Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 30:15 - ಪರಿಶುದ್ದ ಬೈಬಲ್‌

15 ಇಸ್ರೇಲೇ, ಯೆಹೂದವೇ, ನೀವು ನಿಮ್ಮ ಗಾಯಗಳಿಗಾಗಿ ಏಕೆ ಅರಚುವಿರಿ? ನಿಮ್ಮ ಗಾಯಗಳು ಆಳವಾಗಿವೆ ಮತ್ತು ಅದಕ್ಕೆ ಔಷಧಿಯಿಲ್ಲ. ಯೆಹೋವನಾದ ನಾನು ನಿಮ್ಮ ಮಹಾಪರಾಧಕ್ಕಾಗಿ ಹೀಗೆಲ್ಲ ಮಾಡಿದೆ. ನಾನು ನಿಮ್ಮ ಅನೇಕ ಪಾಪಗಳಿಗಾಗಿ ಹೀಗೆಲ್ಲ ಮಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅಯ್ಯೋ, ನೋವು ನಿಲ್ಲದು ಎಂದು ನಿನ್ನ ಪೆಟ್ಟಿಗಾಗಿ ಏಕೆ ಅರಚಿಕೊಳ್ಳುತ್ತೀ? ನಿನ್ನ ಅಪರಾಧವು ಹೆಚ್ಚಿ ಪಾಪಗಳು ಬಹಳವಾದುದರಿಂದ ನಿನಗೆ ಇದನ್ನೆಲ್ಲಾ ಮಾಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ‘ಅಯ್ಯೋ ನೋವು ನಿಲ್ಲದಿದೆ,’ ಎಂದು ನಿನ್ನ ಗಾಯಕ್ಕಾಗಿ ಗೋಳಿಡುತ್ತಿರುವೆ ಏಕೆ? ನಿನ್ನ ಅಪರಾಧ ಹೆಚ್ಚಿದೆ, ಪಾಪಗಳು ಬಹಳವಿವೆ ಎಂದೇ ಇದನ್ನೆಲ್ಲ ನಿನಗೆ ಮಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅಯ್ಯೋ, ನೋವು ನಿಲ್ಲದು ಎಂದು ನಿನ್ನ ವ್ರಣಕ್ಕಾಗಿ ಏಕೆ ಅರಚಿಕೊಳ್ಳುತ್ತೀ? ನಿನ್ನ ಅಪರಾಧವು ಹೆಚ್ಚಿ ಪಾಪಗಳು ಬಹಳವಾದದರಿಂದ ನಿನಗೆ ಇದನ್ನೆಲ್ಲಾ ಮಾಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನಿನ್ನ ಗಾಯದ ನೋವಿನ ನಿಮಿತ್ತ ಏಕೆ ಕೂಗುತ್ತೀ? ನಿನ್ನ ದುಃಖವು ಗುಣವಾಗದಂಥಾದ್ದೇ. ನಿನ್ನ ಅಕ್ರಮ ಬಹಳವಾಗಿರುವುದರಿಂದಲೂ, ನಿನ್ನ ಪಾಪಗಳು ಪ್ರಬಲವಾಗಿರುವುದರಿಂದಲೂ ಇವುಗಳನ್ನು ನಿನಗೆ ಮಾಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 30:15
45 ತಿಳಿವುಗಳ ಹೋಲಿಕೆ  

ನೀವು ಅನೇಕ ಜನಾಂಗಗಳೊಡನೆ ಸ್ನೇಹ ಮಾಡಿದಿರಿ. ಆದರೆ ಆ ಜನಾಂಗಗಳು ನಿಮ್ಮ ಕಡೆಗೆ ಗಮನಕೊಡುವದಿಲ್ಲ. ನಿಮ್ಮ ‘ಸ್ನೇಹಿತರು’ ನಿಮ್ಮನ್ನು ಮರೆತಿದ್ದಾರೆ. ನಾನು ಶತ್ರುವಿನಂತೆ ನಿಮ್ಮನ್ನು ನೋಯಿಸಿದೆ. ನಾನು ನಿಮಗೆ ಬಹಳ ಕಠಿಣವಾದ ಶಿಕ್ಷೆಯನ್ನು ಕೊಟ್ಟೆ. ನಿಮ್ಮ ಮಹಾಪರಾಧಗಳಿಗಾಗಿ ನಾನು ಹೀಗೆ ಮಾಡಿದೆ. ನಿಮ್ಮ ಅನೇಕ ಪಾಪಗಳಿಗಾಗಿ ನಾನು ಹೀಗೆ ಮಾಡಿದೆ.


ಯೆಹೋವನು ಹೀಗೆನ್ನುತ್ತಾನೆ: “ಇಸ್ರೇಲಿನ ಮತ್ತು ಯೆಹೂದದ ಜನರಾದ ನಿಮಗೆ ಗುಣವಾಗದ ಗಾಯವಾಗಿದೆ. ನಿಮಗೆ ವಾಸಿಯಾಗದ ನೋವಾಗಿದೆ.


ನಾನು ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದ್ದೇನೆ. ಆದ್ದರಿಂದ ಆತನು ನನ್ನ ಮೇಲೆ ಕೋಪಿಸಿಕೊಂಡಿದ್ದಾನೆ. ಆದರೆ ನನ್ನ ಪರವಾಗಿ ಆತನು ವಾದಿಸುತ್ತಾನೆ. ನನಗೆ ಒಳ್ಳೆಯದನ್ನೇ ಆತನು ಮಾಡುತ್ತಾನೆ. ಆ ಬಳಿಕ ನನ್ನನ್ನು ಹೊರಗೆ ಬೆಳಕಿಗೆ ತರುವನು. ಆತನು ನೀತಿವಂತನೆಂಬುದು ಆಗ ನನಗೆ ತಿಳಿಯುವುದು.


ಸಮಾರ್ಯದ ಗಾಯವು ವಾಸಿಯಾಗದು. ಆಕೆಯ ರೋಗವು (ಪಾಪ) ಯೆಹೂದಕ್ಕೆ ಹಬ್ಬಿಯದೆ. ಅದು ನನ್ನ ಜನರ ಪಟ್ಟಣದ ಹೆಬ್ಬಾಗಿಲಿನವರೆಗೆ ಹೋಗಿದೆ. ಜೆರುಸಲೇಮಿನ ತನಕ ಪಸರಿಸಿಯದೆ.


ಜೆರುಸಲೇಮಿನ ಪ್ರವಾದಿಗಳು ಪಾಪ ಮಾಡಿದ್ದರಿಂದಲೇ ಇದು ಸಂಭವಿಸಿತು. ಜೆರುಸಲೇಮಿನ ಯಾಜಕರು ದುಷ್ಕೃತ್ಯಗಳನ್ನು ಮಾಡಿದ್ದದರಿಂದಲೇ ಇದು ಸಂಭವಿಸಿತು. ಆ ಜನರು ಜೆರುಸಲೇಮ್ ಪಟ್ಟಣದಲ್ಲಿ ಒಳ್ಳೆಯ ಜನರ ರಕ್ತವನ್ನು ಸುರಿಸಿದ್ದರು.


ಜೀವಂತವಾಗಿರುವ ಯಾವ ವ್ಯಕ್ತಿಯೇ ಆಗಲಿ ತನ್ನ ಪಾಪಗಳ ನಿಮಿತ್ತ ಯೆಹೋವನ ಶಿಕ್ಷೆಗೆ ಗುರಿಯಾಗುವಾಗ ದೂರು ಹೇಳಕೂಡದು.


ಜೆರುಸಲೇಮಿನ ಶತ್ರುಗಳು ಗೆದ್ದಿದ್ದಾರೆ. ಅವಳ ಶತ್ರುಗಳು ಜಯಶೀಲರಾಗಿದ್ದಾರೆ. ಯೆಹೋವನು ಅವಳನ್ನು ದಂಡಿಸಿದ ಕಾರಣ ಹೀಗಾಯಿತು. ಅವಳ ಅನೇಕ ಪಾಪಗಳಿಗಾಗಿ ಆತನು ಜೆರುಸಲೇಮನ್ನು ದಂಡಿಸಿದನು. ಅವಳ ಮಕ್ಕಳು ದೂರಹೋಗಿದ್ದಾರೆ. ಅವರು ವೈರಿಗಳ ಸೆರೆಯಾಳುಗಳಾಗಿ ದೂರ ಹೋಗಿದ್ದಾರೆ.


“ಈಜಿಪ್ಟೇ, ಗಿಲ್ಯಾದಿಗೆ ಹೋಗಿ ಔಷಧಿಯನ್ನು ತೆಗೆದುಕೊಂಡು ಬಾ. ನೀನು ಬಗೆಬಗೆಯ ಔಷಧಿಗಳನ್ನು ಉಪಯೋಗಿಸಬಹುದು. ಆದರೆ ಅದರಿಂದ ಪ್ರಯೋಜನವಿಲ್ಲ. ನೀನು ಗುಣಹೊಂದುವುದಿಲ್ಲ.


ಇದು ಯೆಹೋವನ ನುಡಿ: “ನಾನು ಪುನಃ ನಿಮಗೆ ಆರೋಗ್ಯವನ್ನು ಕೊಡುವೆನು; ನಿಮ್ಮ ಗಾಯಗಳನ್ನು ವಾಸಿಮಾಡುವೆನು. ಏಕೆಂದರೆ ಚೀಯೋನ್ ಭ್ರಷ್ಟಳಾದಳೆಂದೂ ‘ಯಾರಿಗೂ ಬೇಡವಾದ ನಗರ’ವೆಂದೂ ಬೇರೆಯವರು ಹೇಳಿದರು.”


ಹೀಗಿದ್ದರೂ ನನಗೇಕೆ ವ್ಯಥೆ ಉಂಟಾಗುತ್ತಿದೆ ಎಂಬುದು ನನಗೆ ಅರ್ಥವಾಗುತ್ತಿಲ್ಲ. ನನ್ನ ಗಾಯ ಏಕೆ ಗುಣವಾಗುತ್ತಿಲ್ಲ? ಏಕೆ ವಾಸಿಯಾಗುತ್ತಿಲ್ಲ ಎಂಬುದು ನನಗೆ ತಿಳಿಯದು. ಯೆಹೋವನೇ, ನಿನ್ನಲ್ಲಿ ಬದಲಾವಣೆಯಾಗಿದೆ ಎಂದು ನನಗೆ ಅನಿಸುತ್ತಿದೆ. ನೀನು ಪ್ರವಾಹ ನಿಂತುಹೋದ ನೀರಿನ ಬುಗ್ಗೆಯಂತಿರುವೆ.


“ಯೆಹೂದದ ಜನರೇ, ನೀವು ಅನೇಕ ವಿಗ್ರಹಗಳನ್ನು ಇಟ್ಟುಕೊಂಡಿದ್ದೀರಿ. ಯೆಹೂದದಲ್ಲಿ ಎಷ್ಟು ಪಟ್ಟಣಗಳಿವೆಯೋ, ಅಷ್ಟು ವಿಗ್ರಹಗಳಿವೆ. ತುಚ್ಛ ದೇವರಾದ ಬಾಳನನ್ನು ಪೂಜಿಸಲು ನೀವು ಅನೇಕ ಬಲಿಪೀಠಗಳನ್ನು ಕಟ್ಟಿಕೊಂಡಿದ್ದೀರಿ. ಜೆರುಸಲೇಮಿನಲ್ಲಿ ಎಷ್ಟು ಬೀದಿಗಳಿವೆಯೋ ಅಷ್ಟು ಬಲಿಪೀಠಗಳಿವೆ.


“ಇಸ್ರೇಲಿನ ಎಲ್ಲಾ ಜನರಿಗೆ ಹೆಚ್ಚಾಗಿ ಹಣಬೇಕು. ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ಲಾಭಕ್ಕಾಗಿ ಆಸೆಪಡುತ್ತಾರೆ. ಪ್ರವಾದಿಗಳು ಮತ್ತು ಯಾಜಕರು ಸಹ ಮೋಸಗಾರರಾಗಿದ್ದಾರೆ.


ನೀವು ಕೆಟ್ಟದ್ದನ್ನು ಮಾಡಿದರೆ ಆ ಕೆಟ್ಟತನ ನಿಮಗೆ ಶಿಕ್ಷೆಯಾಗುವಂತೆ ಮಾತ್ರ ಮಾಡುತ್ತದೆ. ನಿಮಗೆ ವಿಪತ್ತು ಬರುತ್ತದೆ. ಆ ವಿಪತ್ತು ನಿಮಗೊಂದು ಪಾಠವನ್ನು ಕಲಿಸುತ್ತದೆ. ಅದರ ಬಗ್ಗೆ ಯೋಚಿಸಿರಿ. ಆಗ ನಿಮ್ಮ ದೇವರಿಗೆ ವಿಮುಖರಾಗುವುದು ಎಷ್ಟು ಕೆಟ್ಟದ್ದೆಂದು ನಿಮಗೆ ಗೊತ್ತಾಗುತ್ತದೆ. ನನಗೆ ಭಯಭಕ್ತಿ ತೋರದೆ ಇರುವದು ತಪ್ಪು.” ಈ ಸಂದೇಶವು ನನ್ನ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನಿಂದ ಬಂದಿತು.


ಆತನು ಭೂಮಿಯನ್ನು ಅಗೆದು ಹಸನು ಮಾಡಿದನು; ಅದರಲ್ಲಿ ಉತ್ತಮವಾದ ದ್ರಾಕ್ಷಿಯ ಸಸಿಗಳನ್ನು ನೆಟ್ಟನು. ತೋಟದ ಮಧ್ಯದಲ್ಲಿ ಒಂದು ಗೋಪುರವನ್ನು ಕಟ್ಟಿಸಿ ದ್ರಾಕ್ಷಿಯ ತೊಟ್ಟಿಯನ್ನು ಮಾಡಿಸಿದನು. ತೋಟವು ಒಳ್ಳೆಯ ದ್ರಾಕ್ಷಿಹಣ್ಣನ್ನು ಕೊಡುವುದೆಂದು ಎದುರುನೋಡತೊಡಗಿದನು. ಆದರೆ ಅದು ಹೊಲಸು ಹಣ್ಣನ್ನು ಬಿಟ್ಟಿತು.


ಆದರೆ ದೇವರು ಬಡಜನರಿಗೆ ಸಹಾಯಮಾಡದಿರಲು ನಿರ್ಧರಿಸಿದರೆ, ಆತನನ್ನು ದೋಷಿಯೆಂದು ತೀರ್ಪುಮಾಡುವವನು ಯಾರು? ದೇವರು ತನ್ನ ಮುಖವನ್ನು ಅವರಿಗೆ ಮರೆಮಾಡಿಕೊಂಡರೆ ಆತನನ್ನು ನೋಡಬಲ್ಲವರು ಯಾರು? ಮನುಷ್ಯರನ್ನೂ ಜನಾಂಗಗಳನ್ನೂ ಆಳುವವನು ದೇವರೇ.


ನಾನು ನೀತಿವಂತನಾಗಿದ್ದರೂ ಅಪರಾಧಿಯೆನಿಸಿಕೊಂಡಿದ್ದೇನೆ. ನಾನು ನಿರ್ದೋಷಿಯಾಗಿದ್ದರೂ ಆತನ ಬಾಣದ ಪೆಟ್ಟು ವಿಪರೀತವಾಗಿದೆ.’


“ನಮಗೆ ಒದಗಿದ ಕೆಡುಕು, ಸಂಕಟಗಳಿಗೆ ನಾವೇ ಕಾರಣರು. ನಾವು ಅನೀತಿ ಕೆಲಸಗಳನ್ನು ಮಾಡಿದ್ದೆವು. ಅದಕ್ಕೆ ಅನುಭವಿಸಬೇಕಾಗಿದ್ದ ಶಿಕ್ಷೆಯನ್ನು ನೀನು ನಮಗೆ ವಿಧಿಸಲಿಲ್ಲ. ನಾವು ಅತಿಘೋರವಾದ ಪಾಪಗಳನ್ನು ಮಾಡಿದ್ದಕ್ಕೆ ಅತ್ಯಂತ ಘೋರ ಶಿಕ್ಷೆಯು ನಮಗೆ ದೊರಕ ಬೇಕಿತ್ತು. ಆದರೂ ನೀನು ನಮ್ಮವರಲ್ಲಿ ಕೆಲವರನ್ನು ಸೆರೆಯಿಂದ ತಪ್ಪಿಸಿಕೊಳ್ಳುವಂತೆ ಮಾಡಿದೆ.


ಕೆಲವರು ತಮ್ಮ ಪಾಪಗಳಿಂದಲೂ ದೋಷಗಳಿಂದಲೂ ಮೂಢರಾದರು.


ಆ ಜನಾಂಗಗಳು ನಿಮ್ಮನ್ನು ನಾಶಗೊಳಿಸಿದವು. ಆದರೆ ಈಗ ಆ ಜನಾಂಗಗಳನ್ನು ನಾಶಪಡಿಸಲಾಗಿದೆ. ಇಸ್ರೇಲೇ, ಯೆಹೂದವೇ, ನಿಮ್ಮ ಶತ್ರುಗಳು ಬಂಧಿಗಳಾಗುತ್ತಾರೆ. ಅವರು ನಿಮ್ಮ ವಸ್ತುಗಳನ್ನು ಕದ್ದುಕೊಂಡಿದ್ದಾರೆ. ಆದರೆ ಬೇರೆಯವರು ಅವರ ವಸ್ತುಗಳನ್ನು ಕದಿಯುವರು. ಅವರು ಯುದ್ಧದಲ್ಲಿ ನಿಮ್ಮ ವಸ್ತುಗಳನ್ನು ತೆಗೆದುಕೊಂಡರು. ಆದರೆ ಬೇರೆಯವರು ಯುದ್ಧದಲ್ಲಿ ಅವರ ವಸ್ತುಗಳನ್ನು ತೆಗೆದುಕೊಳ್ಳುವರು.”


ನಿಮ್ಮ ಅಂಗಾಲಿನಿಂದ ಹಿಡಿದು ನಡುನೆತ್ತಿಯವರೆಗೂ ನಿಮ್ಮ ದೇಹದಲ್ಲೆಲ್ಲಾ ಗಾಯಗಳೂ ಬಾಸುಂಡೆಗಳೂ ಹುಣ್ಣುಗಳೂ ತುಂಬಿಕೊಂಡಿವೆ. ಆದರೆ ಆ ಹುಣ್ಣುಗಳಿಗೆ ನೀವು ಸರಿಯಾಗಿ ಚಿಕಿತ್ಸೆ ಕೊಡಲಿಲ್ಲ; ಅವುಗಳನ್ನು ಒರೆಸಲಿಲ್ಲ, ಕಟ್ಟಲಿಲ್ಲ.


ನನ್ನ ಪ್ರಿಯ ಜೆರುಸಲೇಮೇ, ನಾನು ನಿನ್ನ ಬಗ್ಗೆ ಏನು ಹೇಳಲಿ? ನಾನು ನಿನ್ನನ್ನು ಯಾವುದಕ್ಕೆ ಹೋಲಿಸಲಿ? ನೀನು ಎಂಥವಳೆಂದು ಹೇಳಲಿ? ನನ್ನ ಚೀಯೋನೇ, ನಾನು ನಿನ್ನನ್ನು ಹೇಗೆ ಸಂತೈಸಲಿ. ನಿನ್ನ ವಿನಾಶವು ಸಾಗರದಷ್ಟು ಅಪಾರ. ಯಾರೂ ನಿನ್ನನ್ನು ಸ್ವಸ್ಥ ಮಾಡಲಾರರು ಎಂದೆನಿಸುತ್ತದೆ.


ನಿನೆವೆಯೇ, ನೀನು ತೀವ್ರವಾದ ಗಾಯಹೊಂದಿರುವೆ. ಯಾವದೂ ನಿನ್ನನ್ನು ಗುಣಪಡಿಸಲಾರದು. ನಿನ್ನ ನಾಶನದ ಸುದ್ದಿ ಕೇಳಿದವರೆಲ್ಲರೂ ಚಪ್ಪಾಳೆ ತಟ್ಟುವರು. ಅವರು ಹರ್ಷಿಸುವರು. ಯಾಕೆಂದರೆ ನಿನಗಾದ ತೀವ್ರ ಗಾಯದ ನೋವನ್ನು ಅವರೆಲ್ಲರೂ ಅನುಭವಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು