Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 30:2 - ಪರಿಶುದ್ದ ಬೈಬಲ್‌

2 ಇಸ್ರೇಲರ ದೇವರಾದ ಯೆಹೋವನು ಹೀಗೆ ಹೇಳಿದನು: “ಯೆರೆಮೀಯನೇ, ನಾನು ನಿನಗೆ ಹೇಳಿದ ಸಂಗತಿಗಳನ್ನು ಒಂದು ಪುಸ್ತಕದಲ್ಲಿ ಬರೆದಿಡು. ಈ ಪುಸ್ತಕವನ್ನು ನೀನೇ ಬರೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ಇಸ್ರಾಯೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ, ನಾನು ನಿನಗೆ ಹೇಳಿರುವ ಮಾತುಗಳನ್ನೆಲ್ಲಾ ನೀನು ಗ್ರಂಥವಾಗಿ ಬರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ಇಸ್ರಯೇಲರ ದೇವರಾದ ಸರ್ವೇಶ್ವರ ಹೀಗೆನ್ನುತ್ತಾರೆ - ‘ನಾನು ನಿನಗೆ ಹೇಳಿರುವ ಮಾತುಗಳನ್ನೆಲ್ಲ ಗ್ರಂಥರೂಪವಾಗಿ ಬರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಇಸ್ರಾಯೇಲ್ಯರ ದೇವರಾದ ಯೆಹೋವನು ಇಂತೆನ್ನುತ್ತಾನೆ - ನಾನು ನಿನಗೆ ಹೇಳಿರುವ ಮಾತುಗಳನ್ನೆಲ್ಲಾ ಗ್ರಂಥವಾಗಿ ಬರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ನಾನು ನಿನಗೆ ಹೇಳಿದ ವಾಕ್ಯಗಳನ್ನೆಲ್ಲಾ ಒಂದು ಪುಸ್ತಕದಲ್ಲಿ ನೀನು ಬರೆದಿಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 30:2
19 ತಿಳಿವುಗಳ ಹೋಲಿಕೆ  

ಅನಂತರ ಯೆರೆಮೀಯನು ಇನ್ನೊಂದು ಸುರುಳಿಯನ್ನು ತೆಗೆದುಕೊಂಡು ನೇರೀಯನ ಮಗನಾದ ಲಿಪಿಕಾರ ಬಾರೂಕನಿಗೆ ಕೊಟ್ಟನು. ರಾಜ ಯೆಹೋಯಾಕೀಮನು ಸುಟ್ಟುಹಾಕಿದ ಸುರುಳಿಯಲ್ಲಿದ್ದ ಸಂದೇಶವನ್ನೇ ಯೆರೆಮೀಯನು ಹೇಳಿದಂತೆಲ್ಲ ಬಾರೂಕನು ಸುರುಳಿಯ ಮೇಲೆ ಬರೆದನು. ಬೇರೆ ಹಲವು ಸಂದೇಶಗಳನ್ನು ಎರಡನೇ ಸುರುಳಿಯಲ್ಲಿ ಸೇರಿಸಲಾಯಿತು.


ಎಲ್ಲಾ ಜನರಿಗೆ ಕಾಣುವಂತೆ ಇದನ್ನು ಹಲಗೆಯ ಮೇಲೆ ಬರೆ; ಪುಸ್ತಕದಲ್ಲೂ ಬರೆ. ಕೊನೆಯ ದಿವಸಗಳಿಗಾಗಿ ಇದನ್ನು ಬರೆ. ಬಹುಕಾಲದ ನಂತರ ಇದು ಸಂಭವಿಸುವದು.


ಆದ್ದರಿಂದ ನೀನು ನೋಡಿದ ಸಂಗತಿಗಳನ್ನು ಬರೆ. ಈಗ ಸಂಭವಿಸುವ ಸಂಗತಿಗಳನ್ನು ಮತ್ತು ಮುಂದೆ ಸಂಭವಿಸಬೇಕಾದ ಸಂಗತಿಗಳನ್ನು ಬರೆ.


ಆ ಧ್ವನಿಯು, “ನೀನು ನೋಡುವುದನ್ನೆಲ್ಲ ಒಂದು ಪುಸ್ತಕದಲ್ಲಿ ಬರೆದು ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್, ಫಿಲದೆಲ್ಫಿಯ ಮತ್ತು ಲವೊದಿಕೀಯ ಎಂಬ ಏಳು ಸಭೆಗಳಿಗೆ ಕಳುಹಿಸು” ಎಂದು ಹೇಳಿತು.


ಯಾವ ಪ್ರವಾದನೆಯೇ ಆಗಲಿ ಮನುಷ್ಯನ ಚಿತ್ತದಿಂದ ಬಂದಿಲ್ಲ. ಆದರೆ ಜನರು ಪವಿತ್ರಾತ್ಮನಿಂದ ನಡೆಸಲ್ಪಟ್ಟು ದೇವರಿಂದ ಹೊಂದಿದ್ದನ್ನೇ ಮಾತನಾಡಿದರು.


ಆ ಜನರಿಗೆ ಸಂಭವಿಸಿದ ಸಂಗತಿಗಳು ನಮಗೆ ನಿದರ್ಶನಗಳಾಗಿವೆ. ನಮ್ಮನ್ನು ಎಚ್ಚರಿಸುವುದಕ್ಕಾಗಿ ಆ ಸಂಗತಿಗಳನ್ನು ಬರೆದಿಡಲಾಗಿದೆ. ಈಗ ನಾವು ಯುಗದ ಅಂತಿಮ ಕಾಲದಲ್ಲಿ ಜೀವಿಸುತ್ತಿದ್ದೇವೆ.


ಹಿಂದಿನ ಕಾಲದಲ್ಲಿ ಬರೆಯಲ್ಪಟ್ಟಿರುವ ಪ್ರತಿಯೊಂದೂ ನಮ್ಮ ಉಪದೇಶಕ್ಕಾಗಿಯೇ ಬರೆಯಲ್ಪಟ್ಟಿದೆ. ನಾವು ನಿರೀಕ್ಷೆ ಉಳ್ಳವರಾಗಿರಬೇಕೆಂದು ಆ ಸಂಗತಿಗಳು ಬರೆಯಲ್ಪಟ್ಟಿವೆ. ಪವಿತ್ರ ಗ್ರಂಥವು ನಮಗೆ ಕೊಡುವ ತಾಳ್ಮೆಯಿಂದಲೂ ಶಕ್ತಿಯಿಂದಲೂ ಈ ನಿರೀಕ್ಷೆ ಬರುತ್ತದೆ.


“ದಾನಿಯೇಲನೇ, ನೀನು ಈ ಸಂದೇಶವನ್ನು ರಹಸ್ಯವಾಗಿಡು. ಇದನ್ನು ಬರೆದ ಪುಸ್ತಕಕ್ಕೆ ಮುದ್ರೆಹಾಕು. ಅಂತ್ಯಕಾಲದವರೆಗೆ ನೀನು ಇದನ್ನು ರಹಸ್ಯವಾಗಿ ಇಡಬೇಕು. ನಿಜವಾದ ಜ್ಞಾನಕ್ಕಾಗಿ ಬಹುಜನರು ಅತ್ತಿತ್ತ ಸಂಚರಿಸುವರು. ನಿಜವಾದ ಜ್ಞಾನ ಬೆಳೆಯುವದು.”


ಯೆಹೋವನು ಹೇಳಿದ್ದೇನೆಂದರೆ, “ಒಂದು ದೊಡ್ಡ ಸುರುಳಿಯನ್ನು ತಂದು ಅದರ ಮೇಲೆ ಹೀಗೆ ಲೇಖನಿಯಿಂದ ಬರೆ: ‘ಮಹೇರ್ ಶಾಲಾಲ್ ಹಾಷ್ ಬಜ್‌.’” (ಇದರರ್ಥ: “ಕೊಳ್ಳೆಗೆ ಅವಸರ, ಸೂರೆಗೆ ಆತುರ.”)


“ಆದ್ದರಿಂದ ನೀನು ಈ ಹಾಡನ್ನು ಬರೆ, ಇಸ್ರೇಲರಿಗೆ ಇದನ್ನು ಕಲಿಸು. ಈ ಹಾಡನ್ನು ಹಾಡಲು ಅವರಿಗೆ ಕಲಿಸು. ಆಗ ಇದು ಇಸ್ರೇಲ್ ಜನರ ವಿರುದ್ಧವಾಗಿ ಸಾಕ್ಷಿಯಾಗುವುದು.


ಬಳಿಕ ಯೆಹೋವನು ಮೋಶೆಗೆ, “ಈ ಯುದ್ಧದ ಕುರಿತು ಬರೆ: ಜನರು ಇಲ್ಲಿ ನಡೆದದ್ದನ್ನು ಜ್ಞಾಪಿಸಿಕೊಳ್ಳುವಂತೆ ಈ ಸಂಗತಿಗಳನ್ನು ಒಂದು ಪುಸ್ತಕದಲ್ಲಿ ಬರೆದಿಡು. ನಾನು ಅಮಾಲೇಕ್ಯರನ್ನು ಭೂಮಿಯ ಮೇಲಿಂದ ಸಂಪೂರ್ಣವಾಗಿ ನಾಶಮಾಡುವೆನೆಂದು ಯೆಹೋಶುವನಿಗೆ ಹೇಳಲು ಮರೆಯಬೇಡ” ಎಂದು ಹೇಳಿದನು.


ಬಾಬಿಲೋನಿಗೆ ಅನೇಕ ಕೇಡುಗಳು ಬರುವವೆಂದು ನಾನು ಹೇಳಿದ್ದೇನೆ. ಅದೆಲ್ಲ ನಡೆಯುವುದು. ಯೆರೆಮೀಯನು ಆ ಅನ್ಯಜನಾಂಗಗಳ ಬಗ್ಗೆ ಬೋಧಿಸಿದ್ದಾನೆ. ಆ ಮೂನ್ಸೂಚನೆಗಳೆಲ್ಲಾ ಈ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.


ಯೆಹೋವನಿಂದ ಯೆರೆಮೀಯನಿಗೆ ಈ ಸಂದೇಶ ಬಂದಿತು.


“ಯೆರೆಮೀಯನೇ, ಇನ್ನೊಂದು ಸುರುಳಿಯನ್ನು ತೆಗೆದುಕೊ. ಯೆಹೂದದ ರಾಜನಾದ ಯೆಹೋಯಾಕೀಮನು ಸುಟ್ಟುಹಾಕಿದ ಮೊದಲನೇ ಸುರುಳಿಯಲ್ಲಿ ಬರೆದ ಎಲ್ಲಾ ಸಂದೇಶಗಳನ್ನು ಈ ಸುರುಳಿಯ ಮೇಲೆ ಬರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು