Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 30:19 - ಪರಿಶುದ್ದ ಬೈಬಲ್‌

19 ಆ ಸ್ಥಳಗಳಲ್ಲಿ ಜನರು ಸ್ತೋತ್ರಗೀತೆಗಳನ್ನು ಹಾಡುವರು. ಅಲ್ಲಿ ನಗುವಿನ ಧ್ವನಿಯು ಕೇಳಿಬರುವುದು. ನಾನು ಅವರಿಗೆ ಹಲವಾರು ಮಕ್ಕಳನ್ನು ಕೊಡುವೆನು. ಇಸ್ರೇಲ್ ಮತ್ತು ಯೆಹೂದ ಚಿಕ್ಕವುಗಳಾಗಿರುವದಿಲ್ಲ. ನಾನು ಅವುಗಳಿಗೆ ಗೌರವವನ್ನು ತರುತ್ತೇನೆ. ಯಾರೂ ಅವುಗಳನ್ನು ಕೀಳಾಗಿ ಕಾಣುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅವುಗಳೊಳಗಿಂದ ಸ್ತೋತ್ರವೂ ಮತ್ತು ಸಂತೋಷದಿಂದ ನಲಿಯುವ ಧ್ವನಿಯೂ ಕೇಳಿಸುವವು. ನಾನು ಆ ಜನರನ್ನು ಹೆಚ್ಚಿಸುವೆನು, ಅವರು ಇನ್ನು ಅಲ್ಪರಾಗಿರರು, ಅವರನ್ನು ಘನಪಡಿಸುವೆನು, ಅವರು ಇನ್ನು ಹೀನರಾಗಿರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಅವುಗಳಿಂದ ಸ್ತುತಿಸ್ತೋತ್ರ ಕೇಳಿಬರುವುದು ಅಲ್ಲಿಂದ ನಲಿವುನಾದ ಕೇಳಿಸುವುದು. ಆ ಜನರನ್ನು ಹೆಚ್ಚಿಸುವೆನು, ಅವರು ಕೊಂಚವಾಗಿರರು. ಅವರನ್ನು ಘನಪಡಿಸುವೆನು, ಅವರು ಹೀನರಾಗಿರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅವುಗಳೊಳಗಿಂದ ಸ್ತೋತ್ರವೂ ವಿನೋದಪಡುವವರ ಧ್ವನಿಯೂ ಕೇಳಿಸುವವು; ನಾನು ಆ ಜನರನ್ನು ಹೆಚ್ಚಿಸುವೆನು, ಇನ್ನು ಕೊಂಚವಾಗಿರರು, ಅವರನ್ನು ಘನಪಡಿಸುವೆನು, ಇನ್ನು ಹೀನರಾಗಿರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಅವುಗಳೊಳಗಿಂದ ಕೃತಜ್ಞತಾಸ್ತುತಿಯೂ, ಹರ್ಷಧ್ವನಿಯೂ ಹೊರಡುವುದು. ಅವರನ್ನು ಹೆಚ್ಚು ಮಾಡುವೆನು. ಅವರು ಕೊಂಚವಾಗಿರರು, ಅವರನ್ನು ಘನಪಡಿಸುವೆನು. ಮತ್ತು ಅವರು ತಿರಸ್ಕಾರಕ್ಕೆ ಒಳಗಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 30:19
39 ತಿಳಿವುಗಳ ಹೋಲಿಕೆ  

ಆದರೆ ನಾನು ನನ್ನ ಸೇವಕನಾದ ದಾವೀದನಿಗೂ ಲೇವಿಯರಿಗೂ ಅಸಂಖ್ಯಾತ ಸಂತಾನವನ್ನು ಕೊಡುತ್ತೇನೆ. ಅವರು ಆಕಾಶದ ನಕ್ಷತ್ರಗಳಂತೆಯೂ ಸಮುದ್ರದ ತೀರದ ಮರಳಿನಂತೆಯೂ ಅಸಂಖ್ಯಾತರಾಗುವರು.”


ಯೆಹೋವನು ತನ್ನ ಜನರನ್ನು ರಕ್ಷಿಸುತ್ತಾನೆ. ಅವರು ಚೀಯೋನಿಗೆ ಸಂತೋಷದಿಂದ ಮರಳಿ ಬರುತ್ತಾರೆ. ಅವರು ಬಹಳ ಸಂತೋಷಪಡುವರು. ಅವರ ಹರ್ಷವು ಅವರ ತಲೆಯ ಮೇಲೆ ಕಿರೀಟದಂತೆ ನಿತ್ಯಕಾಲಕ್ಕೂ ಇರುವುದು. ಅವರು ಹರ್ಷದಿಂದ ಹಾಡುವರು. ಅವರ ದುಃಖವೆಲ್ಲಾ ಬಹುದೂರವಾಗುವುದು.


ಅತ್ಯಂತ ಚಿಕ್ಕ ಕುಟುಂಬವು ದೊಡ್ಡ ಕುಲವಾಗುವದು. ಅತ್ಯಂತ ಎಳೆಯ ಕುಟುಂಬವು ಬಲಾಢ್ಯವಾದ ಜನಾಂಗವಾಗುವದು. ತಕ್ಕ ಕಾಲದಲ್ಲಿ ಯೆಹೋವನಾದ ನಾನು ಬೇಗನೆ ಬರುವೆನು. ಇವುಗಳೆಲ್ಲಾ ನೆರವೇರುವಂತೆ ಮಾಡುವೆನು.”


ಯೆಹೋವನು ತನ್ನ ಜನರನ್ನು ಸ್ವತಂತ್ರರನ್ನಾಗಿ ಮಾಡುತ್ತಾನೆ. ಆ ಜನರು ಆತನ ಬಳಿಗೆ ಹಿಂದಿರುಗಿ ಬರುವರು. ಚೀಯೋನಿಗೆ ಜನರು ಬರುವಾಗ ಅವರು ಸಂತೋಷಭರಿತರಾಗುವರು. ಅವರು ನಿತ್ಯವೂ ಸಂತೋಷವಾಗಿರುವರು. ತಲೆಯ ಮೇಲಿನ ಕಿರೀಟದಂತೆ ಅವರ ಸಂತೋಷವಿರುವದು. ಅವರಲ್ಲಿ ಹರ್ಷವೂ ಸಂತಸವೂ ಸಂಪೂರ್ಣವಾಗಿ ತುಂಬಿರುವವು. ದುಃಖವೂ ಚಿಂತೆಯೂ ಬಹು ದೂರವಾಗಿರುವವು.


ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಇಸ್ರೇಲ್ ಜನರು ನನ್ನ ಬಳಿಗೆ ಬಂದು ಹೀಗೆ ಮಾಡಬೇಕೆಂದು ನನ್ನನ್ನು ಕೇಳಿಕೊಳ್ಳಲು ಅವಕಾಶ ಕೊಡುವೆನು. ನಾನು ಅವರನ್ನು ಅಭಿವೃದ್ಧಿಪಡಿಸಿ ಅವರ ಸಂಖ್ಯೆಯನ್ನು ಕುರಿಹಿಂಡಿನೋಪಾದಿಯಲ್ಲಿ ಹೆಚ್ಚಿಸುವೆನು.


“ನಾನು ಸಿಳ್ಳು ಹೊಡೆದು ಎಲ್ಲರನ್ನು ಒಟ್ಟುಗೂಡಿಸುವೆನು. ನಾನು ನಿಜವಾಗಿಯೂ ಅವರನ್ನು ರಕ್ಷಿಸುವೆನು. ಜನರು ಕಿಕ್ಕಿರಿದು ತುಂಬಿಹೋಗುವರು.


ನನ್ನ ವಧುವಾದ ಇಸ್ರೇಲೇ, ನಾನು ನಿನ್ನನ್ನು ಮತ್ತೆ ನಿರ್ಮಿಸುವೆನು, ಆಗ ನೀನು ಮತ್ತೆ ಒಂದು ಜನಾಂಗವಾಗುವೆ. ನೀನು ಮೊದಲಿನಂತೆ ನಿನ್ನ ದಮ್ಮಡಿಯನ್ನು ತೆಗೆದುಕೊಂಡು ಸಂತೋಷದಿಂದ ನೃತ್ಯ ಮಾಡುವವರೊಡನೆ ನೃತ್ಯ ಮಾಡುವೆ.


ಜೆರುಸಲೇಮಿನಲ್ಲಿ ವಾಸಿಸುವ ಜನರನ್ನು ಯೆಹೋವನು ಕಾಪಾಡುತ್ತಾನೆ. ಬಲಹೀನ ಮನುಷ್ಯನೂ ದಾವೀದನಂತೆ ಶೂರನಾಗುವನು. ದಾವೀದನ ಸಂತತಿಯ ಜನರು ದೇವರುಗಳಂತಿದ್ದು ದೇವರ ಸ್ವಂತ ದೂತರಂತೆ ತಮ್ಮ ಜನರನ್ನು ನಡಿಸುವರು.


ಆತನು ಹೇಳುವುದೇನೆಂದರೆ, “ನಾಲ್ಕನೇ, ಐದನೇ, ಏಳನೇ ಮತ್ತು ಹತ್ತನೇ ತಿಂಗಳಿನಲ್ಲಿ ನೀವು ದುಃಖದಿಂದ ಉಪವಾಸ ಮಾಡುವ ವಿಶೇಷ ದಿವಸಗಳಿವೆ. ಆ ದುಃಖದ ದಿವಸಗಳು ನಿಮ್ಮ ಸಂತಸದ ದಿವಸಗಳಾಗಿ ಪರಿಗಣಿಸಬೇಕು. ನೀವು ಸತ್ಯವನ್ನೂ ಸಮಾಧಾನವನ್ನೂ ಪ್ರೀತಿಸುವವರಾಗಬೇಕು.”


ನಾನು ಸಮಾಧಾನದ ಒಡಂಬಡಿಕೆಯನ್ನು ಅವರ ಜೊತೆ ಮಾಡುವೆನು. ಇದು ನಿರಂತರದ ಒಡಂಬಡಿಕೆಯಾಗಿರುವದು. ನಾನು ಅವರ ಸ್ವದೇಶವನ್ನು ಹಿಂತಿರುಗಿಸಿ ಕೊಡುವೆನು. ಅವರನ್ನು ಅಭಿವೃದ್ಧಿಪಡಿಸಿ ಹೆಚ್ಚಿಸುವೆನು ಮತ್ತು ಅವರ ಮಧ್ಯೆ ನನ್ನ ಪವಿತ್ರ ಸ್ಥಳವನ್ನು ಇರಿಸುವೆನು. ಇದು ನಿರಂತರವಾದ ಒಡಂಬಡಿಕೆ.


ಆ ಸಮಯದಲ್ಲಿ ನೀನು ಹೀಗೆನ್ನುವೆ: “ಯೆಹೋವನೇ, ನಾನು ನಿನ್ನನ್ನು ಸ್ತುತಿಸುವೆ! ನೀನು ನನ್ನ ಮೇಲೆ ಕೋಪಿಸಿಕೊಂಡಿರುವೆ. ಆದರೆ ಈಗ ನೀನು ನನ್ನ ಮೇಲೆ ಕೋಪಗೊಳ್ಳಬೇಡ! ನಿನ್ನ ಪ್ರೀತಿಯನ್ನು ನನ್ನ ಮೇಲೆ ತೋರಿಸು.


ಅನಂತರ ಎಲ್ಲರೂ ವಿಶೇಷ ಊಟಕ್ಕೆ ಹೋದರು, ಅವರು ತಮ್ಮ ಆಹಾರವನ್ನು ಮತ್ತು ಪಾನೀಯವನ್ನು ಹಂಚಿಕೊಂಡರು. ಅವರೆಲ್ಲರೂ ಸಂತೋಷದಿಂದ ಆ ವಿಶೇಷ ದಿನವನ್ನು ಆಚರಿಸಿದರು, ಧರ್ಮೋಪದೇಶಕರು ಉಪದೇಶಿಸಿದ ಯೆಹೋವನ ಕಟ್ಟಳೆಗಳನ್ನು ಅವರು ಅರ್ಥಮಾಡಿಕೊಂಡರು.


ಹುಳಿಯಿಲ್ಲದ ರೊಟ್ಟಿಯ ಹಬ್ಬವನ್ನು ಅವರು ಏಳು ದಿನಗಳ ತನಕ ಸಂತಸದಿಂದ ಆಚರಿಸಿದರು. ಯಾಕೆಂದರೆ ಅಶ್ಶೂರದ ಅರಸನ ಮನಸ್ಸನ್ನು ಮಾರ್ಪಡಿಸುವುದರ ಮೂಲಕ ಯೆಹೋವನು ಯೆಹೂದ್ಯರನ್ನು ಬಹಳ ಸಂತೋಷಗೊಳಿಸಿದ್ದನು. ಇಸ್ರೇಲ್ ದೇವರ ಆಲಯದ ಕಟ್ಟಡವು ಪೂರ್ಣಗೊಳ್ಳಲು ಅಶ್ಶೂರದ ಅರಸನು ಸಹಾಯ ಮಾಡಿದನು.


ನಿಮ್ಮ ನಂಬಿಕೆಯು ಪರಿಶುದ್ಧವಾಗಿದೆ ಎಂಬುದನ್ನು ಪ್ರಕಟಿಸಲು ಈ ತೊಂದರೆಗಳು ಸಂಭವಿಸುತ್ತವೆ. ನಿಮ್ಮ ನಂಬಿಕೆಯ ಪರಿಶುದ್ಧತೆಯು ಬಂಗಾರದ ಮೌಲ್ಯಕ್ಕಿಂತಲೂ ಹೆಚ್ಚಿನದಾಗಿದೆ. ಬಂಗಾರವು ನಶಿಸಿಹೋಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಲ್ಲಿ ಪುಟ ಹಾಕಿ ಅದರ ಪರಿಶುದ್ಧತೆಯನ್ನು ಶೋಧಿಸುವರು. ಯೇಸು ಕ್ರಿಸ್ತನು ಪ್ರತ್ಯಕ್ಷನಾದಾಗ, ನಿಮ್ಮ ನಂಬಿಕೆಯ ಪರಿಶುದ್ಧತೆಯು ನಿಮಗೆ ಕೀರ್ತಿ, ಪ್ರಭಾವ ಮತ್ತು ಗೌರವಗಳನ್ನು ತರುತ್ತದೆ.


“ಇನ್ನು ಮುಂದೆ ಹಗಲು ಹೊತ್ತಿನಲ್ಲಿ ಸೂರ್ಯನು ನಿನಗೆ ಬೆಳಕಾಗಿರುವದಿಲ್ಲ; ರಾತ್ರಿಕಾಲದಲ್ಲಿ ಚಂದ್ರನ ಪ್ರಕಾಶವು ನಿನಗೆ ಬೆಳಕಾಗಿರುವದಿಲ್ಲ. ಯಾಕೆಂದರೆ ಯೆಹೋವನೇ ನಿನ್ನ ನಿತ್ಯಕಾಲದ ಬೆಳಕಾಗಿರುವನು. ನಿನ್ನ ದೇವರು ನಿನ್ನ ಮಹಿಮೆಯಾಗಿರುವನು.


ಜೆರುಸಲೇಮೇ, ನಿನ್ನ ಕೆಡವಲ್ಪಟ್ಟ ಕಟ್ಟಡಗಳು ಮತ್ತೆ ಸಂತೋಷಿಸುವವು. ನೀವೆಲ್ಲರೂ ಒಟ್ಟಾಗಿ ಹರ್ಷಿಸುವಿರಿ. ಯಾಕೆಂದರೆ ಯೆಹೋವನು ಜೆರುಸಲೇಮನ್ನು ಬಿಡಿಸಿ ತನ್ನ ಜನರನ್ನು ಸಂತೈಸುವನು.


ಅವನು, “ಓಡಿಹೋಗಿ ಆ ಯೌವನಸ್ಥನಿಗೆ ಜೆರುಸಲೇಮು ಅಳತೆ ಮಾಡಲು ಸಾಧ್ಯವಾಗದಷ್ಟು ದೊಡ್ಡದಾಗಿದೆ ಎಂದು ಹೇಳು. ಅಲ್ಲದೆ ಅವನಿಗೆ ಈ ವಿಷಯವನ್ನೂ ತಿಳಿಸು: ‘ಜೆರುಸಲೇಮ್ ಗೋಡೆಗಳಿಲ್ಲದ ಪಟ್ಟಣವಾಗುವದು. ಯಾಕೆಂದರೆ ಅಷ್ಟೊಂದು ಜನರೂ ಪಶುಗಳೂ ಅಲ್ಲಿ ವಾಸಿಸುವವು.’


ಯೆಹೋವನು ಹೀಗೆ ನುಡಿದನು: “ಇಸ್ರೇಲ್ ಮತ್ತು ಯೆಹೂದ ವಂಶಗಳು ಬೆಳೆಯುವದಕ್ಕೆ ನಾನು ಸಹಾಯ ಮಾಡುವ ದಿನಗಳು ಬರುತ್ತಿವೆ. ಸಸಿಗಳನ್ನು ನೆಟ್ಟ ಮೇಲೆ ಅವುಗಳನ್ನು ನೋಡಿಕೊಳ್ಳುವ ಹಾಗೆ ಅವರ ಮಕ್ಕಳು ಮತ್ತು ಅವರ ಪಶುಗಳು ಬೆಳೆಯುವದಕ್ಕೂ ನಾನು ಸಹಾಯ ಮಾಡುತ್ತೇನೆ.


ಅದೇ ರೀತಿಯಲ್ಲಿ ಯೆಹೋವನು ಚೀಯೋನನ್ನು ಮತ್ತು ನಿರ್ಜನವಾದ ಅದರ ಸ್ಥಳಗಳನ್ನು ಆದರಿಸುವನು; ಅವರಿಗಾಗಿ ಮಹಾದೊಡ್ಡ ಕಾರ್ಯವನ್ನು ಮಾಡುವನು. ಯೆಹೋವನು ಮರುಭೂಮಿಯನ್ನು ಏದೆನ್ ಉದ್ಯಾನವನದಂತೆ ಮಾಡುವನು. ಆ ದೇಶವು ಬರಿದಾಗಿತ್ತು. ಆದರೆ ಅದು ಯೆಹೋವನ ಉದ್ಯಾನವನವಾಗುವದು. ಅದರೊಳಗಿರುವ ಜನರು ಸಂತೋಷಭರಿತರಾಗುವರು. ಅವರು ತಮ್ಮ ಸಂತೋಷವನ್ನು ವ್ಯಕ್ತಪಡಿಸುವರು. ಅವರು ಕೃತಜ್ಞತಾಸ್ತುತಿ ಮಾಡುವರು, ಜಯಗೀತೆಯನ್ನು ಹಾಡುವರು.


ಜನರು ನನ್ನ ಬಳಿಗೆ ಬರುವರು. ಆ ಜನರು ಮುಂದಿನ ಕಾಲದಲ್ಲಿ ಯಾಕೋಬನನ್ನು ಆಳವಾದ ಬೇರುಳ್ಳ ಗಿಡದಂತೆ ಬಲಶಾಲಿಯನ್ನಾಗಿ ಮಾಡುವರು. ಬೆಳೆದು ಹೂಬಿಡುವ ಗಿಡದಂತೆ ಅವರು ಇಸ್ರೇಲಿಗೆ ಮಾಡುವರು. ಹಣ್ಣುಗಳಂತೆ ಇಸ್ರೇಲರ ಮಕ್ಕಳು ಭೂಮಿಯ ಮೇಲೆ ತುಂಬಿಹೋಗುವರು.”


ಚೀಯೋನ್ ಪರ್ವತದ ಮೇಲಿರುವಾತನು ಇಸ್ರೇಲಿಗೆ ಜಯವನ್ನು ತರುವನು! ಆಗ ದೇವರು ತನ್ನ ಜನರನ್ನು ಸೆರೆವಾಸದಿಂದ ಬರಮಾಡುವನು. ಯಾಕೋಬನೇ ಉಲ್ಲಾಸಿಸು! ಇಸ್ರೇಲೇ ಬಹು ಸಂತೋಷಪಡು.


ಸೆರೆವಾಸದಿಂದ ಮರಳಿಬಂದ ಇಸ್ರೇಲರು ಬಿಡಾರಗಳನ್ನು ಹಾಕಿಕೊಂಡು ಅವುಗಳಲ್ಲಿ ವಾಸಿಸಿದರು. ನೂನನ ಮಗನಾದ ಯೆಹೋಶುವನ ಕಾಲದಿಂದ ಇಂದಿನವರೆಗೂ ಇಸ್ರೇಲರು ಇಂಥ ಪರ್ಣಶಾಲೆಗಳ ಹಬ್ಬವನ್ನು ಆಚರಿಸಲಿಲ್ಲ. ಪ್ರತಿಯೊಬ್ಬರೂ ಬಹು ಸಂತೋಷಗೊಂಡಿದ್ದರು.


ನೀನು ನನಗೆ ಕೊಟ್ಟ ಮಹಿಮೆಯನ್ನು ನಾನು ಈ ಜನರಿಗೆ ಕೊಟ್ಟಿದ್ದೇನೆ. ನೀನು ಮತ್ತು ನಾನು ಒಂದಾಗಿರುವಂತೆ ಇವರೂ ಒಂದಾಗಿರಬೇಕೆಂದು ನಾನು ಇವರಿಗೆ ಈ ಮಹಿಮೆಯನ್ನು ಕೊಟ್ಟೆನು.


ದೂರ ಪ್ರಾಂತ್ಯಗಳು ನನಗಾಗಿ ಕಾದಿವೆ. ದೊಡ್ಡ ಸರಕು ಸಾಗಿಸುವ ಹಡಗುಗಳು ಹೊರಡಲು ತಯಾರಾಗಿವೆ. ಈ ಹಡಗುಗಳು ದೂರ ಪ್ರಾಂತ್ಯದಲ್ಲಿರುವ ನಿನ್ನ ಮಕ್ಕಳನ್ನು ಕರೆತರಲು ತಯಾರಾಗಿವೆ. ಅವರು ಬೆಳ್ಳಿಬಂಗಾರಗಳನ್ನು ತಮ್ಮೊಂದಿಗೆ ತಂದು ಇಸ್ರೇಲಿನ ಪರಿಶುದ್ಧನಾದ ಯೆಹೋವನನ್ನು ಘನಪಡಿಸುವರು. ಯೆಹೋವನು ನಿನಗೆ ಆಶ್ಚರ್ಯಕರವಾದ ಸಂಗತಿಗಳನ್ನು ಮಾಡುವನು.


ನಿನಗೆ ಗೊತ್ತಿರದ ಸ್ಥಳಗಳಲ್ಲಿ ಜನಾಂಗಗಳು ನೆಲೆಸಿವೆ. ಆ ದೇಶಗಳನ್ನು ನೀನು ಕರೆಯುವೆ. ಆ ದೇಶಗಳಿಗೆ ನಿನ್ನ ಪರಿಚಯವಿರುವದಿಲ್ಲ. ಆದರೆ ಅವುಗಳು ನಿನ್ನ ಬಳಿಗೆ ಓಡಿಬರುವವು. ಇವೆಲ್ಲಾ ನಿನ್ನ ದೇವರಾದ ಯೆಹೋವನ ಚಿತ್ತಕ್ಕನುಸಾರವಾಗಿ ಆಗುತ್ತವೆ. ಇಸ್ರೇಲಿನ ಪರಿಶುದ್ಧ ದೇವರು ನಿನ್ನನ್ನು ಗೌರವಿಸುವದರಿಂದ ಇದನ್ನು ನೆರವೇರಿಸುವನು.


ಜೆರುಸಲೇಮಿಗೆ ಯೆಹೂದದ ಪಟ್ಟಣಗಳಿಂದ ಜನರು ಬರುವರು. ಅದರ ಸುತ್ತಲೂ ಇದ್ದ ಸಣ್ಣಸಣ್ಣ ಹಳ್ಳಿಗಳಿಂದ ಜನರು ಜೆರುಸಲೇಮಿಗೆ ಬರುವರು. ಬೆನ್ಯಾಮೀನ್ ಕುಲದವರು ವಾಸಿಸುವ ಪ್ರದೇಶದಿಂದ ಜನರು ಬರುವರು. ಪಶ್ಚಿಮ ಬೆಟ್ಟಗಳ ಇಳಿಜಾರು ಪ್ರದೇಶದಿಂದ ಮತ್ತು ಬೆಟ್ಟಪ್ರದೇಶದಿಂದ ಜನರು ಬರುವರು. ನೆಗೆವ್ ಪ್ರದೇಶದಿಂದ ಜನರು ಬರುವರು. ಆ ಜನರೆಲ್ಲರು ಸರ್ವಾಂಗಹೋಮಗಳನ್ನು, ಯಜ್ಞಗಳನ್ನು, ಧಾನ್ಯನೈವೇದ್ಯಗಳನ್ನು, ಧೂಪವನ್ನು ಮತ್ತು ಕೃತಜ್ಞತಾಯಜ್ಞಗಳನ್ನು ತೆಗೆದುಕೊಂಡು ಯೆಹೋವನ ಆಲಯಕ್ಕೆ ಬರುವರು.


ನಾನು ಯೆಹೋವನ ಪರವಾಗಿ ಗಾಳಿಗೆ ಆತನು ಹೇಳಿದಂತೆಯೇ ಹೇಳಿದೆನು. ಆಗ ನಿರ್ಜೀವ ದೇಹಗಳೊಳಗೆ ಶ್ವಾಸವು ಹೊಕ್ಕಿತು. ಅವುಗಳಿಗೆ ಜೀವಬಂದು ನಿಂತುಕೊಂಡವು. ಅಲ್ಲಿ ಅನೇಕ ಜನರಿದ್ದರು. ಒಂದು ದೊಡ್ಡ ಸೈನ್ಯದ ತರಹ ಜನಸಮೂಹವು ಅಲ್ಲಿತ್ತು.


ನೀನು ಪ್ರೀತಿಸುವ ಜನಾಂಗಕ್ಕೆ ನೀನು ಸಹಾಯ ಮಾಡಿದೆ. ಬೇರೆ ಜನಾಂಗದವರು ಅವರನ್ನು ಸೋಲಿಸದಂತೆ ಮಾಡಿದೆ.


ಆಗ ದೇಶದಲ್ಲಿ ನಿಮ್ಮ ಸಂಖ್ಯೆ ಬೆಳೆಯುವದು” ಇದು ಯೆಹೋವನ ನುಡಿ. “ಆ ಕಾಲದಲ್ಲಿ ಜನರು, ‘ನಮ್ಮಲ್ಲಿ ಯೆಹೋವನ ಒಡಂಬಡಿಕೆಯ ಪೆಟ್ಟಿಗೆ ಇದ್ದ ದಿನಗಳನ್ನು ಜ್ಞಾಪಿಸಿಕೊಳ್ಳುವ’ ಎಂದು ಹೇಳುವುದಿಲ್ಲ. ಅವರು, ‘ಪವಿತ್ರ ಪೆಟ್ಟಿಗೆ’ಯ ಬಗ್ಗೆ ಯೋಚನೆ ಸಹ ಮಾಡುವುದಿಲ್ಲ. ಅವರು ಅದನ್ನು ಜ್ಞಾಪಿಸುವುದೂ ಇಲ್ಲ. ಅದರ ಅಭಾವವನ್ನು ಮನಸ್ಸಿಗೆ ತಂದುಕೊಳ್ಳುವುದೂ ಇಲ್ಲ. ಅವರು ಇನ್ನೊಂದು ‘ಪವಿತ್ರ ಪೆಟ್ಟಿಗೆ’ಯನ್ನು ಸಿದ್ಧಪಡಿಸುವದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು