾಡಿದಂತೆ ನೀವು ನನಗೆ ದ್ರೋಹವನ್ನು ಮಾಡಿಯೇ ಇದ್ದೀರಿ ಎಂದು ಯೆಹೋವನು ಅನ್ನುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ನಿಶ್ಚಯವಾಗಿ ಹೆಂಡತಿ ತನ್ನ ಗಂಡನನ್ನು ವಂಚಿಸಿಬಿಡುವ ಕಾರಣ, ಓ ಇಸ್ರಾಯೇಲಿನ ಮನೆತನದವರೇ, ನನಗೆ ವಂಚನೆ ಮಾಡಿದ್ದೀರಿ,” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 3:20
11 ತಿಳಿವುಗಳ ಹೋಲಿಕೆ  

ಆದರೆ ನಾನು ಇವುಗಳನ್ನು ತಿಳಿಸಿದ ಮೇಲೂ ನೀವು ನನ್ನ ಮಾತನ್ನು ಕೇಳದೆಹೋದಿರಿ. ನೀವು ನನ್ನಿಂದ ಏನೂ ಕಲಿಯಲಿಲ್ಲ. ನಾನು ಏನು ಹೇಳಿದರೂ ನೀವು ಕೇಳಲಿಲ್ಲ. ಪ್ರಾರಂಭದಿಂದಲೇ ನೀವು ನನಗೆ ವಿರುದ್ಧವಾಗುವಿರಿ ಎಂದು ನಾನು ತಿಳಿದಿದ್ದೆನು. ನೀವು ಹುಟ್ಟಿದಾಗಿನಿಂದಲೇ ನನಗೆ ವಿರುದ್ಧವಾಗಿ ದಂಗೆ ಎದ್ದಿರುವಿರಿ.


ಇಸ್ರೇಲ್ ಜನರೂ ಯೆಹೂದದ ಜನರೂ ನನಗೆ ಎಲ್ಲಾ ವಿಧದಲ್ಲಿ ದ್ರೋಹವನ್ನು ಮಾಡಿರುವರು” ಎಂದು ಯೆಹೋವನು ಹೇಳಿದನು.


ಯೆಹೂದದ ಜನರು ಬೇರೆ ಜನರಿಗೆ ಮೋಸ ಮಾಡಿದರು. ಜೆರುಸಲೇಮಿನಲ್ಲಿಯೂ ಇಸ್ರೇಲಿನಲ್ಲಿಯೂ ಇರುವ ಜನರು ಭಯಂಕರ ಕೃತ್ಯಗಳನ್ನು ಮಾಡಿದರು. ದೇವರು ತನ್ನ ಆಲಯವನ್ನು ಪ್ರೀತಿಸುತ್ತಾನೆ. ಆದರೆ ಯೆಹೂದದ ಜನರು ಗೊತ್ತಿಲ್ಲದ ದೇವತೆಗಳನ್ನು ಪೂಜಿಸಲು ಪ್ರಾರಂಭಿಸುತ್ತಾರೆ.


ಆದರೆ ಜನರು ಆದಾಮನಂತೆ ಒಡಂಬಡಿಕೆಯನ್ನು ಮುರಿದುಹಾಕಿದರು. ಅವರ ದೇಶದಲ್ಲಿ ಅವರು ನನಗೆ ದ್ರೋಹಿಗಳಾದರು.


ಅವರು ಯೆಹೋವನಿಗೆ ನಂಬಿಗಸ್ತರಾಗಿರಲಿಲ್ಲ. ಅವರ ಮಕ್ಕಳು ಅನ್ಯರಿಗೆ ಹುಟ್ಟಿದ್ದಾರೆ. ಆದ್ದರಿಂದ ಈಗ ಆತನು ಅವರನ್ನೂ ಅವರ ದೇಶವನ್ನೂ ತಿರುಗಿ ನಾಶಮಾಡುವನು.”


ತಿರುಗಿ ಯೆಹೋವನು ನನಗೆ ಮತ್ತೆ ಹೇಳಿದ್ದೇನೆಂದರೆ, “ಗೋಮೆರಳಿಗೆ ಅನೇಕ ಪ್ರಿಯತಮರಿದ್ದಾರೆ, ಆದರೆ ನೀನು ಆಕೆಯನ್ನು ಪ್ರೀತಿ ಮಾಡುತ್ತಲೇ ಇರಬೇಕು. ಯಾಕೆಂದರೆ ಅದು ಯೆಹೋವನ ರೀತಿ. ಯೆಹೋವನು ಇಸ್ರೇಲ್ ಜನರನ್ನು ಪ್ರೀತಿಸುತ್ತಲೇ ಇದ್ದಾನೆ. ಆದರೆ ಅವರು ಅನ್ಯದೇವರುಗಳನ್ನು ಆರಾಧಿಸುತ್ತಲೇ ಇದ್ದಾರೆ. ಅವರು ಒಣದ್ರಾಕ್ಷಿಯ ಉಂಡೆಗಳನ್ನು ತಿನ್ನಲು ಆಶಿಸುತ್ತಾರೆ.”


ದೇವರ ಸ್ತುತಿಯನ್ನು ನಾವು ಭೂಮಿಯ ಎಲ್ಲಾ ಕಡೆಗಳಿಂದಲೂ ಕೇಳಿಸಿಕೊಳ್ಳುತ್ತೇವೆ. ಈ ಸ್ತುತಿಹಾಡುಗಳು ದೇವರ ಒಳ್ಳೆತನವನ್ನು ವರ್ಣಿಸುವವು. ಆದರೆ ನಾನು, “ಸಾಕು, ನನಗೆ ಸಾಕು. ನಾನು ನೋಡುವ ವಿಷಯಗಳು ಭಯಂಕರವಾಗಿವೆ. ದ್ರೋಹಿಗಳು ಜನರಿಗೆ ವಿರುದ್ಧವಾಗಿ ಎದ್ದು ಅವರಿಗೆ ಹಾನಿಮಾಡುವರು.”


ಯೆಹೋವನೇ, ನಾನು ನಿನ್ನ ಜೊತೆ ವಾದ ಮಾಡಿದರೆ, ನೀನು ಯಾವಾಗಲೂ ನ್ಯಾಯಪರನೆಂಬುದು ರುಜುವಾತಾಗುತ್ತದೆ. ಆದರೂ ನ್ಯಾಯಪೂರ್ಣವಲ್ಲದ ಕೆಲವು ವಿಷಯಗಳ ಬಗ್ಗೆ ನಾನು ನಿನ್ನನ್ನು ಕೇಳಬಯಸುತ್ತೇನೆ. ದುಷ್ಟರು ಏಕೆ ಅಭಿವೃದ್ಧಿ ಹೊಂದುತ್ತಾರೆ? ನಿನ್ನ ವಿಶ್ವಾಸಕ್ಕೆ ಪಾತ್ರರಾಗದವರು ನೆಮ್ಮದಿಯ ಜೀವನ ನಡೆಸಲು ಹೇಗೆ ಸಾಧ್ಯ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು