Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 30:13 - ಪರಿಶುದ್ದ ಬೈಬಲ್‌

13 ನಿಮ್ಮನ್ನು ನೋಡಿಕೊಳ್ಳಲು ಯಾರೂ ಇಲ್ಲ. ಆದ್ದರಿಂದ ನಿಮ್ಮ ಗಾಯಗಳು ವಾಸಿಯಾಗುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನಿನ್ನ ಪಾಲಿಗೆ ಯಾರೂ ಇಲ್ಲ, ನಿನ್ನ ಹುಣ್ಣಿಗೆ ಔಷಧವಿಲ್ಲ, ನಿನಗೆ ವಾಸಿಯಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ನಿನ್ನ ಪರ ವಾದಿಸುವವರಿಲ್ಲ, ನಿನ್ನ ವ್ರಣಕ್ಕೆ ಔಷಧವಿಲ್ಲ ನಿನ್ನನ್ನು ಆರೈಕೆ ಮಾಡುವವರಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನಿನ್ನ ಭಾಗಕ್ಕೆ ಯಾರೂ ಇಲ್ಲ, ನಿನ್ನ ವ್ರಣಕ್ಕೆ ಔಷಧವಿಲ್ಲ, ನಿನಗೆ ವಾಸಿಯಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನಿನಗೋಸ್ಕರ ವಾದಿಸುವವರು ಯಾರೂ ಇರುವುದಿಲ್ಲ. ನಿನ್ನ ಗಾಯವನ್ನು ನಿನಗೆ ಕಟ್ಟುವ ಹಾಗೆ ವಾಸಿಮಾಡುವ ಔಷಧಗಳು ನಿನಗೆ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 30:13
25 ತಿಳಿವುಗಳ ಹೋಲಿಕೆ  

“ಈಜಿಪ್ಟೇ, ಗಿಲ್ಯಾದಿಗೆ ಹೋಗಿ ಔಷಧಿಯನ್ನು ತೆಗೆದುಕೊಂಡು ಬಾ. ನೀನು ಬಗೆಬಗೆಯ ಔಷಧಿಗಳನ್ನು ಉಪಯೋಗಿಸಬಹುದು. ಆದರೆ ಅದರಿಂದ ಪ್ರಯೋಜನವಿಲ್ಲ. ನೀನು ಗುಣಹೊಂದುವುದಿಲ್ಲ.


ಗಿಲ್ಯಾದಿನಲ್ಲಿ ಖಂಡಿತವಾಗಿಯೂ ಔಷಧವಿದೆ. ಖಂಡಿತವಾಗಿಯೂ ಅಲ್ಲಿ ಒಬ್ಬ ವೈದ್ಯನಿದ್ದಾನೆ. ಆದರೆ ನನ್ನ ಜನರ ಗಾಯಗಳು ಗುಣವಾಗಲಿಲ್ಲವೇಕೆ?


“‘ಅನಂತರ ನಾನು ಆ ನಗರದ ಜನರನ್ನು ಕ್ಷಮಿಸುವೆನು. ಆ ಜನರು ಶಾಂತಿಯನ್ನೂ ಸುರಕ್ಷಣೆಯನ್ನೂ ಪಡೆಯುವಂತೆ ಮಾಡುವೆನು.


ಇದು ಯೆಹೋವನ ನುಡಿ: “ನಾನು ಪುನಃ ನಿಮಗೆ ಆರೋಗ್ಯವನ್ನು ಕೊಡುವೆನು; ನಿಮ್ಮ ಗಾಯಗಳನ್ನು ವಾಸಿಮಾಡುವೆನು. ಏಕೆಂದರೆ ಚೀಯೋನ್ ಭ್ರಷ್ಟಳಾದಳೆಂದೂ ‘ಯಾರಿಗೂ ಬೇಡವಾದ ನಗರ’ವೆಂದೂ ಬೇರೆಯವರು ಹೇಳಿದರು.”


ನನ್ನ ಪ್ರಿಯ ಮಕ್ಕಳೇ, ನೀವು ಪಾಪಗಳನ್ನು ಮಾಡದಿರಲೆಂದು ನಾನು ನಿಮಗೆ ಈ ಪತ್ರವನ್ನು ಬರೆಯುತ್ತಿದ್ದೇನೆ. ಆದರೆ ಯಾರಾದರೂ ಪಾಪವನ್ನು ಮಾಡಿದರೆ ನಮಗೆ ಸಹಾಯ ಮಾಡಲು ಯೇಸು ಕ್ರಿಸ್ತನಿದ್ದಾನೆ. ನೀತಿವಂತನಾಗಿರುವ ಆತನು ತಂದೆಯಾದ ದೇವರ ಬಳಿಯಲ್ಲಿದ್ದಾನೆ.


ಕ್ರಿಸ್ತನು ನಮ್ಮ ಪಾಪಗಳನ್ನೆಲ್ಲಾ ತನ್ನ ದೇಹದಲ್ಲಿ ಹೊತ್ತುಕೊಂಡು ಶಿಲುಬೆಯನ್ನೇರಿದನು. ನಾವು ಪಾಪಕ್ಕೋಸ್ಕರ ಜೀವಿಸದೆ, ನೀತಿವಂತರಾಗಿ ಜೀವಿಸಬೇಕೆಂಬುದೇ ಆತನ ಉದ್ದೇಶವಾಗಿತ್ತು. ಆತನ (ಕ್ರಿಸ್ತನ) ಬಾಸುಂಡೆಗಳಿಂದ ನಿಮಗೆ ಗುಣವಾಯಿತು.


ನಿನೆವೆಯೇ, ನೀನು ತೀವ್ರವಾದ ಗಾಯಹೊಂದಿರುವೆ. ಯಾವದೂ ನಿನ್ನನ್ನು ಗುಣಪಡಿಸಲಾರದು. ನಿನ್ನ ನಾಶನದ ಸುದ್ದಿ ಕೇಳಿದವರೆಲ್ಲರೂ ಚಪ್ಪಾಳೆ ತಟ್ಟುವರು. ಅವರು ಹರ್ಷಿಸುವರು. ಯಾಕೆಂದರೆ ನಿನಗಾದ ತೀವ್ರ ಗಾಯದ ನೋವನ್ನು ಅವರೆಲ್ಲರೂ ಅನುಭವಿಸಿದರು.


ಯೆಹೋವನು ಹೇಳುವುದೇನೆಂದರೆ, “ಅವರು ನನ್ನನ್ನು ತೊರೆದುಬಿಟ್ಟಿದ್ದನ್ನು ನಾನು ಕ್ಷಮಿಸುವೆನು. ಅವರನ್ನು ಅಧಿಕವಾಗಿಯೂ ಸ್ವಇಚ್ಛೆಯಿಂದಲೂ ಪ್ರೀತಿಸುವೆನು. ಈಗ ಅವರ ಮೇಲೆ ನಾನು ಕೋಪಿಸುವದಿಲ್ಲ.


“ಬನ್ನಿರಿ, ನಾವು ಯೆಹೋವನ ಬಳಿಗೆ ಹಿಂತಿರುಗೋಣ. ಆತನು ನಮಗೆ ಗಾಯ ಮಾಡಿದರೂ ಗುಣಮಾಡುವನು. ನಮ್ಮ ಗಾಯಗಳಿಗೆ ಬಟ್ಟೆಯನ್ನು ಸುತ್ತುವನು.


“ನನ್ನ ಕೋಪದಿಂದ ದೇಶವು ನಾಶವಾಗದಂತೆ ಅದನ್ನು ರಕ್ಷಿಸಲು ಗೋಡೆಯನ್ನು ಸರಿಪಡಿಸುವುದಕ್ಕಾಗಿಯೂ ಗೋಡೆಯು ಒಡೆದುಹೋಗಿದ್ದ ಸ್ಥಳದಲ್ಲಿ ನಿಂತುಕೊಳ್ಳುವುದಕ್ಕಾಗಿ ಅವರಲ್ಲಿ ನಾನು ಒಬ್ಬನನ್ನು ಎದುರುನೋಡಿದೆ. ಆದರೆ ಯಾರೂ ನನಗೆ ಸಿಗಲಿಲ್ಲ.


ಜನರಿಗೆ ಸಹಾಯ ಮಾಡುವವರು ಇಲ್ಲದೆ ಇರುವುದನ್ನು ಕಂಡು ಯೆಹೋವನು ಆಶ್ಚರ್ಯಚಕಿತನಾಗಿದ್ದಾನೆ. ಆದ್ದರಿಂದ ಯೆಹೋವನು ತನ್ನ ಸ್ವಂತ ಶಕ್ತಿಯನ್ನೂ ನೀತಿಯನ್ನೂ ಬಳಸಿ ಜನರನ್ನು ರಕ್ಷಿಸಿದನು.


ನಿಮ್ಮ ಅಂಗಾಲಿನಿಂದ ಹಿಡಿದು ನಡುನೆತ್ತಿಯವರೆಗೂ ನಿಮ್ಮ ದೇಹದಲ್ಲೆಲ್ಲಾ ಗಾಯಗಳೂ ಬಾಸುಂಡೆಗಳೂ ಹುಣ್ಣುಗಳೂ ತುಂಬಿಕೊಂಡಿವೆ. ಆದರೆ ಆ ಹುಣ್ಣುಗಳಿಗೆ ನೀವು ಸರಿಯಾಗಿ ಚಿಕಿತ್ಸೆ ಕೊಡಲಿಲ್ಲ; ಅವುಗಳನ್ನು ಒರೆಸಲಿಲ್ಲ, ಕಟ್ಟಲಿಲ್ಲ.


ನಾನು ಸುತ್ತಮುತ್ತ ನೋಡಿದರೂ ನನ್ನ ಸ್ನೇಹಿತರಲ್ಲಿ ಯಾರೂ ಕಾಣುತ್ತಿಲ್ಲ. ಓಡಿಹೋಗಲು ನನಗೆ ಯಾವ ಸ್ಥಳವೂ ಇಲ್ಲ. ನನ್ನನ್ನು ರಕ್ಷಿಸಲು ಯಾರೂ ಪ್ರಯತ್ನಿಸುತ್ತಿಲ್ಲ.


ಆತನು ಅವರನ್ನು ನಾಶಮಾಡಬೇಕೆಂದಿದ್ದನು. ಆದರೆ ಆತನು ಆರಿಸಿಕೊಂಡಿದ್ದ ಮೋಶೆಯು ಮಧ್ಯಸ್ಥನಾಗಿ ಅವರನ್ನು ನಾಶಮಾಡದಂತೆ ಆತನ ಕೋಪವನ್ನು ಶಾಂತಪಡಿಸಿದನು.


ಆದರೆ ದೇವರು ಬಡಜನರಿಗೆ ಸಹಾಯಮಾಡದಿರಲು ನಿರ್ಧರಿಸಿದರೆ, ಆತನನ್ನು ದೋಷಿಯೆಂದು ತೀರ್ಪುಮಾಡುವವನು ಯಾರು? ದೇವರು ತನ್ನ ಮುಖವನ್ನು ಅವರಿಗೆ ಮರೆಮಾಡಿಕೊಂಡರೆ ಆತನನ್ನು ನೋಡಬಲ್ಲವರು ಯಾರು? ಮನುಷ್ಯರನ್ನೂ ಜನಾಂಗಗಳನ್ನೂ ಆಳುವವನು ದೇವರೇ.


ಗಾಯ ಮಾಡುವವನೂ ಗಾಯ ಕಟ್ಟುವವನೂ ಆತನೇ. ಆತನು ಗಾಯಮಾಡಿದರೂ ಆತನ ಕೈಗಳೇ ವಾಸಿಮಾಡುತ್ತವೆ.


“‘ನಾನೇ ದೇವರು, ನನ್ನ ಹೊರತು ಬೇರೆ ದೇವರಿಲ್ಲ. ಜನರಿಗೆ ಮರಣವನ್ನೂ ಜೀವವನ್ನೂ ಕೊಡುವವನು ನಾನೇ. ಅವರಿಗೆ ಗಾಯ ಮಾಡುವವನೂ ನಾನೇ, ಅದನ್ನು ಗುಣಮಾಡುವವನೂ ನಾನೇ. ನನ್ನ ಶಕ್ತಿಯ ಹಿಡಿತದಿಂದ ಇನ್ನೊಬ್ಬನನ್ನು ರಕ್ಷಿಸಲು ಯಾರಿಗೂ ಸಾಧ್ಯವಿಲ್ಲ.


ಆತನು ಅವರಿಗೆ, “ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಶ್ರದ್ಧೆಯಿಂದ ಕೇಳಿ ಆತನ ದೃಷ್ಟಿಗೆ ಯೋಗ್ಯವಾದವುಗಳನ್ನು ಮಾಡಬೇಕು; ಆತನ ಆಜ್ಞೆಗಳಿಗೆ ವಿಧೇಯರಾಗಿದ್ದು ಆತನ ಕಟ್ಟಳೆಗಳನ್ನೆಲ್ಲಾ ಅನುಸರಿಸಬೇಕು. ಆಗ ನಾನು ಈಜಿಪ್ಟಿನವರಿಗೆ ಉಂಟುಮಾಡಿದ ಕಾಯಿಲೆಗಳಲ್ಲಿ ಒಂದನ್ನೂ ನಿಮಗೆ ಬರಗೊಡಿಸುವುದಿಲ್ಲ. ಯೆಹೋವನೆಂಬ ನಾನೇ ನಿಮಗೆ ಆರೋಗ್ಯದಾಯಕನಾಗಿದ್ದೇನೆ” ಎಂದು ಹೇಳಿದನು.


ಯೆಹೋವನೇ, ನೀನು ನನ್ನನ್ನು ವಾಸಿಮಾಡಿದರೆ ನಿಜವಾಗಿಯೂ ನಾನು ಗುಣಹೊಂದುತ್ತೇನೆ. ನನ್ನನ್ನು ರಕ್ಷಿಸು, ಆಗ ನಿಜವಾಗಿಯೂ ರಕ್ಷಣೆ ಹೊಂದಿದವನಾಗುವೆನು. ಯೆಹೋವನೇ, ನಾನು ನಿನ್ನನ್ನು ಸ್ತುತಿಸುತ್ತೇನೆ.


ಯೆಹೋವನೇ, ನೀನು ಯೆಹೂದ ಜನಾಂಗವನ್ನು ಸಂಪೂರ್ಣವಾಗಿ ತಿರಸ್ಕರಿಸಿರುವೆಯಾ? ಯೆಹೋವನೇ, ನೀನು ಚೀಯೋನನ್ನು ದ್ವೇಷಿಸುವೆಯಾ? ನಾವು ಪುನಃ ಗುಣಹೊಂದಲಾರದ ಹಾಗೆ ನಮ್ಮನ್ನು ಹೊಡೆದು ಗಾಯಗೊಳಿಸಿರುವೆಯಲ್ಲ. ನೀನು ಹೀಗೇಕೆ ಮಾಡಿದೆ? ನಾವು ನೆಮ್ಮದಿಯನ್ನು ನಿರೀಕ್ಷಿಸಿದೆವು, ಆದರೆ ಒಳ್ಳೆಯದೇನೂ ಆಗಲಿಲ್ಲ. ನಾವು ಕ್ಷೇಮವನ್ನು ಎದುರುನೋಡುತ್ತಿದ್ದೆವು. ಆದರೆ ಕೇವಲ ಭಯ ನಮ್ಮೆದುರಿಗೆ ಬಂದಿತು.


ಬಾವಿಯಲ್ಲಿ ಹೊಸ ನೀರು ಬರುವಂತೆ ಜೆರುಸಲೇಮಿನಲ್ಲಿ ಹೊಸಹೊಸ ದುಷ್ಟತನ ಉಂಟಾಗುತ್ತದೆ. ಈ ಪಟ್ಟಣದಲ್ಲಿ ಬಲಾತ್ಕಾರ ಮತ್ತು ವಿನಾಶಗಳೇ ಕೇಳಿಬರುತ್ತವೆ. ನನಗೆ ಯಾವಾಗಲೂ ಜೆರುಸಲೇಮಿನ ರೋಗ ಮತ್ತು ಗಾಯಗಳು ಕಣ್ಣಿಗೆ ಬೀಳುತ್ತವೆ.


“ನರಪುತ್ರನೇ, ನಾನು ಈಜಿಪ್ಟಿನ ರಾಜನಾದ ಫರೋಹನ ಕೈಯ ಬಲವನ್ನು ಮುರಿದಿದ್ದೇನೆ. ಯಾರೂ ಅವನನ್ನು ಶೂಶ್ರೂಷೆ ಮಾಡಲಾರರು. ಅದು ಗುಣವಾಗದು. ಅವನ ಕೈಗೆ ಖಡ್ಗ ಹಿಡಿದುಕೊಳ್ಳುವಷ್ಟೂ ಬಲವಿರದು.”


ನನ್ನ ಪ್ರಿಯ ಜೆರುಸಲೇಮೇ, ನಾನು ನಿನ್ನ ಬಗ್ಗೆ ಏನು ಹೇಳಲಿ? ನಾನು ನಿನ್ನನ್ನು ಯಾವುದಕ್ಕೆ ಹೋಲಿಸಲಿ? ನೀನು ಎಂಥವಳೆಂದು ಹೇಳಲಿ? ನನ್ನ ಚೀಯೋನೇ, ನಾನು ನಿನ್ನನ್ನು ಹೇಗೆ ಸಂತೈಸಲಿ. ನಿನ್ನ ವಿನಾಶವು ಸಾಗರದಷ್ಟು ಅಪಾರ. ಯಾರೂ ನಿನ್ನನ್ನು ಸ್ವಸ್ಥ ಮಾಡಲಾರರು ಎಂದೆನಿಸುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು